Homeಕರ್ನಾಟಕರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೋಮಣ್ಣ ಪಟ್ಟು: ಬಿಜೆಪಿಯಲ್ಲಿ ಶುರುವಾಯಿತು ಟೆನ್ಷನ್

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೋಮಣ್ಣ ಪಟ್ಟು: ಬಿಜೆಪಿಯಲ್ಲಿ ಶುರುವಾಯಿತು ಟೆನ್ಷನ್

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಬಿಜೆಪಿಯಲ್ಲಿ ಈಗ ವಿಪಕ್ಷ ನಾಯಕನ ಆಯ್ಕೆಯ ಜೊತೆಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಶುರುವಾಗಿದೆ. ಅದರಲ್ಲಿಯೂ ಚಾಮರಾಜನಗರ ಹಾಗೂ ವರುಣಾ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿ ಸೋಲು ಕಂಡಿರುವ ಮಾಜಿ ಸಚಿವ ವಿ. ಸೋಮಣ್ಣ ನನ್ನನ್ನು ರಾಜ್ಯಾಧ್ಯಕ್ಷನಾಗಿ ಮಾಡುವಂತೆ ಕೇಂದ್ರ ನಾಯಕರಿಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

ರಾಜ್ಯಧ್ಯಕ್ಷ ಸ್ಥಾನಕ್ಕೆ ವಿ ಸೋಮಣ್ಣ, ಸಿಟಿ ರವಿ, ಅಶ್ವತ್ ನಾರಾಯಣ ಹಾಗೂ ಆರ್ ಅಶೋಕ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಈ ನಡುವೆ ಹಾಲಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ರಾಜ್ಯಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಇದೀಗ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿಯ ಜೊತೆಗೆ ಗೊಂದಲಗಳೂ ಹೆಚ್ಚಾಗಿವೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ ಸೋಮಣ್ಣ ಅವರು, ”ಚುನಾವಣಾ ಬಳಿಕ ಎರಡು ಬಾರಿ ದೆಹಲಿಗೆ ಹೋಗಿ ಬಂದಿದ್ದೇನೆ. ಯಾರ ಮೇಲೆ ಏನು ಅಭಿಪ್ರಾಯ ಎಂದು ಹೇಳುವುದಕ್ಕಿಂತ ನನ್ನ 45 ವರ್ಷದ ಅನುಭವ ಹೇಳಿದ್ದೇನೆ. ನನ್ನನ್ನು ರಾಜ್ಯಾಧ್ಯಕ್ಷ ಮಾಡಿ ಎಂದು ಹೇಳಿದ್ದೇನೆ. ಕೇಂದ್ರ ನಾಯಕರಿಗೆ ಪತ್ರ ಬರೆದಿದ್ದೇನೆ. ಅದು ಎಷ್ಟು ಚರ್ಚೆ ಆಗುತ್ತಿದೆ ಎನ್ನುವ ಬಗ್ಗೆ ಗೊತ್ತಿಲ್ಲ” ಎಂದರು.

”ನಾನು ಬಿಜೆಪಿಗೆ ಬಂದು 15 ವರ್ಷ ಆಯಿತು. ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿಯನ್ನು ಒಟ್ಟಿಗೆ ನಡೆಸಿಕೊಂಡು ಹೋಗಬೇಕಿದೆ. ಹೈಕಮಾಂಡ್ ನನಗೆ ನೀಡಿದ್ದ ಎಲ್ಲಾ ಟಾಸ್ಕ್ ಮಾಡಿದ್ದೇನೆ ಆದರೆ ಆರ್ ಅಶೋಕ್ ಅವರು ಟಾಸ್ಕ್‌ಅನ್ನು ಸರಿಯಾಗಿ ನಿಭಾಯಿಸಿಲ್ಲ. ಅವರು ಡಿಕೆ ಶಿವಕುಮಾರ್ ವಿರುದ್ಧ ಸ್ಪರ್ಧೆ ಮಾತ್ರ ಮಾಡಿದರು. ಆದರೆ ಪೈಪೋಟಿ ನೀಡುವ ಪ್ರಯತ್ನ ಮಾಡಲಿಲ್ಲ. ಆದರೆ ನಾನು ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡಿ ಪ್ರಬಲ ಪೈಪೋಟಿ ನೀಡಿದ್ದೇನೆ. ನನ್ನ ತವರು ಕ್ಷೇತ್ರ ಬಿಟ್ಟು ಬೇರೆ ಎರಡು ಕಡೆಗಳಲ್ಲಿ ನನಗೆ ಸ್ಪರ್ಧೆ ಮಾಡಲು ಟಾಸ್ಕ್ ಕೊಟ್ಟರು, ನಾನು ಅದಕ್ಕೆ ಒಪ್ಪಿದೆ. ನಾನು ಪಕ್ಷ ಹೇಳಿದಂತೆ ನಡೆದುಕೊಂಡು ಬಂದಿದ್ದೇನೆ ಹಾಗಾಗಿ ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕು ಎಂದು ನಮ್ಮ ವರಿಷ್ಠರಿಗೆ ಒತ್ತಾಯ ಮಾಡಿದ್ದೇನೆ” ಎಂದು ಸೋಮಣ್ಣ ತಿಳಿಸಿದರು.

”ನಾನು ಕೇವಲ 100 ದಿನ ಮಾತ್ರ ಅವಕಾಶ ಕೇಳಿದ್ದೇನೆ. ಒಬ್ಬ ರಾಜ್ಯಾಧ್ಯಕ್ಷ ಯಾವ ರೀತಿ ಸಂಚಲನವನ್ನು ಮೂಡಿಸಬೇಕು ಎಂದು ತೋರಿಸುತ್ತೇನೆ. ನಾನು ಸ್ವಲ್ಪ ಜೋರಾಗಿ ಮಾತಾಡುತ್ತೇನೆ ಸತ್ಯ ಮಾತಾಡುತ್ತೇನೆ ಗಲಾಟೆ ಮಾಡುತ್ತೇನೆ ನಿಜ. ಆದರೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವಂಥ ಸಾಮರ್ಥ್ಯವಿದೆ. ಅವಕಾಶ ಕೊಟ್ಟರೆ ಎಲ್ಲರ ಮನೆಗೆ ಹೋಗಿ ಪಕ್ಷ ಸಂಘಟನೆ ಮಾಡುತ್ತೇನೆ. ನಮ್ಮಲ್ಲೂ ಕೂಡ ಪ್ರತಿಭೆ ಇದೆ, ಶಕ್ತಿ ಇದೆ, ದೂರದೃಷ್ಟಿ ಚಿಂತನೆ ಇದೆ” ಎಂದು ಹೇಳಿದ್ದಾರೆ.

”ಇವತ್ತಿನ ಸಂದರ್ಭದಲ್ಲಿ ನನಗಿಂತ ಯಾರಾದರೂ ಸಮರ್ಥರು ಇದ್ದರೆ ಅವರ ಜೊತೆ ಕೂತು ಮಾತನಾಡಿಸಿ. ಅದನ್ನು ಮಾಡದೆ ನಾಲ್ಕು ಗೋಡೆಗಳ ಮಧ್ಯೆ ಇನ್ನೇನೂ ಆಗುವುದು ಬೇಡ. ಇವತ್ತಿನ ಸಂದರ್ಭ ಅರ್ಥ ಮಾಡಿಕೊಂಡು ಕೆಲಸ ಮಾಡುವವನಿಗೆ ಅವಕಾಶ ಕೊಡಿ ಎಂದು ಕೇಳಿದ್ದೇನೆ. ಪಕ್ಷ ಅವಕಾಶ ಕೊಟ್ಟರೆ ಈಗ ಏನು 3-4 ತಿಂಗಳಿಂದ ಮಲಗಿದ್ದೇವೆ ಯಾರನ್ನು ಬಿಡದೆ ಎಲ್ಲರ ಮನೆಗೆ ಹೋಗಿ ಪಕ್ಷ ಸಂಘಟನೆ ಮಾಡುತ್ತೇನೆ” ಎಂದರು.

”ನಾನು ಇದ್ದೇನೆ ಅಂದಾಕ್ಷಣ ನಾಲ್ಕಾರು ಜನಕ್ಕೆ ಮುಜುಗರ ಆಗಬಹುದು ಅಷ್ಟೇ. ಎಂಥ ವಿರೋಧ ಬಂದರೂ ನಾನು ಎದುರಿಸಿ ಹೋಗುತ್ತೇನೆ. ಯಾರ್ಯಾರಿಗೆ ಎಲ್ಲೆಲ್ಲಿ ಇಂಜೆಕ್ಷನ್ ಕೊಡಬೇಕು ನನಗೆ ಗೊತ್ತಿದೆ. ಇವರು ಎಲ್ಲೋ ಕುಳಿತುಕೊಂಡು ಇಂಜೆಕ್ಷನ್ ಕೊಡುತ್ತಾರೆ ನಾನು ಓಡಾಡಿಕೊಂಡು ಕೊಡುತ್ತೇನೆ. ಪಕ್ಷ ಅಂತಿಮ, ಪಕ್ಷ ಸಂಘಟನೆ ಮಾಡುವ ಕೆಲಸ ಬೇಕು ಮಾಡುತ್ತೇನೆ” ಎಂದು ಸೋಮಣ್ಣ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕಕ್ಕೆ ಅಕ್ಕಿ ನೀಡಲು ಸಾಧ್ಯವಿಲ್ಲ ಎಂದ ಕೇಂದ್ರ; ಇದು ರಾಜಕೀಯ ದುರುದ್ದೇಶ: ಮುನಿಯಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...