Homeಮುಖಪುಟಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನ ಮೆಚ್ಚಿಕೊಂಡಿದ್ದಾರೆ: ರಾಕೇಶ್ ಟಿಕಾಯತ್

ಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನ ಮೆಚ್ಚಿಕೊಂಡಿದ್ದಾರೆ: ರಾಕೇಶ್ ಟಿಕಾಯತ್

- Advertisement -
- Advertisement -

ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವಂತೆ ಮತ್ತು ಎಂಎಸ್‌ಪಿಗಾಗಿ ಕಾನೂನು ತರಲು ದೆಹಲಿಯಲ್ಲಿ ಒಂದು ದೊಡ್ಡ ಆಂದೋಲನ ನಡೆಯುತ್ತಿದೆ. ದೆಹಲಿಯನ್ನು ನಾಲ್ಕು ದಿಕ್ಕೂಗಳಿಂದ ರೈತರು ಸುತ್ತುವರೆದಿದ್ದಾರೆ. ಸರ್ಕಾರದೊಂದಿಗೆ 12 ಸುತ್ತಿನ ಮಾತುಕತೆಗಳು ನಡೆದಿವೆ. ಜನಪರ ಸರ್ಕಾರವಾಗಿದ್ದರೆ ರೈತರ ಸಮಸ್ಯೆಯನ್ನು ಬಗೆಹರಿಸುತ್ತಿತ್ತು. ಆದರೆ ಇದು ಬಂಡವಾಳಶಾಹಿಪರ ಸರ್ಕಾರವಾಗಿದೆ. ಎರಡು ತಿಂಗಳಿನಿಂದ ಸರ್ಕಾರ ಮಾತುಕತೆ ಸ್ಥಗಿತಗೊಳಿಸಿದೆ. ಆದರೆ ಜನ ಎಚ್ಚೆತ್ತುಕೊಂಡಿದ್ದಾರೆ. ನಮ್ಮ ಹೋರಾಟಕ್ಕೆ ಬೆಂಬಲ ಸೂಚಿಸಿ, ಮುನ್ನಡೆಯಲು ಸಹಕರಿಸುತ್ತಿದ್ದಾರೆ, ಇದು ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದರು.

ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸೌಧ ಚಲೋ ರ್‍ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, 26 ಸಾರ್ವಜನಿಕ ಕಂಪನಿಗಳನ್ನು ಖಾಸಗೀಕರಣ ಮಾಡಲು ಸರ್ಕಾರ ಯತ್ನಿಸುತ್ತಿದೆ. ರೈಲ್ವೇ, ಏರ್‌ಪೋರ್ಟ್, ದೊಡ್ಡ ತೈಲ ಕಂಪನಿಗಳು, ಎಲ್‌ಐಸಿಯಂತಹ ದೊಡ್ಡ ಸಾರ್ವಜನಿಕ ಸಂಸ್ಥೆಗಳು ಮಾರಾಟವಾಗುತ್ತಿವೆ. ಆದರೆ ಜನರನ್ನು ಮಂದಿರದ ಸುತ್ತ ಸುತ್ತಿಸಲಾಗುತ್ತಿದೆ. ಜಾತಿ ಧರ್ಮ ವಿಷಯದಲ್ಲಿ ಹೊಡೆದಾಡುವಂತೆ ಮಾಡಲಾಗುತ್ತಿದೆ. ಇದನ್ನು ಪ್ರಶ್ನಿಸಬಾರದಂತೆ ಜನರನ್ನು ಕಟ್ಟಿಹಾಕಲಾಗುತ್ತಿದೆ ಎಂದು ಅವರು ವಿಷಾಧ ವ್ಯಕ್ತಪಡಿಸಿದರು.

ಇಂದು ಮಣ್ಣಿನ ಮತ್ತು ಆಹಾರದ ವ್ಯಾಪಾರಕ್ಕೆ ದೊಡ್ಡ ಬಂಡವಾಳಶಾಹಿಗಳು ಮುಂದಾಗಿದ್ದಾರೆ. ದಿನನಿತ್ಯದ ಹಸಿವಿನ ವ್ಯಾಪಾರಕ್ಕಿಳಿದಿದ್ದಾರೆ. ಎಷ್ಟು ಜನ ಹಸಿದುಕೊಂಡಿದ್ದಾರೆ, ಹಸಿವಿನ ಪ್ರಮಾಣವೆಷ್ಟು ಎಂಬುದರ ಆಧಾರದಲ್ಲಿ ಅವರು ಆಹಾರದ ದರಗಳನ್ನು ನಿಗಧಿಮಾಡುತ್ತಿದ್ದಾರೆ. ಇಂದು ನೀವು ಮ್ಯಾಕ್‌ಡೋನಾಲ್ಡ್, ಕೆಎಫ್‌ಸಿ ಯಂತಹ ಹೋಟೆಲ್‌ಗಳನ್ನು ನೋಡಿರಬಹುದು. ಅವು ಆಹಾರವನ್ನು ಪ್ಯಾಕ್ ಮಾಡಿ ಮಾರುತ್ತವೆ. ಆಹಾರ ಉಳಿದುಕೊಂಡರೆ ಅಂದೇ ಅದನ್ನು ಕಸದ ಬುಟ್ಟಿಗೆ ಹಾಕುತ್ತಾರೆ. ಅದನ್ನು ನಿಮ್ಮದೇ ಕಂಪನಿಯ ಕಾರ್ಮಿಕರೇಕೆ ಕೊಡುವುದಿಲ್ಲ ಎಂದು ನಾನು ಕೇಳಿದರೆ ಅವರ ಬಳಿ ಉತ್ತರವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಯುವಜನರಿಂದ ಉದ್ಯೋಗಗಳನ್ನು ಕಿತ್ತುಕೊಳ್ಳಲಾಗುತ್ತಿದೆ. ಶಾಸಕರು, ಸಂಸದರಿಗೆ ಎರಡು ಮೂರು ರೀತಿಯ ಪಿಂಚಣಿಗಳನ್ನು ಕೊಡಲಾಗುತ್ತಿದೆ. ಆದರೆ ದೇಶ ಕಟ್ಟುತ್ತಿರುವ ಸಾಮಾನ್ಯ ಕಾರ್ಮಿಕರಿಗೆ-ನೌಕರರಿಗೆ, ದೇಶಕಾಯುತ್ತಿರುವ ಸೈನಿಕರಿಗೆ ಮಾತ್ರ ಪಿಂಚಣಿ ಕೊಡುತ್ತಿಲ್ಲ. ಎಲ್‌ಪಿಜಿ ಸಬ್ಸಿಡಿ ಬಿಡಿ ಎಂದು ಸರ್ಕಾರ ಹೇಳುತ್ತಿದೆ. ಆದರೆ ನಾವು ಶಾಸಕರು, ಸಂಸದರಿಗೆ ಪಿಂಚಣಿ ಬಿಡಿ ಎಂದು ನಾವು ಕೇಳಬೇಕು ಎಂದರು.

ನಮ್ಮೊಂದಿಗೆ ಸಂಪರ್ಕದಲ್ಲಿರುವ ಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನವನ್ನು ಮೆಚ್ಚಿಕೊಂಡಿದ್ದಾರೆ. ಅದನ್ನು ಮುಂದುವರೆಸಿ ಎಂದು ಹಾರೈಸಿದ್ದಾರೆ. ಸದನದ ಒಳಗೆ ವಿರೋಧ ಪಕ್ಷಗಳ ದನಿ ಕ್ಷೀಣಿಸುತ್ತಿರುವಾಗ ನಾವು ದೇಶದ ಎಲ್ಲಾ ಮೂಲೆಗಳಲ್ಲಿ ರೈತ ಆಂದೋಲನವನ್ನು ಹುಟ್ಟುಹಾಕಬೇಕಾಗಿದೆ ಎಂದರು.

ಟ್ರ್ಯಾಕ್ಟರ್ ಎಂಬುದು ರೈತನ ಅವಿಭಾಜ್ಯ ಅಂಗವಾಗಿದೆ. ಅದು ಎಲ್ಲಾ ಕಷ್ಟಗಳನ್ನು ಬದಿಗೊತ್ತಿ ರೈತನಿಗೆ ಅವರ ಸ್ವಂತ ದಾರಿ ಮಾಡಿಕೊಡುತ್ತದೆ. ಟ್ರ್ಯಾಕ್ಟರ್‌ಗಳಿಲ್ಲದಿದ್ದರೆ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ರೈತರು ದೆಹಲಿ ತಲುಪುವುದು ಕಷ್ಟವಾಗುತ್ತಿತ್ತು. ಈಗ ಹತ್ತು ವರ್ಷ ಹಳೆಯದಾಗಿರುವ ಟ್ರ್ಯಾಕ್ಟರ್‌ಗಳನ್ನು ಬಳಸಬಾರದು ಎಂದು ಸರ್ಕಾರ ಹೊಸ ಕಾನೂನು ತರಲು ಹೊರಟಿದೆ. ರೈತರು ಹತ್ತು ವರ್ಷಕ್ಕೊಮ್ಮೆ ಹೊಸ ಟ್ರ್ಯಾಕ್ಟರ್ ಖರೀದಿಸಲು ಸಮರ್ಥರಾಗಿದ್ದಾರೆಯೇ? ಬೀಜ ಕಾಯ್ದೆ ತಂದು ರೈತರ ಸ್ವಾಯುತ್ತತ್ತೆ ಕಸಿದುಕೊಳ್ಳಲಾಗುತ್ತಿದೆ. ಅದೇ ಸಮಯದಲ್ಲಿ ವಿದ್ಯುತ್ ತಿದ್ದುಪಡಿ ಕಾಯ್ದೆಯ ಮೂಲಕ ರೈತರಿಗೆ ಸಮರ್ಪಕ ವಿದ್ಯುತ್ ನೀಡದೆ ದುಪ್ಪಟ್ಟು ಹಣ ವಸೂಲಿ ಮಾಡಲಾಗುತ್ತದೆ. ಇದೆಲ್ಲವೂ ರೈತರನ್ನು ಕೃಷಿಯಿಂದ ಒಕ್ಕಲೆಬ್ಬಿಸಿ ದೊಡ್ಡ ಬಂಡವಾಳಶಾಹಿಗಳು ಕೃಷಿಯ್ನು ವಶಪಡಿಸಿಕೊಳ್ಳಲು ಮಾಡುತ್ತಿರುವ ಹುನ್ನಾರ ಎಂದು ರಾಕೇಶ್ ಟಿಕಾಯತ್ ಆತಂಕ ವ್ಯಕ್ತಪಡಿಸಿದರು.

ರೈತರ ಬೆಳೆಗಳನ್ನು ಮಾರಲು ಎಪಿಎಂಸಿ ಬೇಕಾಗಿಲ್ಲ ಎಲ್ಲಿ ಬೇಕಾದರೂ ಮಾರಬಹುದು ಎಂದು ಸರ್ಕಾರ ಹೇಳುತ್ತಿದೆ. ಹಾಗಾಗಿ ನೀವು ಬೆಳೆದ ಬೆಳೆಯನ್ನು ವಿಧಾನಸೌಧಕ್ಕೆ ತಂದು ಮಾರಬೇಕು. ಯಾರಾದರೂ ತಡೆದರೆ ನೀವು ಸರ್ಕಾರವನ್ನು ಪ್ರಶ್ನಿಸಿ ಎಂದು ಹೇಳಬೇಕು ಎಂದರು.

ಸರ್ಕಾರದ ವತಿಯಿಂದ ಕೃಷಿ ಸಚಿವರಾದ ಬಿ.ಸಿ ಪಾಟೀಲ್‌ರವರು ರೈತರ ಹಕ್ಕೊತ್ತಾಯ ಪತ್ರ ಪಡೆದರು. ಇಂದಿನ ಹೋರಾಟದಲ್ಲಿ ದೆಹಲಿಯ ರೈತ ಹೋರಾಟ ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ ಡಾ.ದರ್ಶನ್ ಪಾಲ್, ಬಿಕೆಯು ಪ್ರಧಾನ ಕಾರ್ಯದರ್ಶಿ ಯುಧುವೀರ್ ಸಿಂಗ್, ಕುಲ್‌ಬೀರ್‌ ಸಿಂಗ್, ರಾಜ್ಯದ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ನಟ ಚೇತನ್ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...