Homeಮುಖಪುಟಗಾಝಾದಲ್ಲಿ ನರಮೇಧ : ಯೇಸುಕ್ರಿಸ್ತನ ಜನ್ಮಸ್ಥಳದಲ್ಲಿ ಸತತ ಎರಡನೇ ವರ್ಷವೂ ಕಳೆಗುಂದಿದ ಕ್ರಿಸ್‌ಮಸ್

ಗಾಝಾದಲ್ಲಿ ನರಮೇಧ : ಯೇಸುಕ್ರಿಸ್ತನ ಜನ್ಮಸ್ಥಳದಲ್ಲಿ ಸತತ ಎರಡನೇ ವರ್ಷವೂ ಕಳೆಗುಂದಿದ ಕ್ರಿಸ್‌ಮಸ್

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿರುವ ಹಿನ್ನೆಲೆ ಸತತ ಎರಡನೇ ವರ್ಷವೂ ಏಸು ಕ್ರಿಸ್ತನ ಜನ್ಮ ಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಜನರು ಸಂಭ್ರವಿಲ್ಲದ ಸರಳ ಕ್ರಿಸ್‌ಮಸ್ ಆಚರಿಸಿದರು.

ಕ್ರಿಸ್‌ಮಸ್‌ ಮುನ್ನಾದಿನ ಸಂಜೆ (ಕ್ರಿಸ್‌ಮಸ್‌ ಈವ್) ಬೆಥ್ಲೆಹೆಮ್‌ನ ಐತಿಹಾಸಿಕ ಬೀದಿಗಳಲ್ಲಿ ವಿಶೇಷ ವಸ್ತ್ರ ಧರಿಸಿ ಮೆರವಣಿಗೆ ನಡೆಸಿದ ‘ಟೆರ್ರಾ ಸ್ಯಾಂಕ್ಟಾ ಸ್ಕೌಟ್ ಟ್ರೂಪ್’ ತಂಡದ ಪುಟಾಣಿ ಮಕ್ಕಳು ‘ನಮಗೆ ಸಾವು ಬೇಡ, ಜೀವನ ಬೇಕು. ಗಾಝಾದಲ್ಲಿ ನರಮೇಧ ನಿಲ್ಲಿಸಿ’ ಎಂಬ ಆಗ್ರಹ ವ್ಯಕ್ತಪಡಿಸಿದರು.

ಸತತ ಎರಡನೇ ವರ್ಷ ಈ ಬಾರಿಯೂ ಬೆತ್ಮಹೆಮ್‌ನ ಕ್ರಿಸ್‌ಮಸ್‌ ಸಂಭ್ರಮದ ಮೇಲೆ ಯುದ್ದದ ಕಾರ್ಮೋಡ ಕವಿದಿತ್ತು. ಕಳೆದ ವರ್ಷವೂ ಬೆಥ್ಲೆಹೆಮ್‌ನಲ್ಲಿ ಅದ್ದೂರಿ ಕ್ರಿಸ್‌ಮಸ್ ಆಚರಣೆಯನ್ನು ರದ್ದುಗೊಳಿಸಲಾಗಿತ್ತು.

ಒಂದು ದೊಡ್ಡ ಕ್ರಿಸ್ಮಸ್ ಗಿಡವನ್ನು ಬೆಥ್ಲೆಹೆಮ್‌ನ ಚರ್ಚ್‌ ಬಳಿಯ (ಚರ್ಚ್ ಆಫ್ ನೇಟಿವಿಟಿ) ಐತಿಹಾಸಿಕ ಮ್ಯಾಂಗರ್ ಸ್ಕ್ವೇರ್‌ ಗುಹೆಯೊಂದರ ಮೇಲೆ ಪ್ರತಿವರ್ಷ ಕ್ರಿಸ್‌ಮಸ್‌ ವೇಳೆ ನಿಲ್ಲಿಸಲಾಗುತ್ತದೆ. ಈ ಜಾಗದಲ್ಲಿ ಏಸು ಕ್ರಿಸ್ತ 2,000 ವರ್ಷಗಳ ಹಿಂದೆ ಜನಿಸಿದರು ಎಂದು ಕ್ರಿಶ್ಚಿಯನ್ನರು ನಂಬುತ್ತಾರೆ. ಆದರೆ, ಕಳೆದ ಎರಡು ವರ್ಷಗಳಿಂದ ಇಲ್ಲಿ ಸಂಭ್ರಮಕ್ಕೆ ಕಂಡಿಲ್ಲ.

ಕಳೆದ ವರ್ಷದಂತೆ ಈ ವರ್ಷವೂ ಬೆಥ್ಲೆಹೆಮ್‌ ಮುನ್ಸಿಪಾಲಿಟಿ ಗಾಝಾದಲ್ಲಿ ನರಮೇಧ ನಡೆಯುತ್ತಿರುವ ಹಿನ್ನೆಲೆ ಸರಳ ಕ್ರಿಸ್‌ಮಸ್‌ ಆಚರಣೆಯ ನಿರ್ಧಾರ ಕೈಗೊಂಡಿದೆ. ಇಸ್ರೇಲ್‌ನಲ್ಲಿರುವ ಸುಮಾರು 185, 000 ಮತ್ತು ಪ್ಯಾಲೆಸ್ತೀನ್ ಭೂ ಪ್ರದೇಶದ ವ್ಯಾಪ್ತಿಯಲ್ಲಿರುವ ಸುಮಾರು 47, 000 ಕ್ರಿಶ್ಚಿಯನ್ನರು ಶಾಂತಿಯುತ ಮತ್ತು ನೆಮ್ಮದಿಯ ಭವಿಷ್ಯಕ್ಕಾಗಿ ಪ್ರಾರ್ಥಿಸಿದ್ದಾರೆ.

ಈ ದುಖಃವನ್ನು ಕೊನೆಗೊಳಿಸಿ, ಶಾಂತಿಯ ವಾತಾವರಣ ನೀಡುವಂತೆ ನಾವು ಏಸುಕ್ರಿಸ್ತನಲ್ಲಿ ಪ್ರಾರ್ಥಿಸುತ್ತೇವೆ ಎಂದು ಆಂಟನ್ ಸಲ್ಮಾನ್ ಹೇಳಿದ್ದಾರೆ.

ಕಳೆದ ಭಾನುವಾರ ಗಾಝಾದಲ್ಲಿ ಸಾಮೂಹಿಕ ಪ್ರಾರ್ಥನೆಯ ನೇತೃತ್ವ ವಹಿಸಿದ್ದ ಜೆರುಸಲೆಮ್‌ನ ಆರ್ಚ್‌ಬಿಷಪ್ ಪಿಯರ್‌ಬಟ್ಟಿಸ್ಟಾ ಪಿಜ್ಜಾಬಲ್ಲಾ ಅವರು ಕ್ರಿಸ್‌ಮಸ್‌ ಈವ್‌ ದಿನ ಬೆಥ್ಲೆಹೆಮ್‌ನಲ್ಲಿ ಪ್ರಾರ್ಥನೆಗೆ ನೇತೃತ್ವ ನೀಡುವಾಗಲೂ ಶಾಂತಿಗಾಗಿ ಪ್ರಾರ್ಥಿಸುತ್ತೇವೆ ಎಂದಿದ್ದಾರೆ.

“ನಾನು ನಿನ್ನೆಯಷ್ಟೇ ಗಾಝಾದಿಂದ ಬಂದೆ. ಅಲ್ಲಿ ಎಲ್ಲವನ್ನೂ ನಾಶಮಾಡಲಾಗಿದೆ. ಅಲ್ಲಿನ ಶೋಚಣೀಯ ಸ್ಥಿತಿಯನ್ನು ನಾನು ಕಣ್ಣಾರೆ ನೋಡಿದೆ. ಆದರೆ, ಗಾಝಾದ ಜನತೆ ಬಿಟ್ಟುಕೊಡುವರಲ್ಲ. ಅವರು ಆತ್ಮವಿಶ್ವಾಸದಲ್ಲಿದ್ದಾರೆ ಎಂದು ಪಿಯರ್‌ಬಟ್ಟಿಸ್ಟಾ ಅವರು ಬೇಸರದ ಮಾತುಗಳನ್ನು ಆಡಿದ್ದಾರೆ.

ಬೆಥ್ಲೆಹೆಮ್‌ನ ಚರ್ಚ್ ಆಫ್ ನೇಟಿವಿಟಿ ಬಳಿ ಕ್ರಿಸ್‌ಮಸ್ ಈವ್ ದಿನ ಪ್ಯಾಲೆಸ್ತೀನ್ ಜನತೆ ಕೂಡ ವಿಶೇಷ ಮೌನ ಮೆರವಣಿಗೆ ನಡೆಸಿದ್ದಾರೆ. ಈ ಮೂಲಕ ಗಾಝಾದ ನರಮೇಧವನ್ನು ಖಂಡಿಸಿದ್ದಾರೆ.

ಅವಶೇಷಗಳ ನಡುವೆ ಗಾಝಾದಲ್ಲಿ ಕ್ರಿಸ್‌ಮಸ್‌ ಆಚರಣೆ

ಗಾಝಾದಲ್ಲಿ ಇಸ್ರೇಲ್ ಆಕ್ರಮಣದಿಂದ ಕೇವಲ ಮುಸ್ಲಿಮರಿಗೆ ಮಾತ್ರ ಸಮಸ್ಯೆಯಾಗಿಲ್ಲ. ಅಲ್ಲಿನ ಸ್ಥಳೀಯ ಕ್ರೈಸ್ತರು ಕೂಡ ತಮ್ಮದೆಲ್ಲವನ್ನು ಕಳೆದುಕೊಂಡಿದ್ದಾರೆ. ಸುದ್ದಿ ಸಂಸ್ಥೆ ಅಲ್‌-ಜಝೀರಾ ಜೊತೆ ಮಾತನಾಡಿರುವ ಗಾಝಾದ ಕ್ರೈಸ್ತ ವ್ಯಕ್ತಿ ರಮೇಝ್ ಸೌರಿ “ಕಳೆದ 14 ತಿಂಗಳಿನಿಂದ ನಾವು ಸೇಂಟ್ ಪೋರ್ಫಿರಿಯಸ್ ಮೈದಾನದಲ್ಲಿ ಮಲಗುತ್ತಿದ್ದೇವೆ. ನಮಗೆಲ್ಲಿಯ ಕ್ರಿಸ್‌ಮಸ್‌ ಸಂಭ್ರಮ? ಎಂದು ಪ್ರಶ್ನಿಸಿದ್ದಾರೆ.

ಗಾಝಾ ನಗರದ ಪ್ರಾಚೀನ ಗ್ರೀಕ್ ಆರ್ಥೊಡಾಕ್ಸ್ ಚರ್ಚ್ ಬಳಿಯ ಕಟ್ಟಡವೊಂದಕ್ಕೆ ಕಳೆದ ವರ್ಷ ವೈಮಾನಿಕ ದಾಳಿ ನಡೆಸಿದ್ದ ಇಸ್ರೇಲ್, ಮೂವರನ್ನು ಹತ್ಯೆ ಮಾಡಿತ್ತು.

PC ; nytimes.com

ಗಾಝಾ ಮೇಲೆ ಇಸ್ರೇಲ್ ಆಕ್ರಮಣ ಪ್ರಾರಂಭಿಸಿದ ದಿನದಿಂದ ಅಲ್ಲಿನ ಕ್ರೈಸ್ತ ಸಮುದಾಯದ ಜನರು ಸೇಂಟ್ ಪೋರ್ಫಿರಿಯಸ್ ಮತ್ತು ಹೋಲಿ ಫ್ಯಾಮಿಲಿ ಚರ್ಚ್‌ಗಳಲ್ಲಿ ಉಳಿದುಕೊಂಡಿದ್ದಾರೆ. ಅವರಿಗೆ ಅಲ್ಲಿ ಯಾವುದೇ ವ್ಯವಸ್ಥೆಗಳಿಲ್ಲದೆ, ಸಂಕಷ್ಟದ ಜೀವನ ನಡೆಸುತ್ತಿದ್ಧಾರೆ.

“ನಾವು ತುಂಬಾ ದುಖಃದಲ್ಲಿದ್ದೇವೆ. ಶಾಂತಿಗಾಗಿ ಪ್ರಾರ್ಥಿಸುವುದು ಬಿಟ್ಟರೆ ಬೇರೇನು ಇಲ್ಲ” ಎಂದು ಗಾಝಾದ ಕ್ರೈಸ್ತ ವ್ಯಕ್ತಿ ರಮೇಝ್ ಸೌರಿ ಹೇಳಿದ್ದಾರೆ.

ಅವಶೇಷಗಳ ನಡುವೆ ಗಾಝಾದಲ್ಲಿ ಕ್ರಿಸ್‌ಮಸ್‌ ಎಂದರೆ, ಅಲ್ಲಿ ಯಾವುದೇ ಆಚರಣೆ ಸಂಭ್ರಮವಿಲ್ಲ. ಜನರು ದುಖಃದ ನಡುವೆ ಮನಸ್ಸಿನಲ್ಲೇ ಕ್ರಿಸ್‌ಮಸ್‌ ಆಚರಿಸುತ್ತಿದ್ದಾರೆ ಎಂದು ವರದಿಯೊಂದು ಹೇಳಿದೆ.

ಇದನ್ನೂ ಓದಿ : ರಷ್ಯಾಕ್ಕೆ ತೆರಳುತ್ತಿದ್ದ ವಿಮಾನ ಕಝಾಕಿಸ್ತಾನ್‌ನದಲ್ಲಿ ಪತನ; 42 ಮಂದಿ ಸಾವನ್ನಪ್ಪಿರುವ ಶಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...