Homeಮುಖಪುಟಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನ ಮೆಚ್ಚಿಕೊಂಡಿದ್ದಾರೆ: ರಾಕೇಶ್ ಟಿಕಾಯತ್

ಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನ ಮೆಚ್ಚಿಕೊಂಡಿದ್ದಾರೆ: ರಾಕೇಶ್ ಟಿಕಾಯತ್

- Advertisement -
- Advertisement -

ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವಂತೆ ಮತ್ತು ಎಂಎಸ್‌ಪಿಗಾಗಿ ಕಾನೂನು ತರಲು ದೆಹಲಿಯಲ್ಲಿ ಒಂದು ದೊಡ್ಡ ಆಂದೋಲನ ನಡೆಯುತ್ತಿದೆ. ದೆಹಲಿಯನ್ನು ನಾಲ್ಕು ದಿಕ್ಕೂಗಳಿಂದ ರೈತರು ಸುತ್ತುವರೆದಿದ್ದಾರೆ. ಸರ್ಕಾರದೊಂದಿಗೆ 12 ಸುತ್ತಿನ ಮಾತುಕತೆಗಳು ನಡೆದಿವೆ. ಜನಪರ ಸರ್ಕಾರವಾಗಿದ್ದರೆ ರೈತರ ಸಮಸ್ಯೆಯನ್ನು ಬಗೆಹರಿಸುತ್ತಿತ್ತು. ಆದರೆ ಇದು ಬಂಡವಾಳಶಾಹಿಪರ ಸರ್ಕಾರವಾಗಿದೆ. ಎರಡು ತಿಂಗಳಿನಿಂದ ಸರ್ಕಾರ ಮಾತುಕತೆ ಸ್ಥಗಿತಗೊಳಿಸಿದೆ. ಆದರೆ ಜನ ಎಚ್ಚೆತ್ತುಕೊಂಡಿದ್ದಾರೆ. ನಮ್ಮ ಹೋರಾಟಕ್ಕೆ ಬೆಂಬಲ ಸೂಚಿಸಿ, ಮುನ್ನಡೆಯಲು ಸಹಕರಿಸುತ್ತಿದ್ದಾರೆ, ಇದು ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದರು.

ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸೌಧ ಚಲೋ ರ್‍ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, 26 ಸಾರ್ವಜನಿಕ ಕಂಪನಿಗಳನ್ನು ಖಾಸಗೀಕರಣ ಮಾಡಲು ಸರ್ಕಾರ ಯತ್ನಿಸುತ್ತಿದೆ. ರೈಲ್ವೇ, ಏರ್‌ಪೋರ್ಟ್, ದೊಡ್ಡ ತೈಲ ಕಂಪನಿಗಳು, ಎಲ್‌ಐಸಿಯಂತಹ ದೊಡ್ಡ ಸಾರ್ವಜನಿಕ ಸಂಸ್ಥೆಗಳು ಮಾರಾಟವಾಗುತ್ತಿವೆ. ಆದರೆ ಜನರನ್ನು ಮಂದಿರದ ಸುತ್ತ ಸುತ್ತಿಸಲಾಗುತ್ತಿದೆ. ಜಾತಿ ಧರ್ಮ ವಿಷಯದಲ್ಲಿ ಹೊಡೆದಾಡುವಂತೆ ಮಾಡಲಾಗುತ್ತಿದೆ. ಇದನ್ನು ಪ್ರಶ್ನಿಸಬಾರದಂತೆ ಜನರನ್ನು ಕಟ್ಟಿಹಾಕಲಾಗುತ್ತಿದೆ ಎಂದು ಅವರು ವಿಷಾಧ ವ್ಯಕ್ತಪಡಿಸಿದರು.

ಇಂದು ಮಣ್ಣಿನ ಮತ್ತು ಆಹಾರದ ವ್ಯಾಪಾರಕ್ಕೆ ದೊಡ್ಡ ಬಂಡವಾಳಶಾಹಿಗಳು ಮುಂದಾಗಿದ್ದಾರೆ. ದಿನನಿತ್ಯದ ಹಸಿವಿನ ವ್ಯಾಪಾರಕ್ಕಿಳಿದಿದ್ದಾರೆ. ಎಷ್ಟು ಜನ ಹಸಿದುಕೊಂಡಿದ್ದಾರೆ, ಹಸಿವಿನ ಪ್ರಮಾಣವೆಷ್ಟು ಎಂಬುದರ ಆಧಾರದಲ್ಲಿ ಅವರು ಆಹಾರದ ದರಗಳನ್ನು ನಿಗಧಿಮಾಡುತ್ತಿದ್ದಾರೆ. ಇಂದು ನೀವು ಮ್ಯಾಕ್‌ಡೋನಾಲ್ಡ್, ಕೆಎಫ್‌ಸಿ ಯಂತಹ ಹೋಟೆಲ್‌ಗಳನ್ನು ನೋಡಿರಬಹುದು. ಅವು ಆಹಾರವನ್ನು ಪ್ಯಾಕ್ ಮಾಡಿ ಮಾರುತ್ತವೆ. ಆಹಾರ ಉಳಿದುಕೊಂಡರೆ ಅಂದೇ ಅದನ್ನು ಕಸದ ಬುಟ್ಟಿಗೆ ಹಾಕುತ್ತಾರೆ. ಅದನ್ನು ನಿಮ್ಮದೇ ಕಂಪನಿಯ ಕಾರ್ಮಿಕರೇಕೆ ಕೊಡುವುದಿಲ್ಲ ಎಂದು ನಾನು ಕೇಳಿದರೆ ಅವರ ಬಳಿ ಉತ್ತರವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಯುವಜನರಿಂದ ಉದ್ಯೋಗಗಳನ್ನು ಕಿತ್ತುಕೊಳ್ಳಲಾಗುತ್ತಿದೆ. ಶಾಸಕರು, ಸಂಸದರಿಗೆ ಎರಡು ಮೂರು ರೀತಿಯ ಪಿಂಚಣಿಗಳನ್ನು ಕೊಡಲಾಗುತ್ತಿದೆ. ಆದರೆ ದೇಶ ಕಟ್ಟುತ್ತಿರುವ ಸಾಮಾನ್ಯ ಕಾರ್ಮಿಕರಿಗೆ-ನೌಕರರಿಗೆ, ದೇಶಕಾಯುತ್ತಿರುವ ಸೈನಿಕರಿಗೆ ಮಾತ್ರ ಪಿಂಚಣಿ ಕೊಡುತ್ತಿಲ್ಲ. ಎಲ್‌ಪಿಜಿ ಸಬ್ಸಿಡಿ ಬಿಡಿ ಎಂದು ಸರ್ಕಾರ ಹೇಳುತ್ತಿದೆ. ಆದರೆ ನಾವು ಶಾಸಕರು, ಸಂಸದರಿಗೆ ಪಿಂಚಣಿ ಬಿಡಿ ಎಂದು ನಾವು ಕೇಳಬೇಕು ಎಂದರು.

ನಮ್ಮೊಂದಿಗೆ ಸಂಪರ್ಕದಲ್ಲಿರುವ ಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನವನ್ನು ಮೆಚ್ಚಿಕೊಂಡಿದ್ದಾರೆ. ಅದನ್ನು ಮುಂದುವರೆಸಿ ಎಂದು ಹಾರೈಸಿದ್ದಾರೆ. ಸದನದ ಒಳಗೆ ವಿರೋಧ ಪಕ್ಷಗಳ ದನಿ ಕ್ಷೀಣಿಸುತ್ತಿರುವಾಗ ನಾವು ದೇಶದ ಎಲ್ಲಾ ಮೂಲೆಗಳಲ್ಲಿ ರೈತ ಆಂದೋಲನವನ್ನು ಹುಟ್ಟುಹಾಕಬೇಕಾಗಿದೆ ಎಂದರು.

ಟ್ರ್ಯಾಕ್ಟರ್ ಎಂಬುದು ರೈತನ ಅವಿಭಾಜ್ಯ ಅಂಗವಾಗಿದೆ. ಅದು ಎಲ್ಲಾ ಕಷ್ಟಗಳನ್ನು ಬದಿಗೊತ್ತಿ ರೈತನಿಗೆ ಅವರ ಸ್ವಂತ ದಾರಿ ಮಾಡಿಕೊಡುತ್ತದೆ. ಟ್ರ್ಯಾಕ್ಟರ್‌ಗಳಿಲ್ಲದಿದ್ದರೆ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ರೈತರು ದೆಹಲಿ ತಲುಪುವುದು ಕಷ್ಟವಾಗುತ್ತಿತ್ತು. ಈಗ ಹತ್ತು ವರ್ಷ ಹಳೆಯದಾಗಿರುವ ಟ್ರ್ಯಾಕ್ಟರ್‌ಗಳನ್ನು ಬಳಸಬಾರದು ಎಂದು ಸರ್ಕಾರ ಹೊಸ ಕಾನೂನು ತರಲು ಹೊರಟಿದೆ. ರೈತರು ಹತ್ತು ವರ್ಷಕ್ಕೊಮ್ಮೆ ಹೊಸ ಟ್ರ್ಯಾಕ್ಟರ್ ಖರೀದಿಸಲು ಸಮರ್ಥರಾಗಿದ್ದಾರೆಯೇ? ಬೀಜ ಕಾಯ್ದೆ ತಂದು ರೈತರ ಸ್ವಾಯುತ್ತತ್ತೆ ಕಸಿದುಕೊಳ್ಳಲಾಗುತ್ತಿದೆ. ಅದೇ ಸಮಯದಲ್ಲಿ ವಿದ್ಯುತ್ ತಿದ್ದುಪಡಿ ಕಾಯ್ದೆಯ ಮೂಲಕ ರೈತರಿಗೆ ಸಮರ್ಪಕ ವಿದ್ಯುತ್ ನೀಡದೆ ದುಪ್ಪಟ್ಟು ಹಣ ವಸೂಲಿ ಮಾಡಲಾಗುತ್ತದೆ. ಇದೆಲ್ಲವೂ ರೈತರನ್ನು ಕೃಷಿಯಿಂದ ಒಕ್ಕಲೆಬ್ಬಿಸಿ ದೊಡ್ಡ ಬಂಡವಾಳಶಾಹಿಗಳು ಕೃಷಿಯ್ನು ವಶಪಡಿಸಿಕೊಳ್ಳಲು ಮಾಡುತ್ತಿರುವ ಹುನ್ನಾರ ಎಂದು ರಾಕೇಶ್ ಟಿಕಾಯತ್ ಆತಂಕ ವ್ಯಕ್ತಪಡಿಸಿದರು.

ರೈತರ ಬೆಳೆಗಳನ್ನು ಮಾರಲು ಎಪಿಎಂಸಿ ಬೇಕಾಗಿಲ್ಲ ಎಲ್ಲಿ ಬೇಕಾದರೂ ಮಾರಬಹುದು ಎಂದು ಸರ್ಕಾರ ಹೇಳುತ್ತಿದೆ. ಹಾಗಾಗಿ ನೀವು ಬೆಳೆದ ಬೆಳೆಯನ್ನು ವಿಧಾನಸೌಧಕ್ಕೆ ತಂದು ಮಾರಬೇಕು. ಯಾರಾದರೂ ತಡೆದರೆ ನೀವು ಸರ್ಕಾರವನ್ನು ಪ್ರಶ್ನಿಸಿ ಎಂದು ಹೇಳಬೇಕು ಎಂದರು.

ಸರ್ಕಾರದ ವತಿಯಿಂದ ಕೃಷಿ ಸಚಿವರಾದ ಬಿ.ಸಿ ಪಾಟೀಲ್‌ರವರು ರೈತರ ಹಕ್ಕೊತ್ತಾಯ ಪತ್ರ ಪಡೆದರು. ಇಂದಿನ ಹೋರಾಟದಲ್ಲಿ ದೆಹಲಿಯ ರೈತ ಹೋರಾಟ ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ ಡಾ.ದರ್ಶನ್ ಪಾಲ್, ಬಿಕೆಯು ಪ್ರಧಾನ ಕಾರ್ಯದರ್ಶಿ ಯುಧುವೀರ್ ಸಿಂಗ್, ಕುಲ್‌ಬೀರ್‌ ಸಿಂಗ್, ರಾಜ್ಯದ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ನಟ ಚೇತನ್ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...