Homeಮುಖಪುಟಗಾಝಾದಲ್ಲಿ ನರಮೇಧ : ಯೇಸುಕ್ರಿಸ್ತನ ಜನ್ಮಸ್ಥಳದಲ್ಲಿ ಸತತ ಎರಡನೇ ವರ್ಷವೂ ಕಳೆಗುಂದಿದ ಕ್ರಿಸ್‌ಮಸ್

ಗಾಝಾದಲ್ಲಿ ನರಮೇಧ : ಯೇಸುಕ್ರಿಸ್ತನ ಜನ್ಮಸ್ಥಳದಲ್ಲಿ ಸತತ ಎರಡನೇ ವರ್ಷವೂ ಕಳೆಗುಂದಿದ ಕ್ರಿಸ್‌ಮಸ್

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿರುವ ಹಿನ್ನೆಲೆ ಸತತ ಎರಡನೇ ವರ್ಷವೂ ಏಸು ಕ್ರಿಸ್ತನ ಜನ್ಮ ಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಜನರು ಸಂಭ್ರವಿಲ್ಲದ ಸರಳ ಕ್ರಿಸ್‌ಮಸ್ ಆಚರಿಸಿದರು.

ಕ್ರಿಸ್‌ಮಸ್‌ ಮುನ್ನಾದಿನ ಸಂಜೆ (ಕ್ರಿಸ್‌ಮಸ್‌ ಈವ್) ಬೆಥ್ಲೆಹೆಮ್‌ನ ಐತಿಹಾಸಿಕ ಬೀದಿಗಳಲ್ಲಿ ವಿಶೇಷ ವಸ್ತ್ರ ಧರಿಸಿ ಮೆರವಣಿಗೆ ನಡೆಸಿದ ‘ಟೆರ್ರಾ ಸ್ಯಾಂಕ್ಟಾ ಸ್ಕೌಟ್ ಟ್ರೂಪ್’ ತಂಡದ ಪುಟಾಣಿ ಮಕ್ಕಳು ‘ನಮಗೆ ಸಾವು ಬೇಡ, ಜೀವನ ಬೇಕು. ಗಾಝಾದಲ್ಲಿ ನರಮೇಧ ನಿಲ್ಲಿಸಿ’ ಎಂಬ ಆಗ್ರಹ ವ್ಯಕ್ತಪಡಿಸಿದರು.

ಸತತ ಎರಡನೇ ವರ್ಷ ಈ ಬಾರಿಯೂ ಬೆತ್ಮಹೆಮ್‌ನ ಕ್ರಿಸ್‌ಮಸ್‌ ಸಂಭ್ರಮದ ಮೇಲೆ ಯುದ್ದದ ಕಾರ್ಮೋಡ ಕವಿದಿತ್ತು. ಕಳೆದ ವರ್ಷವೂ ಬೆಥ್ಲೆಹೆಮ್‌ನಲ್ಲಿ ಅದ್ದೂರಿ ಕ್ರಿಸ್‌ಮಸ್ ಆಚರಣೆಯನ್ನು ರದ್ದುಗೊಳಿಸಲಾಗಿತ್ತು.

ಒಂದು ದೊಡ್ಡ ಕ್ರಿಸ್ಮಸ್ ಗಿಡವನ್ನು ಬೆಥ್ಲೆಹೆಮ್‌ನ ಚರ್ಚ್‌ ಬಳಿಯ (ಚರ್ಚ್ ಆಫ್ ನೇಟಿವಿಟಿ) ಐತಿಹಾಸಿಕ ಮ್ಯಾಂಗರ್ ಸ್ಕ್ವೇರ್‌ ಗುಹೆಯೊಂದರ ಮೇಲೆ ಪ್ರತಿವರ್ಷ ಕ್ರಿಸ್‌ಮಸ್‌ ವೇಳೆ ನಿಲ್ಲಿಸಲಾಗುತ್ತದೆ. ಈ ಜಾಗದಲ್ಲಿ ಏಸು ಕ್ರಿಸ್ತ 2,000 ವರ್ಷಗಳ ಹಿಂದೆ ಜನಿಸಿದರು ಎಂದು ಕ್ರಿಶ್ಚಿಯನ್ನರು ನಂಬುತ್ತಾರೆ. ಆದರೆ, ಕಳೆದ ಎರಡು ವರ್ಷಗಳಿಂದ ಇಲ್ಲಿ ಸಂಭ್ರಮಕ್ಕೆ ಕಂಡಿಲ್ಲ.

ಕಳೆದ ವರ್ಷದಂತೆ ಈ ವರ್ಷವೂ ಬೆಥ್ಲೆಹೆಮ್‌ ಮುನ್ಸಿಪಾಲಿಟಿ ಗಾಝಾದಲ್ಲಿ ನರಮೇಧ ನಡೆಯುತ್ತಿರುವ ಹಿನ್ನೆಲೆ ಸರಳ ಕ್ರಿಸ್‌ಮಸ್‌ ಆಚರಣೆಯ ನಿರ್ಧಾರ ಕೈಗೊಂಡಿದೆ. ಇಸ್ರೇಲ್‌ನಲ್ಲಿರುವ ಸುಮಾರು 185, 000 ಮತ್ತು ಪ್ಯಾಲೆಸ್ತೀನ್ ಭೂ ಪ್ರದೇಶದ ವ್ಯಾಪ್ತಿಯಲ್ಲಿರುವ ಸುಮಾರು 47, 000 ಕ್ರಿಶ್ಚಿಯನ್ನರು ಶಾಂತಿಯುತ ಮತ್ತು ನೆಮ್ಮದಿಯ ಭವಿಷ್ಯಕ್ಕಾಗಿ ಪ್ರಾರ್ಥಿಸಿದ್ದಾರೆ.

ಈ ದುಖಃವನ್ನು ಕೊನೆಗೊಳಿಸಿ, ಶಾಂತಿಯ ವಾತಾವರಣ ನೀಡುವಂತೆ ನಾವು ಏಸುಕ್ರಿಸ್ತನಲ್ಲಿ ಪ್ರಾರ್ಥಿಸುತ್ತೇವೆ ಎಂದು ಆಂಟನ್ ಸಲ್ಮಾನ್ ಹೇಳಿದ್ದಾರೆ.

ಕಳೆದ ಭಾನುವಾರ ಗಾಝಾದಲ್ಲಿ ಸಾಮೂಹಿಕ ಪ್ರಾರ್ಥನೆಯ ನೇತೃತ್ವ ವಹಿಸಿದ್ದ ಜೆರುಸಲೆಮ್‌ನ ಆರ್ಚ್‌ಬಿಷಪ್ ಪಿಯರ್‌ಬಟ್ಟಿಸ್ಟಾ ಪಿಜ್ಜಾಬಲ್ಲಾ ಅವರು ಕ್ರಿಸ್‌ಮಸ್‌ ಈವ್‌ ದಿನ ಬೆಥ್ಲೆಹೆಮ್‌ನಲ್ಲಿ ಪ್ರಾರ್ಥನೆಗೆ ನೇತೃತ್ವ ನೀಡುವಾಗಲೂ ಶಾಂತಿಗಾಗಿ ಪ್ರಾರ್ಥಿಸುತ್ತೇವೆ ಎಂದಿದ್ದಾರೆ.

“ನಾನು ನಿನ್ನೆಯಷ್ಟೇ ಗಾಝಾದಿಂದ ಬಂದೆ. ಅಲ್ಲಿ ಎಲ್ಲವನ್ನೂ ನಾಶಮಾಡಲಾಗಿದೆ. ಅಲ್ಲಿನ ಶೋಚಣೀಯ ಸ್ಥಿತಿಯನ್ನು ನಾನು ಕಣ್ಣಾರೆ ನೋಡಿದೆ. ಆದರೆ, ಗಾಝಾದ ಜನತೆ ಬಿಟ್ಟುಕೊಡುವರಲ್ಲ. ಅವರು ಆತ್ಮವಿಶ್ವಾಸದಲ್ಲಿದ್ದಾರೆ ಎಂದು ಪಿಯರ್‌ಬಟ್ಟಿಸ್ಟಾ ಅವರು ಬೇಸರದ ಮಾತುಗಳನ್ನು ಆಡಿದ್ದಾರೆ.

ಬೆಥ್ಲೆಹೆಮ್‌ನ ಚರ್ಚ್ ಆಫ್ ನೇಟಿವಿಟಿ ಬಳಿ ಕ್ರಿಸ್‌ಮಸ್ ಈವ್ ದಿನ ಪ್ಯಾಲೆಸ್ತೀನ್ ಜನತೆ ಕೂಡ ವಿಶೇಷ ಮೌನ ಮೆರವಣಿಗೆ ನಡೆಸಿದ್ದಾರೆ. ಈ ಮೂಲಕ ಗಾಝಾದ ನರಮೇಧವನ್ನು ಖಂಡಿಸಿದ್ದಾರೆ.

ಅವಶೇಷಗಳ ನಡುವೆ ಗಾಝಾದಲ್ಲಿ ಕ್ರಿಸ್‌ಮಸ್‌ ಆಚರಣೆ

ಗಾಝಾದಲ್ಲಿ ಇಸ್ರೇಲ್ ಆಕ್ರಮಣದಿಂದ ಕೇವಲ ಮುಸ್ಲಿಮರಿಗೆ ಮಾತ್ರ ಸಮಸ್ಯೆಯಾಗಿಲ್ಲ. ಅಲ್ಲಿನ ಸ್ಥಳೀಯ ಕ್ರೈಸ್ತರು ಕೂಡ ತಮ್ಮದೆಲ್ಲವನ್ನು ಕಳೆದುಕೊಂಡಿದ್ದಾರೆ. ಸುದ್ದಿ ಸಂಸ್ಥೆ ಅಲ್‌-ಜಝೀರಾ ಜೊತೆ ಮಾತನಾಡಿರುವ ಗಾಝಾದ ಕ್ರೈಸ್ತ ವ್ಯಕ್ತಿ ರಮೇಝ್ ಸೌರಿ “ಕಳೆದ 14 ತಿಂಗಳಿನಿಂದ ನಾವು ಸೇಂಟ್ ಪೋರ್ಫಿರಿಯಸ್ ಮೈದಾನದಲ್ಲಿ ಮಲಗುತ್ತಿದ್ದೇವೆ. ನಮಗೆಲ್ಲಿಯ ಕ್ರಿಸ್‌ಮಸ್‌ ಸಂಭ್ರಮ? ಎಂದು ಪ್ರಶ್ನಿಸಿದ್ದಾರೆ.

ಗಾಝಾ ನಗರದ ಪ್ರಾಚೀನ ಗ್ರೀಕ್ ಆರ್ಥೊಡಾಕ್ಸ್ ಚರ್ಚ್ ಬಳಿಯ ಕಟ್ಟಡವೊಂದಕ್ಕೆ ಕಳೆದ ವರ್ಷ ವೈಮಾನಿಕ ದಾಳಿ ನಡೆಸಿದ್ದ ಇಸ್ರೇಲ್, ಮೂವರನ್ನು ಹತ್ಯೆ ಮಾಡಿತ್ತು.

PC ; nytimes.com

ಗಾಝಾ ಮೇಲೆ ಇಸ್ರೇಲ್ ಆಕ್ರಮಣ ಪ್ರಾರಂಭಿಸಿದ ದಿನದಿಂದ ಅಲ್ಲಿನ ಕ್ರೈಸ್ತ ಸಮುದಾಯದ ಜನರು ಸೇಂಟ್ ಪೋರ್ಫಿರಿಯಸ್ ಮತ್ತು ಹೋಲಿ ಫ್ಯಾಮಿಲಿ ಚರ್ಚ್‌ಗಳಲ್ಲಿ ಉಳಿದುಕೊಂಡಿದ್ದಾರೆ. ಅವರಿಗೆ ಅಲ್ಲಿ ಯಾವುದೇ ವ್ಯವಸ್ಥೆಗಳಿಲ್ಲದೆ, ಸಂಕಷ್ಟದ ಜೀವನ ನಡೆಸುತ್ತಿದ್ಧಾರೆ.

“ನಾವು ತುಂಬಾ ದುಖಃದಲ್ಲಿದ್ದೇವೆ. ಶಾಂತಿಗಾಗಿ ಪ್ರಾರ್ಥಿಸುವುದು ಬಿಟ್ಟರೆ ಬೇರೇನು ಇಲ್ಲ” ಎಂದು ಗಾಝಾದ ಕ್ರೈಸ್ತ ವ್ಯಕ್ತಿ ರಮೇಝ್ ಸೌರಿ ಹೇಳಿದ್ದಾರೆ.

ಅವಶೇಷಗಳ ನಡುವೆ ಗಾಝಾದಲ್ಲಿ ಕ್ರಿಸ್‌ಮಸ್‌ ಎಂದರೆ, ಅಲ್ಲಿ ಯಾವುದೇ ಆಚರಣೆ ಸಂಭ್ರಮವಿಲ್ಲ. ಜನರು ದುಖಃದ ನಡುವೆ ಮನಸ್ಸಿನಲ್ಲೇ ಕ್ರಿಸ್‌ಮಸ್‌ ಆಚರಿಸುತ್ತಿದ್ದಾರೆ ಎಂದು ವರದಿಯೊಂದು ಹೇಳಿದೆ.

ಇದನ್ನೂ ಓದಿ : ರಷ್ಯಾಕ್ಕೆ ತೆರಳುತ್ತಿದ್ದ ವಿಮಾನ ಕಝಾಕಿಸ್ತಾನ್‌ನದಲ್ಲಿ ಪತನ; 42 ಮಂದಿ ಸಾವನ್ನಪ್ಪಿರುವ ಶಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...