Homeಕರ್ನಾಟಕಗೌರಿ ನುಡಿನಮನ: ಕೆಲವರು ಬದುಕಿದ್ದರೂ ಸತ್ತಂತೆ ಇರುತ್ತಾರೆ, ಆದರೆ ಗೌರಿ ಲಂಕೇಶ್‌ ಮರಣದ ನಂತರವೂ ಮತ್ತೆ...

ಗೌರಿ ನುಡಿನಮನ: ಕೆಲವರು ಬದುಕಿದ್ದರೂ ಸತ್ತಂತೆ ಇರುತ್ತಾರೆ, ಆದರೆ ಗೌರಿ ಲಂಕೇಶ್‌ ಮರಣದ ನಂತರವೂ ಮತ್ತೆ ಮತ್ತೆ ಜೀವಂತ; ದಿನೇಶ್ ಅಮೀನ್‌ಮಟ್ಟು

- Advertisement -
- Advertisement -

ಬೆಂಗಳೂರು: ಪತ್ರಕರ್ತೆ ಮತ್ತು ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ ಎಂಟನೇ ಪುಣ್ಯಸ್ಮರಣೆಯನ್ನು ಸೆಪ್ಟೆಂಬರ್ 5ರಂದು ಬೆಂಗಳೂರಿನ ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅವರ ಸಮಾಧಿ ಬಳಿ ‘ಗೌರಿ ನುಡಿನಮನ’ ಕಾರ್ಯಕ್ರಮದ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು, ಹೋರಾಟಗಾರರು, ಪತ್ರಕರ್ತರು ಮತ್ತು ಅಭಿಮಾನಿಗಳು ಗೌರಿ ಅವರ ಆದರ್ಶಗಳನ್ನು ಸ್ಮರಿಸಿ, ಅವರ ಹೋರಾಟವನ್ನು ಮುಂದುವರೆಸುವ ಸಂಕಲ್ಪ ಮಾಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು, ಗೌರಿ ಲಂಕೇಶ್‌ ಅವರ ಹೋರಾಟ ಮತ್ತು ಆದರ್ಶಗಳನ್ನು ನೆನಪಿಸಿಕೊಂಡು, “ಕೆಲವರು ಬದುಕಿದ್ದರೂ ಸತ್ತಂತೆ ಇರುತ್ತಾರೆ, ಆದರೆ ಗೌರಿ ಲಂಕೇಶ್‌ ಅವರಂತಹ ಹೋರಾಟಗಾರರು ಮರಣದ ನಂತರವೂ ಮತ್ತೆ ಮತ್ತೆ ಜೀವಂತವಾಗಿರುತ್ತಾರೆ. ನಾವೆಲ್ಲರೂ ಬದುಕಿದ್ದರೂ ಸತ್ತಂತೆ ಇದ್ದೇವೆ ಎಂಬ ಭಾವನೆ ಒಮ್ಮೊಮ್ಮೆ ನನ್ನನ್ನೂ ಕಾಡುತ್ತದೆ” ಎಂದು ಹೇಳಿದರು.

ಗೌರಿ ಲಂಕೇಶ್‌ ಜನಪ್ರಿಯ ನಾಯಕಿಯಾಗಿರಲಿಲ್ಲ, ಘನಘೋರ ಭಾಷಣಕಾರರಾಗಲಿ ಅಥವಾ ದೊಡ್ಡ ಸಂಘಟನೆಗಳ ನಾಯಕಿಯಾಗಿರಲಿ ಇರಲಿಲ್ಲ. ಅವರದ್ದು ಪ್ರೀತಿ, ಕರುಣೆ, ಸತ್ಯ, ನ್ಯಾಯ, ಎಚ್ಚರ ಮತ್ತು ಧೈರ್ಯದಿಂದ ತುಂಬಿದ ವ್ಯಕ್ತಿತ್ವ. ಸಮಾಜದ ನೋವಿಗೆ ಸ್ಪಂದಿಸಲು ’56 ಇಂಚಿನ ಎದೆ’ ಬೇಕಾಗಿಲ್ಲ, ಬದಲಾಗಿ ತಾಯಿ ಹೃದಯದ ನಾಯಕರು ಮತ್ತು ನಾಯಕಿಯರು ಬೇಕಾಗಿದ್ದಾರೆ ಎಂಬುದನ್ನು ಗೌರಿ ತಮ್ಮ ಬದುಕಿನ ಮೂಲಕ ತೋರಿಸಿಕೊಟ್ಟಿದ್ದಾರೆ ಎಂದು ಅವರು ನುಡಿದರು.

ಎಲ್ಲರನ್ನೂ ಒಗ್ಗೂಡಿಸುವ ಶಕ್ತಿ ಮತ್ತು ಇಂದಿನ ಸವಾಲುಗಳು

ದಿನೇಶ್ ಅಮಿನ್ ಮಟ್ಟು ಅವರು ಗೌರಿ ಲಂಕೇಶ್‌ ಅವರ ವ್ಯಕ್ತಿತ್ವದ ಮತ್ತೊಂದು ದೊಡ್ಡ ಶಕ್ತಿಯನ್ನು ಅನಾವರಣಗೊಳಿಸಿದರು. “ಗೌರಿ ಅವರಿಗೆ ಎಲ್ಲರನ್ನೂ ಒಳಗೆ ತೆಗೆದುಕೊಳ್ಳುವ ಮತ್ತು ಒಗ್ಗೂಡಿಸುವ ಒಂದು ವಿಶೇಷ ಗುಣವಿತ್ತು. ಅವರು ನಾಡಿನ ಮುಖ್ಯಮಂತ್ರಿಗಳಿಂದ ಹಿಡಿದು ಕಾಡಿನ ಮೂಲೆಯಲ್ಲಿರುವವರನ್ನೂ ಒಪ್ಪಿಸಿಕೊಂಡು, ಜೊತೆಗೆ ಕರೆದುಕೊಂಡು ಹೋಗುವ ಸಾಮರ್ಥ್ಯ ಹೊಂದಿದ್ದರು” ಎಂದರು. ಸಮಾಜದಲ್ಲಿ ಜಾತ್ಯತೀತರು, ಸಾಮಾಜಿಕ ನ್ಯಾಯದ ಪರ ಇರುವವರು ಮತ್ತು ಸಜ್ಜನರ ಸಂಖ್ಯೆ ಹೆಚ್ಚಿದ್ದರೂ, ಇವರೆಲ್ಲರೂ ಚೆಲ್ಲಾಪಿಲ್ಲಿಯಾಗಿ ಹೋಗಿದ್ದಾರೆ. ಇಂತಹ ಶಕ್ತಿಗಳನ್ನು ಒಗ್ಗೂಡಿಸುವ ಕೌಶಲ್ಯ ಗೌರಿ ಲಂಕೇಶ್‌ ಅವರಲ್ಲಿತ್ತು. “ಕಳೆದ ಎಂಟು ವರ್ಷಗಳಲ್ಲಿ ನೂರಾರು ‘ಗೌರಿ’ಗಳು ಹುಟ್ಟಿಕೊಂಡಿದ್ದಾರೆ, ‘ನಾವೆಲ್ಲರೂ ಗೌರಿ’ ಎಂದು ಕರೆದುಕೊಂಡೆವು. ಆದರೆ ಇನ್ನೊಬ್ಬ ಗೌರಿಯನ್ನು ಸೃಷ್ಟಿಸಲು ಸಾಧ್ಯವಾಗಿಲ್ಲ” ಎಂದು ಅವರು ವಿಷಾದಿಸಿದರು.

ಇಂದಿನ ವಾಸ್ತವ ಪರಿಸ್ಥಿತಿಯ ಕುರಿತು ಕಳವಳ ವ್ಯಕ್ತಪಡಿಸಿದ ಮಟ್ಟು, “ಉಮರ್ ಖಾಲಿದ್ ಅವರಂತಹ ಹೋರಾಟಗಾರರು ಇನ್ನೂ ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಸೂಚ್ಯಂಕದಲ್ಲಿ ಭಾರತವು ಅತ್ಯಂತ ಕೆಳಗೆ ತಲುಪಿದೆ” ಎಂದು ಹೇಳಿದರು. ಗೌರಿ ಯಾವ ಭೀತಿಯನ್ನು ಕಂಡು ಹೋರಾಟಕ್ಕೆ ಇಳಿದಿದ್ದರೋ, ಅದು ಇಂದು ವಾಸ್ತವವಾಗುತ್ತಿದೆ. ಅವರ ಹತ್ಯೆಯ ಪ್ರಕರಣದ ವಿಚಾರಣೆ ವಿಳಂಬವಾಗುತ್ತಿದ್ದು, ನ್ಯಾಯಾಂಗದ ಪ್ರಕ್ರಿಯೆಗಳ ಮೇಲೆ ಸವಾಲುಗಳು ಹೆಚ್ಚಾಗಿವೆ. ಗೌರಿ ಬಿಟ್ಟು ಹೋದ ಹೋರಾಟದ ನಿರ್ವಾತವನ್ನು ತುಂಬಲು ನಮಗೆ ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ನಾವೆಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು. ಗೌರಿ ಬಯಸಿದ್ದಂತಹ ಸಮಾಜವನ್ನು ನಿರ್ಮಿಸುವುದು ಒಂದು ನಿರಂತರ ಪ್ರಕ್ರಿಯೆ. ಆ ಹಾದಿಯಲ್ಲಿ ನಾವೆಲ್ಲರೂ ಸಾಗಬೇಕಿದೆ ಎಂದು ಅವರು ಕರೆ ನೀಡಿದರು.

ಗಣ್ಯರ ಉಪಸ್ಥಿತಿ

ಈ ‘ಗೌರಿ ನುಡಿನಮನ’ ಕಾರ್ಯಕ್ರಮದಲ್ಲಿ ಬಿ.ಟಿ.ಲಲಿತಾ ನಾಯಕ್, ಗೌರಿ ಲಂಕೇಶ್‌ ಅವರ ಸಹೋದರಿ ಕವಿತಾ ಲಂಕೇಶ್, ಡಾ. ವಿಜಯಮ್ಮ, ಶಿವಸುಂದರ್, ಕೆ. ಬಾಲು, ವಿ.ಆರ್. ಕಾರ್ಪೆಂಟರ್, ಅಂಬಣ್ಣ ಅರೋಲಿಕರ್, ವಿ.ಎಸ್. ಶ್ರೀಧರ್, ದೊಡ್ಡಿಪಾಳ್ಯ ನರಸಿಂಹಮೂರ್ತಿ, ಕೆ.ಎಲ್. ಅಶೋಕ್, ನೂರ್ ಶ್ರೀಧರ್ ಮತ್ತು ರಾಜಲಕ್ಷ್ಮಿ ಅಂಕಲಗಿ ಸೇರಿದಂತೆ ಅನೇಕ ಗಣ್ಯರು, ಹೋರಾಟಗಾರರು, ಪತ್ರಕರ್ತರು ಮತ್ತು ಗೌರಿ ಲಂಕೇಶ್‌ ಅವರ ಅಭಿಮಾನಿಗಳು ಭಾಗವಹಿಸಿದ್ದರು. ಎಲ್ಲರೂ ಗೌರಿ ಅವರ ಆದರ್ಶಗಳನ್ನು ನೆನಪಿಸಿಕೊಂಡು, ಅವರ ಹೋರಾಟವನ್ನು ಮುಂದುವರೆಸುವ ಸಂಕಲ್ಪ ಮಾಡಿದರು.

ಗೌರಿ ನುಡಿನಮನ: ಗುಂಡೇಟು ತಿಂದು ಸಾವನ್ನಪ್ಪಿದ ಗೌರಿ ನಮ್ಮೆಲ್ಲರ ಮನಸ್ಸಿನಲ್ಲಿ ಸದಾ ನೆನಸಿರುತ್ತಾರೆ; ಬಿ.ಟಿ.ಲಲಿತಾ ನಾಯಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...