Homeಅಂತರಾಷ್ಟ್ರೀಯ2050ರ ವೇಳೆಗೆ ಮುಂಬೈ, ಕೋಲ್ಕತ್ತಾ ನಗರಗಳು ಸಮುದ್ರದೊಳಗೆ ಮುಳುಗಲಿವೆಯೇ? ಹೊಸ ವರದಿ ಬಿಚ್ಚಟ್ಟ ವಾಸ್ತವ....

2050ರ ವೇಳೆಗೆ ಮುಂಬೈ, ಕೋಲ್ಕತ್ತಾ ನಗರಗಳು ಸಮುದ್ರದೊಳಗೆ ಮುಳುಗಲಿವೆಯೇ? ಹೊಸ ವರದಿ ಬಿಚ್ಚಟ್ಟ ವಾಸ್ತವ….

- Advertisement -
- Advertisement -

ಪ್ರಾಕೃತಿಕ ವಿಕೋಪದಿಂದ ಭಾರತದ ಹಲವು ಪ್ರದೇಶಗಳು ಈಗಾಗಲೇ ತತ್ತರಿಸಿ ಹೋಗಿವೆ. ಚಂಡಮಾರುತ, ಮಳೆ, ಪ್ರವಾಹಕ್ಕೆ ತುತ್ತಾಗಿ ಭಾರಿ ಹಾನಿಯುಂಟಾಗಿದೆ. ಲಕ್ಷಾಂತರ ಜನ ಸಂತ್ರಸ್ತರಾಗಿದ್ದು, ಮನೆ-ಮಠ ಕಳೆದುಕೊಂಡಿದ್ದಾರೆ. ಹೀಗಿರುವಾಗ ಅಮೆರಿಕ ಮೂಲದ ಸಂಸ್ಥೆಯಿಂದ ಬಿಡುಗಡೆ ಮಾಡಿದ ವರದಿ ಜನರನ್ನು ಮತ್ತಷ್ಟು ಗಾಬರಿ ಬೀಳಿಸುವಂತಿದೆ.

ಅಮೆರಿಕ ಮೂಲದ ಹವಾಮಾನ ಕೇಂದ್ರ ಅಧ್ಯಯನ ಜರ್ನಲ್ ನಲ್ಲಿ ಪ್ರಕಟಗೊಂಡ ವರದಿ, ಭಾರತಕ್ಕೆ ಜಲದಿಗ್ಬಂಧನ ಉಂಟಾಗುವ ಸಾಧ್ಯತೆಗಳನ್ನು ಗಂಭೀರವಾಗಿ ಉಲ್ಲೇಖಿಸಿದೆ. 2050 ರ ವೇಳೆಗೆ ಕಡಲ್ಕೊರೆತ ಮತ್ತು ಸಮುದ್ರದ ಉಬ್ಬರ, ಉಕ್ಕುವಿಕೆ, ಕಾರ್ಬನ್ ಡೈಆಕ್ಸೈಡ್ ಪ್ರಮಾಣದ ಹೆಚ್ಚಳದಿಂದ ಕರಾವಳಿ ಭಾಗಗಳಾದ ಮುಂಬೈ, ನವೀ ಮುಂಬೈ, ಕೋಲ್ಕತ್ತಾ ನಗರಗಳು ಮುಳುಗಿ ಹೋಗಲಿವೆ. ಕಡಲ್ಕೊರೆತದ ಹೆಚ್ಚಳದಿಂದ ಈಗ 50 ಲಕ್ಷ ಜನ ಮಾತ್ರ ಸಂತ್ರಸ್ತರಾಗಿದ್ದಾರೆ. ಇದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳದಿದ್ದರೆ ಮೂರೂವರೆ ಕೋಟಿ ಜನ ಸಂಕಷ್ಟ ಅನುಭವಿಸಲಿದ್ದಾರೆ ಎಂದು ವರದಿ ಹೇಳಿದೆ.

ಯುಎಸ್ ಮೂಲದ ಹವಾಮಾನ ಸಂಶೋಧನೆ ಮತ್ತು ಸಂವಹನ ಸಂಸ್ಥೆ ಹವಾಮಾನ ಕೇಂದ್ರ, ನೂತನ ಡಿಜಿಟಲ್ ಎಲಿವೇಶನ್ ಮಾದರಿಯ ಸಮುದ್ರ ಉಬ್ಬರ ಮಾಪನವನ್ನು ಸಂಶೋಧನೆ ಮಾಡಿದೆ. ಈ ಮೂಲಕ ಸಂಶೋಧನೆ ನಡೆಸಿ, ಹವಾಮಾನ ಅಧ್ಯಯನ ಕೇಂದ್ರ ವರದಿ ಬಿಡುಗಡೆ ಮಾಡಿದೆ. ಇದರ ಪ್ರಕಾರ, ನೈಸರ್ಗಿಕ ಬದಲಾವಣೆ, ಕರಾವಳಿಯಲ್ಲಿ ಪ್ರವಾಹ, ಕಡಲ್ಕೊರೆತದಂತ ವಿಷಯಗಳನ್ನು ನಾಸಾದ ಎಸ್.ಆರ್.ಟಿ.ಎಂ ( ಶಟಲ್ ರಾಡಾರ್ ಟೋಪೋಗ್ರಫಿ ಮಿಷನ್ ) ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಅದೂ ಅಲ್ಲದೇ ಇವುಗಳಿಂದ ಆಗಬಹುದಾದ ಅನಾಹುತವನ್ನು ಇಲ್ಲಿಯವರೆಗೆ ಕಡಿಮೆ ಮಟ್ಟದಲ್ಲಿ ಊಹಿಸಿದೆ ಎಂದು ಉಲ್ಲೇಖಿಸಿದೆ.

ನಾಸಾ ಮಾದರಿಯಲ್ಲಿ  ಆಗಸಕ್ಕೆ ಹತ್ತಿರವಿರುವ ಸಮುದ್ರದ ಮೇಲ್ಮೆ ಉಬ್ಬರವನ್ನು ಅಳೆಯುವಾಗ, ಅಂತಹ ಜಲಪ್ರದೇಶವು ಆವರಿಸಿರುವ ಭೂಭಾಗದಲ್ಲಿರುವ ಮರದ ತುದಿಗಳು ಮತ್ತು ಕಟ್ಟಡಗಳ ಮೇಲ್ಛಾವಾಣಿಗಳನ್ನು ಪರಿಗಣಿಸಲಾಗುತ್ತಿದೆ. ಹೊಸ ಸಂಶೋಧನಾ ವಿಧಾನದಲ್ಲಿ ಇಂತಹ ದೋಷಗಳನ್ನು ಸರಿಪಡಿಸಿಕೊಂಡು ಕೃತಕ ಬುದ್ದಿಮತ್ತೆ ಸಾಧನಗಳ ಮೂಲಕ ಸಮುದ್ರದ ಮೇಲ್ಮೈ ಉಬ್ಬರವನ್ನು ಸಂಶೋಧಕರು ಮಾಪನ ಮಾಡಿದ್ದಾರೆ. ಅದರ ಪ್ರಕಾರ 2050ರ ವೇಳೆಗೆ ಸಮುದ್ರತೀರ ಪ್ರದೇಶಗಳಲ್ಲಿ ನಾಸಾ ಊಹಿಸಿದ್ದಕ್ಕಿಂತಲೂ ಗಂಭೀರ ಉಬ್ಬರ ಸಂಭವಿಸಲಿದೆ.  ಇದು ಜಾಗತಿಕವಾಗಿ 300 ದಶಲಕ್ಷ ಜನರ ಮೇಲೆ ಪರಿಣಾಮ ಬೀರಬಹುದು. ಏಷ್ಯಾ ಭಾಗಗಳಲ್ಲಿ ಕರಾವಳಿ ಭಾಗಗವನ್ನು ಅತಿಕ್ರಮಿಸಿಕೊಂಡಿರುವವರ ಭೂಮಿಯನ್ನೂ ಸಹ ಇದು ಮುಳುಗಿಸಲಿದೆ. ಸುಮಾರು 150 ದಶಲಕ್ಷ ಜನರ ಮೇಲೆ ಪರಿಣಾಮ ಬೀರಲಿದೆ.

2015ರ ಪ್ಯಾರಿಸ್ ಒಪ್ಪಂದವನ್ನು ಉಲ್ಲಂಘಿಸಿ ಹೊರಸೂಸುತ್ತಿರುವ ಕಾರ್ಬನ್ ಡೈಆಕ್ಸೈಡ್ ಪ್ರಮಾಣದ ಆಧಾರದಲ್ಲಿ ಮತ್ತು ಹಿಮಗಡ್ಡೆಗಳ ತ್ವರಿತ ಕರಗುವಿಕೆಯಿಂದಾಗಿ ಸಮುದ್ರಮಟ್ಟ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದರಿಂದ ಸುಮಾರು 640 ದಶಲಕ್ಷ ಜನ ವಾಸಿಸುತ್ತಿರುವ ಕರಾವಳಿ ಭೂಭಾಗವು ಅಲೆಗಳ ಅಪಾಯಕಾರಿ ಉಬ್ಬರದ ಆತಂಕಕ್ಕೆ ಈಡಾಗಲಿವೆ. ಅದರಲ್ಲಿ 340 ದಶಲಕ್ಷ ಜನ ವಾಸಿಸುತ್ತಿರುವ ಭೂಪ್ರದೇಶವು 2100ರ ವೇಳೆಗೆ ಸರಾಸರಿ ಅಲೆಗಳ ಎತ್ತರಕ್ಕಿಂತಲೂ ತಗ್ಗಿನ ಪ್ರದೇಶವಾಗಿ ರೂಪಾಂತರವಾಗಲಿದೆ. ಇದರ ಅರ್ಥ ಏಷ್ಯಾದ ಎಂಟು ದೇಶಗಳಲ್ಲಿ ಅಪಾಯ ಹೆಚ್ಚಲಿದೆ. ಕನಿಷ್ಠ 10 ದಶಲಕ್ಷ ಜನ ವಾಸಿಸುವ ಭೂಮಿಗೆ ಹೋಲಿಸಿದರೆ ಉಬ್ಬರವಿಳಿತ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ವರದಿ ತಿಳಿಸಿದೆ.

ಜಾಗತಿಕ ಸರಾಸರಿ ಸಮುದ್ರಮಟ್ಟ, ಇಪ್ಪತ್ತನೇ ಶತಮಾನದಲ್ಲಿ 11-16 ಸೆಂ.ಮೀ ಹೆಚ್ಚಾಗಿದೆ. ಇಂಗಾಲದ ಹೊರಸೂಸುವಿಕೆಗೆ ತೀಕ್ಷ್ಣ ಮತ್ತು ತಕ್ಷಣದ ಕಡಿತವಿದ್ದರೂ ಸಹ, ಇದು ಈ ಶತಮಾನದಲ್ಲಿ 0.5 ಮೀ. ಆಗಿದೆ. ಆದರೆ ಹೆಚ್ಚಿನ ಇಂಗಾಲ ಹೊರಸೂಸುವಿಕೆಯ ಸನ್ನಿವೇಶಗಳಲ್ಲಿ, ಇಪ್ಪತ್ತೊಂದನೇ ಶತಮಾನದಲ್ಲಿ 2 ಮೀ.ನಷ್ಟು ಮೀರಿ ಹೋಗಲಿದೆ ಎಂದು ಅಧ್ಯಯನ ಎಚ್ಚರಿಸಿದೆ. ಹೊಸ ಅಂಕಿ ಅಂಶಗಳ ಪ್ರಕಾರ, 2050ರ ವೇಳೆಗೆ ಬಾಂಗ್ಲಾದೇಶ ಮತ್ತು ಚೀನಾದಲ್ಲಿ ಕ್ರಮವಾಗಿ ಕರಾವಳಿ ಪ್ರದೇಶದ 93 ಮತ್ತು 42 ಮಿಲಿಯನ್ ಜನರ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...