Homeಕರ್ನಾಟಕರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೋಮಣ್ಣ ಪಟ್ಟು: ಬಿಜೆಪಿಯಲ್ಲಿ ಶುರುವಾಯಿತು ಟೆನ್ಷನ್

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೋಮಣ್ಣ ಪಟ್ಟು: ಬಿಜೆಪಿಯಲ್ಲಿ ಶುರುವಾಯಿತು ಟೆನ್ಷನ್

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಬಿಜೆಪಿಯಲ್ಲಿ ಈಗ ವಿಪಕ್ಷ ನಾಯಕನ ಆಯ್ಕೆಯ ಜೊತೆಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಶುರುವಾಗಿದೆ. ಅದರಲ್ಲಿಯೂ ಚಾಮರಾಜನಗರ ಹಾಗೂ ವರುಣಾ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿ ಸೋಲು ಕಂಡಿರುವ ಮಾಜಿ ಸಚಿವ ವಿ. ಸೋಮಣ್ಣ ನನ್ನನ್ನು ರಾಜ್ಯಾಧ್ಯಕ್ಷನಾಗಿ ಮಾಡುವಂತೆ ಕೇಂದ್ರ ನಾಯಕರಿಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

ರಾಜ್ಯಧ್ಯಕ್ಷ ಸ್ಥಾನಕ್ಕೆ ವಿ ಸೋಮಣ್ಣ, ಸಿಟಿ ರವಿ, ಅಶ್ವತ್ ನಾರಾಯಣ ಹಾಗೂ ಆರ್ ಅಶೋಕ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಈ ನಡುವೆ ಹಾಲಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ರಾಜ್ಯಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಇದೀಗ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿಯ ಜೊತೆಗೆ ಗೊಂದಲಗಳೂ ಹೆಚ್ಚಾಗಿವೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ ಸೋಮಣ್ಣ ಅವರು, ”ಚುನಾವಣಾ ಬಳಿಕ ಎರಡು ಬಾರಿ ದೆಹಲಿಗೆ ಹೋಗಿ ಬಂದಿದ್ದೇನೆ. ಯಾರ ಮೇಲೆ ಏನು ಅಭಿಪ್ರಾಯ ಎಂದು ಹೇಳುವುದಕ್ಕಿಂತ ನನ್ನ 45 ವರ್ಷದ ಅನುಭವ ಹೇಳಿದ್ದೇನೆ. ನನ್ನನ್ನು ರಾಜ್ಯಾಧ್ಯಕ್ಷ ಮಾಡಿ ಎಂದು ಹೇಳಿದ್ದೇನೆ. ಕೇಂದ್ರ ನಾಯಕರಿಗೆ ಪತ್ರ ಬರೆದಿದ್ದೇನೆ. ಅದು ಎಷ್ಟು ಚರ್ಚೆ ಆಗುತ್ತಿದೆ ಎನ್ನುವ ಬಗ್ಗೆ ಗೊತ್ತಿಲ್ಲ” ಎಂದರು.

”ನಾನು ಬಿಜೆಪಿಗೆ ಬಂದು 15 ವರ್ಷ ಆಯಿತು. ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿಯನ್ನು ಒಟ್ಟಿಗೆ ನಡೆಸಿಕೊಂಡು ಹೋಗಬೇಕಿದೆ. ಹೈಕಮಾಂಡ್ ನನಗೆ ನೀಡಿದ್ದ ಎಲ್ಲಾ ಟಾಸ್ಕ್ ಮಾಡಿದ್ದೇನೆ ಆದರೆ ಆರ್ ಅಶೋಕ್ ಅವರು ಟಾಸ್ಕ್‌ಅನ್ನು ಸರಿಯಾಗಿ ನಿಭಾಯಿಸಿಲ್ಲ. ಅವರು ಡಿಕೆ ಶಿವಕುಮಾರ್ ವಿರುದ್ಧ ಸ್ಪರ್ಧೆ ಮಾತ್ರ ಮಾಡಿದರು. ಆದರೆ ಪೈಪೋಟಿ ನೀಡುವ ಪ್ರಯತ್ನ ಮಾಡಲಿಲ್ಲ. ಆದರೆ ನಾನು ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡಿ ಪ್ರಬಲ ಪೈಪೋಟಿ ನೀಡಿದ್ದೇನೆ. ನನ್ನ ತವರು ಕ್ಷೇತ್ರ ಬಿಟ್ಟು ಬೇರೆ ಎರಡು ಕಡೆಗಳಲ್ಲಿ ನನಗೆ ಸ್ಪರ್ಧೆ ಮಾಡಲು ಟಾಸ್ಕ್ ಕೊಟ್ಟರು, ನಾನು ಅದಕ್ಕೆ ಒಪ್ಪಿದೆ. ನಾನು ಪಕ್ಷ ಹೇಳಿದಂತೆ ನಡೆದುಕೊಂಡು ಬಂದಿದ್ದೇನೆ ಹಾಗಾಗಿ ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕು ಎಂದು ನಮ್ಮ ವರಿಷ್ಠರಿಗೆ ಒತ್ತಾಯ ಮಾಡಿದ್ದೇನೆ” ಎಂದು ಸೋಮಣ್ಣ ತಿಳಿಸಿದರು.

”ನಾನು ಕೇವಲ 100 ದಿನ ಮಾತ್ರ ಅವಕಾಶ ಕೇಳಿದ್ದೇನೆ. ಒಬ್ಬ ರಾಜ್ಯಾಧ್ಯಕ್ಷ ಯಾವ ರೀತಿ ಸಂಚಲನವನ್ನು ಮೂಡಿಸಬೇಕು ಎಂದು ತೋರಿಸುತ್ತೇನೆ. ನಾನು ಸ್ವಲ್ಪ ಜೋರಾಗಿ ಮಾತಾಡುತ್ತೇನೆ ಸತ್ಯ ಮಾತಾಡುತ್ತೇನೆ ಗಲಾಟೆ ಮಾಡುತ್ತೇನೆ ನಿಜ. ಆದರೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವಂಥ ಸಾಮರ್ಥ್ಯವಿದೆ. ಅವಕಾಶ ಕೊಟ್ಟರೆ ಎಲ್ಲರ ಮನೆಗೆ ಹೋಗಿ ಪಕ್ಷ ಸಂಘಟನೆ ಮಾಡುತ್ತೇನೆ. ನಮ್ಮಲ್ಲೂ ಕೂಡ ಪ್ರತಿಭೆ ಇದೆ, ಶಕ್ತಿ ಇದೆ, ದೂರದೃಷ್ಟಿ ಚಿಂತನೆ ಇದೆ” ಎಂದು ಹೇಳಿದ್ದಾರೆ.

”ಇವತ್ತಿನ ಸಂದರ್ಭದಲ್ಲಿ ನನಗಿಂತ ಯಾರಾದರೂ ಸಮರ್ಥರು ಇದ್ದರೆ ಅವರ ಜೊತೆ ಕೂತು ಮಾತನಾಡಿಸಿ. ಅದನ್ನು ಮಾಡದೆ ನಾಲ್ಕು ಗೋಡೆಗಳ ಮಧ್ಯೆ ಇನ್ನೇನೂ ಆಗುವುದು ಬೇಡ. ಇವತ್ತಿನ ಸಂದರ್ಭ ಅರ್ಥ ಮಾಡಿಕೊಂಡು ಕೆಲಸ ಮಾಡುವವನಿಗೆ ಅವಕಾಶ ಕೊಡಿ ಎಂದು ಕೇಳಿದ್ದೇನೆ. ಪಕ್ಷ ಅವಕಾಶ ಕೊಟ್ಟರೆ ಈಗ ಏನು 3-4 ತಿಂಗಳಿಂದ ಮಲಗಿದ್ದೇವೆ ಯಾರನ್ನು ಬಿಡದೆ ಎಲ್ಲರ ಮನೆಗೆ ಹೋಗಿ ಪಕ್ಷ ಸಂಘಟನೆ ಮಾಡುತ್ತೇನೆ” ಎಂದರು.

”ನಾನು ಇದ್ದೇನೆ ಅಂದಾಕ್ಷಣ ನಾಲ್ಕಾರು ಜನಕ್ಕೆ ಮುಜುಗರ ಆಗಬಹುದು ಅಷ್ಟೇ. ಎಂಥ ವಿರೋಧ ಬಂದರೂ ನಾನು ಎದುರಿಸಿ ಹೋಗುತ್ತೇನೆ. ಯಾರ್ಯಾರಿಗೆ ಎಲ್ಲೆಲ್ಲಿ ಇಂಜೆಕ್ಷನ್ ಕೊಡಬೇಕು ನನಗೆ ಗೊತ್ತಿದೆ. ಇವರು ಎಲ್ಲೋ ಕುಳಿತುಕೊಂಡು ಇಂಜೆಕ್ಷನ್ ಕೊಡುತ್ತಾರೆ ನಾನು ಓಡಾಡಿಕೊಂಡು ಕೊಡುತ್ತೇನೆ. ಪಕ್ಷ ಅಂತಿಮ, ಪಕ್ಷ ಸಂಘಟನೆ ಮಾಡುವ ಕೆಲಸ ಬೇಕು ಮಾಡುತ್ತೇನೆ” ಎಂದು ಸೋಮಣ್ಣ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕಕ್ಕೆ ಅಕ್ಕಿ ನೀಡಲು ಸಾಧ್ಯವಿಲ್ಲ ಎಂದ ಕೇಂದ್ರ; ಇದು ರಾಜಕೀಯ ದುರುದ್ದೇಶ: ಮುನಿಯಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...