Homeಮುಖಪುಟಸಚಿನ್ ಪೈಲಟ್ ಜೊತೆಗಿದ್ದ ಶಾಸಕರು ಮರಳಿದ್ದಾರೆ: ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ

ಸಚಿನ್ ಪೈಲಟ್ ಜೊತೆಗಿದ್ದ ಶಾಸಕರು ಮರಳಿದ್ದಾರೆ: ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ

- Advertisement -
- Advertisement -

ಸಚಿನ್ ಪೈಲಟ್‌ ಜೊತೆಗೆ ದೆಹಲಿಗೆ ಹೋಗಿದ್ದ ರಾಜಸ್ಥಾನದ ಕಾಂಗ್ರೆಸ್ ಶಾಸಕರೊಂದಿಗೆ ನಾವು ಮಾತುಕತೆ ನಡೆಸಿದ್ದೇವೆ ಮತ್ತು ಅವರಲ್ಲಿ ಹಲವರು ಜೈಪುರಕ್ಕೆ ಮರಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ, ಆದರೆ ಅದು ಸಾಧ್ಯವಾಗುವುದಿಲ್ಲ. ನಮ್ಮ ಸರ್ಕಾರ ಸುಭದ್ರ ವಾಗಿದೆ ಎಂದು ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ ತಿಳಿಸಿದ್ದಾರೆಂದು ಎಎನ್‌ಐ ವರದಿ ಮಾಡಿದೆ.

ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯ ಶಾಸಕರ ಕುದುರೆ ವ್ಯಾಪಾರ ಮಾಡುವ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ. ತಮ್ಮ ನಿಷ್ಠೆಯನ್ನು ಬದಲಿಸಲು ಕಾಂಗ್ರೆಸ್ ಶಾಸಕರಿಗೆ ಎಷ್ಟೇ ಪ್ರಲೋಭನೆ ನೀಡಿದ್ದರೂ, ನಮ್ಮ ಶಾಸಕರು, ಕಾಂಗ್ರೆಸ್ ಬೆಂಬಲಿತ ಸ್ವತಂತ್ರರು ಎಲ್ಲರೂ ಒಂದಾಗುತ್ತಾರೆ ಎಂದು ಅವಿನಾಶ್ ಪಾಂಡೆ ಟ್ವೀಟ್‌ ಮಾಡಿದ್ದಾರೆ.

ಸರ್ಕಾರಕ್ಕೆ ಯಾವುದೇ ಬೆದರಿಕೆ ಇಲ್ಲ, ಎಲ್ಲಾ ಕಾಂಗ್ರೆಸ್ ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ಗೆಹ್ಲೋಟ್ ಸರ್ಕಾರ ತನ್ನ ಅಧಿಕಾರಾವಧಿಯನ್ನು ಪೂರ್ಣಗೊಳಿಸುತ್ತದೆ ಎಂದು ಪಾಂಡೆ ತಿಳಿಸಿದ್ದಾರೆ.

ಹಲವಾರು ಕಾಂಗ್ರೆಸ್ ಸಚಿವರು ಮತ್ತು ಶಾಸಕರು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಇಂದು ಅವರ ನಿವಾಸದಲ್ಲಿ ಭೇಟಿಯಾಗಿ ಜೊತೆಗಿರುವುದಾಗಿ ತಿಳಿಸಿದ್ದೇವೆ.  “ರಾಜಸ್ಥಾನದಲ್ಲಿ, ಗೆಹ್ಲೋಟ್ ಎಂದರೆ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಎಂದರೆ ಗೆಹ್ಲೋಟ್. ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ ಮತ್ತು ಅದು ತನ್ನ ಅವಧಿಯನ್ನು ಪೂರ್ಣಗೊಳಿಸುತ್ತದೆ” ಎಂದು ಕಾಂಗ್ರೆಸ್ ಶಾಸಕ ರಾಮ್‌ಲಾಲ್ ಜಾತ್ ಹೇಳಿದ್ದಾರೆ.

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಶಾಸಕರಿಂದ ಜನರು ಪಾಠಗಳನ್ನು ಕಲಿಯಬೇಕು. ಅವರು ಪಕ್ಷ ಬಿಟ್ಟ ನಂತರ ತಿಂಗಳುಗಟ್ಟಲೆ ಸುಮ್ಮನೆ ಕುಳಿತಿದ್ದರು. ರಾಜ್ಯಸಭೆಯ ಚುನಾವಣೆ ಸಮೀಪಿಸುತ್ತಿದ್ದಾಗ ಅವರಲ್ಲಿ ಕೆಲವರನ್ನು ಮಂತ್ರಿಗಳನ್ನಾಗಿ ಮಾಡಲಾಗಿದೆ. ಈಗ ಉಪ ಚುನಾವಣೆ ನಡೆದರೆ ಅವರು ಸೋಲುತ್ತಾರೆ ಮತ್ತು ಮಂತ್ರಿ ಹುದ್ದೆಯನ್ನು ಕಳೆದುಕೊಳ್ಳುತ್ತಾರೆ. ಜನರು ಇದರ ಬಗ್ಗೆ ಯೋಚಿಸಬೇಕು ಎಂದು ರಾಜ್ಯ ಕ್ರೀಡಾ ಸಚಿವ ಅಶೋಕ್ ಚಂದ್ನಾ ಹೇಳಿದ್ದಾರೆ.

ಇನ್ನು ಸರ್ಕಾರ ಉರುಳಿಸುವ ಸಂಚಿನ ಕುರಿತಂತೆ ಸಚಿನ್ ಪೈಲಟ್‌ಗೆ ಸಮನ್ಸ್ ಕೊಟ್ಟು ಟೀಕೆಗೊಳಗಾಗಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಸಿಎಂ, ಡಿಸಿಎಂ, ಚೀಫ್ ವಿಪ್ ಸೇರಿದಂತೆ ಇತರ ಕೆಲವು ಮಂತ್ರಿಗಳು ಮತ್ತು ಶಾಸಕರು ಬಿಜೆಪಿಯಿಂದ ಕುದುರೆ ವ್ಯಾಪಾರದ ಕುರಿತು ಕಾಂಗ್ರೆಸ್ ಶಾಸಕಾಂಗ ಪಕ್ಷದ ದೂರಿಗೆ ಸಂಬಂಧಿಸಿದಂತೆ ತಮ್ಮ ಹೇಳಿಕೆಗಳನ್ನು ದಾಖಲಿಸಲು ಎಸ್‌ಒಜಿಯಿಂದ ನೋಟಿಸ್ ಪಡೆದಿದ್ದಾರೆ. ಕೆಲವು ಮಾಧ್ಯಮಗಳು ಇದನ್ನು ವಿಭಿನ್ನವಾಗಿ ಪ್ರಸ್ತುತಪಡಿಸುವುದು ಸೂಕ್ತವಲ್ಲ ಎಂದು ಗೆಹ್ಲೋಟ್ ಹೇಳಿದ್ದಾರೆ.


ಇದನ್ನೂ ಓದಿ: ನಾವು ಯಾವಾಗ ಎಚ್ಚರಗೊಳ್ಳುತ್ತೇವೆ? ರಾಜಸ್ಥಾನ ಬಿಕ್ಕಟ್ಟಿನ ಮಧ್ಯೆ ಕಪಿಲ್ ಸಿಬಲ್ ಆತ್ಮಾವಲೋಕನ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...