Homeಕರ್ನಾಟಕಗೌರಿ ನುಡಿನಮನ: ಕೆಲವರು ಬದುಕಿದ್ದರೂ ಸತ್ತಂತೆ ಇರುತ್ತಾರೆ, ಆದರೆ ಗೌರಿ ಲಂಕೇಶ್‌ ಮರಣದ ನಂತರವೂ ಮತ್ತೆ...

ಗೌರಿ ನುಡಿನಮನ: ಕೆಲವರು ಬದುಕಿದ್ದರೂ ಸತ್ತಂತೆ ಇರುತ್ತಾರೆ, ಆದರೆ ಗೌರಿ ಲಂಕೇಶ್‌ ಮರಣದ ನಂತರವೂ ಮತ್ತೆ ಮತ್ತೆ ಜೀವಂತ; ದಿನೇಶ್ ಅಮೀನ್‌ಮಟ್ಟು

- Advertisement -
- Advertisement -

ಬೆಂಗಳೂರು: ಪತ್ರಕರ್ತೆ ಮತ್ತು ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ ಎಂಟನೇ ಪುಣ್ಯಸ್ಮರಣೆಯನ್ನು ಸೆಪ್ಟೆಂಬರ್ 5ರಂದು ಬೆಂಗಳೂರಿನ ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅವರ ಸಮಾಧಿ ಬಳಿ ‘ಗೌರಿ ನುಡಿನಮನ’ ಕಾರ್ಯಕ್ರಮದ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು, ಹೋರಾಟಗಾರರು, ಪತ್ರಕರ್ತರು ಮತ್ತು ಅಭಿಮಾನಿಗಳು ಗೌರಿ ಅವರ ಆದರ್ಶಗಳನ್ನು ಸ್ಮರಿಸಿ, ಅವರ ಹೋರಾಟವನ್ನು ಮುಂದುವರೆಸುವ ಸಂಕಲ್ಪ ಮಾಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು, ಗೌರಿ ಲಂಕೇಶ್‌ ಅವರ ಹೋರಾಟ ಮತ್ತು ಆದರ್ಶಗಳನ್ನು ನೆನಪಿಸಿಕೊಂಡು, “ಕೆಲವರು ಬದುಕಿದ್ದರೂ ಸತ್ತಂತೆ ಇರುತ್ತಾರೆ, ಆದರೆ ಗೌರಿ ಲಂಕೇಶ್‌ ಅವರಂತಹ ಹೋರಾಟಗಾರರು ಮರಣದ ನಂತರವೂ ಮತ್ತೆ ಮತ್ತೆ ಜೀವಂತವಾಗಿರುತ್ತಾರೆ. ನಾವೆಲ್ಲರೂ ಬದುಕಿದ್ದರೂ ಸತ್ತಂತೆ ಇದ್ದೇವೆ ಎಂಬ ಭಾವನೆ ಒಮ್ಮೊಮ್ಮೆ ನನ್ನನ್ನೂ ಕಾಡುತ್ತದೆ” ಎಂದು ಹೇಳಿದರು.

ಗೌರಿ ಲಂಕೇಶ್‌ ಜನಪ್ರಿಯ ನಾಯಕಿಯಾಗಿರಲಿಲ್ಲ, ಘನಘೋರ ಭಾಷಣಕಾರರಾಗಲಿ ಅಥವಾ ದೊಡ್ಡ ಸಂಘಟನೆಗಳ ನಾಯಕಿಯಾಗಿರಲಿ ಇರಲಿಲ್ಲ. ಅವರದ್ದು ಪ್ರೀತಿ, ಕರುಣೆ, ಸತ್ಯ, ನ್ಯಾಯ, ಎಚ್ಚರ ಮತ್ತು ಧೈರ್ಯದಿಂದ ತುಂಬಿದ ವ್ಯಕ್ತಿತ್ವ. ಸಮಾಜದ ನೋವಿಗೆ ಸ್ಪಂದಿಸಲು ’56 ಇಂಚಿನ ಎದೆ’ ಬೇಕಾಗಿಲ್ಲ, ಬದಲಾಗಿ ತಾಯಿ ಹೃದಯದ ನಾಯಕರು ಮತ್ತು ನಾಯಕಿಯರು ಬೇಕಾಗಿದ್ದಾರೆ ಎಂಬುದನ್ನು ಗೌರಿ ತಮ್ಮ ಬದುಕಿನ ಮೂಲಕ ತೋರಿಸಿಕೊಟ್ಟಿದ್ದಾರೆ ಎಂದು ಅವರು ನುಡಿದರು.

ಎಲ್ಲರನ್ನೂ ಒಗ್ಗೂಡಿಸುವ ಶಕ್ತಿ ಮತ್ತು ಇಂದಿನ ಸವಾಲುಗಳು

ದಿನೇಶ್ ಅಮಿನ್ ಮಟ್ಟು ಅವರು ಗೌರಿ ಲಂಕೇಶ್‌ ಅವರ ವ್ಯಕ್ತಿತ್ವದ ಮತ್ತೊಂದು ದೊಡ್ಡ ಶಕ್ತಿಯನ್ನು ಅನಾವರಣಗೊಳಿಸಿದರು. “ಗೌರಿ ಅವರಿಗೆ ಎಲ್ಲರನ್ನೂ ಒಳಗೆ ತೆಗೆದುಕೊಳ್ಳುವ ಮತ್ತು ಒಗ್ಗೂಡಿಸುವ ಒಂದು ವಿಶೇಷ ಗುಣವಿತ್ತು. ಅವರು ನಾಡಿನ ಮುಖ್ಯಮಂತ್ರಿಗಳಿಂದ ಹಿಡಿದು ಕಾಡಿನ ಮೂಲೆಯಲ್ಲಿರುವವರನ್ನೂ ಒಪ್ಪಿಸಿಕೊಂಡು, ಜೊತೆಗೆ ಕರೆದುಕೊಂಡು ಹೋಗುವ ಸಾಮರ್ಥ್ಯ ಹೊಂದಿದ್ದರು” ಎಂದರು. ಸಮಾಜದಲ್ಲಿ ಜಾತ್ಯತೀತರು, ಸಾಮಾಜಿಕ ನ್ಯಾಯದ ಪರ ಇರುವವರು ಮತ್ತು ಸಜ್ಜನರ ಸಂಖ್ಯೆ ಹೆಚ್ಚಿದ್ದರೂ, ಇವರೆಲ್ಲರೂ ಚೆಲ್ಲಾಪಿಲ್ಲಿಯಾಗಿ ಹೋಗಿದ್ದಾರೆ. ಇಂತಹ ಶಕ್ತಿಗಳನ್ನು ಒಗ್ಗೂಡಿಸುವ ಕೌಶಲ್ಯ ಗೌರಿ ಲಂಕೇಶ್‌ ಅವರಲ್ಲಿತ್ತು. “ಕಳೆದ ಎಂಟು ವರ್ಷಗಳಲ್ಲಿ ನೂರಾರು ‘ಗೌರಿ’ಗಳು ಹುಟ್ಟಿಕೊಂಡಿದ್ದಾರೆ, ‘ನಾವೆಲ್ಲರೂ ಗೌರಿ’ ಎಂದು ಕರೆದುಕೊಂಡೆವು. ಆದರೆ ಇನ್ನೊಬ್ಬ ಗೌರಿಯನ್ನು ಸೃಷ್ಟಿಸಲು ಸಾಧ್ಯವಾಗಿಲ್ಲ” ಎಂದು ಅವರು ವಿಷಾದಿಸಿದರು.

ಇಂದಿನ ವಾಸ್ತವ ಪರಿಸ್ಥಿತಿಯ ಕುರಿತು ಕಳವಳ ವ್ಯಕ್ತಪಡಿಸಿದ ಮಟ್ಟು, “ಉಮರ್ ಖಾಲಿದ್ ಅವರಂತಹ ಹೋರಾಟಗಾರರು ಇನ್ನೂ ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಸೂಚ್ಯಂಕದಲ್ಲಿ ಭಾರತವು ಅತ್ಯಂತ ಕೆಳಗೆ ತಲುಪಿದೆ” ಎಂದು ಹೇಳಿದರು. ಗೌರಿ ಯಾವ ಭೀತಿಯನ್ನು ಕಂಡು ಹೋರಾಟಕ್ಕೆ ಇಳಿದಿದ್ದರೋ, ಅದು ಇಂದು ವಾಸ್ತವವಾಗುತ್ತಿದೆ. ಅವರ ಹತ್ಯೆಯ ಪ್ರಕರಣದ ವಿಚಾರಣೆ ವಿಳಂಬವಾಗುತ್ತಿದ್ದು, ನ್ಯಾಯಾಂಗದ ಪ್ರಕ್ರಿಯೆಗಳ ಮೇಲೆ ಸವಾಲುಗಳು ಹೆಚ್ಚಾಗಿವೆ. ಗೌರಿ ಬಿಟ್ಟು ಹೋದ ಹೋರಾಟದ ನಿರ್ವಾತವನ್ನು ತುಂಬಲು ನಮಗೆ ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ನಾವೆಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು. ಗೌರಿ ಬಯಸಿದ್ದಂತಹ ಸಮಾಜವನ್ನು ನಿರ್ಮಿಸುವುದು ಒಂದು ನಿರಂತರ ಪ್ರಕ್ರಿಯೆ. ಆ ಹಾದಿಯಲ್ಲಿ ನಾವೆಲ್ಲರೂ ಸಾಗಬೇಕಿದೆ ಎಂದು ಅವರು ಕರೆ ನೀಡಿದರು.

ಗಣ್ಯರ ಉಪಸ್ಥಿತಿ

ಈ ‘ಗೌರಿ ನುಡಿನಮನ’ ಕಾರ್ಯಕ್ರಮದಲ್ಲಿ ಬಿ.ಟಿ.ಲಲಿತಾ ನಾಯಕ್, ಗೌರಿ ಲಂಕೇಶ್‌ ಅವರ ಸಹೋದರಿ ಕವಿತಾ ಲಂಕೇಶ್, ಡಾ. ವಿಜಯಮ್ಮ, ಶಿವಸುಂದರ್, ಕೆ. ಬಾಲು, ವಿ.ಆರ್. ಕಾರ್ಪೆಂಟರ್, ಅಂಬಣ್ಣ ಅರೋಲಿಕರ್, ವಿ.ಎಸ್. ಶ್ರೀಧರ್, ದೊಡ್ಡಿಪಾಳ್ಯ ನರಸಿಂಹಮೂರ್ತಿ, ಕೆ.ಎಲ್. ಅಶೋಕ್, ನೂರ್ ಶ್ರೀಧರ್ ಮತ್ತು ರಾಜಲಕ್ಷ್ಮಿ ಅಂಕಲಗಿ ಸೇರಿದಂತೆ ಅನೇಕ ಗಣ್ಯರು, ಹೋರಾಟಗಾರರು, ಪತ್ರಕರ್ತರು ಮತ್ತು ಗೌರಿ ಲಂಕೇಶ್‌ ಅವರ ಅಭಿಮಾನಿಗಳು ಭಾಗವಹಿಸಿದ್ದರು. ಎಲ್ಲರೂ ಗೌರಿ ಅವರ ಆದರ್ಶಗಳನ್ನು ನೆನಪಿಸಿಕೊಂಡು, ಅವರ ಹೋರಾಟವನ್ನು ಮುಂದುವರೆಸುವ ಸಂಕಲ್ಪ ಮಾಡಿದರು.

ಗೌರಿ ನುಡಿನಮನ: ಗುಂಡೇಟು ತಿಂದು ಸಾವನ್ನಪ್ಪಿದ ಗೌರಿ ನಮ್ಮೆಲ್ಲರ ಮನಸ್ಸಿನಲ್ಲಿ ಸದಾ ನೆನಸಿರುತ್ತಾರೆ; ಬಿ.ಟಿ.ಲಲಿತಾ ನಾಯಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...