Homeಕರ್ನಾಟಕಕಾಂಗ್ರೆಸ್ ದಿಗ್ಗಜರ ವಿರುದ್ಧ ಸೋಮಣ್ಣ, ಅಶೋಕ್: ಹೊಂದಾಣಿಕೆ ರಾಜಕಾರಣದ ವಿರುದ್ಧ ಬಿಜೆಪಿಯ ಸ್ಪಷ್ಟ ಸಂದೇಶ?

ಕಾಂಗ್ರೆಸ್ ದಿಗ್ಗಜರ ವಿರುದ್ಧ ಸೋಮಣ್ಣ, ಅಶೋಕ್: ಹೊಂದಾಣಿಕೆ ರಾಜಕಾರಣದ ವಿರುದ್ಧ ಬಿಜೆಪಿಯ ಸ್ಪಷ್ಟ ಸಂದೇಶ?

- Advertisement -
- Advertisement -

ಕಾಂಗ್ರೆಸ್‌ನ ದಿಗ್ಗಜ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ವಿರುದ್ಧ ಇಬ್ಬರು ಹಿರಿಯ ಮಂತ್ರಿಗಳನ್ನು ನಿಯೋಜನೆ ಮಾಡುವ ಮೂಲಕ ಬಿಜೆಪಿಯು ‘ಹೊಂದಾಣಿಕೆ’ ರಾಜಕಾರಣದ ವಿರುದ್ಧ ಸ್ಪಷ್ಟ ಸಂದೇಶ ರವಾನಿಸಿದಂತೆ ಕಾಣುತ್ತದೆ.

ಐದು ಬಾರಿ ಶಾಸಕರಾಗಿರುವ ವಿ ಸೋಮಣ್ಣ ಅವರು ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಲಿದ್ದಾರೆ. ಕನಕಪುರದಲ್ಲಿ ಶಿವಕುಮಾರ್ ವಿರುದ್ಧ ಆರು ಬಾರಿ ಶಾಸಕರಾಗಿರುವ ಆರ್ ಅಶೋಕ್ ಕಣಕ್ಕಿಳಿಯಲಿದ್ದಾರೆ.

ಕೈ ನಾಯಕರ ವಿರುದ್ಧ ಗೆಲುವು ಸಾಧಿಸಲು ಹಿರಿಯ ನಾಯಕರನ್ನು ಸ್ಪರ್ಧೆಗಿಳಿಸಲಾಗಿದೆ ಎನ್ನುವ ಭ್ರಮೆಯಲ್ಲಿ ಬಿಜಿಪಿ ಇಲ್ಲ. ಕೇವಲ ಮತ ಹಂಚಕೆ ದೃಷ್ಟಿಯಿಂದ ಈ ಹಿರಿಯ ನಾಯಕರನ್ನು ಸ್ಪರ್ಧೆಗಿಳಿಸದಂತೆ ಮೇಲ್ನೋಟಕ್ಕೆ ಕಂಡುಬರುತ್ತದೆ. ಏಕೆಂದರೆ ಸೋಮಣ್ಣ ಮತ್ತು ಅಶೋಕ್ ಅವರು ಕ್ರಮವಾಗಿ ಚಾಮರಾಜನಗರ ಮತ್ತು ಪದ್ಮನಾಭನಗರದಿಂದಲೂ ಸ್ಪರ್ಧಿಸಲಿದ್ದಾರೆ.

ಪ್ರತಿಬಾರಿ ವರುಣಾ, ಕನಕಪುರ ಸೇರಿದಂತೆ ಅನೇಕ ಪ್ರಬಲ ನಾಯಕರ ಕ್ಷೇತ್ರಗಳಲ್ಲಿ ಬಿಜೆಪಿ ದುರ್ಬಲ ಅಥವಾ ‘ಡಮ್ಮಿ’ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿತ್ತು, ಆದರೆ ಈ ಬಾರಿ ಹೊಂದಾಣಿಕೆ ರಾಜಕಾರಣವನ್ನು ಕೇಸರಿ ಪಕ್ಷ ತೊಡೆದುಹಾಕಲು ಬಯಸುತ್ತದೆ.

ಸಮಬಲದ ಹೋರಾಟ ರೂಪಿಸುವ ಹೊಣೆ ಈಗ ಸೋಮಣ್ಣ ಮತ್ತು ಅಶೋಕ್ ಅವರ ಮೇಲಿದೆ. ಅವರು ಬಿಜೆಪಿಯ ನಿರೀಕ್ಷೆಗಳನ್ನು ಪೂರೈಸಲು, ಕೆಲವು ಸ್ಟ್ಯಾಟರ್ಜಿ ಮಾಡಬೇಕಾದ ಅಗತ್ಯವಿದೆ.

ಇದನ್ನೂ ಓದಿ: ಬಿಜೆಪಿ ಪಟ್ಟಿ: ವಿ.ಸೋಮಣ್ಣ, ಆರ್.ಅಶೋಕ್ ತಲಾ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ

ಟಿಕೆಟ್ ಘೋ‍ಷಣೆಗೂ ಮುನ್ನ ಸೋಮಣ್ಣ ಅವರು ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ವಿಚಾರಕ್ಕೆ ತಾನು ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತಿದ್ದರು. ಏಕೆಂದರೆ ರಾಜಕೀಯದಲ್ಲಿ ಸಿದ್ದರಾಮಯ್ಯ ಹಾಗೂ ಸೋಮಣ್ಣ ನಡುವೆ ಒಳ್ಳೆಯ ಸ್ನೇಹ ಸಂಬಂಧ ಇದೆ. ಹಾಗಾಗಿ ಅವರು ಸ್ನೇಹಿತನ ವಿರುದ್ಧ ಹೋರಾಡಲು ನಿರಾಕರಿಸಿದ್ದರು.

ಟಿಕೆಟ್ ಘೋಷಣೆ ಬಳಿಕ ಮಾತನಾಡಿದ ವಿ. ಸೋಮಣ್ಣ, ”ನಾನು ಇದನ್ನು ನಿರೀಕ್ಷಿಸಿರಲಿಲ್ಲ, ಆದರೆ ಪಕ್ಷವು ನನ್ನನ್ನು ನಂಬಿದೆ. ವರುಣಾದಿಂದ ನನ್ನ ಪ್ರಚಾರ ಆರಂಭಿಸುತ್ತೇನೆ. ಸೋಲು ಮತ್ತು ಗೆಲುವು ರಾಜಕೀಯದಲ್ಲಿ ಒಂದು ನಾಣ್ಯದ ಎರಡು ಮುಖಗಳು ಎಂದು ಹೇಳಿದರು.

ವರುಣಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಯತರು ಇರುವುದು ಸೋಮಣ್ಣನವರ ಅನುಕೂಲ. ”ವರುಣ ನನಗೆ ಹೊಸದಲ್ಲ. ನನಗೆ ಅಲ್ಲಿ ವರ್ಷಗಳ ಸಂಪರ್ಕವಿದೆ, ಆದರೆ ಅದರ ಶಾಸಕರಾಗಿದ್ದ ಸಿದ್ದರಾಮಯ್ಯನಷ್ಟು ಜನಪ್ರಿಯ ವ್ಯಕ್ತಿ ನಾನಲ್ಲ. ನನ್ನ ಕೆಲಸವನ್ನು ನಾನು ಮಾಡುತ್ತೇನೆ” ಎಂದು ಅವರು ಹೇಳಿದರು. ಇದಕ್ಕೂ ಮುನ್ನ ಸೋಮಣ್ಣ ಅವರು ಬಿಜೆಪಿಯ ಪ್ರಬಲ ನಾಯಕ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

2008 ಮತ್ತು 2013ರ ಚುನಾವಣೆಯಲ್ಲಿ ಸಿದ್ದರಾಮಯ್ಯ ವರುಣಾದಲ್ಲಿ ಶೇ.50ಕ್ಕೂ ಹೆಚ್ಚು ಮತ ಗಳಿಸಿದ್ದರು. 2013ರಲ್ಲಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಶೇ.55ರಷ್ಟು ಮತ ಪಡೆದಿದ್ದರು. 2008 ರಲ್ಲಿ ಎಲ್ ರೇವಣ್ಣಸಿದ್ದಯ್ಯ ಅವರು ವರುಣಾದಲ್ಲಿ ಬಿಜೆಪಿ ಪಡೆದ ಅತಿ ಹೆಚ್ಚು ಮತ 37%.

ಇದು ಸೋಮಣ್ಣನನ್ನು ಬಲಿ ಕೊಡುವ ಪ್ಲ್ಯಾನ್

ವಿ ಸೋಮಣ್ಣ ಅವರು ಕೆಲವು ದಿನಗಳಿಂದ ಬಿ ಎಸ್ ಯಡಿಯುರಪ್ಪನವರ ಜೊತೆ ಮುಸುಕಿನ ಗುದ್ದಾಟ ನಡೆಸಿದ್ದರು. ಅದರ ಮುಂದುವರಿದ ಭಾಗವಾಗಿ ಯಡಿಯೂರಪ್ಪನವರು ಸೋಮಣ್ಣ ಅವರನ್ನು ರಾಜಕೀಯವಾಗಿ ಬಲಿ ಕೊಡಲು ಪ್ರಬಲ ಅಭ್ಯರ್ಥಿ ಸಿದ್ದರಾಮಯ್ಯ ವಿರುದ್ಧ ಕಾದಾಡಲು ಟಿಕೆಟ್ ನೀಡಲಾಗಿದೆ. ಜೊತೆಗೆ ಅವರಿಗೆ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಿಂದ ಕೊಡಬಹುದಿತ್ತು ಆದರೆ ಅದನ್ನು ಕೊಡದೇ ಚಾಮರಾಜನಗರ ಟಿಕೆಟ್ ನೀಡಲಾಗಿದೆ. ಅಲ್ಲಿಯೂ ಕೂಡ ಅವರಿಗೆ ಗೆಲುವು ಸುಲಭವಾಗಿಲ್ಲ.

ಇನ್ನು ಒಕ್ಕಲಿಗ ಭದ್ರಕೋಟೆಯಾದ ಕನಕಪುರ ಮೂರು ಬಾರಿ ಪ್ರತಿನಿಧಿಸಿರುವ ಶಿವಕುಮಾರ್ ಅವರ ಕ್ಷೇತ್ರವಾಗಿದೆ. ಶಿವಕುಮಾರ್ ಈ ಹಿಂದೆ ಸಾತನೂರು ಕ್ಷೇತ್ರವನ್ನು ನಾಲ್ಕು ಬಾರಿ ನಿಭಾಯಿಸಿದ್ದರು. 2008 ರಿಂದ ಕನಕಪುರದಲ್ಲಿ ಅವರ ಮತಗಳಿಕೆ ಏರಿಕೆಯಾಗಿದೆ – 2008 ರಲ್ಲಿ 48% ರಿಂದ 2018 ರಲ್ಲಿ 68% ಕ್ಕೆ. ಬಿಜೆಪಿ 3% ದಾಟಿಲ್ಲ.

ಇಂತಹ ಕ್ಷೇತ್ರದಲ್ಲಿ ಇದೀಗ ಬಿಜೆಪಿಯ ಒಕ್ಕಲಿಗ ಮುಖದ ಅಶೋಕ್‌ರನ್ನ ಸ್ಪರ್ಧೆಗಿಳಿಸಿದ್ದಾರೆ. ಆರ್ ಅಶೋಕ್ ಅವರು ಆಗಾಗ್ಗೆ “ಹೊಂದಾಣಿಕೆ” ರಾಜಕೀಯದಲ್ಲಿ ತೊಡಗಿದ್ದಾರೆ ಎಂದು ಕೆಲವರ ವಿರುದ್ಧ ಆರೋಪಿಸಿದ್ದರು. ಈಗ ಅವರನ್ನೇ ಪ್ರಬಲ ಒಕ್ಕಲಿಗ ಅಭ್ಯರ್ಥಿ ವಿರುದ್ಧ ಕಣಕ್ಕೆ ಇಳಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಅಶೋಕ್, ”ಶಿವಕುಮಾರ್ ವಿರುದ್ಧ ಅವರನ್ನು ಕಣಕ್ಕಿಳಿಸುವ ನಿರ್ಧಾರ ಆಶ್ಚರ್ಯಕರವಾಗಿದೆ. ನಾನು ಶಿಸ್ತಿನ ಸಿಪಾಯಿಯಾಗಿದ್ದೇನೆ ಮತ್ತು ಪಕ್ಷವು ನನ್ನಿಂದ ಏನು ಕೇಳುತ್ತದೆಯೋ ಅದನ್ನು ನಾನು ಮಾಡುತ್ತೇನೆ” ಎಂದು ಅವರು ಹೇಳಿದರು.

ಹೋರಾಟಕ್ಕೂ ಮುನ್ನವೇ ಸೋಲೊಪ್ಪಿದ್ರಾ ಅಶೋಕ್?

ಶಿವಕುಮಾರ್ ವಿರುದ್ಧ ಗೆಲ್ಲುವ ಸಾಧ್ಯತೆಗಳ ಕುರಿತು ಅಶೋಕ್ ಅವರು, ”ಇಂದಿರಾ ಗಾಂಧಿ, ಬಿ ಎಸ್ ಯಡಿಯೂರಪ್ಪ, ಸಿದ್ದರಾಮಯ್ಯ ಮತ್ತು ಹೆಚ್ ಡಿ ದೇವೇಗೌಡರಂತಹವರು ರಾಜ್ಯದ ಚುನಾವಣೆಯಲ್ಲಿ ಸೋತಿದ್ದಾರೆ. ”ನಾನು ಹೋರಾಡುತ್ತೇನೆ. ಉಳಿದದ್ದು ವಿಧಿ”ಯಾಟ ಎಂದು ಸೋಲಿನ ಬಗ್ಗೆ ಈಗಲೇ ಮಾತನಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...