Homeಕರ್ನಾಟಕಕಾಂಗ್ರೆಸ್ ದಿಗ್ಗಜರ ವಿರುದ್ಧ ಸೋಮಣ್ಣ, ಅಶೋಕ್: ಹೊಂದಾಣಿಕೆ ರಾಜಕಾರಣದ ವಿರುದ್ಧ ಬಿಜೆಪಿಯ ಸ್ಪಷ್ಟ ಸಂದೇಶ?

ಕಾಂಗ್ರೆಸ್ ದಿಗ್ಗಜರ ವಿರುದ್ಧ ಸೋಮಣ್ಣ, ಅಶೋಕ್: ಹೊಂದಾಣಿಕೆ ರಾಜಕಾರಣದ ವಿರುದ್ಧ ಬಿಜೆಪಿಯ ಸ್ಪಷ್ಟ ಸಂದೇಶ?

- Advertisement -
- Advertisement -

ಕಾಂಗ್ರೆಸ್‌ನ ದಿಗ್ಗಜ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ವಿರುದ್ಧ ಇಬ್ಬರು ಹಿರಿಯ ಮಂತ್ರಿಗಳನ್ನು ನಿಯೋಜನೆ ಮಾಡುವ ಮೂಲಕ ಬಿಜೆಪಿಯು ‘ಹೊಂದಾಣಿಕೆ’ ರಾಜಕಾರಣದ ವಿರುದ್ಧ ಸ್ಪಷ್ಟ ಸಂದೇಶ ರವಾನಿಸಿದಂತೆ ಕಾಣುತ್ತದೆ.

ಐದು ಬಾರಿ ಶಾಸಕರಾಗಿರುವ ವಿ ಸೋಮಣ್ಣ ಅವರು ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಲಿದ್ದಾರೆ. ಕನಕಪುರದಲ್ಲಿ ಶಿವಕುಮಾರ್ ವಿರುದ್ಧ ಆರು ಬಾರಿ ಶಾಸಕರಾಗಿರುವ ಆರ್ ಅಶೋಕ್ ಕಣಕ್ಕಿಳಿಯಲಿದ್ದಾರೆ.

ಕೈ ನಾಯಕರ ವಿರುದ್ಧ ಗೆಲುವು ಸಾಧಿಸಲು ಹಿರಿಯ ನಾಯಕರನ್ನು ಸ್ಪರ್ಧೆಗಿಳಿಸಲಾಗಿದೆ ಎನ್ನುವ ಭ್ರಮೆಯಲ್ಲಿ ಬಿಜಿಪಿ ಇಲ್ಲ. ಕೇವಲ ಮತ ಹಂಚಕೆ ದೃಷ್ಟಿಯಿಂದ ಈ ಹಿರಿಯ ನಾಯಕರನ್ನು ಸ್ಪರ್ಧೆಗಿಳಿಸದಂತೆ ಮೇಲ್ನೋಟಕ್ಕೆ ಕಂಡುಬರುತ್ತದೆ. ಏಕೆಂದರೆ ಸೋಮಣ್ಣ ಮತ್ತು ಅಶೋಕ್ ಅವರು ಕ್ರಮವಾಗಿ ಚಾಮರಾಜನಗರ ಮತ್ತು ಪದ್ಮನಾಭನಗರದಿಂದಲೂ ಸ್ಪರ್ಧಿಸಲಿದ್ದಾರೆ.

ಪ್ರತಿಬಾರಿ ವರುಣಾ, ಕನಕಪುರ ಸೇರಿದಂತೆ ಅನೇಕ ಪ್ರಬಲ ನಾಯಕರ ಕ್ಷೇತ್ರಗಳಲ್ಲಿ ಬಿಜೆಪಿ ದುರ್ಬಲ ಅಥವಾ ‘ಡಮ್ಮಿ’ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿತ್ತು, ಆದರೆ ಈ ಬಾರಿ ಹೊಂದಾಣಿಕೆ ರಾಜಕಾರಣವನ್ನು ಕೇಸರಿ ಪಕ್ಷ ತೊಡೆದುಹಾಕಲು ಬಯಸುತ್ತದೆ.

ಸಮಬಲದ ಹೋರಾಟ ರೂಪಿಸುವ ಹೊಣೆ ಈಗ ಸೋಮಣ್ಣ ಮತ್ತು ಅಶೋಕ್ ಅವರ ಮೇಲಿದೆ. ಅವರು ಬಿಜೆಪಿಯ ನಿರೀಕ್ಷೆಗಳನ್ನು ಪೂರೈಸಲು, ಕೆಲವು ಸ್ಟ್ಯಾಟರ್ಜಿ ಮಾಡಬೇಕಾದ ಅಗತ್ಯವಿದೆ.

ಇದನ್ನೂ ಓದಿ: ಬಿಜೆಪಿ ಪಟ್ಟಿ: ವಿ.ಸೋಮಣ್ಣ, ಆರ್.ಅಶೋಕ್ ತಲಾ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ

ಟಿಕೆಟ್ ಘೋ‍ಷಣೆಗೂ ಮುನ್ನ ಸೋಮಣ್ಣ ಅವರು ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ವಿಚಾರಕ್ಕೆ ತಾನು ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತಿದ್ದರು. ಏಕೆಂದರೆ ರಾಜಕೀಯದಲ್ಲಿ ಸಿದ್ದರಾಮಯ್ಯ ಹಾಗೂ ಸೋಮಣ್ಣ ನಡುವೆ ಒಳ್ಳೆಯ ಸ್ನೇಹ ಸಂಬಂಧ ಇದೆ. ಹಾಗಾಗಿ ಅವರು ಸ್ನೇಹಿತನ ವಿರುದ್ಧ ಹೋರಾಡಲು ನಿರಾಕರಿಸಿದ್ದರು.

ಟಿಕೆಟ್ ಘೋಷಣೆ ಬಳಿಕ ಮಾತನಾಡಿದ ವಿ. ಸೋಮಣ್ಣ, ”ನಾನು ಇದನ್ನು ನಿರೀಕ್ಷಿಸಿರಲಿಲ್ಲ, ಆದರೆ ಪಕ್ಷವು ನನ್ನನ್ನು ನಂಬಿದೆ. ವರುಣಾದಿಂದ ನನ್ನ ಪ್ರಚಾರ ಆರಂಭಿಸುತ್ತೇನೆ. ಸೋಲು ಮತ್ತು ಗೆಲುವು ರಾಜಕೀಯದಲ್ಲಿ ಒಂದು ನಾಣ್ಯದ ಎರಡು ಮುಖಗಳು ಎಂದು ಹೇಳಿದರು.

ವರುಣಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಯತರು ಇರುವುದು ಸೋಮಣ್ಣನವರ ಅನುಕೂಲ. ”ವರುಣ ನನಗೆ ಹೊಸದಲ್ಲ. ನನಗೆ ಅಲ್ಲಿ ವರ್ಷಗಳ ಸಂಪರ್ಕವಿದೆ, ಆದರೆ ಅದರ ಶಾಸಕರಾಗಿದ್ದ ಸಿದ್ದರಾಮಯ್ಯನಷ್ಟು ಜನಪ್ರಿಯ ವ್ಯಕ್ತಿ ನಾನಲ್ಲ. ನನ್ನ ಕೆಲಸವನ್ನು ನಾನು ಮಾಡುತ್ತೇನೆ” ಎಂದು ಅವರು ಹೇಳಿದರು. ಇದಕ್ಕೂ ಮುನ್ನ ಸೋಮಣ್ಣ ಅವರು ಬಿಜೆಪಿಯ ಪ್ರಬಲ ನಾಯಕ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

2008 ಮತ್ತು 2013ರ ಚುನಾವಣೆಯಲ್ಲಿ ಸಿದ್ದರಾಮಯ್ಯ ವರುಣಾದಲ್ಲಿ ಶೇ.50ಕ್ಕೂ ಹೆಚ್ಚು ಮತ ಗಳಿಸಿದ್ದರು. 2013ರಲ್ಲಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಶೇ.55ರಷ್ಟು ಮತ ಪಡೆದಿದ್ದರು. 2008 ರಲ್ಲಿ ಎಲ್ ರೇವಣ್ಣಸಿದ್ದಯ್ಯ ಅವರು ವರುಣಾದಲ್ಲಿ ಬಿಜೆಪಿ ಪಡೆದ ಅತಿ ಹೆಚ್ಚು ಮತ 37%.

ಇದು ಸೋಮಣ್ಣನನ್ನು ಬಲಿ ಕೊಡುವ ಪ್ಲ್ಯಾನ್

ವಿ ಸೋಮಣ್ಣ ಅವರು ಕೆಲವು ದಿನಗಳಿಂದ ಬಿ ಎಸ್ ಯಡಿಯುರಪ್ಪನವರ ಜೊತೆ ಮುಸುಕಿನ ಗುದ್ದಾಟ ನಡೆಸಿದ್ದರು. ಅದರ ಮುಂದುವರಿದ ಭಾಗವಾಗಿ ಯಡಿಯೂರಪ್ಪನವರು ಸೋಮಣ್ಣ ಅವರನ್ನು ರಾಜಕೀಯವಾಗಿ ಬಲಿ ಕೊಡಲು ಪ್ರಬಲ ಅಭ್ಯರ್ಥಿ ಸಿದ್ದರಾಮಯ್ಯ ವಿರುದ್ಧ ಕಾದಾಡಲು ಟಿಕೆಟ್ ನೀಡಲಾಗಿದೆ. ಜೊತೆಗೆ ಅವರಿಗೆ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಿಂದ ಕೊಡಬಹುದಿತ್ತು ಆದರೆ ಅದನ್ನು ಕೊಡದೇ ಚಾಮರಾಜನಗರ ಟಿಕೆಟ್ ನೀಡಲಾಗಿದೆ. ಅಲ್ಲಿಯೂ ಕೂಡ ಅವರಿಗೆ ಗೆಲುವು ಸುಲಭವಾಗಿಲ್ಲ.

ಇನ್ನು ಒಕ್ಕಲಿಗ ಭದ್ರಕೋಟೆಯಾದ ಕನಕಪುರ ಮೂರು ಬಾರಿ ಪ್ರತಿನಿಧಿಸಿರುವ ಶಿವಕುಮಾರ್ ಅವರ ಕ್ಷೇತ್ರವಾಗಿದೆ. ಶಿವಕುಮಾರ್ ಈ ಹಿಂದೆ ಸಾತನೂರು ಕ್ಷೇತ್ರವನ್ನು ನಾಲ್ಕು ಬಾರಿ ನಿಭಾಯಿಸಿದ್ದರು. 2008 ರಿಂದ ಕನಕಪುರದಲ್ಲಿ ಅವರ ಮತಗಳಿಕೆ ಏರಿಕೆಯಾಗಿದೆ – 2008 ರಲ್ಲಿ 48% ರಿಂದ 2018 ರಲ್ಲಿ 68% ಕ್ಕೆ. ಬಿಜೆಪಿ 3% ದಾಟಿಲ್ಲ.

ಇಂತಹ ಕ್ಷೇತ್ರದಲ್ಲಿ ಇದೀಗ ಬಿಜೆಪಿಯ ಒಕ್ಕಲಿಗ ಮುಖದ ಅಶೋಕ್‌ರನ್ನ ಸ್ಪರ್ಧೆಗಿಳಿಸಿದ್ದಾರೆ. ಆರ್ ಅಶೋಕ್ ಅವರು ಆಗಾಗ್ಗೆ “ಹೊಂದಾಣಿಕೆ” ರಾಜಕೀಯದಲ್ಲಿ ತೊಡಗಿದ್ದಾರೆ ಎಂದು ಕೆಲವರ ವಿರುದ್ಧ ಆರೋಪಿಸಿದ್ದರು. ಈಗ ಅವರನ್ನೇ ಪ್ರಬಲ ಒಕ್ಕಲಿಗ ಅಭ್ಯರ್ಥಿ ವಿರುದ್ಧ ಕಣಕ್ಕೆ ಇಳಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಅಶೋಕ್, ”ಶಿವಕುಮಾರ್ ವಿರುದ್ಧ ಅವರನ್ನು ಕಣಕ್ಕಿಳಿಸುವ ನಿರ್ಧಾರ ಆಶ್ಚರ್ಯಕರವಾಗಿದೆ. ನಾನು ಶಿಸ್ತಿನ ಸಿಪಾಯಿಯಾಗಿದ್ದೇನೆ ಮತ್ತು ಪಕ್ಷವು ನನ್ನಿಂದ ಏನು ಕೇಳುತ್ತದೆಯೋ ಅದನ್ನು ನಾನು ಮಾಡುತ್ತೇನೆ” ಎಂದು ಅವರು ಹೇಳಿದರು.

ಹೋರಾಟಕ್ಕೂ ಮುನ್ನವೇ ಸೋಲೊಪ್ಪಿದ್ರಾ ಅಶೋಕ್?

ಶಿವಕುಮಾರ್ ವಿರುದ್ಧ ಗೆಲ್ಲುವ ಸಾಧ್ಯತೆಗಳ ಕುರಿತು ಅಶೋಕ್ ಅವರು, ”ಇಂದಿರಾ ಗಾಂಧಿ, ಬಿ ಎಸ್ ಯಡಿಯೂರಪ್ಪ, ಸಿದ್ದರಾಮಯ್ಯ ಮತ್ತು ಹೆಚ್ ಡಿ ದೇವೇಗೌಡರಂತಹವರು ರಾಜ್ಯದ ಚುನಾವಣೆಯಲ್ಲಿ ಸೋತಿದ್ದಾರೆ. ”ನಾನು ಹೋರಾಡುತ್ತೇನೆ. ಉಳಿದದ್ದು ವಿಧಿ”ಯಾಟ ಎಂದು ಸೋಲಿನ ಬಗ್ಗೆ ಈಗಲೇ ಮಾತನಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...