Homeಕರ್ನಾಟಕಬಗೆಹರಿದ ಸಂಪುಟ ವಿಸ್ತರಣೆ ಕಸರತ್ತು; ನೂತನ ಸಚಿವರ ಪ್ರಮಾಣವಚನ ಇಂದು

ಬಗೆಹರಿದ ಸಂಪುಟ ವಿಸ್ತರಣೆ ಕಸರತ್ತು; ನೂತನ ಸಚಿವರ ಪ್ರಮಾಣವಚನ ಇಂದು

- Advertisement -
- Advertisement -

ರಾಜ್ಯ ನೂತನ ಕಾಂಗ್ರೆಸ್ ಸರ್ಕಾರದ ಸಂಪುಟ ವಿಸ್ತರಣೆಯ ಕಗ್ಗಂಟು ಬಗೆಹರಿದಿದ್ದು ಇಂದು (ಶನಿವಾರ) 24 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಜತೆಗೆ ಕಾಂಗ್ರೆಸ್‌ ಹೈಕಮಾಂಡ್‌ ಸತತ ಮೂರು ದಿನಗಳ ಕಾಲ ಸಮಾಲೋಚನೆ ನಡೆಸಿ ಸಮಸ್ಯೆಯನ್ನು ಬಿಡಿಸಿದೆ.

ಉಭಯ ಸದನಗಳ ಸದಸ್ಯರೂ ಅಲ್ಲದ ಪಕ್ಷದ ಹಿರಿಯ ಮುಖಂಡ ಎನ್‌.ಎಸ್‌.ಬೋಸರಾಜು ಅವರಿಗೆ ಸಚಿವರಾಗುವ ಅವಕಾಶವನ್ನು ನೀಡಲಾಗಿದೆ. ಹಲವು ಹಿರಿಯ ಶಾಸಕರಿಗೆ ಸಚಿವರಾಗುವ ಅವಕಾಶ ದೊರೆತ್ತಿಲ್ಲ.

ನೂತನ ಸಚಿವರ ಪ್ರಮಾಣವಚನ ಸಮಾರಂಭ ಶನಿವಾರ (ಇಂದು) ಬೆಳಿಗ್ಗೆ 11.45ಕ್ಕೆ ರಾಜಭವನದಲ್ಲಿ ನಡೆಯಲಿದೆ. ಪ್ರಮಾಣವಚನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ರಾಜಭವನಕ್ಕೆ ಶುಕ್ರವಾರ ಮಧ್ಯಾಹ್ನವೇ ಮುಖ್ಯಮಂತ್ರಿ ಸಚಿವಾಲಯ ಸಂದೇಶ ಕಳುಹಿಸಿದೆ.

ಸಚಿವ ಸಂಪುಟದಲ್ಲಿ ಒಟ್ಟು 34 ಮಂದಿಯ ಸೇರ್ಪಡೆಗೆ ಅವಕಾಶ ಇದೆ. 24 ಮಂದಿಯ ಸೇರ್ಪಡೆಯಿಂದ ಸಂಪುಟ ಭರ್ತಿಯಾದಂತೆ ಆಗಿದೆ.

ಲಿಂಗಾಯತ ಸಮುದಾಯದ ಹಲವು ಒಳಪಂಗಡಗಳನ್ನು ಒಳಗೊಂಡು ಎಂಟು ಜನರಿಗೆ ಸಚಿವ ಸ್ಥಾನ ನೀಡಲಾಗಿದೆ. ಒಕ್ಕಲಿಗರಲ್ಲಿ ಡಿ.ಕೆ.ಶಿವಕುಮಾರ್ ಸೇರಿ ಐದು ಮಂದಿಗೆ ಅವಕಾಶ ದೊರೆತಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಒಟ್ಟು 9 ಮಂದಿಗೆ ಸಚಿವ ಸ್ಥಾನ ಲಭಿಸಿದೆ. ಪರಿಶಿಷ್ಟ ಜಾತಿಯ ಕೆ.ಎಚ್‌. ಮುನಿಯಪ್ಪ, ಜಿ.ಪರಮೇಶ್ವರ, ಎಚ್‌.ಸಿ.ಮಹದೇವಪ್ಪ, ಆರ್.ಬಿ.ತಿಮ್ಮಾಪುರ, ಪ್ರಿಯಾಂಕ್ ಖರ್ಗೆ, ಪರಿಶಿಷ್ಟ ಪಂಗಡದ ನಾಗೇಂದ್ರ, ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ ಸಚಿವರಾಗಿದ್ದಾರೆ.

‘ಹಿಂದುಳಿದ ಜಾತಿಗಳಲ್ಲಿ ಅತ್ಯಂತ ಸಣ್ಣ ಸಮುದಾಯವಾದ ರಾಜು ಕ್ಷತ್ರಿಯ ಸಮುದಾಯದ ಬೋಸರಾಜು, ಬೆಸ್ತ ಸಮುದಾಯದ ಮಂಕಾಳ ಸುಬ್ಬ ವೈದ್ಯ, ಮರಾಠ ಸಮಾಜದ ಸಂತೋಷ್ ಲಾಡ್ ಸಂಪುಟ ಸೇರ್ಪಡೆಯಾಗಿದ್ದಾರೆ. ಕುರುಬ ಸಮುದಾಯದಿಂದ ಸಿದ್ದರಾಮಯ್ಯ ಅವರನ್ನು ಬಿಟ್ಟರೆ ಬೈರತಿ ಸುರೇಶ್ ಅವರಿಗೆ ಮಾತ್ರ ಸಂಪುಟದೊಳಗೆ ಪ್ರವೇಶ ದೊರೆತಿದೆ.

ಹಿರಿಯ ಶಾಸಕರಾದ ಆರ್.ವಿ.ದೇಶಪಾಂಡೆ, ಬಸವರಾಜ ರಾಯರಡ್ಡಿ, ಟಿ.ಬಿ.ಜಯಚಂದ್ರ, ತನ್ವೀರ್ ಸೇಠ್‌, ಎನ್‌.ಎ.ಹ್ಯಾರಿಸ್‌, ಸಲೀಂ ಅಹಮದ್‌ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ.  ದಿನೇಶ್‌ ಗುಂಡೂರಾವ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಕುರಿತು ಆರಂಭದಲ್ಲಿ ಒಲವು ವ್ಯಕ್ತವಾಗಿರಲಿಲ್ಲ. ಆದರೆ, ಕೊನೆಯ ಕ್ಷಣದಲ್ಲಿ ಬ್ರಾಹ್ಮಣ ಕೋಟಾದಡಿ ಅವರಿಗೆ ಅವಕಾಶ ದೊರೆತಿದೆ.

ರಾಜೀನಾಮೆಗೆ ಮುಂದಾದ ಹರಿಪ್ರಸಾದ್?

ಸಚಿವ ಸ್ಥಾನ ಸಿಗದ ಕಾರಣಕ್ಕೆ ಬೇಸರವಾಗಿರುವ ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್‌ ವಿಧಾನ ಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆಂದು ವರದಿಯಾಗಿದೆ.

ಶನಿವಾರವೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸಾಮಾನ್ಯ ಕಾರ್ಯಕರ್ತನಾಗಿ ಇರುತ್ತೇನೆ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ. ಅವಕಾಶ ಕೈತಪ್ಪಲು ಸಿದ್ದರಾಮಯ್ಯನವರು ಕಾರಣವೆಂದು ಹರಿಪ್ರಸಾದ್ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ನೂತನ ಸಚಿವರ ಪಟ್ಟಿ

ಎಚ್.ಕೆ.ಪಾಟೀಲ- ನಾಮಧಾರಿ ರೆಡ್ಡಿ

ಕೃಷ್ಣ ಬೈರೇಗೌಡ- ಒಕ್ಕಲಿಗ

ಎನ್.ಚಲುವರಾಯಸ್ವಾಮಿ- ಒಕ್ಕಲಿಗ

ಕೆ.ವೆಂಕಟೇಶ್‌- ಒಕ್ಕಲಿಗ

ಡಾ.ಎಚ್‌.ಸಿ.ಮಹದೇವಪ್ಪ- ಎಸ್‌ಸಿ (ಬಲಗೈ)

ಈಶ್ವರ ಖಂಡ್ರೆ- ಬಣಜಿಗ ಲಿಂಗಾಯತ

ಕೆ.ಎನ್‌.ರಾಜಣ್ಣ- ವಾಲ್ಮೀಕಿ (ಎಸ್‌ಟಿ)

ದಿನೇಶ್‌ ಗುಂಡೂರಾವ್‌- ಬ್ರಾಹ್ಮಣ

ಶರಣಬಸಪ್ಪ ದರ್ಶನಾಪುರ- ರೆಡ್ಡಿ ಲಿಂಗಾಯತ

ಶಿವಾನಂದ ಪಾಟೀಲ- ಪಂಚಮಸಾಲಿ

ಆರ್.ಬಿ.ತಿಮ್ಮಾಪುರ- ಎಸ್‌ಸಿ (ಎಡಗೈ)

ಎಸ್‌.ಎಸ್‌.ಮಲ್ಲಿಕಾರ್ಜುನ- ಸಾದರ ಲಿಂಗಾಯತ

ಶಿವರಾಜ ತಂಗಡಗಿ- ಎಸ್‌ಸಿ (ಭೋವಿ)

ಶರಣ ಪ್ರಕಾಶ ಪಾಟೀಲ- ಬಣಜಿಗ ಲಿಂಗಾಯತ

ಮಂಕಾಳ ಸುಬ್ಬ ವೈದ್ಯ- ಮೊಗವೀರ

ಲಕ್ಷ್ಮಿ ಹೆಬ್ಬಾಳಕರ- ಪಂಚಮಸಾಲಿ

ರಹೀಂ ಖಾನ್‌- ಮುಸ್ಲಿಂ

ಡಿ.ಸುಧಾಕರ್‌- ಜೈನ

ಸಂತೋಷ್‌ ಎಸ್‌.ಲಾಡ್‌- ಮರಾಠ

ಎನ್‌.ಎಸ್.ಬೋಸರಾಜು- ರಾಜು ಕ್ಷತ್ರೀಯ

ಬೈರತಿ ಸುರೇಶ್‌- ಕುರುಬ

ಮಧು ಬಂಗಾರಪ್ಪ- ಈಡಿಗ

ಡಾ.ಎಂ.ಸಿ.ಸುಧಾಕರ್‌- ಒಕ್ಕಲಿಗ

ಬಿ.ನಾಗೇಂದ್ರ- ವಾಲ್ಮೀಕಿ (ಎಸ್‌ಟಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...