Homeಕರ್ನಾಟಕಕಾಂಗ್ರೆಸ್ ದಿಗ್ಗಜರ ವಿರುದ್ಧ ಸೋಮಣ್ಣ, ಅಶೋಕ್: ಹೊಂದಾಣಿಕೆ ರಾಜಕಾರಣದ ವಿರುದ್ಧ ಬಿಜೆಪಿಯ ಸ್ಪಷ್ಟ ಸಂದೇಶ?

ಕಾಂಗ್ರೆಸ್ ದಿಗ್ಗಜರ ವಿರುದ್ಧ ಸೋಮಣ್ಣ, ಅಶೋಕ್: ಹೊಂದಾಣಿಕೆ ರಾಜಕಾರಣದ ವಿರುದ್ಧ ಬಿಜೆಪಿಯ ಸ್ಪಷ್ಟ ಸಂದೇಶ?

- Advertisement -
- Advertisement -

ಕಾಂಗ್ರೆಸ್‌ನ ದಿಗ್ಗಜ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ವಿರುದ್ಧ ಇಬ್ಬರು ಹಿರಿಯ ಮಂತ್ರಿಗಳನ್ನು ನಿಯೋಜನೆ ಮಾಡುವ ಮೂಲಕ ಬಿಜೆಪಿಯು ‘ಹೊಂದಾಣಿಕೆ’ ರಾಜಕಾರಣದ ವಿರುದ್ಧ ಸ್ಪಷ್ಟ ಸಂದೇಶ ರವಾನಿಸಿದಂತೆ ಕಾಣುತ್ತದೆ.

ಐದು ಬಾರಿ ಶಾಸಕರಾಗಿರುವ ವಿ ಸೋಮಣ್ಣ ಅವರು ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಲಿದ್ದಾರೆ. ಕನಕಪುರದಲ್ಲಿ ಶಿವಕುಮಾರ್ ವಿರುದ್ಧ ಆರು ಬಾರಿ ಶಾಸಕರಾಗಿರುವ ಆರ್ ಅಶೋಕ್ ಕಣಕ್ಕಿಳಿಯಲಿದ್ದಾರೆ.

ಕೈ ನಾಯಕರ ವಿರುದ್ಧ ಗೆಲುವು ಸಾಧಿಸಲು ಹಿರಿಯ ನಾಯಕರನ್ನು ಸ್ಪರ್ಧೆಗಿಳಿಸಲಾಗಿದೆ ಎನ್ನುವ ಭ್ರಮೆಯಲ್ಲಿ ಬಿಜಿಪಿ ಇಲ್ಲ. ಕೇವಲ ಮತ ಹಂಚಕೆ ದೃಷ್ಟಿಯಿಂದ ಈ ಹಿರಿಯ ನಾಯಕರನ್ನು ಸ್ಪರ್ಧೆಗಿಳಿಸದಂತೆ ಮೇಲ್ನೋಟಕ್ಕೆ ಕಂಡುಬರುತ್ತದೆ. ಏಕೆಂದರೆ ಸೋಮಣ್ಣ ಮತ್ತು ಅಶೋಕ್ ಅವರು ಕ್ರಮವಾಗಿ ಚಾಮರಾಜನಗರ ಮತ್ತು ಪದ್ಮನಾಭನಗರದಿಂದಲೂ ಸ್ಪರ್ಧಿಸಲಿದ್ದಾರೆ.

ಪ್ರತಿಬಾರಿ ವರುಣಾ, ಕನಕಪುರ ಸೇರಿದಂತೆ ಅನೇಕ ಪ್ರಬಲ ನಾಯಕರ ಕ್ಷೇತ್ರಗಳಲ್ಲಿ ಬಿಜೆಪಿ ದುರ್ಬಲ ಅಥವಾ ‘ಡಮ್ಮಿ’ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿತ್ತು, ಆದರೆ ಈ ಬಾರಿ ಹೊಂದಾಣಿಕೆ ರಾಜಕಾರಣವನ್ನು ಕೇಸರಿ ಪಕ್ಷ ತೊಡೆದುಹಾಕಲು ಬಯಸುತ್ತದೆ.

ಸಮಬಲದ ಹೋರಾಟ ರೂಪಿಸುವ ಹೊಣೆ ಈಗ ಸೋಮಣ್ಣ ಮತ್ತು ಅಶೋಕ್ ಅವರ ಮೇಲಿದೆ. ಅವರು ಬಿಜೆಪಿಯ ನಿರೀಕ್ಷೆಗಳನ್ನು ಪೂರೈಸಲು, ಕೆಲವು ಸ್ಟ್ಯಾಟರ್ಜಿ ಮಾಡಬೇಕಾದ ಅಗತ್ಯವಿದೆ.

ಇದನ್ನೂ ಓದಿ: ಬಿಜೆಪಿ ಪಟ್ಟಿ: ವಿ.ಸೋಮಣ್ಣ, ಆರ್.ಅಶೋಕ್ ತಲಾ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ

ಟಿಕೆಟ್ ಘೋ‍ಷಣೆಗೂ ಮುನ್ನ ಸೋಮಣ್ಣ ಅವರು ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ವಿಚಾರಕ್ಕೆ ತಾನು ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತಿದ್ದರು. ಏಕೆಂದರೆ ರಾಜಕೀಯದಲ್ಲಿ ಸಿದ್ದರಾಮಯ್ಯ ಹಾಗೂ ಸೋಮಣ್ಣ ನಡುವೆ ಒಳ್ಳೆಯ ಸ್ನೇಹ ಸಂಬಂಧ ಇದೆ. ಹಾಗಾಗಿ ಅವರು ಸ್ನೇಹಿತನ ವಿರುದ್ಧ ಹೋರಾಡಲು ನಿರಾಕರಿಸಿದ್ದರು.

ಟಿಕೆಟ್ ಘೋಷಣೆ ಬಳಿಕ ಮಾತನಾಡಿದ ವಿ. ಸೋಮಣ್ಣ, ”ನಾನು ಇದನ್ನು ನಿರೀಕ್ಷಿಸಿರಲಿಲ್ಲ, ಆದರೆ ಪಕ್ಷವು ನನ್ನನ್ನು ನಂಬಿದೆ. ವರುಣಾದಿಂದ ನನ್ನ ಪ್ರಚಾರ ಆರಂಭಿಸುತ್ತೇನೆ. ಸೋಲು ಮತ್ತು ಗೆಲುವು ರಾಜಕೀಯದಲ್ಲಿ ಒಂದು ನಾಣ್ಯದ ಎರಡು ಮುಖಗಳು ಎಂದು ಹೇಳಿದರು.

ವರುಣಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಯತರು ಇರುವುದು ಸೋಮಣ್ಣನವರ ಅನುಕೂಲ. ”ವರುಣ ನನಗೆ ಹೊಸದಲ್ಲ. ನನಗೆ ಅಲ್ಲಿ ವರ್ಷಗಳ ಸಂಪರ್ಕವಿದೆ, ಆದರೆ ಅದರ ಶಾಸಕರಾಗಿದ್ದ ಸಿದ್ದರಾಮಯ್ಯನಷ್ಟು ಜನಪ್ರಿಯ ವ್ಯಕ್ತಿ ನಾನಲ್ಲ. ನನ್ನ ಕೆಲಸವನ್ನು ನಾನು ಮಾಡುತ್ತೇನೆ” ಎಂದು ಅವರು ಹೇಳಿದರು. ಇದಕ್ಕೂ ಮುನ್ನ ಸೋಮಣ್ಣ ಅವರು ಬಿಜೆಪಿಯ ಪ್ರಬಲ ನಾಯಕ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

2008 ಮತ್ತು 2013ರ ಚುನಾವಣೆಯಲ್ಲಿ ಸಿದ್ದರಾಮಯ್ಯ ವರುಣಾದಲ್ಲಿ ಶೇ.50ಕ್ಕೂ ಹೆಚ್ಚು ಮತ ಗಳಿಸಿದ್ದರು. 2013ರಲ್ಲಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಶೇ.55ರಷ್ಟು ಮತ ಪಡೆದಿದ್ದರು. 2008 ರಲ್ಲಿ ಎಲ್ ರೇವಣ್ಣಸಿದ್ದಯ್ಯ ಅವರು ವರುಣಾದಲ್ಲಿ ಬಿಜೆಪಿ ಪಡೆದ ಅತಿ ಹೆಚ್ಚು ಮತ 37%.

ಇದು ಸೋಮಣ್ಣನನ್ನು ಬಲಿ ಕೊಡುವ ಪ್ಲ್ಯಾನ್

ವಿ ಸೋಮಣ್ಣ ಅವರು ಕೆಲವು ದಿನಗಳಿಂದ ಬಿ ಎಸ್ ಯಡಿಯುರಪ್ಪನವರ ಜೊತೆ ಮುಸುಕಿನ ಗುದ್ದಾಟ ನಡೆಸಿದ್ದರು. ಅದರ ಮುಂದುವರಿದ ಭಾಗವಾಗಿ ಯಡಿಯೂರಪ್ಪನವರು ಸೋಮಣ್ಣ ಅವರನ್ನು ರಾಜಕೀಯವಾಗಿ ಬಲಿ ಕೊಡಲು ಪ್ರಬಲ ಅಭ್ಯರ್ಥಿ ಸಿದ್ದರಾಮಯ್ಯ ವಿರುದ್ಧ ಕಾದಾಡಲು ಟಿಕೆಟ್ ನೀಡಲಾಗಿದೆ. ಜೊತೆಗೆ ಅವರಿಗೆ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಿಂದ ಕೊಡಬಹುದಿತ್ತು ಆದರೆ ಅದನ್ನು ಕೊಡದೇ ಚಾಮರಾಜನಗರ ಟಿಕೆಟ್ ನೀಡಲಾಗಿದೆ. ಅಲ್ಲಿಯೂ ಕೂಡ ಅವರಿಗೆ ಗೆಲುವು ಸುಲಭವಾಗಿಲ್ಲ.

ಇನ್ನು ಒಕ್ಕಲಿಗ ಭದ್ರಕೋಟೆಯಾದ ಕನಕಪುರ ಮೂರು ಬಾರಿ ಪ್ರತಿನಿಧಿಸಿರುವ ಶಿವಕುಮಾರ್ ಅವರ ಕ್ಷೇತ್ರವಾಗಿದೆ. ಶಿವಕುಮಾರ್ ಈ ಹಿಂದೆ ಸಾತನೂರು ಕ್ಷೇತ್ರವನ್ನು ನಾಲ್ಕು ಬಾರಿ ನಿಭಾಯಿಸಿದ್ದರು. 2008 ರಿಂದ ಕನಕಪುರದಲ್ಲಿ ಅವರ ಮತಗಳಿಕೆ ಏರಿಕೆಯಾಗಿದೆ – 2008 ರಲ್ಲಿ 48% ರಿಂದ 2018 ರಲ್ಲಿ 68% ಕ್ಕೆ. ಬಿಜೆಪಿ 3% ದಾಟಿಲ್ಲ.

ಇಂತಹ ಕ್ಷೇತ್ರದಲ್ಲಿ ಇದೀಗ ಬಿಜೆಪಿಯ ಒಕ್ಕಲಿಗ ಮುಖದ ಅಶೋಕ್‌ರನ್ನ ಸ್ಪರ್ಧೆಗಿಳಿಸಿದ್ದಾರೆ. ಆರ್ ಅಶೋಕ್ ಅವರು ಆಗಾಗ್ಗೆ “ಹೊಂದಾಣಿಕೆ” ರಾಜಕೀಯದಲ್ಲಿ ತೊಡಗಿದ್ದಾರೆ ಎಂದು ಕೆಲವರ ವಿರುದ್ಧ ಆರೋಪಿಸಿದ್ದರು. ಈಗ ಅವರನ್ನೇ ಪ್ರಬಲ ಒಕ್ಕಲಿಗ ಅಭ್ಯರ್ಥಿ ವಿರುದ್ಧ ಕಣಕ್ಕೆ ಇಳಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಅಶೋಕ್, ”ಶಿವಕುಮಾರ್ ವಿರುದ್ಧ ಅವರನ್ನು ಕಣಕ್ಕಿಳಿಸುವ ನಿರ್ಧಾರ ಆಶ್ಚರ್ಯಕರವಾಗಿದೆ. ನಾನು ಶಿಸ್ತಿನ ಸಿಪಾಯಿಯಾಗಿದ್ದೇನೆ ಮತ್ತು ಪಕ್ಷವು ನನ್ನಿಂದ ಏನು ಕೇಳುತ್ತದೆಯೋ ಅದನ್ನು ನಾನು ಮಾಡುತ್ತೇನೆ” ಎಂದು ಅವರು ಹೇಳಿದರು.

ಹೋರಾಟಕ್ಕೂ ಮುನ್ನವೇ ಸೋಲೊಪ್ಪಿದ್ರಾ ಅಶೋಕ್?

ಶಿವಕುಮಾರ್ ವಿರುದ್ಧ ಗೆಲ್ಲುವ ಸಾಧ್ಯತೆಗಳ ಕುರಿತು ಅಶೋಕ್ ಅವರು, ”ಇಂದಿರಾ ಗಾಂಧಿ, ಬಿ ಎಸ್ ಯಡಿಯೂರಪ್ಪ, ಸಿದ್ದರಾಮಯ್ಯ ಮತ್ತು ಹೆಚ್ ಡಿ ದೇವೇಗೌಡರಂತಹವರು ರಾಜ್ಯದ ಚುನಾವಣೆಯಲ್ಲಿ ಸೋತಿದ್ದಾರೆ. ”ನಾನು ಹೋರಾಡುತ್ತೇನೆ. ಉಳಿದದ್ದು ವಿಧಿ”ಯಾಟ ಎಂದು ಸೋಲಿನ ಬಗ್ಗೆ ಈಗಲೇ ಮಾತನಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...