Homeಮುಖಪುಟಕುನಾಲ್ ಕಮ್ರಾಗೆ ನಿಷೇಧ ವಿರೋಧಿಸಿ, ಇಂಡಿಗೊ ವಿಮಾನದ ಒಳಗೆ ಪ್ರತಿಭಟಿಸಿದ ಜನ!

ಕುನಾಲ್ ಕಮ್ರಾಗೆ ನಿಷೇಧ ವಿರೋಧಿಸಿ, ಇಂಡಿಗೊ ವಿಮಾನದ ಒಳಗೆ ಪ್ರತಿಭಟಿಸಿದ ಜನ!

- Advertisement -
- Advertisement -

ಕಾಮಿಡಿಯನ್‌ ಕುನಾಲ್ ಕಮ್ರಾ ಅವರೊಂದಿಗೆ ಒಗ್ಗಟ್ಟನ್ನು ತೋರಿಸಲು ಕಾರ್ಯಕರ್ತರ ಗುಂಪೊಂದು ವಾರಣಾಸಿ-ದೆಹಲಿ ನಡುವೆ ಸಂಚರಿಸುವ ಇಂಡಿಗೊ ವಿಮಾನದಲ್ಲಿ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ಟಿವಿ ನಿರೂಪಕ ಅರ್ನಾಬ್ ಗೋಸ್ವಾಮಿ ಅವರನ್ನು ಎದುರಿಸಿದ ಕಾಮಿಡಿಯನ್‌ ಕುನಾಲ್ ಕಮ್ರಾ ಅವರಿಗೆ ಆರು ತಿಂಗಳ ಕಾಲದ ನಿಷೇಧವನ್ನು ಖಂಡಿಸಿ ಆಕ್ಟಿವಿಸ್ಟ್‌ ಪ್ರಿಯಾ ಪಿಳ್ಳೈ ಮತ್ತು ಇತರ ಮೂವರು ವಾರಣಾಸಿ-ದೆಹಲಿ ಇಂಡಿಗೊ ವಿಮಾನದಲ್ಲಿ ಗುರುವಾರ ಫಲಕಗಳನ್ನು ಹಿಡಿದಿದ್ದರು.

ಇದೇ ವೇಳೆ ಟ್ವಿಟ್ಟರ್‌ನಲ್ಲಿ #boycottIndigo ಟ್ರೆಂಡಿಂಗ್ ಆಗಿರುವಾಗಲೇ ಕಮ್ರಾವನ್ನು ನಿಷೇಧಿಸಿದ ಇಂಡಿಗೊ ನಡೆಯನ್ನು ವಿರೋಧಿಸಲು ಕೆಲವರು, ಸ್ಪಷ್ಟವಾಗಿ ವಿಮಾನದ ಒಳಗಿನ ಜಾಗವನ್ನೇ ಆಕ್ರಮಿಸಿಕೊಂಡಿದ್ದಾರೆ.

ಇಂಡಿಗೊ ಫ್ಲೈಟ್ ಪೈಲಟ್ ಕೂಡ ಈ ನಿಷೇಧದ ಕ್ರಮವನ್ನು ಟೀಕಿಸಿದ್ದಾರೆ. ಅಲ್ಲದೇ ಕುನಾಲ್ ಕರ್ಮ ಇಂಡಿಗೊ ವಿರುದ್ಧ 25 ಲಕ್ಷ ರೂಗಳ ಮಾನನಷ್ಟ ಮೊಕದ್ದಮೆ ಸಹ ಹೂಡಿದ್ದಾರೆ.

ಪತ್ರಿಕಾ ಡಾಟ್ ಕಾಮ್ ವರದಿಯ ಪ್ರಕಾರ, ಕೆಲವು ಜನರು ಕುನಾಲ್ ಕಮ್ರಾ ಅವರನ್ನು ಇಂಡಿಗೊ ನಿಷೇಧಿಸಿರುವುದನ್ನು ವಿರೋಧಿಸಿ ಪ್ರತಿಭಟಿಸಲು ಪ್ರಾರಂಭಿಸಿದರು … ವಾರಣಾಸಿಯಿಂದ ದೆಹಲಿಗೆ ಪ್ರಯಾಣಿಸುವ ಇಂಡಿಗೊ ವಿಮಾನದ ಒಳಗೆ.

‘ಕುನಾಲ್ ಕಮ್ರಾ ಪರ ನಾವಿದ್ದೇವೆ. ನೀವು ನಮ್ಮನ್ನು ವಿಭಜಿಸಿದಷ್ಟು ನಾವು ಒಗ್ಗೂಡುತ್ತೇವೆ ಮತ್ತು ಡಬಲ್‌ ಆಗುತ್ತೇವೆ. ನಿಷೇಧವನ್ನು ನಾವು ಖಂಡಿಸುತ್ತೇವೆ’ ಎಂದು ಹೇಳುವ ಪೋಸ್ಟರ್‌ಗಳನ್ನು ಕೆಲವು ಪ್ರತಿಭಟನಾಕಾರರು ಹಿಡಿದಿರುವ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ.

ಚಿತ್ರಗಳು ಮತ್ತು ವೈರಲ್ ವೀಡಿಯೊಗಳು ತೋರಿಸುವಂತೆ ಪ್ರತಿಭಟನಾಕಾರರು ಮೌನವಾಗಿ ಪೋಸ್ಟರ್‌ಗಳನ್ನು ಹಿಡಿದಿಟ್ಟುಕೊಂಡಿದ್ದಾರೆ, ಮತ್ತು ಇತರ ಪ್ರಯಾಣಿಕರು ತಮ್ಮ ಅದನ್ನು ಗಮನದಿಂದ ಓದುತ್ತಿದ್ದಾರೆ.

ನಂತರ ಸಿಬ್ಬಂದಿ ಬಂದು ಕುಳಿತುಕೊಳ್ಳಲು ಹೇಳಿದ್ದಾರೆ. ಅಲ್ಲಿಗೆ ಶಾಂತಿಯುತ ಪ್ರತಿಭಟನೆ ಮುಗಿದಿದೆ. ಯಾವುದೇ ವಾದ ವಿವಾದಗಳು ದಾಖಲಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...