Homeಮುಖಪುಟಗಾಝಾದಲ್ಲಿ ನರಮೇಧ : ಯೇಸುಕ್ರಿಸ್ತನ ಜನ್ಮಸ್ಥಳದಲ್ಲಿ ಸತತ ಎರಡನೇ ವರ್ಷವೂ ಕಳೆಗುಂದಿದ ಕ್ರಿಸ್‌ಮಸ್

ಗಾಝಾದಲ್ಲಿ ನರಮೇಧ : ಯೇಸುಕ್ರಿಸ್ತನ ಜನ್ಮಸ್ಥಳದಲ್ಲಿ ಸತತ ಎರಡನೇ ವರ್ಷವೂ ಕಳೆಗುಂದಿದ ಕ್ರಿಸ್‌ಮಸ್

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿರುವ ಹಿನ್ನೆಲೆ ಸತತ ಎರಡನೇ ವರ್ಷವೂ ಏಸು ಕ್ರಿಸ್ತನ ಜನ್ಮ ಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಜನರು ಸಂಭ್ರವಿಲ್ಲದ ಸರಳ ಕ್ರಿಸ್‌ಮಸ್ ಆಚರಿಸಿದರು.

ಕ್ರಿಸ್‌ಮಸ್‌ ಮುನ್ನಾದಿನ ಸಂಜೆ (ಕ್ರಿಸ್‌ಮಸ್‌ ಈವ್) ಬೆಥ್ಲೆಹೆಮ್‌ನ ಐತಿಹಾಸಿಕ ಬೀದಿಗಳಲ್ಲಿ ವಿಶೇಷ ವಸ್ತ್ರ ಧರಿಸಿ ಮೆರವಣಿಗೆ ನಡೆಸಿದ ‘ಟೆರ್ರಾ ಸ್ಯಾಂಕ್ಟಾ ಸ್ಕೌಟ್ ಟ್ರೂಪ್’ ತಂಡದ ಪುಟಾಣಿ ಮಕ್ಕಳು ‘ನಮಗೆ ಸಾವು ಬೇಡ, ಜೀವನ ಬೇಕು. ಗಾಝಾದಲ್ಲಿ ನರಮೇಧ ನಿಲ್ಲಿಸಿ’ ಎಂಬ ಆಗ್ರಹ ವ್ಯಕ್ತಪಡಿಸಿದರು.

ಸತತ ಎರಡನೇ ವರ್ಷ ಈ ಬಾರಿಯೂ ಬೆತ್ಮಹೆಮ್‌ನ ಕ್ರಿಸ್‌ಮಸ್‌ ಸಂಭ್ರಮದ ಮೇಲೆ ಯುದ್ದದ ಕಾರ್ಮೋಡ ಕವಿದಿತ್ತು. ಕಳೆದ ವರ್ಷವೂ ಬೆಥ್ಲೆಹೆಮ್‌ನಲ್ಲಿ ಅದ್ದೂರಿ ಕ್ರಿಸ್‌ಮಸ್ ಆಚರಣೆಯನ್ನು ರದ್ದುಗೊಳಿಸಲಾಗಿತ್ತು.

ಒಂದು ದೊಡ್ಡ ಕ್ರಿಸ್ಮಸ್ ಗಿಡವನ್ನು ಬೆಥ್ಲೆಹೆಮ್‌ನ ಚರ್ಚ್‌ ಬಳಿಯ (ಚರ್ಚ್ ಆಫ್ ನೇಟಿವಿಟಿ) ಐತಿಹಾಸಿಕ ಮ್ಯಾಂಗರ್ ಸ್ಕ್ವೇರ್‌ ಗುಹೆಯೊಂದರ ಮೇಲೆ ಪ್ರತಿವರ್ಷ ಕ್ರಿಸ್‌ಮಸ್‌ ವೇಳೆ ನಿಲ್ಲಿಸಲಾಗುತ್ತದೆ. ಈ ಜಾಗದಲ್ಲಿ ಏಸು ಕ್ರಿಸ್ತ 2,000 ವರ್ಷಗಳ ಹಿಂದೆ ಜನಿಸಿದರು ಎಂದು ಕ್ರಿಶ್ಚಿಯನ್ನರು ನಂಬುತ್ತಾರೆ. ಆದರೆ, ಕಳೆದ ಎರಡು ವರ್ಷಗಳಿಂದ ಇಲ್ಲಿ ಸಂಭ್ರಮಕ್ಕೆ ಕಂಡಿಲ್ಲ.

ಕಳೆದ ವರ್ಷದಂತೆ ಈ ವರ್ಷವೂ ಬೆಥ್ಲೆಹೆಮ್‌ ಮುನ್ಸಿಪಾಲಿಟಿ ಗಾಝಾದಲ್ಲಿ ನರಮೇಧ ನಡೆಯುತ್ತಿರುವ ಹಿನ್ನೆಲೆ ಸರಳ ಕ್ರಿಸ್‌ಮಸ್‌ ಆಚರಣೆಯ ನಿರ್ಧಾರ ಕೈಗೊಂಡಿದೆ. ಇಸ್ರೇಲ್‌ನಲ್ಲಿರುವ ಸುಮಾರು 185, 000 ಮತ್ತು ಪ್ಯಾಲೆಸ್ತೀನ್ ಭೂ ಪ್ರದೇಶದ ವ್ಯಾಪ್ತಿಯಲ್ಲಿರುವ ಸುಮಾರು 47, 000 ಕ್ರಿಶ್ಚಿಯನ್ನರು ಶಾಂತಿಯುತ ಮತ್ತು ನೆಮ್ಮದಿಯ ಭವಿಷ್ಯಕ್ಕಾಗಿ ಪ್ರಾರ್ಥಿಸಿದ್ದಾರೆ.

ಈ ದುಖಃವನ್ನು ಕೊನೆಗೊಳಿಸಿ, ಶಾಂತಿಯ ವಾತಾವರಣ ನೀಡುವಂತೆ ನಾವು ಏಸುಕ್ರಿಸ್ತನಲ್ಲಿ ಪ್ರಾರ್ಥಿಸುತ್ತೇವೆ ಎಂದು ಆಂಟನ್ ಸಲ್ಮಾನ್ ಹೇಳಿದ್ದಾರೆ.

ಕಳೆದ ಭಾನುವಾರ ಗಾಝಾದಲ್ಲಿ ಸಾಮೂಹಿಕ ಪ್ರಾರ್ಥನೆಯ ನೇತೃತ್ವ ವಹಿಸಿದ್ದ ಜೆರುಸಲೆಮ್‌ನ ಆರ್ಚ್‌ಬಿಷಪ್ ಪಿಯರ್‌ಬಟ್ಟಿಸ್ಟಾ ಪಿಜ್ಜಾಬಲ್ಲಾ ಅವರು ಕ್ರಿಸ್‌ಮಸ್‌ ಈವ್‌ ದಿನ ಬೆಥ್ಲೆಹೆಮ್‌ನಲ್ಲಿ ಪ್ರಾರ್ಥನೆಗೆ ನೇತೃತ್ವ ನೀಡುವಾಗಲೂ ಶಾಂತಿಗಾಗಿ ಪ್ರಾರ್ಥಿಸುತ್ತೇವೆ ಎಂದಿದ್ದಾರೆ.

“ನಾನು ನಿನ್ನೆಯಷ್ಟೇ ಗಾಝಾದಿಂದ ಬಂದೆ. ಅಲ್ಲಿ ಎಲ್ಲವನ್ನೂ ನಾಶಮಾಡಲಾಗಿದೆ. ಅಲ್ಲಿನ ಶೋಚಣೀಯ ಸ್ಥಿತಿಯನ್ನು ನಾನು ಕಣ್ಣಾರೆ ನೋಡಿದೆ. ಆದರೆ, ಗಾಝಾದ ಜನತೆ ಬಿಟ್ಟುಕೊಡುವರಲ್ಲ. ಅವರು ಆತ್ಮವಿಶ್ವಾಸದಲ್ಲಿದ್ದಾರೆ ಎಂದು ಪಿಯರ್‌ಬಟ್ಟಿಸ್ಟಾ ಅವರು ಬೇಸರದ ಮಾತುಗಳನ್ನು ಆಡಿದ್ದಾರೆ.

ಬೆಥ್ಲೆಹೆಮ್‌ನ ಚರ್ಚ್ ಆಫ್ ನೇಟಿವಿಟಿ ಬಳಿ ಕ್ರಿಸ್‌ಮಸ್ ಈವ್ ದಿನ ಪ್ಯಾಲೆಸ್ತೀನ್ ಜನತೆ ಕೂಡ ವಿಶೇಷ ಮೌನ ಮೆರವಣಿಗೆ ನಡೆಸಿದ್ದಾರೆ. ಈ ಮೂಲಕ ಗಾಝಾದ ನರಮೇಧವನ್ನು ಖಂಡಿಸಿದ್ದಾರೆ.

ಅವಶೇಷಗಳ ನಡುವೆ ಗಾಝಾದಲ್ಲಿ ಕ್ರಿಸ್‌ಮಸ್‌ ಆಚರಣೆ

ಗಾಝಾದಲ್ಲಿ ಇಸ್ರೇಲ್ ಆಕ್ರಮಣದಿಂದ ಕೇವಲ ಮುಸ್ಲಿಮರಿಗೆ ಮಾತ್ರ ಸಮಸ್ಯೆಯಾಗಿಲ್ಲ. ಅಲ್ಲಿನ ಸ್ಥಳೀಯ ಕ್ರೈಸ್ತರು ಕೂಡ ತಮ್ಮದೆಲ್ಲವನ್ನು ಕಳೆದುಕೊಂಡಿದ್ದಾರೆ. ಸುದ್ದಿ ಸಂಸ್ಥೆ ಅಲ್‌-ಜಝೀರಾ ಜೊತೆ ಮಾತನಾಡಿರುವ ಗಾಝಾದ ಕ್ರೈಸ್ತ ವ್ಯಕ್ತಿ ರಮೇಝ್ ಸೌರಿ “ಕಳೆದ 14 ತಿಂಗಳಿನಿಂದ ನಾವು ಸೇಂಟ್ ಪೋರ್ಫಿರಿಯಸ್ ಮೈದಾನದಲ್ಲಿ ಮಲಗುತ್ತಿದ್ದೇವೆ. ನಮಗೆಲ್ಲಿಯ ಕ್ರಿಸ್‌ಮಸ್‌ ಸಂಭ್ರಮ? ಎಂದು ಪ್ರಶ್ನಿಸಿದ್ದಾರೆ.

ಗಾಝಾ ನಗರದ ಪ್ರಾಚೀನ ಗ್ರೀಕ್ ಆರ್ಥೊಡಾಕ್ಸ್ ಚರ್ಚ್ ಬಳಿಯ ಕಟ್ಟಡವೊಂದಕ್ಕೆ ಕಳೆದ ವರ್ಷ ವೈಮಾನಿಕ ದಾಳಿ ನಡೆಸಿದ್ದ ಇಸ್ರೇಲ್, ಮೂವರನ್ನು ಹತ್ಯೆ ಮಾಡಿತ್ತು.

PC ; nytimes.com

ಗಾಝಾ ಮೇಲೆ ಇಸ್ರೇಲ್ ಆಕ್ರಮಣ ಪ್ರಾರಂಭಿಸಿದ ದಿನದಿಂದ ಅಲ್ಲಿನ ಕ್ರೈಸ್ತ ಸಮುದಾಯದ ಜನರು ಸೇಂಟ್ ಪೋರ್ಫಿರಿಯಸ್ ಮತ್ತು ಹೋಲಿ ಫ್ಯಾಮಿಲಿ ಚರ್ಚ್‌ಗಳಲ್ಲಿ ಉಳಿದುಕೊಂಡಿದ್ದಾರೆ. ಅವರಿಗೆ ಅಲ್ಲಿ ಯಾವುದೇ ವ್ಯವಸ್ಥೆಗಳಿಲ್ಲದೆ, ಸಂಕಷ್ಟದ ಜೀವನ ನಡೆಸುತ್ತಿದ್ಧಾರೆ.

“ನಾವು ತುಂಬಾ ದುಖಃದಲ್ಲಿದ್ದೇವೆ. ಶಾಂತಿಗಾಗಿ ಪ್ರಾರ್ಥಿಸುವುದು ಬಿಟ್ಟರೆ ಬೇರೇನು ಇಲ್ಲ” ಎಂದು ಗಾಝಾದ ಕ್ರೈಸ್ತ ವ್ಯಕ್ತಿ ರಮೇಝ್ ಸೌರಿ ಹೇಳಿದ್ದಾರೆ.

ಅವಶೇಷಗಳ ನಡುವೆ ಗಾಝಾದಲ್ಲಿ ಕ್ರಿಸ್‌ಮಸ್‌ ಎಂದರೆ, ಅಲ್ಲಿ ಯಾವುದೇ ಆಚರಣೆ ಸಂಭ್ರಮವಿಲ್ಲ. ಜನರು ದುಖಃದ ನಡುವೆ ಮನಸ್ಸಿನಲ್ಲೇ ಕ್ರಿಸ್‌ಮಸ್‌ ಆಚರಿಸುತ್ತಿದ್ದಾರೆ ಎಂದು ವರದಿಯೊಂದು ಹೇಳಿದೆ.

ಇದನ್ನೂ ಓದಿ : ರಷ್ಯಾಕ್ಕೆ ತೆರಳುತ್ತಿದ್ದ ವಿಮಾನ ಕಝಾಕಿಸ್ತಾನ್‌ನದಲ್ಲಿ ಪತನ; 42 ಮಂದಿ ಸಾವನ್ನಪ್ಪಿರುವ ಶಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...