Homeಕರ್ನಾಟಕಕಾಂಗ್ರೆಸ್ ದಿಗ್ಗಜರ ವಿರುದ್ಧ ಸೋಮಣ್ಣ, ಅಶೋಕ್: ಹೊಂದಾಣಿಕೆ ರಾಜಕಾರಣದ ವಿರುದ್ಧ ಬಿಜೆಪಿಯ ಸ್ಪಷ್ಟ ಸಂದೇಶ?

ಕಾಂಗ್ರೆಸ್ ದಿಗ್ಗಜರ ವಿರುದ್ಧ ಸೋಮಣ್ಣ, ಅಶೋಕ್: ಹೊಂದಾಣಿಕೆ ರಾಜಕಾರಣದ ವಿರುದ್ಧ ಬಿಜೆಪಿಯ ಸ್ಪಷ್ಟ ಸಂದೇಶ?

- Advertisement -
- Advertisement -

ಕಾಂಗ್ರೆಸ್‌ನ ದಿಗ್ಗಜ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ವಿರುದ್ಧ ಇಬ್ಬರು ಹಿರಿಯ ಮಂತ್ರಿಗಳನ್ನು ನಿಯೋಜನೆ ಮಾಡುವ ಮೂಲಕ ಬಿಜೆಪಿಯು ‘ಹೊಂದಾಣಿಕೆ’ ರಾಜಕಾರಣದ ವಿರುದ್ಧ ಸ್ಪಷ್ಟ ಸಂದೇಶ ರವಾನಿಸಿದಂತೆ ಕಾಣುತ್ತದೆ.

ಐದು ಬಾರಿ ಶಾಸಕರಾಗಿರುವ ವಿ ಸೋಮಣ್ಣ ಅವರು ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಲಿದ್ದಾರೆ. ಕನಕಪುರದಲ್ಲಿ ಶಿವಕುಮಾರ್ ವಿರುದ್ಧ ಆರು ಬಾರಿ ಶಾಸಕರಾಗಿರುವ ಆರ್ ಅಶೋಕ್ ಕಣಕ್ಕಿಳಿಯಲಿದ್ದಾರೆ.

ಕೈ ನಾಯಕರ ವಿರುದ್ಧ ಗೆಲುವು ಸಾಧಿಸಲು ಹಿರಿಯ ನಾಯಕರನ್ನು ಸ್ಪರ್ಧೆಗಿಳಿಸಲಾಗಿದೆ ಎನ್ನುವ ಭ್ರಮೆಯಲ್ಲಿ ಬಿಜಿಪಿ ಇಲ್ಲ. ಕೇವಲ ಮತ ಹಂಚಕೆ ದೃಷ್ಟಿಯಿಂದ ಈ ಹಿರಿಯ ನಾಯಕರನ್ನು ಸ್ಪರ್ಧೆಗಿಳಿಸದಂತೆ ಮೇಲ್ನೋಟಕ್ಕೆ ಕಂಡುಬರುತ್ತದೆ. ಏಕೆಂದರೆ ಸೋಮಣ್ಣ ಮತ್ತು ಅಶೋಕ್ ಅವರು ಕ್ರಮವಾಗಿ ಚಾಮರಾಜನಗರ ಮತ್ತು ಪದ್ಮನಾಭನಗರದಿಂದಲೂ ಸ್ಪರ್ಧಿಸಲಿದ್ದಾರೆ.

ಪ್ರತಿಬಾರಿ ವರುಣಾ, ಕನಕಪುರ ಸೇರಿದಂತೆ ಅನೇಕ ಪ್ರಬಲ ನಾಯಕರ ಕ್ಷೇತ್ರಗಳಲ್ಲಿ ಬಿಜೆಪಿ ದುರ್ಬಲ ಅಥವಾ ‘ಡಮ್ಮಿ’ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿತ್ತು, ಆದರೆ ಈ ಬಾರಿ ಹೊಂದಾಣಿಕೆ ರಾಜಕಾರಣವನ್ನು ಕೇಸರಿ ಪಕ್ಷ ತೊಡೆದುಹಾಕಲು ಬಯಸುತ್ತದೆ.

ಸಮಬಲದ ಹೋರಾಟ ರೂಪಿಸುವ ಹೊಣೆ ಈಗ ಸೋಮಣ್ಣ ಮತ್ತು ಅಶೋಕ್ ಅವರ ಮೇಲಿದೆ. ಅವರು ಬಿಜೆಪಿಯ ನಿರೀಕ್ಷೆಗಳನ್ನು ಪೂರೈಸಲು, ಕೆಲವು ಸ್ಟ್ಯಾಟರ್ಜಿ ಮಾಡಬೇಕಾದ ಅಗತ್ಯವಿದೆ.

ಇದನ್ನೂ ಓದಿ: ಬಿಜೆಪಿ ಪಟ್ಟಿ: ವಿ.ಸೋಮಣ್ಣ, ಆರ್.ಅಶೋಕ್ ತಲಾ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ

ಟಿಕೆಟ್ ಘೋ‍ಷಣೆಗೂ ಮುನ್ನ ಸೋಮಣ್ಣ ಅವರು ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ವಿಚಾರಕ್ಕೆ ತಾನು ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತಿದ್ದರು. ಏಕೆಂದರೆ ರಾಜಕೀಯದಲ್ಲಿ ಸಿದ್ದರಾಮಯ್ಯ ಹಾಗೂ ಸೋಮಣ್ಣ ನಡುವೆ ಒಳ್ಳೆಯ ಸ್ನೇಹ ಸಂಬಂಧ ಇದೆ. ಹಾಗಾಗಿ ಅವರು ಸ್ನೇಹಿತನ ವಿರುದ್ಧ ಹೋರಾಡಲು ನಿರಾಕರಿಸಿದ್ದರು.

ಟಿಕೆಟ್ ಘೋಷಣೆ ಬಳಿಕ ಮಾತನಾಡಿದ ವಿ. ಸೋಮಣ್ಣ, ”ನಾನು ಇದನ್ನು ನಿರೀಕ್ಷಿಸಿರಲಿಲ್ಲ, ಆದರೆ ಪಕ್ಷವು ನನ್ನನ್ನು ನಂಬಿದೆ. ವರುಣಾದಿಂದ ನನ್ನ ಪ್ರಚಾರ ಆರಂಭಿಸುತ್ತೇನೆ. ಸೋಲು ಮತ್ತು ಗೆಲುವು ರಾಜಕೀಯದಲ್ಲಿ ಒಂದು ನಾಣ್ಯದ ಎರಡು ಮುಖಗಳು ಎಂದು ಹೇಳಿದರು.

ವರುಣಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಯತರು ಇರುವುದು ಸೋಮಣ್ಣನವರ ಅನುಕೂಲ. ”ವರುಣ ನನಗೆ ಹೊಸದಲ್ಲ. ನನಗೆ ಅಲ್ಲಿ ವರ್ಷಗಳ ಸಂಪರ್ಕವಿದೆ, ಆದರೆ ಅದರ ಶಾಸಕರಾಗಿದ್ದ ಸಿದ್ದರಾಮಯ್ಯನಷ್ಟು ಜನಪ್ರಿಯ ವ್ಯಕ್ತಿ ನಾನಲ್ಲ. ನನ್ನ ಕೆಲಸವನ್ನು ನಾನು ಮಾಡುತ್ತೇನೆ” ಎಂದು ಅವರು ಹೇಳಿದರು. ಇದಕ್ಕೂ ಮುನ್ನ ಸೋಮಣ್ಣ ಅವರು ಬಿಜೆಪಿಯ ಪ್ರಬಲ ನಾಯಕ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

2008 ಮತ್ತು 2013ರ ಚುನಾವಣೆಯಲ್ಲಿ ಸಿದ್ದರಾಮಯ್ಯ ವರುಣಾದಲ್ಲಿ ಶೇ.50ಕ್ಕೂ ಹೆಚ್ಚು ಮತ ಗಳಿಸಿದ್ದರು. 2013ರಲ್ಲಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಶೇ.55ರಷ್ಟು ಮತ ಪಡೆದಿದ್ದರು. 2008 ರಲ್ಲಿ ಎಲ್ ರೇವಣ್ಣಸಿದ್ದಯ್ಯ ಅವರು ವರುಣಾದಲ್ಲಿ ಬಿಜೆಪಿ ಪಡೆದ ಅತಿ ಹೆಚ್ಚು ಮತ 37%.

ಇದು ಸೋಮಣ್ಣನನ್ನು ಬಲಿ ಕೊಡುವ ಪ್ಲ್ಯಾನ್

ವಿ ಸೋಮಣ್ಣ ಅವರು ಕೆಲವು ದಿನಗಳಿಂದ ಬಿ ಎಸ್ ಯಡಿಯುರಪ್ಪನವರ ಜೊತೆ ಮುಸುಕಿನ ಗುದ್ದಾಟ ನಡೆಸಿದ್ದರು. ಅದರ ಮುಂದುವರಿದ ಭಾಗವಾಗಿ ಯಡಿಯೂರಪ್ಪನವರು ಸೋಮಣ್ಣ ಅವರನ್ನು ರಾಜಕೀಯವಾಗಿ ಬಲಿ ಕೊಡಲು ಪ್ರಬಲ ಅಭ್ಯರ್ಥಿ ಸಿದ್ದರಾಮಯ್ಯ ವಿರುದ್ಧ ಕಾದಾಡಲು ಟಿಕೆಟ್ ನೀಡಲಾಗಿದೆ. ಜೊತೆಗೆ ಅವರಿಗೆ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಿಂದ ಕೊಡಬಹುದಿತ್ತು ಆದರೆ ಅದನ್ನು ಕೊಡದೇ ಚಾಮರಾಜನಗರ ಟಿಕೆಟ್ ನೀಡಲಾಗಿದೆ. ಅಲ್ಲಿಯೂ ಕೂಡ ಅವರಿಗೆ ಗೆಲುವು ಸುಲಭವಾಗಿಲ್ಲ.

ಇನ್ನು ಒಕ್ಕಲಿಗ ಭದ್ರಕೋಟೆಯಾದ ಕನಕಪುರ ಮೂರು ಬಾರಿ ಪ್ರತಿನಿಧಿಸಿರುವ ಶಿವಕುಮಾರ್ ಅವರ ಕ್ಷೇತ್ರವಾಗಿದೆ. ಶಿವಕುಮಾರ್ ಈ ಹಿಂದೆ ಸಾತನೂರು ಕ್ಷೇತ್ರವನ್ನು ನಾಲ್ಕು ಬಾರಿ ನಿಭಾಯಿಸಿದ್ದರು. 2008 ರಿಂದ ಕನಕಪುರದಲ್ಲಿ ಅವರ ಮತಗಳಿಕೆ ಏರಿಕೆಯಾಗಿದೆ – 2008 ರಲ್ಲಿ 48% ರಿಂದ 2018 ರಲ್ಲಿ 68% ಕ್ಕೆ. ಬಿಜೆಪಿ 3% ದಾಟಿಲ್ಲ.

ಇಂತಹ ಕ್ಷೇತ್ರದಲ್ಲಿ ಇದೀಗ ಬಿಜೆಪಿಯ ಒಕ್ಕಲಿಗ ಮುಖದ ಅಶೋಕ್‌ರನ್ನ ಸ್ಪರ್ಧೆಗಿಳಿಸಿದ್ದಾರೆ. ಆರ್ ಅಶೋಕ್ ಅವರು ಆಗಾಗ್ಗೆ “ಹೊಂದಾಣಿಕೆ” ರಾಜಕೀಯದಲ್ಲಿ ತೊಡಗಿದ್ದಾರೆ ಎಂದು ಕೆಲವರ ವಿರುದ್ಧ ಆರೋಪಿಸಿದ್ದರು. ಈಗ ಅವರನ್ನೇ ಪ್ರಬಲ ಒಕ್ಕಲಿಗ ಅಭ್ಯರ್ಥಿ ವಿರುದ್ಧ ಕಣಕ್ಕೆ ಇಳಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಅಶೋಕ್, ”ಶಿವಕುಮಾರ್ ವಿರುದ್ಧ ಅವರನ್ನು ಕಣಕ್ಕಿಳಿಸುವ ನಿರ್ಧಾರ ಆಶ್ಚರ್ಯಕರವಾಗಿದೆ. ನಾನು ಶಿಸ್ತಿನ ಸಿಪಾಯಿಯಾಗಿದ್ದೇನೆ ಮತ್ತು ಪಕ್ಷವು ನನ್ನಿಂದ ಏನು ಕೇಳುತ್ತದೆಯೋ ಅದನ್ನು ನಾನು ಮಾಡುತ್ತೇನೆ” ಎಂದು ಅವರು ಹೇಳಿದರು.

ಹೋರಾಟಕ್ಕೂ ಮುನ್ನವೇ ಸೋಲೊಪ್ಪಿದ್ರಾ ಅಶೋಕ್?

ಶಿವಕುಮಾರ್ ವಿರುದ್ಧ ಗೆಲ್ಲುವ ಸಾಧ್ಯತೆಗಳ ಕುರಿತು ಅಶೋಕ್ ಅವರು, ”ಇಂದಿರಾ ಗಾಂಧಿ, ಬಿ ಎಸ್ ಯಡಿಯೂರಪ್ಪ, ಸಿದ್ದರಾಮಯ್ಯ ಮತ್ತು ಹೆಚ್ ಡಿ ದೇವೇಗೌಡರಂತಹವರು ರಾಜ್ಯದ ಚುನಾವಣೆಯಲ್ಲಿ ಸೋತಿದ್ದಾರೆ. ”ನಾನು ಹೋರಾಡುತ್ತೇನೆ. ಉಳಿದದ್ದು ವಿಧಿ”ಯಾಟ ಎಂದು ಸೋಲಿನ ಬಗ್ಗೆ ಈಗಲೇ ಮಾತನಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...