Homeಅಂತರಾಷ್ಟ್ರೀಯ2050ರ ವೇಳೆಗೆ ಮುಂಬೈ, ಕೋಲ್ಕತ್ತಾ ನಗರಗಳು ಸಮುದ್ರದೊಳಗೆ ಮುಳುಗಲಿವೆಯೇ? ಹೊಸ ವರದಿ ಬಿಚ್ಚಟ್ಟ ವಾಸ್ತವ....

2050ರ ವೇಳೆಗೆ ಮುಂಬೈ, ಕೋಲ್ಕತ್ತಾ ನಗರಗಳು ಸಮುದ್ರದೊಳಗೆ ಮುಳುಗಲಿವೆಯೇ? ಹೊಸ ವರದಿ ಬಿಚ್ಚಟ್ಟ ವಾಸ್ತವ….

- Advertisement -
- Advertisement -

ಪ್ರಾಕೃತಿಕ ವಿಕೋಪದಿಂದ ಭಾರತದ ಹಲವು ಪ್ರದೇಶಗಳು ಈಗಾಗಲೇ ತತ್ತರಿಸಿ ಹೋಗಿವೆ. ಚಂಡಮಾರುತ, ಮಳೆ, ಪ್ರವಾಹಕ್ಕೆ ತುತ್ತಾಗಿ ಭಾರಿ ಹಾನಿಯುಂಟಾಗಿದೆ. ಲಕ್ಷಾಂತರ ಜನ ಸಂತ್ರಸ್ತರಾಗಿದ್ದು, ಮನೆ-ಮಠ ಕಳೆದುಕೊಂಡಿದ್ದಾರೆ. ಹೀಗಿರುವಾಗ ಅಮೆರಿಕ ಮೂಲದ ಸಂಸ್ಥೆಯಿಂದ ಬಿಡುಗಡೆ ಮಾಡಿದ ವರದಿ ಜನರನ್ನು ಮತ್ತಷ್ಟು ಗಾಬರಿ ಬೀಳಿಸುವಂತಿದೆ.

ಅಮೆರಿಕ ಮೂಲದ ಹವಾಮಾನ ಕೇಂದ್ರ ಅಧ್ಯಯನ ಜರ್ನಲ್ ನಲ್ಲಿ ಪ್ರಕಟಗೊಂಡ ವರದಿ, ಭಾರತಕ್ಕೆ ಜಲದಿಗ್ಬಂಧನ ಉಂಟಾಗುವ ಸಾಧ್ಯತೆಗಳನ್ನು ಗಂಭೀರವಾಗಿ ಉಲ್ಲೇಖಿಸಿದೆ. 2050 ರ ವೇಳೆಗೆ ಕಡಲ್ಕೊರೆತ ಮತ್ತು ಸಮುದ್ರದ ಉಬ್ಬರ, ಉಕ್ಕುವಿಕೆ, ಕಾರ್ಬನ್ ಡೈಆಕ್ಸೈಡ್ ಪ್ರಮಾಣದ ಹೆಚ್ಚಳದಿಂದ ಕರಾವಳಿ ಭಾಗಗಳಾದ ಮುಂಬೈ, ನವೀ ಮುಂಬೈ, ಕೋಲ್ಕತ್ತಾ ನಗರಗಳು ಮುಳುಗಿ ಹೋಗಲಿವೆ. ಕಡಲ್ಕೊರೆತದ ಹೆಚ್ಚಳದಿಂದ ಈಗ 50 ಲಕ್ಷ ಜನ ಮಾತ್ರ ಸಂತ್ರಸ್ತರಾಗಿದ್ದಾರೆ. ಇದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳದಿದ್ದರೆ ಮೂರೂವರೆ ಕೋಟಿ ಜನ ಸಂಕಷ್ಟ ಅನುಭವಿಸಲಿದ್ದಾರೆ ಎಂದು ವರದಿ ಹೇಳಿದೆ.

ಯುಎಸ್ ಮೂಲದ ಹವಾಮಾನ ಸಂಶೋಧನೆ ಮತ್ತು ಸಂವಹನ ಸಂಸ್ಥೆ ಹವಾಮಾನ ಕೇಂದ್ರ, ನೂತನ ಡಿಜಿಟಲ್ ಎಲಿವೇಶನ್ ಮಾದರಿಯ ಸಮುದ್ರ ಉಬ್ಬರ ಮಾಪನವನ್ನು ಸಂಶೋಧನೆ ಮಾಡಿದೆ. ಈ ಮೂಲಕ ಸಂಶೋಧನೆ ನಡೆಸಿ, ಹವಾಮಾನ ಅಧ್ಯಯನ ಕೇಂದ್ರ ವರದಿ ಬಿಡುಗಡೆ ಮಾಡಿದೆ. ಇದರ ಪ್ರಕಾರ, ನೈಸರ್ಗಿಕ ಬದಲಾವಣೆ, ಕರಾವಳಿಯಲ್ಲಿ ಪ್ರವಾಹ, ಕಡಲ್ಕೊರೆತದಂತ ವಿಷಯಗಳನ್ನು ನಾಸಾದ ಎಸ್.ಆರ್.ಟಿ.ಎಂ ( ಶಟಲ್ ರಾಡಾರ್ ಟೋಪೋಗ್ರಫಿ ಮಿಷನ್ ) ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಅದೂ ಅಲ್ಲದೇ ಇವುಗಳಿಂದ ಆಗಬಹುದಾದ ಅನಾಹುತವನ್ನು ಇಲ್ಲಿಯವರೆಗೆ ಕಡಿಮೆ ಮಟ್ಟದಲ್ಲಿ ಊಹಿಸಿದೆ ಎಂದು ಉಲ್ಲೇಖಿಸಿದೆ.

ನಾಸಾ ಮಾದರಿಯಲ್ಲಿ  ಆಗಸಕ್ಕೆ ಹತ್ತಿರವಿರುವ ಸಮುದ್ರದ ಮೇಲ್ಮೆ ಉಬ್ಬರವನ್ನು ಅಳೆಯುವಾಗ, ಅಂತಹ ಜಲಪ್ರದೇಶವು ಆವರಿಸಿರುವ ಭೂಭಾಗದಲ್ಲಿರುವ ಮರದ ತುದಿಗಳು ಮತ್ತು ಕಟ್ಟಡಗಳ ಮೇಲ್ಛಾವಾಣಿಗಳನ್ನು ಪರಿಗಣಿಸಲಾಗುತ್ತಿದೆ. ಹೊಸ ಸಂಶೋಧನಾ ವಿಧಾನದಲ್ಲಿ ಇಂತಹ ದೋಷಗಳನ್ನು ಸರಿಪಡಿಸಿಕೊಂಡು ಕೃತಕ ಬುದ್ದಿಮತ್ತೆ ಸಾಧನಗಳ ಮೂಲಕ ಸಮುದ್ರದ ಮೇಲ್ಮೈ ಉಬ್ಬರವನ್ನು ಸಂಶೋಧಕರು ಮಾಪನ ಮಾಡಿದ್ದಾರೆ. ಅದರ ಪ್ರಕಾರ 2050ರ ವೇಳೆಗೆ ಸಮುದ್ರತೀರ ಪ್ರದೇಶಗಳಲ್ಲಿ ನಾಸಾ ಊಹಿಸಿದ್ದಕ್ಕಿಂತಲೂ ಗಂಭೀರ ಉಬ್ಬರ ಸಂಭವಿಸಲಿದೆ.  ಇದು ಜಾಗತಿಕವಾಗಿ 300 ದಶಲಕ್ಷ ಜನರ ಮೇಲೆ ಪರಿಣಾಮ ಬೀರಬಹುದು. ಏಷ್ಯಾ ಭಾಗಗಳಲ್ಲಿ ಕರಾವಳಿ ಭಾಗಗವನ್ನು ಅತಿಕ್ರಮಿಸಿಕೊಂಡಿರುವವರ ಭೂಮಿಯನ್ನೂ ಸಹ ಇದು ಮುಳುಗಿಸಲಿದೆ. ಸುಮಾರು 150 ದಶಲಕ್ಷ ಜನರ ಮೇಲೆ ಪರಿಣಾಮ ಬೀರಲಿದೆ.

2015ರ ಪ್ಯಾರಿಸ್ ಒಪ್ಪಂದವನ್ನು ಉಲ್ಲಂಘಿಸಿ ಹೊರಸೂಸುತ್ತಿರುವ ಕಾರ್ಬನ್ ಡೈಆಕ್ಸೈಡ್ ಪ್ರಮಾಣದ ಆಧಾರದಲ್ಲಿ ಮತ್ತು ಹಿಮಗಡ್ಡೆಗಳ ತ್ವರಿತ ಕರಗುವಿಕೆಯಿಂದಾಗಿ ಸಮುದ್ರಮಟ್ಟ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದರಿಂದ ಸುಮಾರು 640 ದಶಲಕ್ಷ ಜನ ವಾಸಿಸುತ್ತಿರುವ ಕರಾವಳಿ ಭೂಭಾಗವು ಅಲೆಗಳ ಅಪಾಯಕಾರಿ ಉಬ್ಬರದ ಆತಂಕಕ್ಕೆ ಈಡಾಗಲಿವೆ. ಅದರಲ್ಲಿ 340 ದಶಲಕ್ಷ ಜನ ವಾಸಿಸುತ್ತಿರುವ ಭೂಪ್ರದೇಶವು 2100ರ ವೇಳೆಗೆ ಸರಾಸರಿ ಅಲೆಗಳ ಎತ್ತರಕ್ಕಿಂತಲೂ ತಗ್ಗಿನ ಪ್ರದೇಶವಾಗಿ ರೂಪಾಂತರವಾಗಲಿದೆ. ಇದರ ಅರ್ಥ ಏಷ್ಯಾದ ಎಂಟು ದೇಶಗಳಲ್ಲಿ ಅಪಾಯ ಹೆಚ್ಚಲಿದೆ. ಕನಿಷ್ಠ 10 ದಶಲಕ್ಷ ಜನ ವಾಸಿಸುವ ಭೂಮಿಗೆ ಹೋಲಿಸಿದರೆ ಉಬ್ಬರವಿಳಿತ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ವರದಿ ತಿಳಿಸಿದೆ.

ಜಾಗತಿಕ ಸರಾಸರಿ ಸಮುದ್ರಮಟ್ಟ, ಇಪ್ಪತ್ತನೇ ಶತಮಾನದಲ್ಲಿ 11-16 ಸೆಂ.ಮೀ ಹೆಚ್ಚಾಗಿದೆ. ಇಂಗಾಲದ ಹೊರಸೂಸುವಿಕೆಗೆ ತೀಕ್ಷ್ಣ ಮತ್ತು ತಕ್ಷಣದ ಕಡಿತವಿದ್ದರೂ ಸಹ, ಇದು ಈ ಶತಮಾನದಲ್ಲಿ 0.5 ಮೀ. ಆಗಿದೆ. ಆದರೆ ಹೆಚ್ಚಿನ ಇಂಗಾಲ ಹೊರಸೂಸುವಿಕೆಯ ಸನ್ನಿವೇಶಗಳಲ್ಲಿ, ಇಪ್ಪತ್ತೊಂದನೇ ಶತಮಾನದಲ್ಲಿ 2 ಮೀ.ನಷ್ಟು ಮೀರಿ ಹೋಗಲಿದೆ ಎಂದು ಅಧ್ಯಯನ ಎಚ್ಚರಿಸಿದೆ. ಹೊಸ ಅಂಕಿ ಅಂಶಗಳ ಪ್ರಕಾರ, 2050ರ ವೇಳೆಗೆ ಬಾಂಗ್ಲಾದೇಶ ಮತ್ತು ಚೀನಾದಲ್ಲಿ ಕ್ರಮವಾಗಿ ಕರಾವಳಿ ಪ್ರದೇಶದ 93 ಮತ್ತು 42 ಮಿಲಿಯನ್ ಜನರ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...