Homeಕರ್ನಾಟಕಕಾಂಗ್ರೆಸ್ ದಿಗ್ಗಜರ ವಿರುದ್ಧ ಸೋಮಣ್ಣ, ಅಶೋಕ್: ಹೊಂದಾಣಿಕೆ ರಾಜಕಾರಣದ ವಿರುದ್ಧ ಬಿಜೆಪಿಯ ಸ್ಪಷ್ಟ ಸಂದೇಶ?

ಕಾಂಗ್ರೆಸ್ ದಿಗ್ಗಜರ ವಿರುದ್ಧ ಸೋಮಣ್ಣ, ಅಶೋಕ್: ಹೊಂದಾಣಿಕೆ ರಾಜಕಾರಣದ ವಿರುದ್ಧ ಬಿಜೆಪಿಯ ಸ್ಪಷ್ಟ ಸಂದೇಶ?

- Advertisement -
- Advertisement -

ಕಾಂಗ್ರೆಸ್‌ನ ದಿಗ್ಗಜ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ವಿರುದ್ಧ ಇಬ್ಬರು ಹಿರಿಯ ಮಂತ್ರಿಗಳನ್ನು ನಿಯೋಜನೆ ಮಾಡುವ ಮೂಲಕ ಬಿಜೆಪಿಯು ‘ಹೊಂದಾಣಿಕೆ’ ರಾಜಕಾರಣದ ವಿರುದ್ಧ ಸ್ಪಷ್ಟ ಸಂದೇಶ ರವಾನಿಸಿದಂತೆ ಕಾಣುತ್ತದೆ.

ಐದು ಬಾರಿ ಶಾಸಕರಾಗಿರುವ ವಿ ಸೋಮಣ್ಣ ಅವರು ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಲಿದ್ದಾರೆ. ಕನಕಪುರದಲ್ಲಿ ಶಿವಕುಮಾರ್ ವಿರುದ್ಧ ಆರು ಬಾರಿ ಶಾಸಕರಾಗಿರುವ ಆರ್ ಅಶೋಕ್ ಕಣಕ್ಕಿಳಿಯಲಿದ್ದಾರೆ.

ಕೈ ನಾಯಕರ ವಿರುದ್ಧ ಗೆಲುವು ಸಾಧಿಸಲು ಹಿರಿಯ ನಾಯಕರನ್ನು ಸ್ಪರ್ಧೆಗಿಳಿಸಲಾಗಿದೆ ಎನ್ನುವ ಭ್ರಮೆಯಲ್ಲಿ ಬಿಜಿಪಿ ಇಲ್ಲ. ಕೇವಲ ಮತ ಹಂಚಕೆ ದೃಷ್ಟಿಯಿಂದ ಈ ಹಿರಿಯ ನಾಯಕರನ್ನು ಸ್ಪರ್ಧೆಗಿಳಿಸದಂತೆ ಮೇಲ್ನೋಟಕ್ಕೆ ಕಂಡುಬರುತ್ತದೆ. ಏಕೆಂದರೆ ಸೋಮಣ್ಣ ಮತ್ತು ಅಶೋಕ್ ಅವರು ಕ್ರಮವಾಗಿ ಚಾಮರಾಜನಗರ ಮತ್ತು ಪದ್ಮನಾಭನಗರದಿಂದಲೂ ಸ್ಪರ್ಧಿಸಲಿದ್ದಾರೆ.

ಪ್ರತಿಬಾರಿ ವರುಣಾ, ಕನಕಪುರ ಸೇರಿದಂತೆ ಅನೇಕ ಪ್ರಬಲ ನಾಯಕರ ಕ್ಷೇತ್ರಗಳಲ್ಲಿ ಬಿಜೆಪಿ ದುರ್ಬಲ ಅಥವಾ ‘ಡಮ್ಮಿ’ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿತ್ತು, ಆದರೆ ಈ ಬಾರಿ ಹೊಂದಾಣಿಕೆ ರಾಜಕಾರಣವನ್ನು ಕೇಸರಿ ಪಕ್ಷ ತೊಡೆದುಹಾಕಲು ಬಯಸುತ್ತದೆ.

ಸಮಬಲದ ಹೋರಾಟ ರೂಪಿಸುವ ಹೊಣೆ ಈಗ ಸೋಮಣ್ಣ ಮತ್ತು ಅಶೋಕ್ ಅವರ ಮೇಲಿದೆ. ಅವರು ಬಿಜೆಪಿಯ ನಿರೀಕ್ಷೆಗಳನ್ನು ಪೂರೈಸಲು, ಕೆಲವು ಸ್ಟ್ಯಾಟರ್ಜಿ ಮಾಡಬೇಕಾದ ಅಗತ್ಯವಿದೆ.

ಇದನ್ನೂ ಓದಿ: ಬಿಜೆಪಿ ಪಟ್ಟಿ: ವಿ.ಸೋಮಣ್ಣ, ಆರ್.ಅಶೋಕ್ ತಲಾ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ

ಟಿಕೆಟ್ ಘೋ‍ಷಣೆಗೂ ಮುನ್ನ ಸೋಮಣ್ಣ ಅವರು ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ವಿಚಾರಕ್ಕೆ ತಾನು ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತಿದ್ದರು. ಏಕೆಂದರೆ ರಾಜಕೀಯದಲ್ಲಿ ಸಿದ್ದರಾಮಯ್ಯ ಹಾಗೂ ಸೋಮಣ್ಣ ನಡುವೆ ಒಳ್ಳೆಯ ಸ್ನೇಹ ಸಂಬಂಧ ಇದೆ. ಹಾಗಾಗಿ ಅವರು ಸ್ನೇಹಿತನ ವಿರುದ್ಧ ಹೋರಾಡಲು ನಿರಾಕರಿಸಿದ್ದರು.

ಟಿಕೆಟ್ ಘೋಷಣೆ ಬಳಿಕ ಮಾತನಾಡಿದ ವಿ. ಸೋಮಣ್ಣ, ”ನಾನು ಇದನ್ನು ನಿರೀಕ್ಷಿಸಿರಲಿಲ್ಲ, ಆದರೆ ಪಕ್ಷವು ನನ್ನನ್ನು ನಂಬಿದೆ. ವರುಣಾದಿಂದ ನನ್ನ ಪ್ರಚಾರ ಆರಂಭಿಸುತ್ತೇನೆ. ಸೋಲು ಮತ್ತು ಗೆಲುವು ರಾಜಕೀಯದಲ್ಲಿ ಒಂದು ನಾಣ್ಯದ ಎರಡು ಮುಖಗಳು ಎಂದು ಹೇಳಿದರು.

ವರುಣಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಯತರು ಇರುವುದು ಸೋಮಣ್ಣನವರ ಅನುಕೂಲ. ”ವರುಣ ನನಗೆ ಹೊಸದಲ್ಲ. ನನಗೆ ಅಲ್ಲಿ ವರ್ಷಗಳ ಸಂಪರ್ಕವಿದೆ, ಆದರೆ ಅದರ ಶಾಸಕರಾಗಿದ್ದ ಸಿದ್ದರಾಮಯ್ಯನಷ್ಟು ಜನಪ್ರಿಯ ವ್ಯಕ್ತಿ ನಾನಲ್ಲ. ನನ್ನ ಕೆಲಸವನ್ನು ನಾನು ಮಾಡುತ್ತೇನೆ” ಎಂದು ಅವರು ಹೇಳಿದರು. ಇದಕ್ಕೂ ಮುನ್ನ ಸೋಮಣ್ಣ ಅವರು ಬಿಜೆಪಿಯ ಪ್ರಬಲ ನಾಯಕ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

2008 ಮತ್ತು 2013ರ ಚುನಾವಣೆಯಲ್ಲಿ ಸಿದ್ದರಾಮಯ್ಯ ವರುಣಾದಲ್ಲಿ ಶೇ.50ಕ್ಕೂ ಹೆಚ್ಚು ಮತ ಗಳಿಸಿದ್ದರು. 2013ರಲ್ಲಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಶೇ.55ರಷ್ಟು ಮತ ಪಡೆದಿದ್ದರು. 2008 ರಲ್ಲಿ ಎಲ್ ರೇವಣ್ಣಸಿದ್ದಯ್ಯ ಅವರು ವರುಣಾದಲ್ಲಿ ಬಿಜೆಪಿ ಪಡೆದ ಅತಿ ಹೆಚ್ಚು ಮತ 37%.

ಇದು ಸೋಮಣ್ಣನನ್ನು ಬಲಿ ಕೊಡುವ ಪ್ಲ್ಯಾನ್

ವಿ ಸೋಮಣ್ಣ ಅವರು ಕೆಲವು ದಿನಗಳಿಂದ ಬಿ ಎಸ್ ಯಡಿಯುರಪ್ಪನವರ ಜೊತೆ ಮುಸುಕಿನ ಗುದ್ದಾಟ ನಡೆಸಿದ್ದರು. ಅದರ ಮುಂದುವರಿದ ಭಾಗವಾಗಿ ಯಡಿಯೂರಪ್ಪನವರು ಸೋಮಣ್ಣ ಅವರನ್ನು ರಾಜಕೀಯವಾಗಿ ಬಲಿ ಕೊಡಲು ಪ್ರಬಲ ಅಭ್ಯರ್ಥಿ ಸಿದ್ದರಾಮಯ್ಯ ವಿರುದ್ಧ ಕಾದಾಡಲು ಟಿಕೆಟ್ ನೀಡಲಾಗಿದೆ. ಜೊತೆಗೆ ಅವರಿಗೆ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಿಂದ ಕೊಡಬಹುದಿತ್ತು ಆದರೆ ಅದನ್ನು ಕೊಡದೇ ಚಾಮರಾಜನಗರ ಟಿಕೆಟ್ ನೀಡಲಾಗಿದೆ. ಅಲ್ಲಿಯೂ ಕೂಡ ಅವರಿಗೆ ಗೆಲುವು ಸುಲಭವಾಗಿಲ್ಲ.

ಇನ್ನು ಒಕ್ಕಲಿಗ ಭದ್ರಕೋಟೆಯಾದ ಕನಕಪುರ ಮೂರು ಬಾರಿ ಪ್ರತಿನಿಧಿಸಿರುವ ಶಿವಕುಮಾರ್ ಅವರ ಕ್ಷೇತ್ರವಾಗಿದೆ. ಶಿವಕುಮಾರ್ ಈ ಹಿಂದೆ ಸಾತನೂರು ಕ್ಷೇತ್ರವನ್ನು ನಾಲ್ಕು ಬಾರಿ ನಿಭಾಯಿಸಿದ್ದರು. 2008 ರಿಂದ ಕನಕಪುರದಲ್ಲಿ ಅವರ ಮತಗಳಿಕೆ ಏರಿಕೆಯಾಗಿದೆ – 2008 ರಲ್ಲಿ 48% ರಿಂದ 2018 ರಲ್ಲಿ 68% ಕ್ಕೆ. ಬಿಜೆಪಿ 3% ದಾಟಿಲ್ಲ.

ಇಂತಹ ಕ್ಷೇತ್ರದಲ್ಲಿ ಇದೀಗ ಬಿಜೆಪಿಯ ಒಕ್ಕಲಿಗ ಮುಖದ ಅಶೋಕ್‌ರನ್ನ ಸ್ಪರ್ಧೆಗಿಳಿಸಿದ್ದಾರೆ. ಆರ್ ಅಶೋಕ್ ಅವರು ಆಗಾಗ್ಗೆ “ಹೊಂದಾಣಿಕೆ” ರಾಜಕೀಯದಲ್ಲಿ ತೊಡಗಿದ್ದಾರೆ ಎಂದು ಕೆಲವರ ವಿರುದ್ಧ ಆರೋಪಿಸಿದ್ದರು. ಈಗ ಅವರನ್ನೇ ಪ್ರಬಲ ಒಕ್ಕಲಿಗ ಅಭ್ಯರ್ಥಿ ವಿರುದ್ಧ ಕಣಕ್ಕೆ ಇಳಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಅಶೋಕ್, ”ಶಿವಕುಮಾರ್ ವಿರುದ್ಧ ಅವರನ್ನು ಕಣಕ್ಕಿಳಿಸುವ ನಿರ್ಧಾರ ಆಶ್ಚರ್ಯಕರವಾಗಿದೆ. ನಾನು ಶಿಸ್ತಿನ ಸಿಪಾಯಿಯಾಗಿದ್ದೇನೆ ಮತ್ತು ಪಕ್ಷವು ನನ್ನಿಂದ ಏನು ಕೇಳುತ್ತದೆಯೋ ಅದನ್ನು ನಾನು ಮಾಡುತ್ತೇನೆ” ಎಂದು ಅವರು ಹೇಳಿದರು.

ಹೋರಾಟಕ್ಕೂ ಮುನ್ನವೇ ಸೋಲೊಪ್ಪಿದ್ರಾ ಅಶೋಕ್?

ಶಿವಕುಮಾರ್ ವಿರುದ್ಧ ಗೆಲ್ಲುವ ಸಾಧ್ಯತೆಗಳ ಕುರಿತು ಅಶೋಕ್ ಅವರು, ”ಇಂದಿರಾ ಗಾಂಧಿ, ಬಿ ಎಸ್ ಯಡಿಯೂರಪ್ಪ, ಸಿದ್ದರಾಮಯ್ಯ ಮತ್ತು ಹೆಚ್ ಡಿ ದೇವೇಗೌಡರಂತಹವರು ರಾಜ್ಯದ ಚುನಾವಣೆಯಲ್ಲಿ ಸೋತಿದ್ದಾರೆ. ”ನಾನು ಹೋರಾಡುತ್ತೇನೆ. ಉಳಿದದ್ದು ವಿಧಿ”ಯಾಟ ಎಂದು ಸೋಲಿನ ಬಗ್ಗೆ ಈಗಲೇ ಮಾತನಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...