Homeಅಂತರಾಷ್ಟ್ರೀಯ2050ರ ವೇಳೆಗೆ ಮುಂಬೈ, ಕೋಲ್ಕತ್ತಾ ನಗರಗಳು ಸಮುದ್ರದೊಳಗೆ ಮುಳುಗಲಿವೆಯೇ? ಹೊಸ ವರದಿ ಬಿಚ್ಚಟ್ಟ ವಾಸ್ತವ....

2050ರ ವೇಳೆಗೆ ಮುಂಬೈ, ಕೋಲ್ಕತ್ತಾ ನಗರಗಳು ಸಮುದ್ರದೊಳಗೆ ಮುಳುಗಲಿವೆಯೇ? ಹೊಸ ವರದಿ ಬಿಚ್ಚಟ್ಟ ವಾಸ್ತವ….

- Advertisement -
- Advertisement -

ಪ್ರಾಕೃತಿಕ ವಿಕೋಪದಿಂದ ಭಾರತದ ಹಲವು ಪ್ರದೇಶಗಳು ಈಗಾಗಲೇ ತತ್ತರಿಸಿ ಹೋಗಿವೆ. ಚಂಡಮಾರುತ, ಮಳೆ, ಪ್ರವಾಹಕ್ಕೆ ತುತ್ತಾಗಿ ಭಾರಿ ಹಾನಿಯುಂಟಾಗಿದೆ. ಲಕ್ಷಾಂತರ ಜನ ಸಂತ್ರಸ್ತರಾಗಿದ್ದು, ಮನೆ-ಮಠ ಕಳೆದುಕೊಂಡಿದ್ದಾರೆ. ಹೀಗಿರುವಾಗ ಅಮೆರಿಕ ಮೂಲದ ಸಂಸ್ಥೆಯಿಂದ ಬಿಡುಗಡೆ ಮಾಡಿದ ವರದಿ ಜನರನ್ನು ಮತ್ತಷ್ಟು ಗಾಬರಿ ಬೀಳಿಸುವಂತಿದೆ.

ಅಮೆರಿಕ ಮೂಲದ ಹವಾಮಾನ ಕೇಂದ್ರ ಅಧ್ಯಯನ ಜರ್ನಲ್ ನಲ್ಲಿ ಪ್ರಕಟಗೊಂಡ ವರದಿ, ಭಾರತಕ್ಕೆ ಜಲದಿಗ್ಬಂಧನ ಉಂಟಾಗುವ ಸಾಧ್ಯತೆಗಳನ್ನು ಗಂಭೀರವಾಗಿ ಉಲ್ಲೇಖಿಸಿದೆ. 2050 ರ ವೇಳೆಗೆ ಕಡಲ್ಕೊರೆತ ಮತ್ತು ಸಮುದ್ರದ ಉಬ್ಬರ, ಉಕ್ಕುವಿಕೆ, ಕಾರ್ಬನ್ ಡೈಆಕ್ಸೈಡ್ ಪ್ರಮಾಣದ ಹೆಚ್ಚಳದಿಂದ ಕರಾವಳಿ ಭಾಗಗಳಾದ ಮುಂಬೈ, ನವೀ ಮುಂಬೈ, ಕೋಲ್ಕತ್ತಾ ನಗರಗಳು ಮುಳುಗಿ ಹೋಗಲಿವೆ. ಕಡಲ್ಕೊರೆತದ ಹೆಚ್ಚಳದಿಂದ ಈಗ 50 ಲಕ್ಷ ಜನ ಮಾತ್ರ ಸಂತ್ರಸ್ತರಾಗಿದ್ದಾರೆ. ಇದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳದಿದ್ದರೆ ಮೂರೂವರೆ ಕೋಟಿ ಜನ ಸಂಕಷ್ಟ ಅನುಭವಿಸಲಿದ್ದಾರೆ ಎಂದು ವರದಿ ಹೇಳಿದೆ.

ಯುಎಸ್ ಮೂಲದ ಹವಾಮಾನ ಸಂಶೋಧನೆ ಮತ್ತು ಸಂವಹನ ಸಂಸ್ಥೆ ಹವಾಮಾನ ಕೇಂದ್ರ, ನೂತನ ಡಿಜಿಟಲ್ ಎಲಿವೇಶನ್ ಮಾದರಿಯ ಸಮುದ್ರ ಉಬ್ಬರ ಮಾಪನವನ್ನು ಸಂಶೋಧನೆ ಮಾಡಿದೆ. ಈ ಮೂಲಕ ಸಂಶೋಧನೆ ನಡೆಸಿ, ಹವಾಮಾನ ಅಧ್ಯಯನ ಕೇಂದ್ರ ವರದಿ ಬಿಡುಗಡೆ ಮಾಡಿದೆ. ಇದರ ಪ್ರಕಾರ, ನೈಸರ್ಗಿಕ ಬದಲಾವಣೆ, ಕರಾವಳಿಯಲ್ಲಿ ಪ್ರವಾಹ, ಕಡಲ್ಕೊರೆತದಂತ ವಿಷಯಗಳನ್ನು ನಾಸಾದ ಎಸ್.ಆರ್.ಟಿ.ಎಂ ( ಶಟಲ್ ರಾಡಾರ್ ಟೋಪೋಗ್ರಫಿ ಮಿಷನ್ ) ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಅದೂ ಅಲ್ಲದೇ ಇವುಗಳಿಂದ ಆಗಬಹುದಾದ ಅನಾಹುತವನ್ನು ಇಲ್ಲಿಯವರೆಗೆ ಕಡಿಮೆ ಮಟ್ಟದಲ್ಲಿ ಊಹಿಸಿದೆ ಎಂದು ಉಲ್ಲೇಖಿಸಿದೆ.

ನಾಸಾ ಮಾದರಿಯಲ್ಲಿ  ಆಗಸಕ್ಕೆ ಹತ್ತಿರವಿರುವ ಸಮುದ್ರದ ಮೇಲ್ಮೆ ಉಬ್ಬರವನ್ನು ಅಳೆಯುವಾಗ, ಅಂತಹ ಜಲಪ್ರದೇಶವು ಆವರಿಸಿರುವ ಭೂಭಾಗದಲ್ಲಿರುವ ಮರದ ತುದಿಗಳು ಮತ್ತು ಕಟ್ಟಡಗಳ ಮೇಲ್ಛಾವಾಣಿಗಳನ್ನು ಪರಿಗಣಿಸಲಾಗುತ್ತಿದೆ. ಹೊಸ ಸಂಶೋಧನಾ ವಿಧಾನದಲ್ಲಿ ಇಂತಹ ದೋಷಗಳನ್ನು ಸರಿಪಡಿಸಿಕೊಂಡು ಕೃತಕ ಬುದ್ದಿಮತ್ತೆ ಸಾಧನಗಳ ಮೂಲಕ ಸಮುದ್ರದ ಮೇಲ್ಮೈ ಉಬ್ಬರವನ್ನು ಸಂಶೋಧಕರು ಮಾಪನ ಮಾಡಿದ್ದಾರೆ. ಅದರ ಪ್ರಕಾರ 2050ರ ವೇಳೆಗೆ ಸಮುದ್ರತೀರ ಪ್ರದೇಶಗಳಲ್ಲಿ ನಾಸಾ ಊಹಿಸಿದ್ದಕ್ಕಿಂತಲೂ ಗಂಭೀರ ಉಬ್ಬರ ಸಂಭವಿಸಲಿದೆ.  ಇದು ಜಾಗತಿಕವಾಗಿ 300 ದಶಲಕ್ಷ ಜನರ ಮೇಲೆ ಪರಿಣಾಮ ಬೀರಬಹುದು. ಏಷ್ಯಾ ಭಾಗಗಳಲ್ಲಿ ಕರಾವಳಿ ಭಾಗಗವನ್ನು ಅತಿಕ್ರಮಿಸಿಕೊಂಡಿರುವವರ ಭೂಮಿಯನ್ನೂ ಸಹ ಇದು ಮುಳುಗಿಸಲಿದೆ. ಸುಮಾರು 150 ದಶಲಕ್ಷ ಜನರ ಮೇಲೆ ಪರಿಣಾಮ ಬೀರಲಿದೆ.

2015ರ ಪ್ಯಾರಿಸ್ ಒಪ್ಪಂದವನ್ನು ಉಲ್ಲಂಘಿಸಿ ಹೊರಸೂಸುತ್ತಿರುವ ಕಾರ್ಬನ್ ಡೈಆಕ್ಸೈಡ್ ಪ್ರಮಾಣದ ಆಧಾರದಲ್ಲಿ ಮತ್ತು ಹಿಮಗಡ್ಡೆಗಳ ತ್ವರಿತ ಕರಗುವಿಕೆಯಿಂದಾಗಿ ಸಮುದ್ರಮಟ್ಟ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದರಿಂದ ಸುಮಾರು 640 ದಶಲಕ್ಷ ಜನ ವಾಸಿಸುತ್ತಿರುವ ಕರಾವಳಿ ಭೂಭಾಗವು ಅಲೆಗಳ ಅಪಾಯಕಾರಿ ಉಬ್ಬರದ ಆತಂಕಕ್ಕೆ ಈಡಾಗಲಿವೆ. ಅದರಲ್ಲಿ 340 ದಶಲಕ್ಷ ಜನ ವಾಸಿಸುತ್ತಿರುವ ಭೂಪ್ರದೇಶವು 2100ರ ವೇಳೆಗೆ ಸರಾಸರಿ ಅಲೆಗಳ ಎತ್ತರಕ್ಕಿಂತಲೂ ತಗ್ಗಿನ ಪ್ರದೇಶವಾಗಿ ರೂಪಾಂತರವಾಗಲಿದೆ. ಇದರ ಅರ್ಥ ಏಷ್ಯಾದ ಎಂಟು ದೇಶಗಳಲ್ಲಿ ಅಪಾಯ ಹೆಚ್ಚಲಿದೆ. ಕನಿಷ್ಠ 10 ದಶಲಕ್ಷ ಜನ ವಾಸಿಸುವ ಭೂಮಿಗೆ ಹೋಲಿಸಿದರೆ ಉಬ್ಬರವಿಳಿತ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ವರದಿ ತಿಳಿಸಿದೆ.

ಜಾಗತಿಕ ಸರಾಸರಿ ಸಮುದ್ರಮಟ್ಟ, ಇಪ್ಪತ್ತನೇ ಶತಮಾನದಲ್ಲಿ 11-16 ಸೆಂ.ಮೀ ಹೆಚ್ಚಾಗಿದೆ. ಇಂಗಾಲದ ಹೊರಸೂಸುವಿಕೆಗೆ ತೀಕ್ಷ್ಣ ಮತ್ತು ತಕ್ಷಣದ ಕಡಿತವಿದ್ದರೂ ಸಹ, ಇದು ಈ ಶತಮಾನದಲ್ಲಿ 0.5 ಮೀ. ಆಗಿದೆ. ಆದರೆ ಹೆಚ್ಚಿನ ಇಂಗಾಲ ಹೊರಸೂಸುವಿಕೆಯ ಸನ್ನಿವೇಶಗಳಲ್ಲಿ, ಇಪ್ಪತ್ತೊಂದನೇ ಶತಮಾನದಲ್ಲಿ 2 ಮೀ.ನಷ್ಟು ಮೀರಿ ಹೋಗಲಿದೆ ಎಂದು ಅಧ್ಯಯನ ಎಚ್ಚರಿಸಿದೆ. ಹೊಸ ಅಂಕಿ ಅಂಶಗಳ ಪ್ರಕಾರ, 2050ರ ವೇಳೆಗೆ ಬಾಂಗ್ಲಾದೇಶ ಮತ್ತು ಚೀನಾದಲ್ಲಿ ಕ್ರಮವಾಗಿ ಕರಾವಳಿ ಪ್ರದೇಶದ 93 ಮತ್ತು 42 ಮಿಲಿಯನ್ ಜನರ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...