Homeಕರ್ನಾಟಕಕಾಂಗ್ರೆಸ್ ದಿಗ್ಗಜರ ವಿರುದ್ಧ ಸೋಮಣ್ಣ, ಅಶೋಕ್: ಹೊಂದಾಣಿಕೆ ರಾಜಕಾರಣದ ವಿರುದ್ಧ ಬಿಜೆಪಿಯ ಸ್ಪಷ್ಟ ಸಂದೇಶ?

ಕಾಂಗ್ರೆಸ್ ದಿಗ್ಗಜರ ವಿರುದ್ಧ ಸೋಮಣ್ಣ, ಅಶೋಕ್: ಹೊಂದಾಣಿಕೆ ರಾಜಕಾರಣದ ವಿರುದ್ಧ ಬಿಜೆಪಿಯ ಸ್ಪಷ್ಟ ಸಂದೇಶ?

- Advertisement -
- Advertisement -

ಕಾಂಗ್ರೆಸ್‌ನ ದಿಗ್ಗಜ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ವಿರುದ್ಧ ಇಬ್ಬರು ಹಿರಿಯ ಮಂತ್ರಿಗಳನ್ನು ನಿಯೋಜನೆ ಮಾಡುವ ಮೂಲಕ ಬಿಜೆಪಿಯು ‘ಹೊಂದಾಣಿಕೆ’ ರಾಜಕಾರಣದ ವಿರುದ್ಧ ಸ್ಪಷ್ಟ ಸಂದೇಶ ರವಾನಿಸಿದಂತೆ ಕಾಣುತ್ತದೆ.

ಐದು ಬಾರಿ ಶಾಸಕರಾಗಿರುವ ವಿ ಸೋಮಣ್ಣ ಅವರು ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಲಿದ್ದಾರೆ. ಕನಕಪುರದಲ್ಲಿ ಶಿವಕುಮಾರ್ ವಿರುದ್ಧ ಆರು ಬಾರಿ ಶಾಸಕರಾಗಿರುವ ಆರ್ ಅಶೋಕ್ ಕಣಕ್ಕಿಳಿಯಲಿದ್ದಾರೆ.

ಕೈ ನಾಯಕರ ವಿರುದ್ಧ ಗೆಲುವು ಸಾಧಿಸಲು ಹಿರಿಯ ನಾಯಕರನ್ನು ಸ್ಪರ್ಧೆಗಿಳಿಸಲಾಗಿದೆ ಎನ್ನುವ ಭ್ರಮೆಯಲ್ಲಿ ಬಿಜಿಪಿ ಇಲ್ಲ. ಕೇವಲ ಮತ ಹಂಚಕೆ ದೃಷ್ಟಿಯಿಂದ ಈ ಹಿರಿಯ ನಾಯಕರನ್ನು ಸ್ಪರ್ಧೆಗಿಳಿಸದಂತೆ ಮೇಲ್ನೋಟಕ್ಕೆ ಕಂಡುಬರುತ್ತದೆ. ಏಕೆಂದರೆ ಸೋಮಣ್ಣ ಮತ್ತು ಅಶೋಕ್ ಅವರು ಕ್ರಮವಾಗಿ ಚಾಮರಾಜನಗರ ಮತ್ತು ಪದ್ಮನಾಭನಗರದಿಂದಲೂ ಸ್ಪರ್ಧಿಸಲಿದ್ದಾರೆ.

ಪ್ರತಿಬಾರಿ ವರುಣಾ, ಕನಕಪುರ ಸೇರಿದಂತೆ ಅನೇಕ ಪ್ರಬಲ ನಾಯಕರ ಕ್ಷೇತ್ರಗಳಲ್ಲಿ ಬಿಜೆಪಿ ದುರ್ಬಲ ಅಥವಾ ‘ಡಮ್ಮಿ’ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿತ್ತು, ಆದರೆ ಈ ಬಾರಿ ಹೊಂದಾಣಿಕೆ ರಾಜಕಾರಣವನ್ನು ಕೇಸರಿ ಪಕ್ಷ ತೊಡೆದುಹಾಕಲು ಬಯಸುತ್ತದೆ.

ಸಮಬಲದ ಹೋರಾಟ ರೂಪಿಸುವ ಹೊಣೆ ಈಗ ಸೋಮಣ್ಣ ಮತ್ತು ಅಶೋಕ್ ಅವರ ಮೇಲಿದೆ. ಅವರು ಬಿಜೆಪಿಯ ನಿರೀಕ್ಷೆಗಳನ್ನು ಪೂರೈಸಲು, ಕೆಲವು ಸ್ಟ್ಯಾಟರ್ಜಿ ಮಾಡಬೇಕಾದ ಅಗತ್ಯವಿದೆ.

ಇದನ್ನೂ ಓದಿ: ಬಿಜೆಪಿ ಪಟ್ಟಿ: ವಿ.ಸೋಮಣ್ಣ, ಆರ್.ಅಶೋಕ್ ತಲಾ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ

ಟಿಕೆಟ್ ಘೋ‍ಷಣೆಗೂ ಮುನ್ನ ಸೋಮಣ್ಣ ಅವರು ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ವಿಚಾರಕ್ಕೆ ತಾನು ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತಿದ್ದರು. ಏಕೆಂದರೆ ರಾಜಕೀಯದಲ್ಲಿ ಸಿದ್ದರಾಮಯ್ಯ ಹಾಗೂ ಸೋಮಣ್ಣ ನಡುವೆ ಒಳ್ಳೆಯ ಸ್ನೇಹ ಸಂಬಂಧ ಇದೆ. ಹಾಗಾಗಿ ಅವರು ಸ್ನೇಹಿತನ ವಿರುದ್ಧ ಹೋರಾಡಲು ನಿರಾಕರಿಸಿದ್ದರು.

ಟಿಕೆಟ್ ಘೋಷಣೆ ಬಳಿಕ ಮಾತನಾಡಿದ ವಿ. ಸೋಮಣ್ಣ, ”ನಾನು ಇದನ್ನು ನಿರೀಕ್ಷಿಸಿರಲಿಲ್ಲ, ಆದರೆ ಪಕ್ಷವು ನನ್ನನ್ನು ನಂಬಿದೆ. ವರುಣಾದಿಂದ ನನ್ನ ಪ್ರಚಾರ ಆರಂಭಿಸುತ್ತೇನೆ. ಸೋಲು ಮತ್ತು ಗೆಲುವು ರಾಜಕೀಯದಲ್ಲಿ ಒಂದು ನಾಣ್ಯದ ಎರಡು ಮುಖಗಳು ಎಂದು ಹೇಳಿದರು.

ವರುಣಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಯತರು ಇರುವುದು ಸೋಮಣ್ಣನವರ ಅನುಕೂಲ. ”ವರುಣ ನನಗೆ ಹೊಸದಲ್ಲ. ನನಗೆ ಅಲ್ಲಿ ವರ್ಷಗಳ ಸಂಪರ್ಕವಿದೆ, ಆದರೆ ಅದರ ಶಾಸಕರಾಗಿದ್ದ ಸಿದ್ದರಾಮಯ್ಯನಷ್ಟು ಜನಪ್ರಿಯ ವ್ಯಕ್ತಿ ನಾನಲ್ಲ. ನನ್ನ ಕೆಲಸವನ್ನು ನಾನು ಮಾಡುತ್ತೇನೆ” ಎಂದು ಅವರು ಹೇಳಿದರು. ಇದಕ್ಕೂ ಮುನ್ನ ಸೋಮಣ್ಣ ಅವರು ಬಿಜೆಪಿಯ ಪ್ರಬಲ ನಾಯಕ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

2008 ಮತ್ತು 2013ರ ಚುನಾವಣೆಯಲ್ಲಿ ಸಿದ್ದರಾಮಯ್ಯ ವರುಣಾದಲ್ಲಿ ಶೇ.50ಕ್ಕೂ ಹೆಚ್ಚು ಮತ ಗಳಿಸಿದ್ದರು. 2013ರಲ್ಲಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಶೇ.55ರಷ್ಟು ಮತ ಪಡೆದಿದ್ದರು. 2008 ರಲ್ಲಿ ಎಲ್ ರೇವಣ್ಣಸಿದ್ದಯ್ಯ ಅವರು ವರುಣಾದಲ್ಲಿ ಬಿಜೆಪಿ ಪಡೆದ ಅತಿ ಹೆಚ್ಚು ಮತ 37%.

ಇದು ಸೋಮಣ್ಣನನ್ನು ಬಲಿ ಕೊಡುವ ಪ್ಲ್ಯಾನ್

ವಿ ಸೋಮಣ್ಣ ಅವರು ಕೆಲವು ದಿನಗಳಿಂದ ಬಿ ಎಸ್ ಯಡಿಯುರಪ್ಪನವರ ಜೊತೆ ಮುಸುಕಿನ ಗುದ್ದಾಟ ನಡೆಸಿದ್ದರು. ಅದರ ಮುಂದುವರಿದ ಭಾಗವಾಗಿ ಯಡಿಯೂರಪ್ಪನವರು ಸೋಮಣ್ಣ ಅವರನ್ನು ರಾಜಕೀಯವಾಗಿ ಬಲಿ ಕೊಡಲು ಪ್ರಬಲ ಅಭ್ಯರ್ಥಿ ಸಿದ್ದರಾಮಯ್ಯ ವಿರುದ್ಧ ಕಾದಾಡಲು ಟಿಕೆಟ್ ನೀಡಲಾಗಿದೆ. ಜೊತೆಗೆ ಅವರಿಗೆ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಿಂದ ಕೊಡಬಹುದಿತ್ತು ಆದರೆ ಅದನ್ನು ಕೊಡದೇ ಚಾಮರಾಜನಗರ ಟಿಕೆಟ್ ನೀಡಲಾಗಿದೆ. ಅಲ್ಲಿಯೂ ಕೂಡ ಅವರಿಗೆ ಗೆಲುವು ಸುಲಭವಾಗಿಲ್ಲ.

ಇನ್ನು ಒಕ್ಕಲಿಗ ಭದ್ರಕೋಟೆಯಾದ ಕನಕಪುರ ಮೂರು ಬಾರಿ ಪ್ರತಿನಿಧಿಸಿರುವ ಶಿವಕುಮಾರ್ ಅವರ ಕ್ಷೇತ್ರವಾಗಿದೆ. ಶಿವಕುಮಾರ್ ಈ ಹಿಂದೆ ಸಾತನೂರು ಕ್ಷೇತ್ರವನ್ನು ನಾಲ್ಕು ಬಾರಿ ನಿಭಾಯಿಸಿದ್ದರು. 2008 ರಿಂದ ಕನಕಪುರದಲ್ಲಿ ಅವರ ಮತಗಳಿಕೆ ಏರಿಕೆಯಾಗಿದೆ – 2008 ರಲ್ಲಿ 48% ರಿಂದ 2018 ರಲ್ಲಿ 68% ಕ್ಕೆ. ಬಿಜೆಪಿ 3% ದಾಟಿಲ್ಲ.

ಇಂತಹ ಕ್ಷೇತ್ರದಲ್ಲಿ ಇದೀಗ ಬಿಜೆಪಿಯ ಒಕ್ಕಲಿಗ ಮುಖದ ಅಶೋಕ್‌ರನ್ನ ಸ್ಪರ್ಧೆಗಿಳಿಸಿದ್ದಾರೆ. ಆರ್ ಅಶೋಕ್ ಅವರು ಆಗಾಗ್ಗೆ “ಹೊಂದಾಣಿಕೆ” ರಾಜಕೀಯದಲ್ಲಿ ತೊಡಗಿದ್ದಾರೆ ಎಂದು ಕೆಲವರ ವಿರುದ್ಧ ಆರೋಪಿಸಿದ್ದರು. ಈಗ ಅವರನ್ನೇ ಪ್ರಬಲ ಒಕ್ಕಲಿಗ ಅಭ್ಯರ್ಥಿ ವಿರುದ್ಧ ಕಣಕ್ಕೆ ಇಳಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಅಶೋಕ್, ”ಶಿವಕುಮಾರ್ ವಿರುದ್ಧ ಅವರನ್ನು ಕಣಕ್ಕಿಳಿಸುವ ನಿರ್ಧಾರ ಆಶ್ಚರ್ಯಕರವಾಗಿದೆ. ನಾನು ಶಿಸ್ತಿನ ಸಿಪಾಯಿಯಾಗಿದ್ದೇನೆ ಮತ್ತು ಪಕ್ಷವು ನನ್ನಿಂದ ಏನು ಕೇಳುತ್ತದೆಯೋ ಅದನ್ನು ನಾನು ಮಾಡುತ್ತೇನೆ” ಎಂದು ಅವರು ಹೇಳಿದರು.

ಹೋರಾಟಕ್ಕೂ ಮುನ್ನವೇ ಸೋಲೊಪ್ಪಿದ್ರಾ ಅಶೋಕ್?

ಶಿವಕುಮಾರ್ ವಿರುದ್ಧ ಗೆಲ್ಲುವ ಸಾಧ್ಯತೆಗಳ ಕುರಿತು ಅಶೋಕ್ ಅವರು, ”ಇಂದಿರಾ ಗಾಂಧಿ, ಬಿ ಎಸ್ ಯಡಿಯೂರಪ್ಪ, ಸಿದ್ದರಾಮಯ್ಯ ಮತ್ತು ಹೆಚ್ ಡಿ ದೇವೇಗೌಡರಂತಹವರು ರಾಜ್ಯದ ಚುನಾವಣೆಯಲ್ಲಿ ಸೋತಿದ್ದಾರೆ. ”ನಾನು ಹೋರಾಡುತ್ತೇನೆ. ಉಳಿದದ್ದು ವಿಧಿ”ಯಾಟ ಎಂದು ಸೋಲಿನ ಬಗ್ಗೆ ಈಗಲೇ ಮಾತನಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...