Homeಮುಖಪುಟಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನ ಮೆಚ್ಚಿಕೊಂಡಿದ್ದಾರೆ: ರಾಕೇಶ್ ಟಿಕಾಯತ್

ಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನ ಮೆಚ್ಚಿಕೊಂಡಿದ್ದಾರೆ: ರಾಕೇಶ್ ಟಿಕಾಯತ್

- Advertisement -
- Advertisement -

ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವಂತೆ ಮತ್ತು ಎಂಎಸ್‌ಪಿಗಾಗಿ ಕಾನೂನು ತರಲು ದೆಹಲಿಯಲ್ಲಿ ಒಂದು ದೊಡ್ಡ ಆಂದೋಲನ ನಡೆಯುತ್ತಿದೆ. ದೆಹಲಿಯನ್ನು ನಾಲ್ಕು ದಿಕ್ಕೂಗಳಿಂದ ರೈತರು ಸುತ್ತುವರೆದಿದ್ದಾರೆ. ಸರ್ಕಾರದೊಂದಿಗೆ 12 ಸುತ್ತಿನ ಮಾತುಕತೆಗಳು ನಡೆದಿವೆ. ಜನಪರ ಸರ್ಕಾರವಾಗಿದ್ದರೆ ರೈತರ ಸಮಸ್ಯೆಯನ್ನು ಬಗೆಹರಿಸುತ್ತಿತ್ತು. ಆದರೆ ಇದು ಬಂಡವಾಳಶಾಹಿಪರ ಸರ್ಕಾರವಾಗಿದೆ. ಎರಡು ತಿಂಗಳಿನಿಂದ ಸರ್ಕಾರ ಮಾತುಕತೆ ಸ್ಥಗಿತಗೊಳಿಸಿದೆ. ಆದರೆ ಜನ ಎಚ್ಚೆತ್ತುಕೊಂಡಿದ್ದಾರೆ. ನಮ್ಮ ಹೋರಾಟಕ್ಕೆ ಬೆಂಬಲ ಸೂಚಿಸಿ, ಮುನ್ನಡೆಯಲು ಸಹಕರಿಸುತ್ತಿದ್ದಾರೆ, ಇದು ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದರು.

ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸೌಧ ಚಲೋ ರ್‍ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, 26 ಸಾರ್ವಜನಿಕ ಕಂಪನಿಗಳನ್ನು ಖಾಸಗೀಕರಣ ಮಾಡಲು ಸರ್ಕಾರ ಯತ್ನಿಸುತ್ತಿದೆ. ರೈಲ್ವೇ, ಏರ್‌ಪೋರ್ಟ್, ದೊಡ್ಡ ತೈಲ ಕಂಪನಿಗಳು, ಎಲ್‌ಐಸಿಯಂತಹ ದೊಡ್ಡ ಸಾರ್ವಜನಿಕ ಸಂಸ್ಥೆಗಳು ಮಾರಾಟವಾಗುತ್ತಿವೆ. ಆದರೆ ಜನರನ್ನು ಮಂದಿರದ ಸುತ್ತ ಸುತ್ತಿಸಲಾಗುತ್ತಿದೆ. ಜಾತಿ ಧರ್ಮ ವಿಷಯದಲ್ಲಿ ಹೊಡೆದಾಡುವಂತೆ ಮಾಡಲಾಗುತ್ತಿದೆ. ಇದನ್ನು ಪ್ರಶ್ನಿಸಬಾರದಂತೆ ಜನರನ್ನು ಕಟ್ಟಿಹಾಕಲಾಗುತ್ತಿದೆ ಎಂದು ಅವರು ವಿಷಾಧ ವ್ಯಕ್ತಪಡಿಸಿದರು.

ಇಂದು ಮಣ್ಣಿನ ಮತ್ತು ಆಹಾರದ ವ್ಯಾಪಾರಕ್ಕೆ ದೊಡ್ಡ ಬಂಡವಾಳಶಾಹಿಗಳು ಮುಂದಾಗಿದ್ದಾರೆ. ದಿನನಿತ್ಯದ ಹಸಿವಿನ ವ್ಯಾಪಾರಕ್ಕಿಳಿದಿದ್ದಾರೆ. ಎಷ್ಟು ಜನ ಹಸಿದುಕೊಂಡಿದ್ದಾರೆ, ಹಸಿವಿನ ಪ್ರಮಾಣವೆಷ್ಟು ಎಂಬುದರ ಆಧಾರದಲ್ಲಿ ಅವರು ಆಹಾರದ ದರಗಳನ್ನು ನಿಗಧಿಮಾಡುತ್ತಿದ್ದಾರೆ. ಇಂದು ನೀವು ಮ್ಯಾಕ್‌ಡೋನಾಲ್ಡ್, ಕೆಎಫ್‌ಸಿ ಯಂತಹ ಹೋಟೆಲ್‌ಗಳನ್ನು ನೋಡಿರಬಹುದು. ಅವು ಆಹಾರವನ್ನು ಪ್ಯಾಕ್ ಮಾಡಿ ಮಾರುತ್ತವೆ. ಆಹಾರ ಉಳಿದುಕೊಂಡರೆ ಅಂದೇ ಅದನ್ನು ಕಸದ ಬುಟ್ಟಿಗೆ ಹಾಕುತ್ತಾರೆ. ಅದನ್ನು ನಿಮ್ಮದೇ ಕಂಪನಿಯ ಕಾರ್ಮಿಕರೇಕೆ ಕೊಡುವುದಿಲ್ಲ ಎಂದು ನಾನು ಕೇಳಿದರೆ ಅವರ ಬಳಿ ಉತ್ತರವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಯುವಜನರಿಂದ ಉದ್ಯೋಗಗಳನ್ನು ಕಿತ್ತುಕೊಳ್ಳಲಾಗುತ್ತಿದೆ. ಶಾಸಕರು, ಸಂಸದರಿಗೆ ಎರಡು ಮೂರು ರೀತಿಯ ಪಿಂಚಣಿಗಳನ್ನು ಕೊಡಲಾಗುತ್ತಿದೆ. ಆದರೆ ದೇಶ ಕಟ್ಟುತ್ತಿರುವ ಸಾಮಾನ್ಯ ಕಾರ್ಮಿಕರಿಗೆ-ನೌಕರರಿಗೆ, ದೇಶಕಾಯುತ್ತಿರುವ ಸೈನಿಕರಿಗೆ ಮಾತ್ರ ಪಿಂಚಣಿ ಕೊಡುತ್ತಿಲ್ಲ. ಎಲ್‌ಪಿಜಿ ಸಬ್ಸಿಡಿ ಬಿಡಿ ಎಂದು ಸರ್ಕಾರ ಹೇಳುತ್ತಿದೆ. ಆದರೆ ನಾವು ಶಾಸಕರು, ಸಂಸದರಿಗೆ ಪಿಂಚಣಿ ಬಿಡಿ ಎಂದು ನಾವು ಕೇಳಬೇಕು ಎಂದರು.

ನಮ್ಮೊಂದಿಗೆ ಸಂಪರ್ಕದಲ್ಲಿರುವ ಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನವನ್ನು ಮೆಚ್ಚಿಕೊಂಡಿದ್ದಾರೆ. ಅದನ್ನು ಮುಂದುವರೆಸಿ ಎಂದು ಹಾರೈಸಿದ್ದಾರೆ. ಸದನದ ಒಳಗೆ ವಿರೋಧ ಪಕ್ಷಗಳ ದನಿ ಕ್ಷೀಣಿಸುತ್ತಿರುವಾಗ ನಾವು ದೇಶದ ಎಲ್ಲಾ ಮೂಲೆಗಳಲ್ಲಿ ರೈತ ಆಂದೋಲನವನ್ನು ಹುಟ್ಟುಹಾಕಬೇಕಾಗಿದೆ ಎಂದರು.

ಟ್ರ್ಯಾಕ್ಟರ್ ಎಂಬುದು ರೈತನ ಅವಿಭಾಜ್ಯ ಅಂಗವಾಗಿದೆ. ಅದು ಎಲ್ಲಾ ಕಷ್ಟಗಳನ್ನು ಬದಿಗೊತ್ತಿ ರೈತನಿಗೆ ಅವರ ಸ್ವಂತ ದಾರಿ ಮಾಡಿಕೊಡುತ್ತದೆ. ಟ್ರ್ಯಾಕ್ಟರ್‌ಗಳಿಲ್ಲದಿದ್ದರೆ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ರೈತರು ದೆಹಲಿ ತಲುಪುವುದು ಕಷ್ಟವಾಗುತ್ತಿತ್ತು. ಈಗ ಹತ್ತು ವರ್ಷ ಹಳೆಯದಾಗಿರುವ ಟ್ರ್ಯಾಕ್ಟರ್‌ಗಳನ್ನು ಬಳಸಬಾರದು ಎಂದು ಸರ್ಕಾರ ಹೊಸ ಕಾನೂನು ತರಲು ಹೊರಟಿದೆ. ರೈತರು ಹತ್ತು ವರ್ಷಕ್ಕೊಮ್ಮೆ ಹೊಸ ಟ್ರ್ಯಾಕ್ಟರ್ ಖರೀದಿಸಲು ಸಮರ್ಥರಾಗಿದ್ದಾರೆಯೇ? ಬೀಜ ಕಾಯ್ದೆ ತಂದು ರೈತರ ಸ್ವಾಯುತ್ತತ್ತೆ ಕಸಿದುಕೊಳ್ಳಲಾಗುತ್ತಿದೆ. ಅದೇ ಸಮಯದಲ್ಲಿ ವಿದ್ಯುತ್ ತಿದ್ದುಪಡಿ ಕಾಯ್ದೆಯ ಮೂಲಕ ರೈತರಿಗೆ ಸಮರ್ಪಕ ವಿದ್ಯುತ್ ನೀಡದೆ ದುಪ್ಪಟ್ಟು ಹಣ ವಸೂಲಿ ಮಾಡಲಾಗುತ್ತದೆ. ಇದೆಲ್ಲವೂ ರೈತರನ್ನು ಕೃಷಿಯಿಂದ ಒಕ್ಕಲೆಬ್ಬಿಸಿ ದೊಡ್ಡ ಬಂಡವಾಳಶಾಹಿಗಳು ಕೃಷಿಯ್ನು ವಶಪಡಿಸಿಕೊಳ್ಳಲು ಮಾಡುತ್ತಿರುವ ಹುನ್ನಾರ ಎಂದು ರಾಕೇಶ್ ಟಿಕಾಯತ್ ಆತಂಕ ವ್ಯಕ್ತಪಡಿಸಿದರು.

ರೈತರ ಬೆಳೆಗಳನ್ನು ಮಾರಲು ಎಪಿಎಂಸಿ ಬೇಕಾಗಿಲ್ಲ ಎಲ್ಲಿ ಬೇಕಾದರೂ ಮಾರಬಹುದು ಎಂದು ಸರ್ಕಾರ ಹೇಳುತ್ತಿದೆ. ಹಾಗಾಗಿ ನೀವು ಬೆಳೆದ ಬೆಳೆಯನ್ನು ವಿಧಾನಸೌಧಕ್ಕೆ ತಂದು ಮಾರಬೇಕು. ಯಾರಾದರೂ ತಡೆದರೆ ನೀವು ಸರ್ಕಾರವನ್ನು ಪ್ರಶ್ನಿಸಿ ಎಂದು ಹೇಳಬೇಕು ಎಂದರು.

ಸರ್ಕಾರದ ವತಿಯಿಂದ ಕೃಷಿ ಸಚಿವರಾದ ಬಿ.ಸಿ ಪಾಟೀಲ್‌ರವರು ರೈತರ ಹಕ್ಕೊತ್ತಾಯ ಪತ್ರ ಪಡೆದರು. ಇಂದಿನ ಹೋರಾಟದಲ್ಲಿ ದೆಹಲಿಯ ರೈತ ಹೋರಾಟ ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ ಡಾ.ದರ್ಶನ್ ಪಾಲ್, ಬಿಕೆಯು ಪ್ರಧಾನ ಕಾರ್ಯದರ್ಶಿ ಯುಧುವೀರ್ ಸಿಂಗ್, ಕುಲ್‌ಬೀರ್‌ ಸಿಂಗ್, ರಾಜ್ಯದ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ನಟ ಚೇತನ್ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...