Homeಮುಖಪುಟಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನ ಮೆಚ್ಚಿಕೊಂಡಿದ್ದಾರೆ: ರಾಕೇಶ್ ಟಿಕಾಯತ್

ಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನ ಮೆಚ್ಚಿಕೊಂಡಿದ್ದಾರೆ: ರಾಕೇಶ್ ಟಿಕಾಯತ್

- Advertisement -
- Advertisement -

ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವಂತೆ ಮತ್ತು ಎಂಎಸ್‌ಪಿಗಾಗಿ ಕಾನೂನು ತರಲು ದೆಹಲಿಯಲ್ಲಿ ಒಂದು ದೊಡ್ಡ ಆಂದೋಲನ ನಡೆಯುತ್ತಿದೆ. ದೆಹಲಿಯನ್ನು ನಾಲ್ಕು ದಿಕ್ಕೂಗಳಿಂದ ರೈತರು ಸುತ್ತುವರೆದಿದ್ದಾರೆ. ಸರ್ಕಾರದೊಂದಿಗೆ 12 ಸುತ್ತಿನ ಮಾತುಕತೆಗಳು ನಡೆದಿವೆ. ಜನಪರ ಸರ್ಕಾರವಾಗಿದ್ದರೆ ರೈತರ ಸಮಸ್ಯೆಯನ್ನು ಬಗೆಹರಿಸುತ್ತಿತ್ತು. ಆದರೆ ಇದು ಬಂಡವಾಳಶಾಹಿಪರ ಸರ್ಕಾರವಾಗಿದೆ. ಎರಡು ತಿಂಗಳಿನಿಂದ ಸರ್ಕಾರ ಮಾತುಕತೆ ಸ್ಥಗಿತಗೊಳಿಸಿದೆ. ಆದರೆ ಜನ ಎಚ್ಚೆತ್ತುಕೊಂಡಿದ್ದಾರೆ. ನಮ್ಮ ಹೋರಾಟಕ್ಕೆ ಬೆಂಬಲ ಸೂಚಿಸಿ, ಮುನ್ನಡೆಯಲು ಸಹಕರಿಸುತ್ತಿದ್ದಾರೆ, ಇದು ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದರು.

ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸೌಧ ಚಲೋ ರ್‍ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, 26 ಸಾರ್ವಜನಿಕ ಕಂಪನಿಗಳನ್ನು ಖಾಸಗೀಕರಣ ಮಾಡಲು ಸರ್ಕಾರ ಯತ್ನಿಸುತ್ತಿದೆ. ರೈಲ್ವೇ, ಏರ್‌ಪೋರ್ಟ್, ದೊಡ್ಡ ತೈಲ ಕಂಪನಿಗಳು, ಎಲ್‌ಐಸಿಯಂತಹ ದೊಡ್ಡ ಸಾರ್ವಜನಿಕ ಸಂಸ್ಥೆಗಳು ಮಾರಾಟವಾಗುತ್ತಿವೆ. ಆದರೆ ಜನರನ್ನು ಮಂದಿರದ ಸುತ್ತ ಸುತ್ತಿಸಲಾಗುತ್ತಿದೆ. ಜಾತಿ ಧರ್ಮ ವಿಷಯದಲ್ಲಿ ಹೊಡೆದಾಡುವಂತೆ ಮಾಡಲಾಗುತ್ತಿದೆ. ಇದನ್ನು ಪ್ರಶ್ನಿಸಬಾರದಂತೆ ಜನರನ್ನು ಕಟ್ಟಿಹಾಕಲಾಗುತ್ತಿದೆ ಎಂದು ಅವರು ವಿಷಾಧ ವ್ಯಕ್ತಪಡಿಸಿದರು.

ಇಂದು ಮಣ್ಣಿನ ಮತ್ತು ಆಹಾರದ ವ್ಯಾಪಾರಕ್ಕೆ ದೊಡ್ಡ ಬಂಡವಾಳಶಾಹಿಗಳು ಮುಂದಾಗಿದ್ದಾರೆ. ದಿನನಿತ್ಯದ ಹಸಿವಿನ ವ್ಯಾಪಾರಕ್ಕಿಳಿದಿದ್ದಾರೆ. ಎಷ್ಟು ಜನ ಹಸಿದುಕೊಂಡಿದ್ದಾರೆ, ಹಸಿವಿನ ಪ್ರಮಾಣವೆಷ್ಟು ಎಂಬುದರ ಆಧಾರದಲ್ಲಿ ಅವರು ಆಹಾರದ ದರಗಳನ್ನು ನಿಗಧಿಮಾಡುತ್ತಿದ್ದಾರೆ. ಇಂದು ನೀವು ಮ್ಯಾಕ್‌ಡೋನಾಲ್ಡ್, ಕೆಎಫ್‌ಸಿ ಯಂತಹ ಹೋಟೆಲ್‌ಗಳನ್ನು ನೋಡಿರಬಹುದು. ಅವು ಆಹಾರವನ್ನು ಪ್ಯಾಕ್ ಮಾಡಿ ಮಾರುತ್ತವೆ. ಆಹಾರ ಉಳಿದುಕೊಂಡರೆ ಅಂದೇ ಅದನ್ನು ಕಸದ ಬುಟ್ಟಿಗೆ ಹಾಕುತ್ತಾರೆ. ಅದನ್ನು ನಿಮ್ಮದೇ ಕಂಪನಿಯ ಕಾರ್ಮಿಕರೇಕೆ ಕೊಡುವುದಿಲ್ಲ ಎಂದು ನಾನು ಕೇಳಿದರೆ ಅವರ ಬಳಿ ಉತ್ತರವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಯುವಜನರಿಂದ ಉದ್ಯೋಗಗಳನ್ನು ಕಿತ್ತುಕೊಳ್ಳಲಾಗುತ್ತಿದೆ. ಶಾಸಕರು, ಸಂಸದರಿಗೆ ಎರಡು ಮೂರು ರೀತಿಯ ಪಿಂಚಣಿಗಳನ್ನು ಕೊಡಲಾಗುತ್ತಿದೆ. ಆದರೆ ದೇಶ ಕಟ್ಟುತ್ತಿರುವ ಸಾಮಾನ್ಯ ಕಾರ್ಮಿಕರಿಗೆ-ನೌಕರರಿಗೆ, ದೇಶಕಾಯುತ್ತಿರುವ ಸೈನಿಕರಿಗೆ ಮಾತ್ರ ಪಿಂಚಣಿ ಕೊಡುತ್ತಿಲ್ಲ. ಎಲ್‌ಪಿಜಿ ಸಬ್ಸಿಡಿ ಬಿಡಿ ಎಂದು ಸರ್ಕಾರ ಹೇಳುತ್ತಿದೆ. ಆದರೆ ನಾವು ಶಾಸಕರು, ಸಂಸದರಿಗೆ ಪಿಂಚಣಿ ಬಿಡಿ ಎಂದು ನಾವು ಕೇಳಬೇಕು ಎಂದರು.

ನಮ್ಮೊಂದಿಗೆ ಸಂಪರ್ಕದಲ್ಲಿರುವ ಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನವನ್ನು ಮೆಚ್ಚಿಕೊಂಡಿದ್ದಾರೆ. ಅದನ್ನು ಮುಂದುವರೆಸಿ ಎಂದು ಹಾರೈಸಿದ್ದಾರೆ. ಸದನದ ಒಳಗೆ ವಿರೋಧ ಪಕ್ಷಗಳ ದನಿ ಕ್ಷೀಣಿಸುತ್ತಿರುವಾಗ ನಾವು ದೇಶದ ಎಲ್ಲಾ ಮೂಲೆಗಳಲ್ಲಿ ರೈತ ಆಂದೋಲನವನ್ನು ಹುಟ್ಟುಹಾಕಬೇಕಾಗಿದೆ ಎಂದರು.

ಟ್ರ್ಯಾಕ್ಟರ್ ಎಂಬುದು ರೈತನ ಅವಿಭಾಜ್ಯ ಅಂಗವಾಗಿದೆ. ಅದು ಎಲ್ಲಾ ಕಷ್ಟಗಳನ್ನು ಬದಿಗೊತ್ತಿ ರೈತನಿಗೆ ಅವರ ಸ್ವಂತ ದಾರಿ ಮಾಡಿಕೊಡುತ್ತದೆ. ಟ್ರ್ಯಾಕ್ಟರ್‌ಗಳಿಲ್ಲದಿದ್ದರೆ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ರೈತರು ದೆಹಲಿ ತಲುಪುವುದು ಕಷ್ಟವಾಗುತ್ತಿತ್ತು. ಈಗ ಹತ್ತು ವರ್ಷ ಹಳೆಯದಾಗಿರುವ ಟ್ರ್ಯಾಕ್ಟರ್‌ಗಳನ್ನು ಬಳಸಬಾರದು ಎಂದು ಸರ್ಕಾರ ಹೊಸ ಕಾನೂನು ತರಲು ಹೊರಟಿದೆ. ರೈತರು ಹತ್ತು ವರ್ಷಕ್ಕೊಮ್ಮೆ ಹೊಸ ಟ್ರ್ಯಾಕ್ಟರ್ ಖರೀದಿಸಲು ಸಮರ್ಥರಾಗಿದ್ದಾರೆಯೇ? ಬೀಜ ಕಾಯ್ದೆ ತಂದು ರೈತರ ಸ್ವಾಯುತ್ತತ್ತೆ ಕಸಿದುಕೊಳ್ಳಲಾಗುತ್ತಿದೆ. ಅದೇ ಸಮಯದಲ್ಲಿ ವಿದ್ಯುತ್ ತಿದ್ದುಪಡಿ ಕಾಯ್ದೆಯ ಮೂಲಕ ರೈತರಿಗೆ ಸಮರ್ಪಕ ವಿದ್ಯುತ್ ನೀಡದೆ ದುಪ್ಪಟ್ಟು ಹಣ ವಸೂಲಿ ಮಾಡಲಾಗುತ್ತದೆ. ಇದೆಲ್ಲವೂ ರೈತರನ್ನು ಕೃಷಿಯಿಂದ ಒಕ್ಕಲೆಬ್ಬಿಸಿ ದೊಡ್ಡ ಬಂಡವಾಳಶಾಹಿಗಳು ಕೃಷಿಯ್ನು ವಶಪಡಿಸಿಕೊಳ್ಳಲು ಮಾಡುತ್ತಿರುವ ಹುನ್ನಾರ ಎಂದು ರಾಕೇಶ್ ಟಿಕಾಯತ್ ಆತಂಕ ವ್ಯಕ್ತಪಡಿಸಿದರು.

ರೈತರ ಬೆಳೆಗಳನ್ನು ಮಾರಲು ಎಪಿಎಂಸಿ ಬೇಕಾಗಿಲ್ಲ ಎಲ್ಲಿ ಬೇಕಾದರೂ ಮಾರಬಹುದು ಎಂದು ಸರ್ಕಾರ ಹೇಳುತ್ತಿದೆ. ಹಾಗಾಗಿ ನೀವು ಬೆಳೆದ ಬೆಳೆಯನ್ನು ವಿಧಾನಸೌಧಕ್ಕೆ ತಂದು ಮಾರಬೇಕು. ಯಾರಾದರೂ ತಡೆದರೆ ನೀವು ಸರ್ಕಾರವನ್ನು ಪ್ರಶ್ನಿಸಿ ಎಂದು ಹೇಳಬೇಕು ಎಂದರು.

ಸರ್ಕಾರದ ವತಿಯಿಂದ ಕೃಷಿ ಸಚಿವರಾದ ಬಿ.ಸಿ ಪಾಟೀಲ್‌ರವರು ರೈತರ ಹಕ್ಕೊತ್ತಾಯ ಪತ್ರ ಪಡೆದರು. ಇಂದಿನ ಹೋರಾಟದಲ್ಲಿ ದೆಹಲಿಯ ರೈತ ಹೋರಾಟ ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ ಡಾ.ದರ್ಶನ್ ಪಾಲ್, ಬಿಕೆಯು ಪ್ರಧಾನ ಕಾರ್ಯದರ್ಶಿ ಯುಧುವೀರ್ ಸಿಂಗ್, ಕುಲ್‌ಬೀರ್‌ ಸಿಂಗ್, ರಾಜ್ಯದ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ನಟ ಚೇತನ್ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...