Homeಅಂತರಾಷ್ಟ್ರೀಯ2050ರ ವೇಳೆಗೆ ಮುಂಬೈ, ಕೋಲ್ಕತ್ತಾ ನಗರಗಳು ಸಮುದ್ರದೊಳಗೆ ಮುಳುಗಲಿವೆಯೇ? ಹೊಸ ವರದಿ ಬಿಚ್ಚಟ್ಟ ವಾಸ್ತವ....

2050ರ ವೇಳೆಗೆ ಮುಂಬೈ, ಕೋಲ್ಕತ್ತಾ ನಗರಗಳು ಸಮುದ್ರದೊಳಗೆ ಮುಳುಗಲಿವೆಯೇ? ಹೊಸ ವರದಿ ಬಿಚ್ಚಟ್ಟ ವಾಸ್ತವ….

- Advertisement -
- Advertisement -

ಪ್ರಾಕೃತಿಕ ವಿಕೋಪದಿಂದ ಭಾರತದ ಹಲವು ಪ್ರದೇಶಗಳು ಈಗಾಗಲೇ ತತ್ತರಿಸಿ ಹೋಗಿವೆ. ಚಂಡಮಾರುತ, ಮಳೆ, ಪ್ರವಾಹಕ್ಕೆ ತುತ್ತಾಗಿ ಭಾರಿ ಹಾನಿಯುಂಟಾಗಿದೆ. ಲಕ್ಷಾಂತರ ಜನ ಸಂತ್ರಸ್ತರಾಗಿದ್ದು, ಮನೆ-ಮಠ ಕಳೆದುಕೊಂಡಿದ್ದಾರೆ. ಹೀಗಿರುವಾಗ ಅಮೆರಿಕ ಮೂಲದ ಸಂಸ್ಥೆಯಿಂದ ಬಿಡುಗಡೆ ಮಾಡಿದ ವರದಿ ಜನರನ್ನು ಮತ್ತಷ್ಟು ಗಾಬರಿ ಬೀಳಿಸುವಂತಿದೆ.

ಅಮೆರಿಕ ಮೂಲದ ಹವಾಮಾನ ಕೇಂದ್ರ ಅಧ್ಯಯನ ಜರ್ನಲ್ ನಲ್ಲಿ ಪ್ರಕಟಗೊಂಡ ವರದಿ, ಭಾರತಕ್ಕೆ ಜಲದಿಗ್ಬಂಧನ ಉಂಟಾಗುವ ಸಾಧ್ಯತೆಗಳನ್ನು ಗಂಭೀರವಾಗಿ ಉಲ್ಲೇಖಿಸಿದೆ. 2050 ರ ವೇಳೆಗೆ ಕಡಲ್ಕೊರೆತ ಮತ್ತು ಸಮುದ್ರದ ಉಬ್ಬರ, ಉಕ್ಕುವಿಕೆ, ಕಾರ್ಬನ್ ಡೈಆಕ್ಸೈಡ್ ಪ್ರಮಾಣದ ಹೆಚ್ಚಳದಿಂದ ಕರಾವಳಿ ಭಾಗಗಳಾದ ಮುಂಬೈ, ನವೀ ಮುಂಬೈ, ಕೋಲ್ಕತ್ತಾ ನಗರಗಳು ಮುಳುಗಿ ಹೋಗಲಿವೆ. ಕಡಲ್ಕೊರೆತದ ಹೆಚ್ಚಳದಿಂದ ಈಗ 50 ಲಕ್ಷ ಜನ ಮಾತ್ರ ಸಂತ್ರಸ್ತರಾಗಿದ್ದಾರೆ. ಇದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳದಿದ್ದರೆ ಮೂರೂವರೆ ಕೋಟಿ ಜನ ಸಂಕಷ್ಟ ಅನುಭವಿಸಲಿದ್ದಾರೆ ಎಂದು ವರದಿ ಹೇಳಿದೆ.

ಯುಎಸ್ ಮೂಲದ ಹವಾಮಾನ ಸಂಶೋಧನೆ ಮತ್ತು ಸಂವಹನ ಸಂಸ್ಥೆ ಹವಾಮಾನ ಕೇಂದ್ರ, ನೂತನ ಡಿಜಿಟಲ್ ಎಲಿವೇಶನ್ ಮಾದರಿಯ ಸಮುದ್ರ ಉಬ್ಬರ ಮಾಪನವನ್ನು ಸಂಶೋಧನೆ ಮಾಡಿದೆ. ಈ ಮೂಲಕ ಸಂಶೋಧನೆ ನಡೆಸಿ, ಹವಾಮಾನ ಅಧ್ಯಯನ ಕೇಂದ್ರ ವರದಿ ಬಿಡುಗಡೆ ಮಾಡಿದೆ. ಇದರ ಪ್ರಕಾರ, ನೈಸರ್ಗಿಕ ಬದಲಾವಣೆ, ಕರಾವಳಿಯಲ್ಲಿ ಪ್ರವಾಹ, ಕಡಲ್ಕೊರೆತದಂತ ವಿಷಯಗಳನ್ನು ನಾಸಾದ ಎಸ್.ಆರ್.ಟಿ.ಎಂ ( ಶಟಲ್ ರಾಡಾರ್ ಟೋಪೋಗ್ರಫಿ ಮಿಷನ್ ) ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಅದೂ ಅಲ್ಲದೇ ಇವುಗಳಿಂದ ಆಗಬಹುದಾದ ಅನಾಹುತವನ್ನು ಇಲ್ಲಿಯವರೆಗೆ ಕಡಿಮೆ ಮಟ್ಟದಲ್ಲಿ ಊಹಿಸಿದೆ ಎಂದು ಉಲ್ಲೇಖಿಸಿದೆ.

ನಾಸಾ ಮಾದರಿಯಲ್ಲಿ  ಆಗಸಕ್ಕೆ ಹತ್ತಿರವಿರುವ ಸಮುದ್ರದ ಮೇಲ್ಮೆ ಉಬ್ಬರವನ್ನು ಅಳೆಯುವಾಗ, ಅಂತಹ ಜಲಪ್ರದೇಶವು ಆವರಿಸಿರುವ ಭೂಭಾಗದಲ್ಲಿರುವ ಮರದ ತುದಿಗಳು ಮತ್ತು ಕಟ್ಟಡಗಳ ಮೇಲ್ಛಾವಾಣಿಗಳನ್ನು ಪರಿಗಣಿಸಲಾಗುತ್ತಿದೆ. ಹೊಸ ಸಂಶೋಧನಾ ವಿಧಾನದಲ್ಲಿ ಇಂತಹ ದೋಷಗಳನ್ನು ಸರಿಪಡಿಸಿಕೊಂಡು ಕೃತಕ ಬುದ್ದಿಮತ್ತೆ ಸಾಧನಗಳ ಮೂಲಕ ಸಮುದ್ರದ ಮೇಲ್ಮೈ ಉಬ್ಬರವನ್ನು ಸಂಶೋಧಕರು ಮಾಪನ ಮಾಡಿದ್ದಾರೆ. ಅದರ ಪ್ರಕಾರ 2050ರ ವೇಳೆಗೆ ಸಮುದ್ರತೀರ ಪ್ರದೇಶಗಳಲ್ಲಿ ನಾಸಾ ಊಹಿಸಿದ್ದಕ್ಕಿಂತಲೂ ಗಂಭೀರ ಉಬ್ಬರ ಸಂಭವಿಸಲಿದೆ.  ಇದು ಜಾಗತಿಕವಾಗಿ 300 ದಶಲಕ್ಷ ಜನರ ಮೇಲೆ ಪರಿಣಾಮ ಬೀರಬಹುದು. ಏಷ್ಯಾ ಭಾಗಗಳಲ್ಲಿ ಕರಾವಳಿ ಭಾಗಗವನ್ನು ಅತಿಕ್ರಮಿಸಿಕೊಂಡಿರುವವರ ಭೂಮಿಯನ್ನೂ ಸಹ ಇದು ಮುಳುಗಿಸಲಿದೆ. ಸುಮಾರು 150 ದಶಲಕ್ಷ ಜನರ ಮೇಲೆ ಪರಿಣಾಮ ಬೀರಲಿದೆ.

2015ರ ಪ್ಯಾರಿಸ್ ಒಪ್ಪಂದವನ್ನು ಉಲ್ಲಂಘಿಸಿ ಹೊರಸೂಸುತ್ತಿರುವ ಕಾರ್ಬನ್ ಡೈಆಕ್ಸೈಡ್ ಪ್ರಮಾಣದ ಆಧಾರದಲ್ಲಿ ಮತ್ತು ಹಿಮಗಡ್ಡೆಗಳ ತ್ವರಿತ ಕರಗುವಿಕೆಯಿಂದಾಗಿ ಸಮುದ್ರಮಟ್ಟ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದರಿಂದ ಸುಮಾರು 640 ದಶಲಕ್ಷ ಜನ ವಾಸಿಸುತ್ತಿರುವ ಕರಾವಳಿ ಭೂಭಾಗವು ಅಲೆಗಳ ಅಪಾಯಕಾರಿ ಉಬ್ಬರದ ಆತಂಕಕ್ಕೆ ಈಡಾಗಲಿವೆ. ಅದರಲ್ಲಿ 340 ದಶಲಕ್ಷ ಜನ ವಾಸಿಸುತ್ತಿರುವ ಭೂಪ್ರದೇಶವು 2100ರ ವೇಳೆಗೆ ಸರಾಸರಿ ಅಲೆಗಳ ಎತ್ತರಕ್ಕಿಂತಲೂ ತಗ್ಗಿನ ಪ್ರದೇಶವಾಗಿ ರೂಪಾಂತರವಾಗಲಿದೆ. ಇದರ ಅರ್ಥ ಏಷ್ಯಾದ ಎಂಟು ದೇಶಗಳಲ್ಲಿ ಅಪಾಯ ಹೆಚ್ಚಲಿದೆ. ಕನಿಷ್ಠ 10 ದಶಲಕ್ಷ ಜನ ವಾಸಿಸುವ ಭೂಮಿಗೆ ಹೋಲಿಸಿದರೆ ಉಬ್ಬರವಿಳಿತ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ವರದಿ ತಿಳಿಸಿದೆ.

ಜಾಗತಿಕ ಸರಾಸರಿ ಸಮುದ್ರಮಟ್ಟ, ಇಪ್ಪತ್ತನೇ ಶತಮಾನದಲ್ಲಿ 11-16 ಸೆಂ.ಮೀ ಹೆಚ್ಚಾಗಿದೆ. ಇಂಗಾಲದ ಹೊರಸೂಸುವಿಕೆಗೆ ತೀಕ್ಷ್ಣ ಮತ್ತು ತಕ್ಷಣದ ಕಡಿತವಿದ್ದರೂ ಸಹ, ಇದು ಈ ಶತಮಾನದಲ್ಲಿ 0.5 ಮೀ. ಆಗಿದೆ. ಆದರೆ ಹೆಚ್ಚಿನ ಇಂಗಾಲ ಹೊರಸೂಸುವಿಕೆಯ ಸನ್ನಿವೇಶಗಳಲ್ಲಿ, ಇಪ್ಪತ್ತೊಂದನೇ ಶತಮಾನದಲ್ಲಿ 2 ಮೀ.ನಷ್ಟು ಮೀರಿ ಹೋಗಲಿದೆ ಎಂದು ಅಧ್ಯಯನ ಎಚ್ಚರಿಸಿದೆ. ಹೊಸ ಅಂಕಿ ಅಂಶಗಳ ಪ್ರಕಾರ, 2050ರ ವೇಳೆಗೆ ಬಾಂಗ್ಲಾದೇಶ ಮತ್ತು ಚೀನಾದಲ್ಲಿ ಕ್ರಮವಾಗಿ ಕರಾವಳಿ ಪ್ರದೇಶದ 93 ಮತ್ತು 42 ಮಿಲಿಯನ್ ಜನರ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...