Homeಕರ್ನಾಟಕಬಗೆಹರಿದ ಸಂಪುಟ ವಿಸ್ತರಣೆ ಕಸರತ್ತು; ನೂತನ ಸಚಿವರ ಪ್ರಮಾಣವಚನ ಇಂದು

ಬಗೆಹರಿದ ಸಂಪುಟ ವಿಸ್ತರಣೆ ಕಸರತ್ತು; ನೂತನ ಸಚಿವರ ಪ್ರಮಾಣವಚನ ಇಂದು

- Advertisement -
- Advertisement -

ರಾಜ್ಯ ನೂತನ ಕಾಂಗ್ರೆಸ್ ಸರ್ಕಾರದ ಸಂಪುಟ ವಿಸ್ತರಣೆಯ ಕಗ್ಗಂಟು ಬಗೆಹರಿದಿದ್ದು ಇಂದು (ಶನಿವಾರ) 24 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಜತೆಗೆ ಕಾಂಗ್ರೆಸ್‌ ಹೈಕಮಾಂಡ್‌ ಸತತ ಮೂರು ದಿನಗಳ ಕಾಲ ಸಮಾಲೋಚನೆ ನಡೆಸಿ ಸಮಸ್ಯೆಯನ್ನು ಬಿಡಿಸಿದೆ.

ಉಭಯ ಸದನಗಳ ಸದಸ್ಯರೂ ಅಲ್ಲದ ಪಕ್ಷದ ಹಿರಿಯ ಮುಖಂಡ ಎನ್‌.ಎಸ್‌.ಬೋಸರಾಜು ಅವರಿಗೆ ಸಚಿವರಾಗುವ ಅವಕಾಶವನ್ನು ನೀಡಲಾಗಿದೆ. ಹಲವು ಹಿರಿಯ ಶಾಸಕರಿಗೆ ಸಚಿವರಾಗುವ ಅವಕಾಶ ದೊರೆತ್ತಿಲ್ಲ.

ನೂತನ ಸಚಿವರ ಪ್ರಮಾಣವಚನ ಸಮಾರಂಭ ಶನಿವಾರ (ಇಂದು) ಬೆಳಿಗ್ಗೆ 11.45ಕ್ಕೆ ರಾಜಭವನದಲ್ಲಿ ನಡೆಯಲಿದೆ. ಪ್ರಮಾಣವಚನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ರಾಜಭವನಕ್ಕೆ ಶುಕ್ರವಾರ ಮಧ್ಯಾಹ್ನವೇ ಮುಖ್ಯಮಂತ್ರಿ ಸಚಿವಾಲಯ ಸಂದೇಶ ಕಳುಹಿಸಿದೆ.

ಸಚಿವ ಸಂಪುಟದಲ್ಲಿ ಒಟ್ಟು 34 ಮಂದಿಯ ಸೇರ್ಪಡೆಗೆ ಅವಕಾಶ ಇದೆ. 24 ಮಂದಿಯ ಸೇರ್ಪಡೆಯಿಂದ ಸಂಪುಟ ಭರ್ತಿಯಾದಂತೆ ಆಗಿದೆ.

ಲಿಂಗಾಯತ ಸಮುದಾಯದ ಹಲವು ಒಳಪಂಗಡಗಳನ್ನು ಒಳಗೊಂಡು ಎಂಟು ಜನರಿಗೆ ಸಚಿವ ಸ್ಥಾನ ನೀಡಲಾಗಿದೆ. ಒಕ್ಕಲಿಗರಲ್ಲಿ ಡಿ.ಕೆ.ಶಿವಕುಮಾರ್ ಸೇರಿ ಐದು ಮಂದಿಗೆ ಅವಕಾಶ ದೊರೆತಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಒಟ್ಟು 9 ಮಂದಿಗೆ ಸಚಿವ ಸ್ಥಾನ ಲಭಿಸಿದೆ. ಪರಿಶಿಷ್ಟ ಜಾತಿಯ ಕೆ.ಎಚ್‌. ಮುನಿಯಪ್ಪ, ಜಿ.ಪರಮೇಶ್ವರ, ಎಚ್‌.ಸಿ.ಮಹದೇವಪ್ಪ, ಆರ್.ಬಿ.ತಿಮ್ಮಾಪುರ, ಪ್ರಿಯಾಂಕ್ ಖರ್ಗೆ, ಪರಿಶಿಷ್ಟ ಪಂಗಡದ ನಾಗೇಂದ್ರ, ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ ಸಚಿವರಾಗಿದ್ದಾರೆ.

‘ಹಿಂದುಳಿದ ಜಾತಿಗಳಲ್ಲಿ ಅತ್ಯಂತ ಸಣ್ಣ ಸಮುದಾಯವಾದ ರಾಜು ಕ್ಷತ್ರಿಯ ಸಮುದಾಯದ ಬೋಸರಾಜು, ಬೆಸ್ತ ಸಮುದಾಯದ ಮಂಕಾಳ ಸುಬ್ಬ ವೈದ್ಯ, ಮರಾಠ ಸಮಾಜದ ಸಂತೋಷ್ ಲಾಡ್ ಸಂಪುಟ ಸೇರ್ಪಡೆಯಾಗಿದ್ದಾರೆ. ಕುರುಬ ಸಮುದಾಯದಿಂದ ಸಿದ್ದರಾಮಯ್ಯ ಅವರನ್ನು ಬಿಟ್ಟರೆ ಬೈರತಿ ಸುರೇಶ್ ಅವರಿಗೆ ಮಾತ್ರ ಸಂಪುಟದೊಳಗೆ ಪ್ರವೇಶ ದೊರೆತಿದೆ.

ಹಿರಿಯ ಶಾಸಕರಾದ ಆರ್.ವಿ.ದೇಶಪಾಂಡೆ, ಬಸವರಾಜ ರಾಯರಡ್ಡಿ, ಟಿ.ಬಿ.ಜಯಚಂದ್ರ, ತನ್ವೀರ್ ಸೇಠ್‌, ಎನ್‌.ಎ.ಹ್ಯಾರಿಸ್‌, ಸಲೀಂ ಅಹಮದ್‌ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ.  ದಿನೇಶ್‌ ಗುಂಡೂರಾವ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಕುರಿತು ಆರಂಭದಲ್ಲಿ ಒಲವು ವ್ಯಕ್ತವಾಗಿರಲಿಲ್ಲ. ಆದರೆ, ಕೊನೆಯ ಕ್ಷಣದಲ್ಲಿ ಬ್ರಾಹ್ಮಣ ಕೋಟಾದಡಿ ಅವರಿಗೆ ಅವಕಾಶ ದೊರೆತಿದೆ.

ರಾಜೀನಾಮೆಗೆ ಮುಂದಾದ ಹರಿಪ್ರಸಾದ್?

ಸಚಿವ ಸ್ಥಾನ ಸಿಗದ ಕಾರಣಕ್ಕೆ ಬೇಸರವಾಗಿರುವ ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್‌ ವಿಧಾನ ಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆಂದು ವರದಿಯಾಗಿದೆ.

ಶನಿವಾರವೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸಾಮಾನ್ಯ ಕಾರ್ಯಕರ್ತನಾಗಿ ಇರುತ್ತೇನೆ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ. ಅವಕಾಶ ಕೈತಪ್ಪಲು ಸಿದ್ದರಾಮಯ್ಯನವರು ಕಾರಣವೆಂದು ಹರಿಪ್ರಸಾದ್ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ನೂತನ ಸಚಿವರ ಪಟ್ಟಿ

ಎಚ್.ಕೆ.ಪಾಟೀಲ- ನಾಮಧಾರಿ ರೆಡ್ಡಿ

ಕೃಷ್ಣ ಬೈರೇಗೌಡ- ಒಕ್ಕಲಿಗ

ಎನ್.ಚಲುವರಾಯಸ್ವಾಮಿ- ಒಕ್ಕಲಿಗ

ಕೆ.ವೆಂಕಟೇಶ್‌- ಒಕ್ಕಲಿಗ

ಡಾ.ಎಚ್‌.ಸಿ.ಮಹದೇವಪ್ಪ- ಎಸ್‌ಸಿ (ಬಲಗೈ)

ಈಶ್ವರ ಖಂಡ್ರೆ- ಬಣಜಿಗ ಲಿಂಗಾಯತ

ಕೆ.ಎನ್‌.ರಾಜಣ್ಣ- ವಾಲ್ಮೀಕಿ (ಎಸ್‌ಟಿ)

ದಿನೇಶ್‌ ಗುಂಡೂರಾವ್‌- ಬ್ರಾಹ್ಮಣ

ಶರಣಬಸಪ್ಪ ದರ್ಶನಾಪುರ- ರೆಡ್ಡಿ ಲಿಂಗಾಯತ

ಶಿವಾನಂದ ಪಾಟೀಲ- ಪಂಚಮಸಾಲಿ

ಆರ್.ಬಿ.ತಿಮ್ಮಾಪುರ- ಎಸ್‌ಸಿ (ಎಡಗೈ)

ಎಸ್‌.ಎಸ್‌.ಮಲ್ಲಿಕಾರ್ಜುನ- ಸಾದರ ಲಿಂಗಾಯತ

ಶಿವರಾಜ ತಂಗಡಗಿ- ಎಸ್‌ಸಿ (ಭೋವಿ)

ಶರಣ ಪ್ರಕಾಶ ಪಾಟೀಲ- ಬಣಜಿಗ ಲಿಂಗಾಯತ

ಮಂಕಾಳ ಸುಬ್ಬ ವೈದ್ಯ- ಮೊಗವೀರ

ಲಕ್ಷ್ಮಿ ಹೆಬ್ಬಾಳಕರ- ಪಂಚಮಸಾಲಿ

ರಹೀಂ ಖಾನ್‌- ಮುಸ್ಲಿಂ

ಡಿ.ಸುಧಾಕರ್‌- ಜೈನ

ಸಂತೋಷ್‌ ಎಸ್‌.ಲಾಡ್‌- ಮರಾಠ

ಎನ್‌.ಎಸ್.ಬೋಸರಾಜು- ರಾಜು ಕ್ಷತ್ರೀಯ

ಬೈರತಿ ಸುರೇಶ್‌- ಕುರುಬ

ಮಧು ಬಂಗಾರಪ್ಪ- ಈಡಿಗ

ಡಾ.ಎಂ.ಸಿ.ಸುಧಾಕರ್‌- ಒಕ್ಕಲಿಗ

ಬಿ.ನಾಗೇಂದ್ರ- ವಾಲ್ಮೀಕಿ (ಎಸ್‌ಟಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...