Homeಅಂತರಾಷ್ಟ್ರೀಯ2050ರ ವೇಳೆಗೆ ಮುಂಬೈ, ಕೋಲ್ಕತ್ತಾ ನಗರಗಳು ಸಮುದ್ರದೊಳಗೆ ಮುಳುಗಲಿವೆಯೇ? ಹೊಸ ವರದಿ ಬಿಚ್ಚಟ್ಟ ವಾಸ್ತವ....

2050ರ ವೇಳೆಗೆ ಮುಂಬೈ, ಕೋಲ್ಕತ್ತಾ ನಗರಗಳು ಸಮುದ್ರದೊಳಗೆ ಮುಳುಗಲಿವೆಯೇ? ಹೊಸ ವರದಿ ಬಿಚ್ಚಟ್ಟ ವಾಸ್ತವ….

- Advertisement -
- Advertisement -

ಪ್ರಾಕೃತಿಕ ವಿಕೋಪದಿಂದ ಭಾರತದ ಹಲವು ಪ್ರದೇಶಗಳು ಈಗಾಗಲೇ ತತ್ತರಿಸಿ ಹೋಗಿವೆ. ಚಂಡಮಾರುತ, ಮಳೆ, ಪ್ರವಾಹಕ್ಕೆ ತುತ್ತಾಗಿ ಭಾರಿ ಹಾನಿಯುಂಟಾಗಿದೆ. ಲಕ್ಷಾಂತರ ಜನ ಸಂತ್ರಸ್ತರಾಗಿದ್ದು, ಮನೆ-ಮಠ ಕಳೆದುಕೊಂಡಿದ್ದಾರೆ. ಹೀಗಿರುವಾಗ ಅಮೆರಿಕ ಮೂಲದ ಸಂಸ್ಥೆಯಿಂದ ಬಿಡುಗಡೆ ಮಾಡಿದ ವರದಿ ಜನರನ್ನು ಮತ್ತಷ್ಟು ಗಾಬರಿ ಬೀಳಿಸುವಂತಿದೆ.

ಅಮೆರಿಕ ಮೂಲದ ಹವಾಮಾನ ಕೇಂದ್ರ ಅಧ್ಯಯನ ಜರ್ನಲ್ ನಲ್ಲಿ ಪ್ರಕಟಗೊಂಡ ವರದಿ, ಭಾರತಕ್ಕೆ ಜಲದಿಗ್ಬಂಧನ ಉಂಟಾಗುವ ಸಾಧ್ಯತೆಗಳನ್ನು ಗಂಭೀರವಾಗಿ ಉಲ್ಲೇಖಿಸಿದೆ. 2050 ರ ವೇಳೆಗೆ ಕಡಲ್ಕೊರೆತ ಮತ್ತು ಸಮುದ್ರದ ಉಬ್ಬರ, ಉಕ್ಕುವಿಕೆ, ಕಾರ್ಬನ್ ಡೈಆಕ್ಸೈಡ್ ಪ್ರಮಾಣದ ಹೆಚ್ಚಳದಿಂದ ಕರಾವಳಿ ಭಾಗಗಳಾದ ಮುಂಬೈ, ನವೀ ಮುಂಬೈ, ಕೋಲ್ಕತ್ತಾ ನಗರಗಳು ಮುಳುಗಿ ಹೋಗಲಿವೆ. ಕಡಲ್ಕೊರೆತದ ಹೆಚ್ಚಳದಿಂದ ಈಗ 50 ಲಕ್ಷ ಜನ ಮಾತ್ರ ಸಂತ್ರಸ್ತರಾಗಿದ್ದಾರೆ. ಇದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳದಿದ್ದರೆ ಮೂರೂವರೆ ಕೋಟಿ ಜನ ಸಂಕಷ್ಟ ಅನುಭವಿಸಲಿದ್ದಾರೆ ಎಂದು ವರದಿ ಹೇಳಿದೆ.

ಯುಎಸ್ ಮೂಲದ ಹವಾಮಾನ ಸಂಶೋಧನೆ ಮತ್ತು ಸಂವಹನ ಸಂಸ್ಥೆ ಹವಾಮಾನ ಕೇಂದ್ರ, ನೂತನ ಡಿಜಿಟಲ್ ಎಲಿವೇಶನ್ ಮಾದರಿಯ ಸಮುದ್ರ ಉಬ್ಬರ ಮಾಪನವನ್ನು ಸಂಶೋಧನೆ ಮಾಡಿದೆ. ಈ ಮೂಲಕ ಸಂಶೋಧನೆ ನಡೆಸಿ, ಹವಾಮಾನ ಅಧ್ಯಯನ ಕೇಂದ್ರ ವರದಿ ಬಿಡುಗಡೆ ಮಾಡಿದೆ. ಇದರ ಪ್ರಕಾರ, ನೈಸರ್ಗಿಕ ಬದಲಾವಣೆ, ಕರಾವಳಿಯಲ್ಲಿ ಪ್ರವಾಹ, ಕಡಲ್ಕೊರೆತದಂತ ವಿಷಯಗಳನ್ನು ನಾಸಾದ ಎಸ್.ಆರ್.ಟಿ.ಎಂ ( ಶಟಲ್ ರಾಡಾರ್ ಟೋಪೋಗ್ರಫಿ ಮಿಷನ್ ) ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಅದೂ ಅಲ್ಲದೇ ಇವುಗಳಿಂದ ಆಗಬಹುದಾದ ಅನಾಹುತವನ್ನು ಇಲ್ಲಿಯವರೆಗೆ ಕಡಿಮೆ ಮಟ್ಟದಲ್ಲಿ ಊಹಿಸಿದೆ ಎಂದು ಉಲ್ಲೇಖಿಸಿದೆ.

ನಾಸಾ ಮಾದರಿಯಲ್ಲಿ  ಆಗಸಕ್ಕೆ ಹತ್ತಿರವಿರುವ ಸಮುದ್ರದ ಮೇಲ್ಮೆ ಉಬ್ಬರವನ್ನು ಅಳೆಯುವಾಗ, ಅಂತಹ ಜಲಪ್ರದೇಶವು ಆವರಿಸಿರುವ ಭೂಭಾಗದಲ್ಲಿರುವ ಮರದ ತುದಿಗಳು ಮತ್ತು ಕಟ್ಟಡಗಳ ಮೇಲ್ಛಾವಾಣಿಗಳನ್ನು ಪರಿಗಣಿಸಲಾಗುತ್ತಿದೆ. ಹೊಸ ಸಂಶೋಧನಾ ವಿಧಾನದಲ್ಲಿ ಇಂತಹ ದೋಷಗಳನ್ನು ಸರಿಪಡಿಸಿಕೊಂಡು ಕೃತಕ ಬುದ್ದಿಮತ್ತೆ ಸಾಧನಗಳ ಮೂಲಕ ಸಮುದ್ರದ ಮೇಲ್ಮೈ ಉಬ್ಬರವನ್ನು ಸಂಶೋಧಕರು ಮಾಪನ ಮಾಡಿದ್ದಾರೆ. ಅದರ ಪ್ರಕಾರ 2050ರ ವೇಳೆಗೆ ಸಮುದ್ರತೀರ ಪ್ರದೇಶಗಳಲ್ಲಿ ನಾಸಾ ಊಹಿಸಿದ್ದಕ್ಕಿಂತಲೂ ಗಂಭೀರ ಉಬ್ಬರ ಸಂಭವಿಸಲಿದೆ.  ಇದು ಜಾಗತಿಕವಾಗಿ 300 ದಶಲಕ್ಷ ಜನರ ಮೇಲೆ ಪರಿಣಾಮ ಬೀರಬಹುದು. ಏಷ್ಯಾ ಭಾಗಗಳಲ್ಲಿ ಕರಾವಳಿ ಭಾಗಗವನ್ನು ಅತಿಕ್ರಮಿಸಿಕೊಂಡಿರುವವರ ಭೂಮಿಯನ್ನೂ ಸಹ ಇದು ಮುಳುಗಿಸಲಿದೆ. ಸುಮಾರು 150 ದಶಲಕ್ಷ ಜನರ ಮೇಲೆ ಪರಿಣಾಮ ಬೀರಲಿದೆ.

2015ರ ಪ್ಯಾರಿಸ್ ಒಪ್ಪಂದವನ್ನು ಉಲ್ಲಂಘಿಸಿ ಹೊರಸೂಸುತ್ತಿರುವ ಕಾರ್ಬನ್ ಡೈಆಕ್ಸೈಡ್ ಪ್ರಮಾಣದ ಆಧಾರದಲ್ಲಿ ಮತ್ತು ಹಿಮಗಡ್ಡೆಗಳ ತ್ವರಿತ ಕರಗುವಿಕೆಯಿಂದಾಗಿ ಸಮುದ್ರಮಟ್ಟ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದರಿಂದ ಸುಮಾರು 640 ದಶಲಕ್ಷ ಜನ ವಾಸಿಸುತ್ತಿರುವ ಕರಾವಳಿ ಭೂಭಾಗವು ಅಲೆಗಳ ಅಪಾಯಕಾರಿ ಉಬ್ಬರದ ಆತಂಕಕ್ಕೆ ಈಡಾಗಲಿವೆ. ಅದರಲ್ಲಿ 340 ದಶಲಕ್ಷ ಜನ ವಾಸಿಸುತ್ತಿರುವ ಭೂಪ್ರದೇಶವು 2100ರ ವೇಳೆಗೆ ಸರಾಸರಿ ಅಲೆಗಳ ಎತ್ತರಕ್ಕಿಂತಲೂ ತಗ್ಗಿನ ಪ್ರದೇಶವಾಗಿ ರೂಪಾಂತರವಾಗಲಿದೆ. ಇದರ ಅರ್ಥ ಏಷ್ಯಾದ ಎಂಟು ದೇಶಗಳಲ್ಲಿ ಅಪಾಯ ಹೆಚ್ಚಲಿದೆ. ಕನಿಷ್ಠ 10 ದಶಲಕ್ಷ ಜನ ವಾಸಿಸುವ ಭೂಮಿಗೆ ಹೋಲಿಸಿದರೆ ಉಬ್ಬರವಿಳಿತ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ವರದಿ ತಿಳಿಸಿದೆ.

ಜಾಗತಿಕ ಸರಾಸರಿ ಸಮುದ್ರಮಟ್ಟ, ಇಪ್ಪತ್ತನೇ ಶತಮಾನದಲ್ಲಿ 11-16 ಸೆಂ.ಮೀ ಹೆಚ್ಚಾಗಿದೆ. ಇಂಗಾಲದ ಹೊರಸೂಸುವಿಕೆಗೆ ತೀಕ್ಷ್ಣ ಮತ್ತು ತಕ್ಷಣದ ಕಡಿತವಿದ್ದರೂ ಸಹ, ಇದು ಈ ಶತಮಾನದಲ್ಲಿ 0.5 ಮೀ. ಆಗಿದೆ. ಆದರೆ ಹೆಚ್ಚಿನ ಇಂಗಾಲ ಹೊರಸೂಸುವಿಕೆಯ ಸನ್ನಿವೇಶಗಳಲ್ಲಿ, ಇಪ್ಪತ್ತೊಂದನೇ ಶತಮಾನದಲ್ಲಿ 2 ಮೀ.ನಷ್ಟು ಮೀರಿ ಹೋಗಲಿದೆ ಎಂದು ಅಧ್ಯಯನ ಎಚ್ಚರಿಸಿದೆ. ಹೊಸ ಅಂಕಿ ಅಂಶಗಳ ಪ್ರಕಾರ, 2050ರ ವೇಳೆಗೆ ಬಾಂಗ್ಲಾದೇಶ ಮತ್ತು ಚೀನಾದಲ್ಲಿ ಕ್ರಮವಾಗಿ ಕರಾವಳಿ ಪ್ರದೇಶದ 93 ಮತ್ತು 42 ಮಿಲಿಯನ್ ಜನರ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...