Homeಮುಖಪುಟಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನ ಮೆಚ್ಚಿಕೊಂಡಿದ್ದಾರೆ: ರಾಕೇಶ್ ಟಿಕಾಯತ್

ಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನ ಮೆಚ್ಚಿಕೊಂಡಿದ್ದಾರೆ: ರಾಕೇಶ್ ಟಿಕಾಯತ್

- Advertisement -
- Advertisement -

ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವಂತೆ ಮತ್ತು ಎಂಎಸ್‌ಪಿಗಾಗಿ ಕಾನೂನು ತರಲು ದೆಹಲಿಯಲ್ಲಿ ಒಂದು ದೊಡ್ಡ ಆಂದೋಲನ ನಡೆಯುತ್ತಿದೆ. ದೆಹಲಿಯನ್ನು ನಾಲ್ಕು ದಿಕ್ಕೂಗಳಿಂದ ರೈತರು ಸುತ್ತುವರೆದಿದ್ದಾರೆ. ಸರ್ಕಾರದೊಂದಿಗೆ 12 ಸುತ್ತಿನ ಮಾತುಕತೆಗಳು ನಡೆದಿವೆ. ಜನಪರ ಸರ್ಕಾರವಾಗಿದ್ದರೆ ರೈತರ ಸಮಸ್ಯೆಯನ್ನು ಬಗೆಹರಿಸುತ್ತಿತ್ತು. ಆದರೆ ಇದು ಬಂಡವಾಳಶಾಹಿಪರ ಸರ್ಕಾರವಾಗಿದೆ. ಎರಡು ತಿಂಗಳಿನಿಂದ ಸರ್ಕಾರ ಮಾತುಕತೆ ಸ್ಥಗಿತಗೊಳಿಸಿದೆ. ಆದರೆ ಜನ ಎಚ್ಚೆತ್ತುಕೊಂಡಿದ್ದಾರೆ. ನಮ್ಮ ಹೋರಾಟಕ್ಕೆ ಬೆಂಬಲ ಸೂಚಿಸಿ, ಮುನ್ನಡೆಯಲು ಸಹಕರಿಸುತ್ತಿದ್ದಾರೆ, ಇದು ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದರು.

ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸೌಧ ಚಲೋ ರ್‍ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, 26 ಸಾರ್ವಜನಿಕ ಕಂಪನಿಗಳನ್ನು ಖಾಸಗೀಕರಣ ಮಾಡಲು ಸರ್ಕಾರ ಯತ್ನಿಸುತ್ತಿದೆ. ರೈಲ್ವೇ, ಏರ್‌ಪೋರ್ಟ್, ದೊಡ್ಡ ತೈಲ ಕಂಪನಿಗಳು, ಎಲ್‌ಐಸಿಯಂತಹ ದೊಡ್ಡ ಸಾರ್ವಜನಿಕ ಸಂಸ್ಥೆಗಳು ಮಾರಾಟವಾಗುತ್ತಿವೆ. ಆದರೆ ಜನರನ್ನು ಮಂದಿರದ ಸುತ್ತ ಸುತ್ತಿಸಲಾಗುತ್ತಿದೆ. ಜಾತಿ ಧರ್ಮ ವಿಷಯದಲ್ಲಿ ಹೊಡೆದಾಡುವಂತೆ ಮಾಡಲಾಗುತ್ತಿದೆ. ಇದನ್ನು ಪ್ರಶ್ನಿಸಬಾರದಂತೆ ಜನರನ್ನು ಕಟ್ಟಿಹಾಕಲಾಗುತ್ತಿದೆ ಎಂದು ಅವರು ವಿಷಾಧ ವ್ಯಕ್ತಪಡಿಸಿದರು.

ಇಂದು ಮಣ್ಣಿನ ಮತ್ತು ಆಹಾರದ ವ್ಯಾಪಾರಕ್ಕೆ ದೊಡ್ಡ ಬಂಡವಾಳಶಾಹಿಗಳು ಮುಂದಾಗಿದ್ದಾರೆ. ದಿನನಿತ್ಯದ ಹಸಿವಿನ ವ್ಯಾಪಾರಕ್ಕಿಳಿದಿದ್ದಾರೆ. ಎಷ್ಟು ಜನ ಹಸಿದುಕೊಂಡಿದ್ದಾರೆ, ಹಸಿವಿನ ಪ್ರಮಾಣವೆಷ್ಟು ಎಂಬುದರ ಆಧಾರದಲ್ಲಿ ಅವರು ಆಹಾರದ ದರಗಳನ್ನು ನಿಗಧಿಮಾಡುತ್ತಿದ್ದಾರೆ. ಇಂದು ನೀವು ಮ್ಯಾಕ್‌ಡೋನಾಲ್ಡ್, ಕೆಎಫ್‌ಸಿ ಯಂತಹ ಹೋಟೆಲ್‌ಗಳನ್ನು ನೋಡಿರಬಹುದು. ಅವು ಆಹಾರವನ್ನು ಪ್ಯಾಕ್ ಮಾಡಿ ಮಾರುತ್ತವೆ. ಆಹಾರ ಉಳಿದುಕೊಂಡರೆ ಅಂದೇ ಅದನ್ನು ಕಸದ ಬುಟ್ಟಿಗೆ ಹಾಕುತ್ತಾರೆ. ಅದನ್ನು ನಿಮ್ಮದೇ ಕಂಪನಿಯ ಕಾರ್ಮಿಕರೇಕೆ ಕೊಡುವುದಿಲ್ಲ ಎಂದು ನಾನು ಕೇಳಿದರೆ ಅವರ ಬಳಿ ಉತ್ತರವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಯುವಜನರಿಂದ ಉದ್ಯೋಗಗಳನ್ನು ಕಿತ್ತುಕೊಳ್ಳಲಾಗುತ್ತಿದೆ. ಶಾಸಕರು, ಸಂಸದರಿಗೆ ಎರಡು ಮೂರು ರೀತಿಯ ಪಿಂಚಣಿಗಳನ್ನು ಕೊಡಲಾಗುತ್ತಿದೆ. ಆದರೆ ದೇಶ ಕಟ್ಟುತ್ತಿರುವ ಸಾಮಾನ್ಯ ಕಾರ್ಮಿಕರಿಗೆ-ನೌಕರರಿಗೆ, ದೇಶಕಾಯುತ್ತಿರುವ ಸೈನಿಕರಿಗೆ ಮಾತ್ರ ಪಿಂಚಣಿ ಕೊಡುತ್ತಿಲ್ಲ. ಎಲ್‌ಪಿಜಿ ಸಬ್ಸಿಡಿ ಬಿಡಿ ಎಂದು ಸರ್ಕಾರ ಹೇಳುತ್ತಿದೆ. ಆದರೆ ನಾವು ಶಾಸಕರು, ಸಂಸದರಿಗೆ ಪಿಂಚಣಿ ಬಿಡಿ ಎಂದು ನಾವು ಕೇಳಬೇಕು ಎಂದರು.

ನಮ್ಮೊಂದಿಗೆ ಸಂಪರ್ಕದಲ್ಲಿರುವ ಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನವನ್ನು ಮೆಚ್ಚಿಕೊಂಡಿದ್ದಾರೆ. ಅದನ್ನು ಮುಂದುವರೆಸಿ ಎಂದು ಹಾರೈಸಿದ್ದಾರೆ. ಸದನದ ಒಳಗೆ ವಿರೋಧ ಪಕ್ಷಗಳ ದನಿ ಕ್ಷೀಣಿಸುತ್ತಿರುವಾಗ ನಾವು ದೇಶದ ಎಲ್ಲಾ ಮೂಲೆಗಳಲ್ಲಿ ರೈತ ಆಂದೋಲನವನ್ನು ಹುಟ್ಟುಹಾಕಬೇಕಾಗಿದೆ ಎಂದರು.

ಟ್ರ್ಯಾಕ್ಟರ್ ಎಂಬುದು ರೈತನ ಅವಿಭಾಜ್ಯ ಅಂಗವಾಗಿದೆ. ಅದು ಎಲ್ಲಾ ಕಷ್ಟಗಳನ್ನು ಬದಿಗೊತ್ತಿ ರೈತನಿಗೆ ಅವರ ಸ್ವಂತ ದಾರಿ ಮಾಡಿಕೊಡುತ್ತದೆ. ಟ್ರ್ಯಾಕ್ಟರ್‌ಗಳಿಲ್ಲದಿದ್ದರೆ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ರೈತರು ದೆಹಲಿ ತಲುಪುವುದು ಕಷ್ಟವಾಗುತ್ತಿತ್ತು. ಈಗ ಹತ್ತು ವರ್ಷ ಹಳೆಯದಾಗಿರುವ ಟ್ರ್ಯಾಕ್ಟರ್‌ಗಳನ್ನು ಬಳಸಬಾರದು ಎಂದು ಸರ್ಕಾರ ಹೊಸ ಕಾನೂನು ತರಲು ಹೊರಟಿದೆ. ರೈತರು ಹತ್ತು ವರ್ಷಕ್ಕೊಮ್ಮೆ ಹೊಸ ಟ್ರ್ಯಾಕ್ಟರ್ ಖರೀದಿಸಲು ಸಮರ್ಥರಾಗಿದ್ದಾರೆಯೇ? ಬೀಜ ಕಾಯ್ದೆ ತಂದು ರೈತರ ಸ್ವಾಯುತ್ತತ್ತೆ ಕಸಿದುಕೊಳ್ಳಲಾಗುತ್ತಿದೆ. ಅದೇ ಸಮಯದಲ್ಲಿ ವಿದ್ಯುತ್ ತಿದ್ದುಪಡಿ ಕಾಯ್ದೆಯ ಮೂಲಕ ರೈತರಿಗೆ ಸಮರ್ಪಕ ವಿದ್ಯುತ್ ನೀಡದೆ ದುಪ್ಪಟ್ಟು ಹಣ ವಸೂಲಿ ಮಾಡಲಾಗುತ್ತದೆ. ಇದೆಲ್ಲವೂ ರೈತರನ್ನು ಕೃಷಿಯಿಂದ ಒಕ್ಕಲೆಬ್ಬಿಸಿ ದೊಡ್ಡ ಬಂಡವಾಳಶಾಹಿಗಳು ಕೃಷಿಯ್ನು ವಶಪಡಿಸಿಕೊಳ್ಳಲು ಮಾಡುತ್ತಿರುವ ಹುನ್ನಾರ ಎಂದು ರಾಕೇಶ್ ಟಿಕಾಯತ್ ಆತಂಕ ವ್ಯಕ್ತಪಡಿಸಿದರು.

ರೈತರ ಬೆಳೆಗಳನ್ನು ಮಾರಲು ಎಪಿಎಂಸಿ ಬೇಕಾಗಿಲ್ಲ ಎಲ್ಲಿ ಬೇಕಾದರೂ ಮಾರಬಹುದು ಎಂದು ಸರ್ಕಾರ ಹೇಳುತ್ತಿದೆ. ಹಾಗಾಗಿ ನೀವು ಬೆಳೆದ ಬೆಳೆಯನ್ನು ವಿಧಾನಸೌಧಕ್ಕೆ ತಂದು ಮಾರಬೇಕು. ಯಾರಾದರೂ ತಡೆದರೆ ನೀವು ಸರ್ಕಾರವನ್ನು ಪ್ರಶ್ನಿಸಿ ಎಂದು ಹೇಳಬೇಕು ಎಂದರು.

ಸರ್ಕಾರದ ವತಿಯಿಂದ ಕೃಷಿ ಸಚಿವರಾದ ಬಿ.ಸಿ ಪಾಟೀಲ್‌ರವರು ರೈತರ ಹಕ್ಕೊತ್ತಾಯ ಪತ್ರ ಪಡೆದರು. ಇಂದಿನ ಹೋರಾಟದಲ್ಲಿ ದೆಹಲಿಯ ರೈತ ಹೋರಾಟ ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ ಡಾ.ದರ್ಶನ್ ಪಾಲ್, ಬಿಕೆಯು ಪ್ರಧಾನ ಕಾರ್ಯದರ್ಶಿ ಯುಧುವೀರ್ ಸಿಂಗ್, ಕುಲ್‌ಬೀರ್‌ ಸಿಂಗ್, ರಾಜ್ಯದ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ನಟ ಚೇತನ್ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...