Homeಕರ್ನಾಟಕರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೋಮಣ್ಣ ಪಟ್ಟು: ಬಿಜೆಪಿಯಲ್ಲಿ ಶುರುವಾಯಿತು ಟೆನ್ಷನ್

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೋಮಣ್ಣ ಪಟ್ಟು: ಬಿಜೆಪಿಯಲ್ಲಿ ಶುರುವಾಯಿತು ಟೆನ್ಷನ್

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಬಿಜೆಪಿಯಲ್ಲಿ ಈಗ ವಿಪಕ್ಷ ನಾಯಕನ ಆಯ್ಕೆಯ ಜೊತೆಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಶುರುವಾಗಿದೆ. ಅದರಲ್ಲಿಯೂ ಚಾಮರಾಜನಗರ ಹಾಗೂ ವರುಣಾ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿ ಸೋಲು ಕಂಡಿರುವ ಮಾಜಿ ಸಚಿವ ವಿ. ಸೋಮಣ್ಣ ನನ್ನನ್ನು ರಾಜ್ಯಾಧ್ಯಕ್ಷನಾಗಿ ಮಾಡುವಂತೆ ಕೇಂದ್ರ ನಾಯಕರಿಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

ರಾಜ್ಯಧ್ಯಕ್ಷ ಸ್ಥಾನಕ್ಕೆ ವಿ ಸೋಮಣ್ಣ, ಸಿಟಿ ರವಿ, ಅಶ್ವತ್ ನಾರಾಯಣ ಹಾಗೂ ಆರ್ ಅಶೋಕ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಈ ನಡುವೆ ಹಾಲಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ರಾಜ್ಯಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಇದೀಗ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿಯ ಜೊತೆಗೆ ಗೊಂದಲಗಳೂ ಹೆಚ್ಚಾಗಿವೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ ಸೋಮಣ್ಣ ಅವರು, ”ಚುನಾವಣಾ ಬಳಿಕ ಎರಡು ಬಾರಿ ದೆಹಲಿಗೆ ಹೋಗಿ ಬಂದಿದ್ದೇನೆ. ಯಾರ ಮೇಲೆ ಏನು ಅಭಿಪ್ರಾಯ ಎಂದು ಹೇಳುವುದಕ್ಕಿಂತ ನನ್ನ 45 ವರ್ಷದ ಅನುಭವ ಹೇಳಿದ್ದೇನೆ. ನನ್ನನ್ನು ರಾಜ್ಯಾಧ್ಯಕ್ಷ ಮಾಡಿ ಎಂದು ಹೇಳಿದ್ದೇನೆ. ಕೇಂದ್ರ ನಾಯಕರಿಗೆ ಪತ್ರ ಬರೆದಿದ್ದೇನೆ. ಅದು ಎಷ್ಟು ಚರ್ಚೆ ಆಗುತ್ತಿದೆ ಎನ್ನುವ ಬಗ್ಗೆ ಗೊತ್ತಿಲ್ಲ” ಎಂದರು.

”ನಾನು ಬಿಜೆಪಿಗೆ ಬಂದು 15 ವರ್ಷ ಆಯಿತು. ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿಯನ್ನು ಒಟ್ಟಿಗೆ ನಡೆಸಿಕೊಂಡು ಹೋಗಬೇಕಿದೆ. ಹೈಕಮಾಂಡ್ ನನಗೆ ನೀಡಿದ್ದ ಎಲ್ಲಾ ಟಾಸ್ಕ್ ಮಾಡಿದ್ದೇನೆ ಆದರೆ ಆರ್ ಅಶೋಕ್ ಅವರು ಟಾಸ್ಕ್‌ಅನ್ನು ಸರಿಯಾಗಿ ನಿಭಾಯಿಸಿಲ್ಲ. ಅವರು ಡಿಕೆ ಶಿವಕುಮಾರ್ ವಿರುದ್ಧ ಸ್ಪರ್ಧೆ ಮಾತ್ರ ಮಾಡಿದರು. ಆದರೆ ಪೈಪೋಟಿ ನೀಡುವ ಪ್ರಯತ್ನ ಮಾಡಲಿಲ್ಲ. ಆದರೆ ನಾನು ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡಿ ಪ್ರಬಲ ಪೈಪೋಟಿ ನೀಡಿದ್ದೇನೆ. ನನ್ನ ತವರು ಕ್ಷೇತ್ರ ಬಿಟ್ಟು ಬೇರೆ ಎರಡು ಕಡೆಗಳಲ್ಲಿ ನನಗೆ ಸ್ಪರ್ಧೆ ಮಾಡಲು ಟಾಸ್ಕ್ ಕೊಟ್ಟರು, ನಾನು ಅದಕ್ಕೆ ಒಪ್ಪಿದೆ. ನಾನು ಪಕ್ಷ ಹೇಳಿದಂತೆ ನಡೆದುಕೊಂಡು ಬಂದಿದ್ದೇನೆ ಹಾಗಾಗಿ ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕು ಎಂದು ನಮ್ಮ ವರಿಷ್ಠರಿಗೆ ಒತ್ತಾಯ ಮಾಡಿದ್ದೇನೆ” ಎಂದು ಸೋಮಣ್ಣ ತಿಳಿಸಿದರು.

”ನಾನು ಕೇವಲ 100 ದಿನ ಮಾತ್ರ ಅವಕಾಶ ಕೇಳಿದ್ದೇನೆ. ಒಬ್ಬ ರಾಜ್ಯಾಧ್ಯಕ್ಷ ಯಾವ ರೀತಿ ಸಂಚಲನವನ್ನು ಮೂಡಿಸಬೇಕು ಎಂದು ತೋರಿಸುತ್ತೇನೆ. ನಾನು ಸ್ವಲ್ಪ ಜೋರಾಗಿ ಮಾತಾಡುತ್ತೇನೆ ಸತ್ಯ ಮಾತಾಡುತ್ತೇನೆ ಗಲಾಟೆ ಮಾಡುತ್ತೇನೆ ನಿಜ. ಆದರೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವಂಥ ಸಾಮರ್ಥ್ಯವಿದೆ. ಅವಕಾಶ ಕೊಟ್ಟರೆ ಎಲ್ಲರ ಮನೆಗೆ ಹೋಗಿ ಪಕ್ಷ ಸಂಘಟನೆ ಮಾಡುತ್ತೇನೆ. ನಮ್ಮಲ್ಲೂ ಕೂಡ ಪ್ರತಿಭೆ ಇದೆ, ಶಕ್ತಿ ಇದೆ, ದೂರದೃಷ್ಟಿ ಚಿಂತನೆ ಇದೆ” ಎಂದು ಹೇಳಿದ್ದಾರೆ.

”ಇವತ್ತಿನ ಸಂದರ್ಭದಲ್ಲಿ ನನಗಿಂತ ಯಾರಾದರೂ ಸಮರ್ಥರು ಇದ್ದರೆ ಅವರ ಜೊತೆ ಕೂತು ಮಾತನಾಡಿಸಿ. ಅದನ್ನು ಮಾಡದೆ ನಾಲ್ಕು ಗೋಡೆಗಳ ಮಧ್ಯೆ ಇನ್ನೇನೂ ಆಗುವುದು ಬೇಡ. ಇವತ್ತಿನ ಸಂದರ್ಭ ಅರ್ಥ ಮಾಡಿಕೊಂಡು ಕೆಲಸ ಮಾಡುವವನಿಗೆ ಅವಕಾಶ ಕೊಡಿ ಎಂದು ಕೇಳಿದ್ದೇನೆ. ಪಕ್ಷ ಅವಕಾಶ ಕೊಟ್ಟರೆ ಈಗ ಏನು 3-4 ತಿಂಗಳಿಂದ ಮಲಗಿದ್ದೇವೆ ಯಾರನ್ನು ಬಿಡದೆ ಎಲ್ಲರ ಮನೆಗೆ ಹೋಗಿ ಪಕ್ಷ ಸಂಘಟನೆ ಮಾಡುತ್ತೇನೆ” ಎಂದರು.

”ನಾನು ಇದ್ದೇನೆ ಅಂದಾಕ್ಷಣ ನಾಲ್ಕಾರು ಜನಕ್ಕೆ ಮುಜುಗರ ಆಗಬಹುದು ಅಷ್ಟೇ. ಎಂಥ ವಿರೋಧ ಬಂದರೂ ನಾನು ಎದುರಿಸಿ ಹೋಗುತ್ತೇನೆ. ಯಾರ್ಯಾರಿಗೆ ಎಲ್ಲೆಲ್ಲಿ ಇಂಜೆಕ್ಷನ್ ಕೊಡಬೇಕು ನನಗೆ ಗೊತ್ತಿದೆ. ಇವರು ಎಲ್ಲೋ ಕುಳಿತುಕೊಂಡು ಇಂಜೆಕ್ಷನ್ ಕೊಡುತ್ತಾರೆ ನಾನು ಓಡಾಡಿಕೊಂಡು ಕೊಡುತ್ತೇನೆ. ಪಕ್ಷ ಅಂತಿಮ, ಪಕ್ಷ ಸಂಘಟನೆ ಮಾಡುವ ಕೆಲಸ ಬೇಕು ಮಾಡುತ್ತೇನೆ” ಎಂದು ಸೋಮಣ್ಣ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕಕ್ಕೆ ಅಕ್ಕಿ ನೀಡಲು ಸಾಧ್ಯವಿಲ್ಲ ಎಂದ ಕೇಂದ್ರ; ಇದು ರಾಜಕೀಯ ದುರುದ್ದೇಶ: ಮುನಿಯಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...