Homeಕರ್ನಾಟಕರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೋಮಣ್ಣ ಪಟ್ಟು: ಬಿಜೆಪಿಯಲ್ಲಿ ಶುರುವಾಯಿತು ಟೆನ್ಷನ್

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೋಮಣ್ಣ ಪಟ್ಟು: ಬಿಜೆಪಿಯಲ್ಲಿ ಶುರುವಾಯಿತು ಟೆನ್ಷನ್

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಬಿಜೆಪಿಯಲ್ಲಿ ಈಗ ವಿಪಕ್ಷ ನಾಯಕನ ಆಯ್ಕೆಯ ಜೊತೆಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಶುರುವಾಗಿದೆ. ಅದರಲ್ಲಿಯೂ ಚಾಮರಾಜನಗರ ಹಾಗೂ ವರುಣಾ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿ ಸೋಲು ಕಂಡಿರುವ ಮಾಜಿ ಸಚಿವ ವಿ. ಸೋಮಣ್ಣ ನನ್ನನ್ನು ರಾಜ್ಯಾಧ್ಯಕ್ಷನಾಗಿ ಮಾಡುವಂತೆ ಕೇಂದ್ರ ನಾಯಕರಿಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

ರಾಜ್ಯಧ್ಯಕ್ಷ ಸ್ಥಾನಕ್ಕೆ ವಿ ಸೋಮಣ್ಣ, ಸಿಟಿ ರವಿ, ಅಶ್ವತ್ ನಾರಾಯಣ ಹಾಗೂ ಆರ್ ಅಶೋಕ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಈ ನಡುವೆ ಹಾಲಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ರಾಜ್ಯಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಇದೀಗ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿಯ ಜೊತೆಗೆ ಗೊಂದಲಗಳೂ ಹೆಚ್ಚಾಗಿವೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ ಸೋಮಣ್ಣ ಅವರು, ”ಚುನಾವಣಾ ಬಳಿಕ ಎರಡು ಬಾರಿ ದೆಹಲಿಗೆ ಹೋಗಿ ಬಂದಿದ್ದೇನೆ. ಯಾರ ಮೇಲೆ ಏನು ಅಭಿಪ್ರಾಯ ಎಂದು ಹೇಳುವುದಕ್ಕಿಂತ ನನ್ನ 45 ವರ್ಷದ ಅನುಭವ ಹೇಳಿದ್ದೇನೆ. ನನ್ನನ್ನು ರಾಜ್ಯಾಧ್ಯಕ್ಷ ಮಾಡಿ ಎಂದು ಹೇಳಿದ್ದೇನೆ. ಕೇಂದ್ರ ನಾಯಕರಿಗೆ ಪತ್ರ ಬರೆದಿದ್ದೇನೆ. ಅದು ಎಷ್ಟು ಚರ್ಚೆ ಆಗುತ್ತಿದೆ ಎನ್ನುವ ಬಗ್ಗೆ ಗೊತ್ತಿಲ್ಲ” ಎಂದರು.

”ನಾನು ಬಿಜೆಪಿಗೆ ಬಂದು 15 ವರ್ಷ ಆಯಿತು. ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿಯನ್ನು ಒಟ್ಟಿಗೆ ನಡೆಸಿಕೊಂಡು ಹೋಗಬೇಕಿದೆ. ಹೈಕಮಾಂಡ್ ನನಗೆ ನೀಡಿದ್ದ ಎಲ್ಲಾ ಟಾಸ್ಕ್ ಮಾಡಿದ್ದೇನೆ ಆದರೆ ಆರ್ ಅಶೋಕ್ ಅವರು ಟಾಸ್ಕ್‌ಅನ್ನು ಸರಿಯಾಗಿ ನಿಭಾಯಿಸಿಲ್ಲ. ಅವರು ಡಿಕೆ ಶಿವಕುಮಾರ್ ವಿರುದ್ಧ ಸ್ಪರ್ಧೆ ಮಾತ್ರ ಮಾಡಿದರು. ಆದರೆ ಪೈಪೋಟಿ ನೀಡುವ ಪ್ರಯತ್ನ ಮಾಡಲಿಲ್ಲ. ಆದರೆ ನಾನು ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡಿ ಪ್ರಬಲ ಪೈಪೋಟಿ ನೀಡಿದ್ದೇನೆ. ನನ್ನ ತವರು ಕ್ಷೇತ್ರ ಬಿಟ್ಟು ಬೇರೆ ಎರಡು ಕಡೆಗಳಲ್ಲಿ ನನಗೆ ಸ್ಪರ್ಧೆ ಮಾಡಲು ಟಾಸ್ಕ್ ಕೊಟ್ಟರು, ನಾನು ಅದಕ್ಕೆ ಒಪ್ಪಿದೆ. ನಾನು ಪಕ್ಷ ಹೇಳಿದಂತೆ ನಡೆದುಕೊಂಡು ಬಂದಿದ್ದೇನೆ ಹಾಗಾಗಿ ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕು ಎಂದು ನಮ್ಮ ವರಿಷ್ಠರಿಗೆ ಒತ್ತಾಯ ಮಾಡಿದ್ದೇನೆ” ಎಂದು ಸೋಮಣ್ಣ ತಿಳಿಸಿದರು.

”ನಾನು ಕೇವಲ 100 ದಿನ ಮಾತ್ರ ಅವಕಾಶ ಕೇಳಿದ್ದೇನೆ. ಒಬ್ಬ ರಾಜ್ಯಾಧ್ಯಕ್ಷ ಯಾವ ರೀತಿ ಸಂಚಲನವನ್ನು ಮೂಡಿಸಬೇಕು ಎಂದು ತೋರಿಸುತ್ತೇನೆ. ನಾನು ಸ್ವಲ್ಪ ಜೋರಾಗಿ ಮಾತಾಡುತ್ತೇನೆ ಸತ್ಯ ಮಾತಾಡುತ್ತೇನೆ ಗಲಾಟೆ ಮಾಡುತ್ತೇನೆ ನಿಜ. ಆದರೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವಂಥ ಸಾಮರ್ಥ್ಯವಿದೆ. ಅವಕಾಶ ಕೊಟ್ಟರೆ ಎಲ್ಲರ ಮನೆಗೆ ಹೋಗಿ ಪಕ್ಷ ಸಂಘಟನೆ ಮಾಡುತ್ತೇನೆ. ನಮ್ಮಲ್ಲೂ ಕೂಡ ಪ್ರತಿಭೆ ಇದೆ, ಶಕ್ತಿ ಇದೆ, ದೂರದೃಷ್ಟಿ ಚಿಂತನೆ ಇದೆ” ಎಂದು ಹೇಳಿದ್ದಾರೆ.

”ಇವತ್ತಿನ ಸಂದರ್ಭದಲ್ಲಿ ನನಗಿಂತ ಯಾರಾದರೂ ಸಮರ್ಥರು ಇದ್ದರೆ ಅವರ ಜೊತೆ ಕೂತು ಮಾತನಾಡಿಸಿ. ಅದನ್ನು ಮಾಡದೆ ನಾಲ್ಕು ಗೋಡೆಗಳ ಮಧ್ಯೆ ಇನ್ನೇನೂ ಆಗುವುದು ಬೇಡ. ಇವತ್ತಿನ ಸಂದರ್ಭ ಅರ್ಥ ಮಾಡಿಕೊಂಡು ಕೆಲಸ ಮಾಡುವವನಿಗೆ ಅವಕಾಶ ಕೊಡಿ ಎಂದು ಕೇಳಿದ್ದೇನೆ. ಪಕ್ಷ ಅವಕಾಶ ಕೊಟ್ಟರೆ ಈಗ ಏನು 3-4 ತಿಂಗಳಿಂದ ಮಲಗಿದ್ದೇವೆ ಯಾರನ್ನು ಬಿಡದೆ ಎಲ್ಲರ ಮನೆಗೆ ಹೋಗಿ ಪಕ್ಷ ಸಂಘಟನೆ ಮಾಡುತ್ತೇನೆ” ಎಂದರು.

”ನಾನು ಇದ್ದೇನೆ ಅಂದಾಕ್ಷಣ ನಾಲ್ಕಾರು ಜನಕ್ಕೆ ಮುಜುಗರ ಆಗಬಹುದು ಅಷ್ಟೇ. ಎಂಥ ವಿರೋಧ ಬಂದರೂ ನಾನು ಎದುರಿಸಿ ಹೋಗುತ್ತೇನೆ. ಯಾರ್ಯಾರಿಗೆ ಎಲ್ಲೆಲ್ಲಿ ಇಂಜೆಕ್ಷನ್ ಕೊಡಬೇಕು ನನಗೆ ಗೊತ್ತಿದೆ. ಇವರು ಎಲ್ಲೋ ಕುಳಿತುಕೊಂಡು ಇಂಜೆಕ್ಷನ್ ಕೊಡುತ್ತಾರೆ ನಾನು ಓಡಾಡಿಕೊಂಡು ಕೊಡುತ್ತೇನೆ. ಪಕ್ಷ ಅಂತಿಮ, ಪಕ್ಷ ಸಂಘಟನೆ ಮಾಡುವ ಕೆಲಸ ಬೇಕು ಮಾಡುತ್ತೇನೆ” ಎಂದು ಸೋಮಣ್ಣ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕಕ್ಕೆ ಅಕ್ಕಿ ನೀಡಲು ಸಾಧ್ಯವಿಲ್ಲ ಎಂದ ಕೇಂದ್ರ; ಇದು ರಾಜಕೀಯ ದುರುದ್ದೇಶ: ಮುನಿಯಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...