Homeಮುಖಪುಟಗಾಝಾದಲ್ಲಿ ನರಮೇಧ : ಯೇಸುಕ್ರಿಸ್ತನ ಜನ್ಮಸ್ಥಳದಲ್ಲಿ ಸತತ ಎರಡನೇ ವರ್ಷವೂ ಕಳೆಗುಂದಿದ ಕ್ರಿಸ್‌ಮಸ್

ಗಾಝಾದಲ್ಲಿ ನರಮೇಧ : ಯೇಸುಕ್ರಿಸ್ತನ ಜನ್ಮಸ್ಥಳದಲ್ಲಿ ಸತತ ಎರಡನೇ ವರ್ಷವೂ ಕಳೆಗುಂದಿದ ಕ್ರಿಸ್‌ಮಸ್

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿರುವ ಹಿನ್ನೆಲೆ ಸತತ ಎರಡನೇ ವರ್ಷವೂ ಏಸು ಕ್ರಿಸ್ತನ ಜನ್ಮ ಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಜನರು ಸಂಭ್ರವಿಲ್ಲದ ಸರಳ ಕ್ರಿಸ್‌ಮಸ್ ಆಚರಿಸಿದರು.

ಕ್ರಿಸ್‌ಮಸ್‌ ಮುನ್ನಾದಿನ ಸಂಜೆ (ಕ್ರಿಸ್‌ಮಸ್‌ ಈವ್) ಬೆಥ್ಲೆಹೆಮ್‌ನ ಐತಿಹಾಸಿಕ ಬೀದಿಗಳಲ್ಲಿ ವಿಶೇಷ ವಸ್ತ್ರ ಧರಿಸಿ ಮೆರವಣಿಗೆ ನಡೆಸಿದ ‘ಟೆರ್ರಾ ಸ್ಯಾಂಕ್ಟಾ ಸ್ಕೌಟ್ ಟ್ರೂಪ್’ ತಂಡದ ಪುಟಾಣಿ ಮಕ್ಕಳು ‘ನಮಗೆ ಸಾವು ಬೇಡ, ಜೀವನ ಬೇಕು. ಗಾಝಾದಲ್ಲಿ ನರಮೇಧ ನಿಲ್ಲಿಸಿ’ ಎಂಬ ಆಗ್ರಹ ವ್ಯಕ್ತಪಡಿಸಿದರು.

ಸತತ ಎರಡನೇ ವರ್ಷ ಈ ಬಾರಿಯೂ ಬೆತ್ಮಹೆಮ್‌ನ ಕ್ರಿಸ್‌ಮಸ್‌ ಸಂಭ್ರಮದ ಮೇಲೆ ಯುದ್ದದ ಕಾರ್ಮೋಡ ಕವಿದಿತ್ತು. ಕಳೆದ ವರ್ಷವೂ ಬೆಥ್ಲೆಹೆಮ್‌ನಲ್ಲಿ ಅದ್ದೂರಿ ಕ್ರಿಸ್‌ಮಸ್ ಆಚರಣೆಯನ್ನು ರದ್ದುಗೊಳಿಸಲಾಗಿತ್ತು.

ಒಂದು ದೊಡ್ಡ ಕ್ರಿಸ್ಮಸ್ ಗಿಡವನ್ನು ಬೆಥ್ಲೆಹೆಮ್‌ನ ಚರ್ಚ್‌ ಬಳಿಯ (ಚರ್ಚ್ ಆಫ್ ನೇಟಿವಿಟಿ) ಐತಿಹಾಸಿಕ ಮ್ಯಾಂಗರ್ ಸ್ಕ್ವೇರ್‌ ಗುಹೆಯೊಂದರ ಮೇಲೆ ಪ್ರತಿವರ್ಷ ಕ್ರಿಸ್‌ಮಸ್‌ ವೇಳೆ ನಿಲ್ಲಿಸಲಾಗುತ್ತದೆ. ಈ ಜಾಗದಲ್ಲಿ ಏಸು ಕ್ರಿಸ್ತ 2,000 ವರ್ಷಗಳ ಹಿಂದೆ ಜನಿಸಿದರು ಎಂದು ಕ್ರಿಶ್ಚಿಯನ್ನರು ನಂಬುತ್ತಾರೆ. ಆದರೆ, ಕಳೆದ ಎರಡು ವರ್ಷಗಳಿಂದ ಇಲ್ಲಿ ಸಂಭ್ರಮಕ್ಕೆ ಕಂಡಿಲ್ಲ.

ಕಳೆದ ವರ್ಷದಂತೆ ಈ ವರ್ಷವೂ ಬೆಥ್ಲೆಹೆಮ್‌ ಮುನ್ಸಿಪಾಲಿಟಿ ಗಾಝಾದಲ್ಲಿ ನರಮೇಧ ನಡೆಯುತ್ತಿರುವ ಹಿನ್ನೆಲೆ ಸರಳ ಕ್ರಿಸ್‌ಮಸ್‌ ಆಚರಣೆಯ ನಿರ್ಧಾರ ಕೈಗೊಂಡಿದೆ. ಇಸ್ರೇಲ್‌ನಲ್ಲಿರುವ ಸುಮಾರು 185, 000 ಮತ್ತು ಪ್ಯಾಲೆಸ್ತೀನ್ ಭೂ ಪ್ರದೇಶದ ವ್ಯಾಪ್ತಿಯಲ್ಲಿರುವ ಸುಮಾರು 47, 000 ಕ್ರಿಶ್ಚಿಯನ್ನರು ಶಾಂತಿಯುತ ಮತ್ತು ನೆಮ್ಮದಿಯ ಭವಿಷ್ಯಕ್ಕಾಗಿ ಪ್ರಾರ್ಥಿಸಿದ್ದಾರೆ.

ಈ ದುಖಃವನ್ನು ಕೊನೆಗೊಳಿಸಿ, ಶಾಂತಿಯ ವಾತಾವರಣ ನೀಡುವಂತೆ ನಾವು ಏಸುಕ್ರಿಸ್ತನಲ್ಲಿ ಪ್ರಾರ್ಥಿಸುತ್ತೇವೆ ಎಂದು ಆಂಟನ್ ಸಲ್ಮಾನ್ ಹೇಳಿದ್ದಾರೆ.

ಕಳೆದ ಭಾನುವಾರ ಗಾಝಾದಲ್ಲಿ ಸಾಮೂಹಿಕ ಪ್ರಾರ್ಥನೆಯ ನೇತೃತ್ವ ವಹಿಸಿದ್ದ ಜೆರುಸಲೆಮ್‌ನ ಆರ್ಚ್‌ಬಿಷಪ್ ಪಿಯರ್‌ಬಟ್ಟಿಸ್ಟಾ ಪಿಜ್ಜಾಬಲ್ಲಾ ಅವರು ಕ್ರಿಸ್‌ಮಸ್‌ ಈವ್‌ ದಿನ ಬೆಥ್ಲೆಹೆಮ್‌ನಲ್ಲಿ ಪ್ರಾರ್ಥನೆಗೆ ನೇತೃತ್ವ ನೀಡುವಾಗಲೂ ಶಾಂತಿಗಾಗಿ ಪ್ರಾರ್ಥಿಸುತ್ತೇವೆ ಎಂದಿದ್ದಾರೆ.

“ನಾನು ನಿನ್ನೆಯಷ್ಟೇ ಗಾಝಾದಿಂದ ಬಂದೆ. ಅಲ್ಲಿ ಎಲ್ಲವನ್ನೂ ನಾಶಮಾಡಲಾಗಿದೆ. ಅಲ್ಲಿನ ಶೋಚಣೀಯ ಸ್ಥಿತಿಯನ್ನು ನಾನು ಕಣ್ಣಾರೆ ನೋಡಿದೆ. ಆದರೆ, ಗಾಝಾದ ಜನತೆ ಬಿಟ್ಟುಕೊಡುವರಲ್ಲ. ಅವರು ಆತ್ಮವಿಶ್ವಾಸದಲ್ಲಿದ್ದಾರೆ ಎಂದು ಪಿಯರ್‌ಬಟ್ಟಿಸ್ಟಾ ಅವರು ಬೇಸರದ ಮಾತುಗಳನ್ನು ಆಡಿದ್ದಾರೆ.

ಬೆಥ್ಲೆಹೆಮ್‌ನ ಚರ್ಚ್ ಆಫ್ ನೇಟಿವಿಟಿ ಬಳಿ ಕ್ರಿಸ್‌ಮಸ್ ಈವ್ ದಿನ ಪ್ಯಾಲೆಸ್ತೀನ್ ಜನತೆ ಕೂಡ ವಿಶೇಷ ಮೌನ ಮೆರವಣಿಗೆ ನಡೆಸಿದ್ದಾರೆ. ಈ ಮೂಲಕ ಗಾಝಾದ ನರಮೇಧವನ್ನು ಖಂಡಿಸಿದ್ದಾರೆ.

ಅವಶೇಷಗಳ ನಡುವೆ ಗಾಝಾದಲ್ಲಿ ಕ್ರಿಸ್‌ಮಸ್‌ ಆಚರಣೆ

ಗಾಝಾದಲ್ಲಿ ಇಸ್ರೇಲ್ ಆಕ್ರಮಣದಿಂದ ಕೇವಲ ಮುಸ್ಲಿಮರಿಗೆ ಮಾತ್ರ ಸಮಸ್ಯೆಯಾಗಿಲ್ಲ. ಅಲ್ಲಿನ ಸ್ಥಳೀಯ ಕ್ರೈಸ್ತರು ಕೂಡ ತಮ್ಮದೆಲ್ಲವನ್ನು ಕಳೆದುಕೊಂಡಿದ್ದಾರೆ. ಸುದ್ದಿ ಸಂಸ್ಥೆ ಅಲ್‌-ಜಝೀರಾ ಜೊತೆ ಮಾತನಾಡಿರುವ ಗಾಝಾದ ಕ್ರೈಸ್ತ ವ್ಯಕ್ತಿ ರಮೇಝ್ ಸೌರಿ “ಕಳೆದ 14 ತಿಂಗಳಿನಿಂದ ನಾವು ಸೇಂಟ್ ಪೋರ್ಫಿರಿಯಸ್ ಮೈದಾನದಲ್ಲಿ ಮಲಗುತ್ತಿದ್ದೇವೆ. ನಮಗೆಲ್ಲಿಯ ಕ್ರಿಸ್‌ಮಸ್‌ ಸಂಭ್ರಮ? ಎಂದು ಪ್ರಶ್ನಿಸಿದ್ದಾರೆ.

ಗಾಝಾ ನಗರದ ಪ್ರಾಚೀನ ಗ್ರೀಕ್ ಆರ್ಥೊಡಾಕ್ಸ್ ಚರ್ಚ್ ಬಳಿಯ ಕಟ್ಟಡವೊಂದಕ್ಕೆ ಕಳೆದ ವರ್ಷ ವೈಮಾನಿಕ ದಾಳಿ ನಡೆಸಿದ್ದ ಇಸ್ರೇಲ್, ಮೂವರನ್ನು ಹತ್ಯೆ ಮಾಡಿತ್ತು.

PC ; nytimes.com

ಗಾಝಾ ಮೇಲೆ ಇಸ್ರೇಲ್ ಆಕ್ರಮಣ ಪ್ರಾರಂಭಿಸಿದ ದಿನದಿಂದ ಅಲ್ಲಿನ ಕ್ರೈಸ್ತ ಸಮುದಾಯದ ಜನರು ಸೇಂಟ್ ಪೋರ್ಫಿರಿಯಸ್ ಮತ್ತು ಹೋಲಿ ಫ್ಯಾಮಿಲಿ ಚರ್ಚ್‌ಗಳಲ್ಲಿ ಉಳಿದುಕೊಂಡಿದ್ದಾರೆ. ಅವರಿಗೆ ಅಲ್ಲಿ ಯಾವುದೇ ವ್ಯವಸ್ಥೆಗಳಿಲ್ಲದೆ, ಸಂಕಷ್ಟದ ಜೀವನ ನಡೆಸುತ್ತಿದ್ಧಾರೆ.

“ನಾವು ತುಂಬಾ ದುಖಃದಲ್ಲಿದ್ದೇವೆ. ಶಾಂತಿಗಾಗಿ ಪ್ರಾರ್ಥಿಸುವುದು ಬಿಟ್ಟರೆ ಬೇರೇನು ಇಲ್ಲ” ಎಂದು ಗಾಝಾದ ಕ್ರೈಸ್ತ ವ್ಯಕ್ತಿ ರಮೇಝ್ ಸೌರಿ ಹೇಳಿದ್ದಾರೆ.

ಅವಶೇಷಗಳ ನಡುವೆ ಗಾಝಾದಲ್ಲಿ ಕ್ರಿಸ್‌ಮಸ್‌ ಎಂದರೆ, ಅಲ್ಲಿ ಯಾವುದೇ ಆಚರಣೆ ಸಂಭ್ರಮವಿಲ್ಲ. ಜನರು ದುಖಃದ ನಡುವೆ ಮನಸ್ಸಿನಲ್ಲೇ ಕ್ರಿಸ್‌ಮಸ್‌ ಆಚರಿಸುತ್ತಿದ್ದಾರೆ ಎಂದು ವರದಿಯೊಂದು ಹೇಳಿದೆ.

ಇದನ್ನೂ ಓದಿ : ರಷ್ಯಾಕ್ಕೆ ತೆರಳುತ್ತಿದ್ದ ವಿಮಾನ ಕಝಾಕಿಸ್ತಾನ್‌ನದಲ್ಲಿ ಪತನ; 42 ಮಂದಿ ಸಾವನ್ನಪ್ಪಿರುವ ಶಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...