Homeಕರ್ನಾಟಕರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೋಮಣ್ಣ ಪಟ್ಟು: ಬಿಜೆಪಿಯಲ್ಲಿ ಶುರುವಾಯಿತು ಟೆನ್ಷನ್

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೋಮಣ್ಣ ಪಟ್ಟು: ಬಿಜೆಪಿಯಲ್ಲಿ ಶುರುವಾಯಿತು ಟೆನ್ಷನ್

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಬಿಜೆಪಿಯಲ್ಲಿ ಈಗ ವಿಪಕ್ಷ ನಾಯಕನ ಆಯ್ಕೆಯ ಜೊತೆಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಶುರುವಾಗಿದೆ. ಅದರಲ್ಲಿಯೂ ಚಾಮರಾಜನಗರ ಹಾಗೂ ವರುಣಾ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿ ಸೋಲು ಕಂಡಿರುವ ಮಾಜಿ ಸಚಿವ ವಿ. ಸೋಮಣ್ಣ ನನ್ನನ್ನು ರಾಜ್ಯಾಧ್ಯಕ್ಷನಾಗಿ ಮಾಡುವಂತೆ ಕೇಂದ್ರ ನಾಯಕರಿಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

ರಾಜ್ಯಧ್ಯಕ್ಷ ಸ್ಥಾನಕ್ಕೆ ವಿ ಸೋಮಣ್ಣ, ಸಿಟಿ ರವಿ, ಅಶ್ವತ್ ನಾರಾಯಣ ಹಾಗೂ ಆರ್ ಅಶೋಕ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಈ ನಡುವೆ ಹಾಲಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ರಾಜ್ಯಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಇದೀಗ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿಯ ಜೊತೆಗೆ ಗೊಂದಲಗಳೂ ಹೆಚ್ಚಾಗಿವೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ ಸೋಮಣ್ಣ ಅವರು, ”ಚುನಾವಣಾ ಬಳಿಕ ಎರಡು ಬಾರಿ ದೆಹಲಿಗೆ ಹೋಗಿ ಬಂದಿದ್ದೇನೆ. ಯಾರ ಮೇಲೆ ಏನು ಅಭಿಪ್ರಾಯ ಎಂದು ಹೇಳುವುದಕ್ಕಿಂತ ನನ್ನ 45 ವರ್ಷದ ಅನುಭವ ಹೇಳಿದ್ದೇನೆ. ನನ್ನನ್ನು ರಾಜ್ಯಾಧ್ಯಕ್ಷ ಮಾಡಿ ಎಂದು ಹೇಳಿದ್ದೇನೆ. ಕೇಂದ್ರ ನಾಯಕರಿಗೆ ಪತ್ರ ಬರೆದಿದ್ದೇನೆ. ಅದು ಎಷ್ಟು ಚರ್ಚೆ ಆಗುತ್ತಿದೆ ಎನ್ನುವ ಬಗ್ಗೆ ಗೊತ್ತಿಲ್ಲ” ಎಂದರು.

”ನಾನು ಬಿಜೆಪಿಗೆ ಬಂದು 15 ವರ್ಷ ಆಯಿತು. ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿಯನ್ನು ಒಟ್ಟಿಗೆ ನಡೆಸಿಕೊಂಡು ಹೋಗಬೇಕಿದೆ. ಹೈಕಮಾಂಡ್ ನನಗೆ ನೀಡಿದ್ದ ಎಲ್ಲಾ ಟಾಸ್ಕ್ ಮಾಡಿದ್ದೇನೆ ಆದರೆ ಆರ್ ಅಶೋಕ್ ಅವರು ಟಾಸ್ಕ್‌ಅನ್ನು ಸರಿಯಾಗಿ ನಿಭಾಯಿಸಿಲ್ಲ. ಅವರು ಡಿಕೆ ಶಿವಕುಮಾರ್ ವಿರುದ್ಧ ಸ್ಪರ್ಧೆ ಮಾತ್ರ ಮಾಡಿದರು. ಆದರೆ ಪೈಪೋಟಿ ನೀಡುವ ಪ್ರಯತ್ನ ಮಾಡಲಿಲ್ಲ. ಆದರೆ ನಾನು ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡಿ ಪ್ರಬಲ ಪೈಪೋಟಿ ನೀಡಿದ್ದೇನೆ. ನನ್ನ ತವರು ಕ್ಷೇತ್ರ ಬಿಟ್ಟು ಬೇರೆ ಎರಡು ಕಡೆಗಳಲ್ಲಿ ನನಗೆ ಸ್ಪರ್ಧೆ ಮಾಡಲು ಟಾಸ್ಕ್ ಕೊಟ್ಟರು, ನಾನು ಅದಕ್ಕೆ ಒಪ್ಪಿದೆ. ನಾನು ಪಕ್ಷ ಹೇಳಿದಂತೆ ನಡೆದುಕೊಂಡು ಬಂದಿದ್ದೇನೆ ಹಾಗಾಗಿ ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕು ಎಂದು ನಮ್ಮ ವರಿಷ್ಠರಿಗೆ ಒತ್ತಾಯ ಮಾಡಿದ್ದೇನೆ” ಎಂದು ಸೋಮಣ್ಣ ತಿಳಿಸಿದರು.

”ನಾನು ಕೇವಲ 100 ದಿನ ಮಾತ್ರ ಅವಕಾಶ ಕೇಳಿದ್ದೇನೆ. ಒಬ್ಬ ರಾಜ್ಯಾಧ್ಯಕ್ಷ ಯಾವ ರೀತಿ ಸಂಚಲನವನ್ನು ಮೂಡಿಸಬೇಕು ಎಂದು ತೋರಿಸುತ್ತೇನೆ. ನಾನು ಸ್ವಲ್ಪ ಜೋರಾಗಿ ಮಾತಾಡುತ್ತೇನೆ ಸತ್ಯ ಮಾತಾಡುತ್ತೇನೆ ಗಲಾಟೆ ಮಾಡುತ್ತೇನೆ ನಿಜ. ಆದರೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವಂಥ ಸಾಮರ್ಥ್ಯವಿದೆ. ಅವಕಾಶ ಕೊಟ್ಟರೆ ಎಲ್ಲರ ಮನೆಗೆ ಹೋಗಿ ಪಕ್ಷ ಸಂಘಟನೆ ಮಾಡುತ್ತೇನೆ. ನಮ್ಮಲ್ಲೂ ಕೂಡ ಪ್ರತಿಭೆ ಇದೆ, ಶಕ್ತಿ ಇದೆ, ದೂರದೃಷ್ಟಿ ಚಿಂತನೆ ಇದೆ” ಎಂದು ಹೇಳಿದ್ದಾರೆ.

”ಇವತ್ತಿನ ಸಂದರ್ಭದಲ್ಲಿ ನನಗಿಂತ ಯಾರಾದರೂ ಸಮರ್ಥರು ಇದ್ದರೆ ಅವರ ಜೊತೆ ಕೂತು ಮಾತನಾಡಿಸಿ. ಅದನ್ನು ಮಾಡದೆ ನಾಲ್ಕು ಗೋಡೆಗಳ ಮಧ್ಯೆ ಇನ್ನೇನೂ ಆಗುವುದು ಬೇಡ. ಇವತ್ತಿನ ಸಂದರ್ಭ ಅರ್ಥ ಮಾಡಿಕೊಂಡು ಕೆಲಸ ಮಾಡುವವನಿಗೆ ಅವಕಾಶ ಕೊಡಿ ಎಂದು ಕೇಳಿದ್ದೇನೆ. ಪಕ್ಷ ಅವಕಾಶ ಕೊಟ್ಟರೆ ಈಗ ಏನು 3-4 ತಿಂಗಳಿಂದ ಮಲಗಿದ್ದೇವೆ ಯಾರನ್ನು ಬಿಡದೆ ಎಲ್ಲರ ಮನೆಗೆ ಹೋಗಿ ಪಕ್ಷ ಸಂಘಟನೆ ಮಾಡುತ್ತೇನೆ” ಎಂದರು.

”ನಾನು ಇದ್ದೇನೆ ಅಂದಾಕ್ಷಣ ನಾಲ್ಕಾರು ಜನಕ್ಕೆ ಮುಜುಗರ ಆಗಬಹುದು ಅಷ್ಟೇ. ಎಂಥ ವಿರೋಧ ಬಂದರೂ ನಾನು ಎದುರಿಸಿ ಹೋಗುತ್ತೇನೆ. ಯಾರ್ಯಾರಿಗೆ ಎಲ್ಲೆಲ್ಲಿ ಇಂಜೆಕ್ಷನ್ ಕೊಡಬೇಕು ನನಗೆ ಗೊತ್ತಿದೆ. ಇವರು ಎಲ್ಲೋ ಕುಳಿತುಕೊಂಡು ಇಂಜೆಕ್ಷನ್ ಕೊಡುತ್ತಾರೆ ನಾನು ಓಡಾಡಿಕೊಂಡು ಕೊಡುತ್ತೇನೆ. ಪಕ್ಷ ಅಂತಿಮ, ಪಕ್ಷ ಸಂಘಟನೆ ಮಾಡುವ ಕೆಲಸ ಬೇಕು ಮಾಡುತ್ತೇನೆ” ಎಂದು ಸೋಮಣ್ಣ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕಕ್ಕೆ ಅಕ್ಕಿ ನೀಡಲು ಸಾಧ್ಯವಿಲ್ಲ ಎಂದ ಕೇಂದ್ರ; ಇದು ರಾಜಕೀಯ ದುರುದ್ದೇಶ: ಮುನಿಯಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...