Homeಮುಖಪುಟಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನ ಮೆಚ್ಚಿಕೊಂಡಿದ್ದಾರೆ: ರಾಕೇಶ್ ಟಿಕಾಯತ್

ಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನ ಮೆಚ್ಚಿಕೊಂಡಿದ್ದಾರೆ: ರಾಕೇಶ್ ಟಿಕಾಯತ್

- Advertisement -
- Advertisement -

ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವಂತೆ ಮತ್ತು ಎಂಎಸ್‌ಪಿಗಾಗಿ ಕಾನೂನು ತರಲು ದೆಹಲಿಯಲ್ಲಿ ಒಂದು ದೊಡ್ಡ ಆಂದೋಲನ ನಡೆಯುತ್ತಿದೆ. ದೆಹಲಿಯನ್ನು ನಾಲ್ಕು ದಿಕ್ಕೂಗಳಿಂದ ರೈತರು ಸುತ್ತುವರೆದಿದ್ದಾರೆ. ಸರ್ಕಾರದೊಂದಿಗೆ 12 ಸುತ್ತಿನ ಮಾತುಕತೆಗಳು ನಡೆದಿವೆ. ಜನಪರ ಸರ್ಕಾರವಾಗಿದ್ದರೆ ರೈತರ ಸಮಸ್ಯೆಯನ್ನು ಬಗೆಹರಿಸುತ್ತಿತ್ತು. ಆದರೆ ಇದು ಬಂಡವಾಳಶಾಹಿಪರ ಸರ್ಕಾರವಾಗಿದೆ. ಎರಡು ತಿಂಗಳಿನಿಂದ ಸರ್ಕಾರ ಮಾತುಕತೆ ಸ್ಥಗಿತಗೊಳಿಸಿದೆ. ಆದರೆ ಜನ ಎಚ್ಚೆತ್ತುಕೊಂಡಿದ್ದಾರೆ. ನಮ್ಮ ಹೋರಾಟಕ್ಕೆ ಬೆಂಬಲ ಸೂಚಿಸಿ, ಮುನ್ನಡೆಯಲು ಸಹಕರಿಸುತ್ತಿದ್ದಾರೆ, ಇದು ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದರು.

ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸೌಧ ಚಲೋ ರ್‍ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, 26 ಸಾರ್ವಜನಿಕ ಕಂಪನಿಗಳನ್ನು ಖಾಸಗೀಕರಣ ಮಾಡಲು ಸರ್ಕಾರ ಯತ್ನಿಸುತ್ತಿದೆ. ರೈಲ್ವೇ, ಏರ್‌ಪೋರ್ಟ್, ದೊಡ್ಡ ತೈಲ ಕಂಪನಿಗಳು, ಎಲ್‌ಐಸಿಯಂತಹ ದೊಡ್ಡ ಸಾರ್ವಜನಿಕ ಸಂಸ್ಥೆಗಳು ಮಾರಾಟವಾಗುತ್ತಿವೆ. ಆದರೆ ಜನರನ್ನು ಮಂದಿರದ ಸುತ್ತ ಸುತ್ತಿಸಲಾಗುತ್ತಿದೆ. ಜಾತಿ ಧರ್ಮ ವಿಷಯದಲ್ಲಿ ಹೊಡೆದಾಡುವಂತೆ ಮಾಡಲಾಗುತ್ತಿದೆ. ಇದನ್ನು ಪ್ರಶ್ನಿಸಬಾರದಂತೆ ಜನರನ್ನು ಕಟ್ಟಿಹಾಕಲಾಗುತ್ತಿದೆ ಎಂದು ಅವರು ವಿಷಾಧ ವ್ಯಕ್ತಪಡಿಸಿದರು.

ಇಂದು ಮಣ್ಣಿನ ಮತ್ತು ಆಹಾರದ ವ್ಯಾಪಾರಕ್ಕೆ ದೊಡ್ಡ ಬಂಡವಾಳಶಾಹಿಗಳು ಮುಂದಾಗಿದ್ದಾರೆ. ದಿನನಿತ್ಯದ ಹಸಿವಿನ ವ್ಯಾಪಾರಕ್ಕಿಳಿದಿದ್ದಾರೆ. ಎಷ್ಟು ಜನ ಹಸಿದುಕೊಂಡಿದ್ದಾರೆ, ಹಸಿವಿನ ಪ್ರಮಾಣವೆಷ್ಟು ಎಂಬುದರ ಆಧಾರದಲ್ಲಿ ಅವರು ಆಹಾರದ ದರಗಳನ್ನು ನಿಗಧಿಮಾಡುತ್ತಿದ್ದಾರೆ. ಇಂದು ನೀವು ಮ್ಯಾಕ್‌ಡೋನಾಲ್ಡ್, ಕೆಎಫ್‌ಸಿ ಯಂತಹ ಹೋಟೆಲ್‌ಗಳನ್ನು ನೋಡಿರಬಹುದು. ಅವು ಆಹಾರವನ್ನು ಪ್ಯಾಕ್ ಮಾಡಿ ಮಾರುತ್ತವೆ. ಆಹಾರ ಉಳಿದುಕೊಂಡರೆ ಅಂದೇ ಅದನ್ನು ಕಸದ ಬುಟ್ಟಿಗೆ ಹಾಕುತ್ತಾರೆ. ಅದನ್ನು ನಿಮ್ಮದೇ ಕಂಪನಿಯ ಕಾರ್ಮಿಕರೇಕೆ ಕೊಡುವುದಿಲ್ಲ ಎಂದು ನಾನು ಕೇಳಿದರೆ ಅವರ ಬಳಿ ಉತ್ತರವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಯುವಜನರಿಂದ ಉದ್ಯೋಗಗಳನ್ನು ಕಿತ್ತುಕೊಳ್ಳಲಾಗುತ್ತಿದೆ. ಶಾಸಕರು, ಸಂಸದರಿಗೆ ಎರಡು ಮೂರು ರೀತಿಯ ಪಿಂಚಣಿಗಳನ್ನು ಕೊಡಲಾಗುತ್ತಿದೆ. ಆದರೆ ದೇಶ ಕಟ್ಟುತ್ತಿರುವ ಸಾಮಾನ್ಯ ಕಾರ್ಮಿಕರಿಗೆ-ನೌಕರರಿಗೆ, ದೇಶಕಾಯುತ್ತಿರುವ ಸೈನಿಕರಿಗೆ ಮಾತ್ರ ಪಿಂಚಣಿ ಕೊಡುತ್ತಿಲ್ಲ. ಎಲ್‌ಪಿಜಿ ಸಬ್ಸಿಡಿ ಬಿಡಿ ಎಂದು ಸರ್ಕಾರ ಹೇಳುತ್ತಿದೆ. ಆದರೆ ನಾವು ಶಾಸಕರು, ಸಂಸದರಿಗೆ ಪಿಂಚಣಿ ಬಿಡಿ ಎಂದು ನಾವು ಕೇಳಬೇಕು ಎಂದರು.

ನಮ್ಮೊಂದಿಗೆ ಸಂಪರ್ಕದಲ್ಲಿರುವ ಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನವನ್ನು ಮೆಚ್ಚಿಕೊಂಡಿದ್ದಾರೆ. ಅದನ್ನು ಮುಂದುವರೆಸಿ ಎಂದು ಹಾರೈಸಿದ್ದಾರೆ. ಸದನದ ಒಳಗೆ ವಿರೋಧ ಪಕ್ಷಗಳ ದನಿ ಕ್ಷೀಣಿಸುತ್ತಿರುವಾಗ ನಾವು ದೇಶದ ಎಲ್ಲಾ ಮೂಲೆಗಳಲ್ಲಿ ರೈತ ಆಂದೋಲನವನ್ನು ಹುಟ್ಟುಹಾಕಬೇಕಾಗಿದೆ ಎಂದರು.

ಟ್ರ್ಯಾಕ್ಟರ್ ಎಂಬುದು ರೈತನ ಅವಿಭಾಜ್ಯ ಅಂಗವಾಗಿದೆ. ಅದು ಎಲ್ಲಾ ಕಷ್ಟಗಳನ್ನು ಬದಿಗೊತ್ತಿ ರೈತನಿಗೆ ಅವರ ಸ್ವಂತ ದಾರಿ ಮಾಡಿಕೊಡುತ್ತದೆ. ಟ್ರ್ಯಾಕ್ಟರ್‌ಗಳಿಲ್ಲದಿದ್ದರೆ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ರೈತರು ದೆಹಲಿ ತಲುಪುವುದು ಕಷ್ಟವಾಗುತ್ತಿತ್ತು. ಈಗ ಹತ್ತು ವರ್ಷ ಹಳೆಯದಾಗಿರುವ ಟ್ರ್ಯಾಕ್ಟರ್‌ಗಳನ್ನು ಬಳಸಬಾರದು ಎಂದು ಸರ್ಕಾರ ಹೊಸ ಕಾನೂನು ತರಲು ಹೊರಟಿದೆ. ರೈತರು ಹತ್ತು ವರ್ಷಕ್ಕೊಮ್ಮೆ ಹೊಸ ಟ್ರ್ಯಾಕ್ಟರ್ ಖರೀದಿಸಲು ಸಮರ್ಥರಾಗಿದ್ದಾರೆಯೇ? ಬೀಜ ಕಾಯ್ದೆ ತಂದು ರೈತರ ಸ್ವಾಯುತ್ತತ್ತೆ ಕಸಿದುಕೊಳ್ಳಲಾಗುತ್ತಿದೆ. ಅದೇ ಸಮಯದಲ್ಲಿ ವಿದ್ಯುತ್ ತಿದ್ದುಪಡಿ ಕಾಯ್ದೆಯ ಮೂಲಕ ರೈತರಿಗೆ ಸಮರ್ಪಕ ವಿದ್ಯುತ್ ನೀಡದೆ ದುಪ್ಪಟ್ಟು ಹಣ ವಸೂಲಿ ಮಾಡಲಾಗುತ್ತದೆ. ಇದೆಲ್ಲವೂ ರೈತರನ್ನು ಕೃಷಿಯಿಂದ ಒಕ್ಕಲೆಬ್ಬಿಸಿ ದೊಡ್ಡ ಬಂಡವಾಳಶಾಹಿಗಳು ಕೃಷಿಯ್ನು ವಶಪಡಿಸಿಕೊಳ್ಳಲು ಮಾಡುತ್ತಿರುವ ಹುನ್ನಾರ ಎಂದು ರಾಕೇಶ್ ಟಿಕಾಯತ್ ಆತಂಕ ವ್ಯಕ್ತಪಡಿಸಿದರು.

ರೈತರ ಬೆಳೆಗಳನ್ನು ಮಾರಲು ಎಪಿಎಂಸಿ ಬೇಕಾಗಿಲ್ಲ ಎಲ್ಲಿ ಬೇಕಾದರೂ ಮಾರಬಹುದು ಎಂದು ಸರ್ಕಾರ ಹೇಳುತ್ತಿದೆ. ಹಾಗಾಗಿ ನೀವು ಬೆಳೆದ ಬೆಳೆಯನ್ನು ವಿಧಾನಸೌಧಕ್ಕೆ ತಂದು ಮಾರಬೇಕು. ಯಾರಾದರೂ ತಡೆದರೆ ನೀವು ಸರ್ಕಾರವನ್ನು ಪ್ರಶ್ನಿಸಿ ಎಂದು ಹೇಳಬೇಕು ಎಂದರು.

ಸರ್ಕಾರದ ವತಿಯಿಂದ ಕೃಷಿ ಸಚಿವರಾದ ಬಿ.ಸಿ ಪಾಟೀಲ್‌ರವರು ರೈತರ ಹಕ್ಕೊತ್ತಾಯ ಪತ್ರ ಪಡೆದರು. ಇಂದಿನ ಹೋರಾಟದಲ್ಲಿ ದೆಹಲಿಯ ರೈತ ಹೋರಾಟ ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ ಡಾ.ದರ್ಶನ್ ಪಾಲ್, ಬಿಕೆಯು ಪ್ರಧಾನ ಕಾರ್ಯದರ್ಶಿ ಯುಧುವೀರ್ ಸಿಂಗ್, ಕುಲ್‌ಬೀರ್‌ ಸಿಂಗ್, ರಾಜ್ಯದ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ನಟ ಚೇತನ್ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...