Homeಮುಖಪುಟಸಚಿನ್ ಪೈಲಟ್ ಜೊತೆಗಿದ್ದ ಶಾಸಕರು ಮರಳಿದ್ದಾರೆ: ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ

ಸಚಿನ್ ಪೈಲಟ್ ಜೊತೆಗಿದ್ದ ಶಾಸಕರು ಮರಳಿದ್ದಾರೆ: ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ

- Advertisement -
- Advertisement -

ಸಚಿನ್ ಪೈಲಟ್‌ ಜೊತೆಗೆ ದೆಹಲಿಗೆ ಹೋಗಿದ್ದ ರಾಜಸ್ಥಾನದ ಕಾಂಗ್ರೆಸ್ ಶಾಸಕರೊಂದಿಗೆ ನಾವು ಮಾತುಕತೆ ನಡೆಸಿದ್ದೇವೆ ಮತ್ತು ಅವರಲ್ಲಿ ಹಲವರು ಜೈಪುರಕ್ಕೆ ಮರಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ, ಆದರೆ ಅದು ಸಾಧ್ಯವಾಗುವುದಿಲ್ಲ. ನಮ್ಮ ಸರ್ಕಾರ ಸುಭದ್ರ ವಾಗಿದೆ ಎಂದು ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ ತಿಳಿಸಿದ್ದಾರೆಂದು ಎಎನ್‌ಐ ವರದಿ ಮಾಡಿದೆ.

ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯ ಶಾಸಕರ ಕುದುರೆ ವ್ಯಾಪಾರ ಮಾಡುವ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ. ತಮ್ಮ ನಿಷ್ಠೆಯನ್ನು ಬದಲಿಸಲು ಕಾಂಗ್ರೆಸ್ ಶಾಸಕರಿಗೆ ಎಷ್ಟೇ ಪ್ರಲೋಭನೆ ನೀಡಿದ್ದರೂ, ನಮ್ಮ ಶಾಸಕರು, ಕಾಂಗ್ರೆಸ್ ಬೆಂಬಲಿತ ಸ್ವತಂತ್ರರು ಎಲ್ಲರೂ ಒಂದಾಗುತ್ತಾರೆ ಎಂದು ಅವಿನಾಶ್ ಪಾಂಡೆ ಟ್ವೀಟ್‌ ಮಾಡಿದ್ದಾರೆ.

ಸರ್ಕಾರಕ್ಕೆ ಯಾವುದೇ ಬೆದರಿಕೆ ಇಲ್ಲ, ಎಲ್ಲಾ ಕಾಂಗ್ರೆಸ್ ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ಗೆಹ್ಲೋಟ್ ಸರ್ಕಾರ ತನ್ನ ಅಧಿಕಾರಾವಧಿಯನ್ನು ಪೂರ್ಣಗೊಳಿಸುತ್ತದೆ ಎಂದು ಪಾಂಡೆ ತಿಳಿಸಿದ್ದಾರೆ.

ಹಲವಾರು ಕಾಂಗ್ರೆಸ್ ಸಚಿವರು ಮತ್ತು ಶಾಸಕರು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಇಂದು ಅವರ ನಿವಾಸದಲ್ಲಿ ಭೇಟಿಯಾಗಿ ಜೊತೆಗಿರುವುದಾಗಿ ತಿಳಿಸಿದ್ದೇವೆ.  “ರಾಜಸ್ಥಾನದಲ್ಲಿ, ಗೆಹ್ಲೋಟ್ ಎಂದರೆ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಎಂದರೆ ಗೆಹ್ಲೋಟ್. ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ ಮತ್ತು ಅದು ತನ್ನ ಅವಧಿಯನ್ನು ಪೂರ್ಣಗೊಳಿಸುತ್ತದೆ” ಎಂದು ಕಾಂಗ್ರೆಸ್ ಶಾಸಕ ರಾಮ್‌ಲಾಲ್ ಜಾತ್ ಹೇಳಿದ್ದಾರೆ.

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಶಾಸಕರಿಂದ ಜನರು ಪಾಠಗಳನ್ನು ಕಲಿಯಬೇಕು. ಅವರು ಪಕ್ಷ ಬಿಟ್ಟ ನಂತರ ತಿಂಗಳುಗಟ್ಟಲೆ ಸುಮ್ಮನೆ ಕುಳಿತಿದ್ದರು. ರಾಜ್ಯಸಭೆಯ ಚುನಾವಣೆ ಸಮೀಪಿಸುತ್ತಿದ್ದಾಗ ಅವರಲ್ಲಿ ಕೆಲವರನ್ನು ಮಂತ್ರಿಗಳನ್ನಾಗಿ ಮಾಡಲಾಗಿದೆ. ಈಗ ಉಪ ಚುನಾವಣೆ ನಡೆದರೆ ಅವರು ಸೋಲುತ್ತಾರೆ ಮತ್ತು ಮಂತ್ರಿ ಹುದ್ದೆಯನ್ನು ಕಳೆದುಕೊಳ್ಳುತ್ತಾರೆ. ಜನರು ಇದರ ಬಗ್ಗೆ ಯೋಚಿಸಬೇಕು ಎಂದು ರಾಜ್ಯ ಕ್ರೀಡಾ ಸಚಿವ ಅಶೋಕ್ ಚಂದ್ನಾ ಹೇಳಿದ್ದಾರೆ.

ಇನ್ನು ಸರ್ಕಾರ ಉರುಳಿಸುವ ಸಂಚಿನ ಕುರಿತಂತೆ ಸಚಿನ್ ಪೈಲಟ್‌ಗೆ ಸಮನ್ಸ್ ಕೊಟ್ಟು ಟೀಕೆಗೊಳಗಾಗಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಸಿಎಂ, ಡಿಸಿಎಂ, ಚೀಫ್ ವಿಪ್ ಸೇರಿದಂತೆ ಇತರ ಕೆಲವು ಮಂತ್ರಿಗಳು ಮತ್ತು ಶಾಸಕರು ಬಿಜೆಪಿಯಿಂದ ಕುದುರೆ ವ್ಯಾಪಾರದ ಕುರಿತು ಕಾಂಗ್ರೆಸ್ ಶಾಸಕಾಂಗ ಪಕ್ಷದ ದೂರಿಗೆ ಸಂಬಂಧಿಸಿದಂತೆ ತಮ್ಮ ಹೇಳಿಕೆಗಳನ್ನು ದಾಖಲಿಸಲು ಎಸ್‌ಒಜಿಯಿಂದ ನೋಟಿಸ್ ಪಡೆದಿದ್ದಾರೆ. ಕೆಲವು ಮಾಧ್ಯಮಗಳು ಇದನ್ನು ವಿಭಿನ್ನವಾಗಿ ಪ್ರಸ್ತುತಪಡಿಸುವುದು ಸೂಕ್ತವಲ್ಲ ಎಂದು ಗೆಹ್ಲೋಟ್ ಹೇಳಿದ್ದಾರೆ.


ಇದನ್ನೂ ಓದಿ: ನಾವು ಯಾವಾಗ ಎಚ್ಚರಗೊಳ್ಳುತ್ತೇವೆ? ರಾಜಸ್ಥಾನ ಬಿಕ್ಕಟ್ಟಿನ ಮಧ್ಯೆ ಕಪಿಲ್ ಸಿಬಲ್ ಆತ್ಮಾವಲೋಕನ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...