Homeಮುಖಪುಟಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನ ಮೆಚ್ಚಿಕೊಂಡಿದ್ದಾರೆ: ರಾಕೇಶ್ ಟಿಕಾಯತ್

ಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನ ಮೆಚ್ಚಿಕೊಂಡಿದ್ದಾರೆ: ರಾಕೇಶ್ ಟಿಕಾಯತ್

- Advertisement -
- Advertisement -

ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವಂತೆ ಮತ್ತು ಎಂಎಸ್‌ಪಿಗಾಗಿ ಕಾನೂನು ತರಲು ದೆಹಲಿಯಲ್ಲಿ ಒಂದು ದೊಡ್ಡ ಆಂದೋಲನ ನಡೆಯುತ್ತಿದೆ. ದೆಹಲಿಯನ್ನು ನಾಲ್ಕು ದಿಕ್ಕೂಗಳಿಂದ ರೈತರು ಸುತ್ತುವರೆದಿದ್ದಾರೆ. ಸರ್ಕಾರದೊಂದಿಗೆ 12 ಸುತ್ತಿನ ಮಾತುಕತೆಗಳು ನಡೆದಿವೆ. ಜನಪರ ಸರ್ಕಾರವಾಗಿದ್ದರೆ ರೈತರ ಸಮಸ್ಯೆಯನ್ನು ಬಗೆಹರಿಸುತ್ತಿತ್ತು. ಆದರೆ ಇದು ಬಂಡವಾಳಶಾಹಿಪರ ಸರ್ಕಾರವಾಗಿದೆ. ಎರಡು ತಿಂಗಳಿನಿಂದ ಸರ್ಕಾರ ಮಾತುಕತೆ ಸ್ಥಗಿತಗೊಳಿಸಿದೆ. ಆದರೆ ಜನ ಎಚ್ಚೆತ್ತುಕೊಂಡಿದ್ದಾರೆ. ನಮ್ಮ ಹೋರಾಟಕ್ಕೆ ಬೆಂಬಲ ಸೂಚಿಸಿ, ಮುನ್ನಡೆಯಲು ಸಹಕರಿಸುತ್ತಿದ್ದಾರೆ, ಇದು ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದರು.

ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸೌಧ ಚಲೋ ರ್‍ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, 26 ಸಾರ್ವಜನಿಕ ಕಂಪನಿಗಳನ್ನು ಖಾಸಗೀಕರಣ ಮಾಡಲು ಸರ್ಕಾರ ಯತ್ನಿಸುತ್ತಿದೆ. ರೈಲ್ವೇ, ಏರ್‌ಪೋರ್ಟ್, ದೊಡ್ಡ ತೈಲ ಕಂಪನಿಗಳು, ಎಲ್‌ಐಸಿಯಂತಹ ದೊಡ್ಡ ಸಾರ್ವಜನಿಕ ಸಂಸ್ಥೆಗಳು ಮಾರಾಟವಾಗುತ್ತಿವೆ. ಆದರೆ ಜನರನ್ನು ಮಂದಿರದ ಸುತ್ತ ಸುತ್ತಿಸಲಾಗುತ್ತಿದೆ. ಜಾತಿ ಧರ್ಮ ವಿಷಯದಲ್ಲಿ ಹೊಡೆದಾಡುವಂತೆ ಮಾಡಲಾಗುತ್ತಿದೆ. ಇದನ್ನು ಪ್ರಶ್ನಿಸಬಾರದಂತೆ ಜನರನ್ನು ಕಟ್ಟಿಹಾಕಲಾಗುತ್ತಿದೆ ಎಂದು ಅವರು ವಿಷಾಧ ವ್ಯಕ್ತಪಡಿಸಿದರು.

ಇಂದು ಮಣ್ಣಿನ ಮತ್ತು ಆಹಾರದ ವ್ಯಾಪಾರಕ್ಕೆ ದೊಡ್ಡ ಬಂಡವಾಳಶಾಹಿಗಳು ಮುಂದಾಗಿದ್ದಾರೆ. ದಿನನಿತ್ಯದ ಹಸಿವಿನ ವ್ಯಾಪಾರಕ್ಕಿಳಿದಿದ್ದಾರೆ. ಎಷ್ಟು ಜನ ಹಸಿದುಕೊಂಡಿದ್ದಾರೆ, ಹಸಿವಿನ ಪ್ರಮಾಣವೆಷ್ಟು ಎಂಬುದರ ಆಧಾರದಲ್ಲಿ ಅವರು ಆಹಾರದ ದರಗಳನ್ನು ನಿಗಧಿಮಾಡುತ್ತಿದ್ದಾರೆ. ಇಂದು ನೀವು ಮ್ಯಾಕ್‌ಡೋನಾಲ್ಡ್, ಕೆಎಫ್‌ಸಿ ಯಂತಹ ಹೋಟೆಲ್‌ಗಳನ್ನು ನೋಡಿರಬಹುದು. ಅವು ಆಹಾರವನ್ನು ಪ್ಯಾಕ್ ಮಾಡಿ ಮಾರುತ್ತವೆ. ಆಹಾರ ಉಳಿದುಕೊಂಡರೆ ಅಂದೇ ಅದನ್ನು ಕಸದ ಬುಟ್ಟಿಗೆ ಹಾಕುತ್ತಾರೆ. ಅದನ್ನು ನಿಮ್ಮದೇ ಕಂಪನಿಯ ಕಾರ್ಮಿಕರೇಕೆ ಕೊಡುವುದಿಲ್ಲ ಎಂದು ನಾನು ಕೇಳಿದರೆ ಅವರ ಬಳಿ ಉತ್ತರವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಯುವಜನರಿಂದ ಉದ್ಯೋಗಗಳನ್ನು ಕಿತ್ತುಕೊಳ್ಳಲಾಗುತ್ತಿದೆ. ಶಾಸಕರು, ಸಂಸದರಿಗೆ ಎರಡು ಮೂರು ರೀತಿಯ ಪಿಂಚಣಿಗಳನ್ನು ಕೊಡಲಾಗುತ್ತಿದೆ. ಆದರೆ ದೇಶ ಕಟ್ಟುತ್ತಿರುವ ಸಾಮಾನ್ಯ ಕಾರ್ಮಿಕರಿಗೆ-ನೌಕರರಿಗೆ, ದೇಶಕಾಯುತ್ತಿರುವ ಸೈನಿಕರಿಗೆ ಮಾತ್ರ ಪಿಂಚಣಿ ಕೊಡುತ್ತಿಲ್ಲ. ಎಲ್‌ಪಿಜಿ ಸಬ್ಸಿಡಿ ಬಿಡಿ ಎಂದು ಸರ್ಕಾರ ಹೇಳುತ್ತಿದೆ. ಆದರೆ ನಾವು ಶಾಸಕರು, ಸಂಸದರಿಗೆ ಪಿಂಚಣಿ ಬಿಡಿ ಎಂದು ನಾವು ಕೇಳಬೇಕು ಎಂದರು.

ನಮ್ಮೊಂದಿಗೆ ಸಂಪರ್ಕದಲ್ಲಿರುವ ಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನವನ್ನು ಮೆಚ್ಚಿಕೊಂಡಿದ್ದಾರೆ. ಅದನ್ನು ಮುಂದುವರೆಸಿ ಎಂದು ಹಾರೈಸಿದ್ದಾರೆ. ಸದನದ ಒಳಗೆ ವಿರೋಧ ಪಕ್ಷಗಳ ದನಿ ಕ್ಷೀಣಿಸುತ್ತಿರುವಾಗ ನಾವು ದೇಶದ ಎಲ್ಲಾ ಮೂಲೆಗಳಲ್ಲಿ ರೈತ ಆಂದೋಲನವನ್ನು ಹುಟ್ಟುಹಾಕಬೇಕಾಗಿದೆ ಎಂದರು.

ಟ್ರ್ಯಾಕ್ಟರ್ ಎಂಬುದು ರೈತನ ಅವಿಭಾಜ್ಯ ಅಂಗವಾಗಿದೆ. ಅದು ಎಲ್ಲಾ ಕಷ್ಟಗಳನ್ನು ಬದಿಗೊತ್ತಿ ರೈತನಿಗೆ ಅವರ ಸ್ವಂತ ದಾರಿ ಮಾಡಿಕೊಡುತ್ತದೆ. ಟ್ರ್ಯಾಕ್ಟರ್‌ಗಳಿಲ್ಲದಿದ್ದರೆ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ರೈತರು ದೆಹಲಿ ತಲುಪುವುದು ಕಷ್ಟವಾಗುತ್ತಿತ್ತು. ಈಗ ಹತ್ತು ವರ್ಷ ಹಳೆಯದಾಗಿರುವ ಟ್ರ್ಯಾಕ್ಟರ್‌ಗಳನ್ನು ಬಳಸಬಾರದು ಎಂದು ಸರ್ಕಾರ ಹೊಸ ಕಾನೂನು ತರಲು ಹೊರಟಿದೆ. ರೈತರು ಹತ್ತು ವರ್ಷಕ್ಕೊಮ್ಮೆ ಹೊಸ ಟ್ರ್ಯಾಕ್ಟರ್ ಖರೀದಿಸಲು ಸಮರ್ಥರಾಗಿದ್ದಾರೆಯೇ? ಬೀಜ ಕಾಯ್ದೆ ತಂದು ರೈತರ ಸ್ವಾಯುತ್ತತ್ತೆ ಕಸಿದುಕೊಳ್ಳಲಾಗುತ್ತಿದೆ. ಅದೇ ಸಮಯದಲ್ಲಿ ವಿದ್ಯುತ್ ತಿದ್ದುಪಡಿ ಕಾಯ್ದೆಯ ಮೂಲಕ ರೈತರಿಗೆ ಸಮರ್ಪಕ ವಿದ್ಯುತ್ ನೀಡದೆ ದುಪ್ಪಟ್ಟು ಹಣ ವಸೂಲಿ ಮಾಡಲಾಗುತ್ತದೆ. ಇದೆಲ್ಲವೂ ರೈತರನ್ನು ಕೃಷಿಯಿಂದ ಒಕ್ಕಲೆಬ್ಬಿಸಿ ದೊಡ್ಡ ಬಂಡವಾಳಶಾಹಿಗಳು ಕೃಷಿಯ್ನು ವಶಪಡಿಸಿಕೊಳ್ಳಲು ಮಾಡುತ್ತಿರುವ ಹುನ್ನಾರ ಎಂದು ರಾಕೇಶ್ ಟಿಕಾಯತ್ ಆತಂಕ ವ್ಯಕ್ತಪಡಿಸಿದರು.

ರೈತರ ಬೆಳೆಗಳನ್ನು ಮಾರಲು ಎಪಿಎಂಸಿ ಬೇಕಾಗಿಲ್ಲ ಎಲ್ಲಿ ಬೇಕಾದರೂ ಮಾರಬಹುದು ಎಂದು ಸರ್ಕಾರ ಹೇಳುತ್ತಿದೆ. ಹಾಗಾಗಿ ನೀವು ಬೆಳೆದ ಬೆಳೆಯನ್ನು ವಿಧಾನಸೌಧಕ್ಕೆ ತಂದು ಮಾರಬೇಕು. ಯಾರಾದರೂ ತಡೆದರೆ ನೀವು ಸರ್ಕಾರವನ್ನು ಪ್ರಶ್ನಿಸಿ ಎಂದು ಹೇಳಬೇಕು ಎಂದರು.

ಸರ್ಕಾರದ ವತಿಯಿಂದ ಕೃಷಿ ಸಚಿವರಾದ ಬಿ.ಸಿ ಪಾಟೀಲ್‌ರವರು ರೈತರ ಹಕ್ಕೊತ್ತಾಯ ಪತ್ರ ಪಡೆದರು. ಇಂದಿನ ಹೋರಾಟದಲ್ಲಿ ದೆಹಲಿಯ ರೈತ ಹೋರಾಟ ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ ಡಾ.ದರ್ಶನ್ ಪಾಲ್, ಬಿಕೆಯು ಪ್ರಧಾನ ಕಾರ್ಯದರ್ಶಿ ಯುಧುವೀರ್ ಸಿಂಗ್, ಕುಲ್‌ಬೀರ್‌ ಸಿಂಗ್, ರಾಜ್ಯದ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ನಟ ಚೇತನ್ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...