Homeಮುಖಪುಟಕುನಾಲ್ ಕಮ್ರಾಗೆ ನಿಷೇಧ ವಿರೋಧಿಸಿ, ಇಂಡಿಗೊ ವಿಮಾನದ ಒಳಗೆ ಪ್ರತಿಭಟಿಸಿದ ಜನ!

ಕುನಾಲ್ ಕಮ್ರಾಗೆ ನಿಷೇಧ ವಿರೋಧಿಸಿ, ಇಂಡಿಗೊ ವಿಮಾನದ ಒಳಗೆ ಪ್ರತಿಭಟಿಸಿದ ಜನ!

- Advertisement -
- Advertisement -

ಕಾಮಿಡಿಯನ್‌ ಕುನಾಲ್ ಕಮ್ರಾ ಅವರೊಂದಿಗೆ ಒಗ್ಗಟ್ಟನ್ನು ತೋರಿಸಲು ಕಾರ್ಯಕರ್ತರ ಗುಂಪೊಂದು ವಾರಣಾಸಿ-ದೆಹಲಿ ನಡುವೆ ಸಂಚರಿಸುವ ಇಂಡಿಗೊ ವಿಮಾನದಲ್ಲಿ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ಟಿವಿ ನಿರೂಪಕ ಅರ್ನಾಬ್ ಗೋಸ್ವಾಮಿ ಅವರನ್ನು ಎದುರಿಸಿದ ಕಾಮಿಡಿಯನ್‌ ಕುನಾಲ್ ಕಮ್ರಾ ಅವರಿಗೆ ಆರು ತಿಂಗಳ ಕಾಲದ ನಿಷೇಧವನ್ನು ಖಂಡಿಸಿ ಆಕ್ಟಿವಿಸ್ಟ್‌ ಪ್ರಿಯಾ ಪಿಳ್ಳೈ ಮತ್ತು ಇತರ ಮೂವರು ವಾರಣಾಸಿ-ದೆಹಲಿ ಇಂಡಿಗೊ ವಿಮಾನದಲ್ಲಿ ಗುರುವಾರ ಫಲಕಗಳನ್ನು ಹಿಡಿದಿದ್ದರು.

ಇದೇ ವೇಳೆ ಟ್ವಿಟ್ಟರ್‌ನಲ್ಲಿ #boycottIndigo ಟ್ರೆಂಡಿಂಗ್ ಆಗಿರುವಾಗಲೇ ಕಮ್ರಾವನ್ನು ನಿಷೇಧಿಸಿದ ಇಂಡಿಗೊ ನಡೆಯನ್ನು ವಿರೋಧಿಸಲು ಕೆಲವರು, ಸ್ಪಷ್ಟವಾಗಿ ವಿಮಾನದ ಒಳಗಿನ ಜಾಗವನ್ನೇ ಆಕ್ರಮಿಸಿಕೊಂಡಿದ್ದಾರೆ.

ಇಂಡಿಗೊ ಫ್ಲೈಟ್ ಪೈಲಟ್ ಕೂಡ ಈ ನಿಷೇಧದ ಕ್ರಮವನ್ನು ಟೀಕಿಸಿದ್ದಾರೆ. ಅಲ್ಲದೇ ಕುನಾಲ್ ಕರ್ಮ ಇಂಡಿಗೊ ವಿರುದ್ಧ 25 ಲಕ್ಷ ರೂಗಳ ಮಾನನಷ್ಟ ಮೊಕದ್ದಮೆ ಸಹ ಹೂಡಿದ್ದಾರೆ.

ಪತ್ರಿಕಾ ಡಾಟ್ ಕಾಮ್ ವರದಿಯ ಪ್ರಕಾರ, ಕೆಲವು ಜನರು ಕುನಾಲ್ ಕಮ್ರಾ ಅವರನ್ನು ಇಂಡಿಗೊ ನಿಷೇಧಿಸಿರುವುದನ್ನು ವಿರೋಧಿಸಿ ಪ್ರತಿಭಟಿಸಲು ಪ್ರಾರಂಭಿಸಿದರು … ವಾರಣಾಸಿಯಿಂದ ದೆಹಲಿಗೆ ಪ್ರಯಾಣಿಸುವ ಇಂಡಿಗೊ ವಿಮಾನದ ಒಳಗೆ.

‘ಕುನಾಲ್ ಕಮ್ರಾ ಪರ ನಾವಿದ್ದೇವೆ. ನೀವು ನಮ್ಮನ್ನು ವಿಭಜಿಸಿದಷ್ಟು ನಾವು ಒಗ್ಗೂಡುತ್ತೇವೆ ಮತ್ತು ಡಬಲ್‌ ಆಗುತ್ತೇವೆ. ನಿಷೇಧವನ್ನು ನಾವು ಖಂಡಿಸುತ್ತೇವೆ’ ಎಂದು ಹೇಳುವ ಪೋಸ್ಟರ್‌ಗಳನ್ನು ಕೆಲವು ಪ್ರತಿಭಟನಾಕಾರರು ಹಿಡಿದಿರುವ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ.

ಚಿತ್ರಗಳು ಮತ್ತು ವೈರಲ್ ವೀಡಿಯೊಗಳು ತೋರಿಸುವಂತೆ ಪ್ರತಿಭಟನಾಕಾರರು ಮೌನವಾಗಿ ಪೋಸ್ಟರ್‌ಗಳನ್ನು ಹಿಡಿದಿಟ್ಟುಕೊಂಡಿದ್ದಾರೆ, ಮತ್ತು ಇತರ ಪ್ರಯಾಣಿಕರು ತಮ್ಮ ಅದನ್ನು ಗಮನದಿಂದ ಓದುತ್ತಿದ್ದಾರೆ.

ನಂತರ ಸಿಬ್ಬಂದಿ ಬಂದು ಕುಳಿತುಕೊಳ್ಳಲು ಹೇಳಿದ್ದಾರೆ. ಅಲ್ಲಿಗೆ ಶಾಂತಿಯುತ ಪ್ರತಿಭಟನೆ ಮುಗಿದಿದೆ. ಯಾವುದೇ ವಾದ ವಿವಾದಗಳು ದಾಖಲಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...