Homeಮುಖಪುಟಕುನಾಲ್ ಕಮ್ರಾಗೆ ನಿಷೇಧ ವಿರೋಧಿಸಿ, ಇಂಡಿಗೊ ವಿಮಾನದ ಒಳಗೆ ಪ್ರತಿಭಟಿಸಿದ ಜನ!

ಕುನಾಲ್ ಕಮ್ರಾಗೆ ನಿಷೇಧ ವಿರೋಧಿಸಿ, ಇಂಡಿಗೊ ವಿಮಾನದ ಒಳಗೆ ಪ್ರತಿಭಟಿಸಿದ ಜನ!

- Advertisement -
- Advertisement -

ಕಾಮಿಡಿಯನ್‌ ಕುನಾಲ್ ಕಮ್ರಾ ಅವರೊಂದಿಗೆ ಒಗ್ಗಟ್ಟನ್ನು ತೋರಿಸಲು ಕಾರ್ಯಕರ್ತರ ಗುಂಪೊಂದು ವಾರಣಾಸಿ-ದೆಹಲಿ ನಡುವೆ ಸಂಚರಿಸುವ ಇಂಡಿಗೊ ವಿಮಾನದಲ್ಲಿ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ಟಿವಿ ನಿರೂಪಕ ಅರ್ನಾಬ್ ಗೋಸ್ವಾಮಿ ಅವರನ್ನು ಎದುರಿಸಿದ ಕಾಮಿಡಿಯನ್‌ ಕುನಾಲ್ ಕಮ್ರಾ ಅವರಿಗೆ ಆರು ತಿಂಗಳ ಕಾಲದ ನಿಷೇಧವನ್ನು ಖಂಡಿಸಿ ಆಕ್ಟಿವಿಸ್ಟ್‌ ಪ್ರಿಯಾ ಪಿಳ್ಳೈ ಮತ್ತು ಇತರ ಮೂವರು ವಾರಣಾಸಿ-ದೆಹಲಿ ಇಂಡಿಗೊ ವಿಮಾನದಲ್ಲಿ ಗುರುವಾರ ಫಲಕಗಳನ್ನು ಹಿಡಿದಿದ್ದರು.

ಇದೇ ವೇಳೆ ಟ್ವಿಟ್ಟರ್‌ನಲ್ಲಿ #boycottIndigo ಟ್ರೆಂಡಿಂಗ್ ಆಗಿರುವಾಗಲೇ ಕಮ್ರಾವನ್ನು ನಿಷೇಧಿಸಿದ ಇಂಡಿಗೊ ನಡೆಯನ್ನು ವಿರೋಧಿಸಲು ಕೆಲವರು, ಸ್ಪಷ್ಟವಾಗಿ ವಿಮಾನದ ಒಳಗಿನ ಜಾಗವನ್ನೇ ಆಕ್ರಮಿಸಿಕೊಂಡಿದ್ದಾರೆ.

ಇಂಡಿಗೊ ಫ್ಲೈಟ್ ಪೈಲಟ್ ಕೂಡ ಈ ನಿಷೇಧದ ಕ್ರಮವನ್ನು ಟೀಕಿಸಿದ್ದಾರೆ. ಅಲ್ಲದೇ ಕುನಾಲ್ ಕರ್ಮ ಇಂಡಿಗೊ ವಿರುದ್ಧ 25 ಲಕ್ಷ ರೂಗಳ ಮಾನನಷ್ಟ ಮೊಕದ್ದಮೆ ಸಹ ಹೂಡಿದ್ದಾರೆ.

ಪತ್ರಿಕಾ ಡಾಟ್ ಕಾಮ್ ವರದಿಯ ಪ್ರಕಾರ, ಕೆಲವು ಜನರು ಕುನಾಲ್ ಕಮ್ರಾ ಅವರನ್ನು ಇಂಡಿಗೊ ನಿಷೇಧಿಸಿರುವುದನ್ನು ವಿರೋಧಿಸಿ ಪ್ರತಿಭಟಿಸಲು ಪ್ರಾರಂಭಿಸಿದರು … ವಾರಣಾಸಿಯಿಂದ ದೆಹಲಿಗೆ ಪ್ರಯಾಣಿಸುವ ಇಂಡಿಗೊ ವಿಮಾನದ ಒಳಗೆ.

‘ಕುನಾಲ್ ಕಮ್ರಾ ಪರ ನಾವಿದ್ದೇವೆ. ನೀವು ನಮ್ಮನ್ನು ವಿಭಜಿಸಿದಷ್ಟು ನಾವು ಒಗ್ಗೂಡುತ್ತೇವೆ ಮತ್ತು ಡಬಲ್‌ ಆಗುತ್ತೇವೆ. ನಿಷೇಧವನ್ನು ನಾವು ಖಂಡಿಸುತ್ತೇವೆ’ ಎಂದು ಹೇಳುವ ಪೋಸ್ಟರ್‌ಗಳನ್ನು ಕೆಲವು ಪ್ರತಿಭಟನಾಕಾರರು ಹಿಡಿದಿರುವ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ.

ಚಿತ್ರಗಳು ಮತ್ತು ವೈರಲ್ ವೀಡಿಯೊಗಳು ತೋರಿಸುವಂತೆ ಪ್ರತಿಭಟನಾಕಾರರು ಮೌನವಾಗಿ ಪೋಸ್ಟರ್‌ಗಳನ್ನು ಹಿಡಿದಿಟ್ಟುಕೊಂಡಿದ್ದಾರೆ, ಮತ್ತು ಇತರ ಪ್ರಯಾಣಿಕರು ತಮ್ಮ ಅದನ್ನು ಗಮನದಿಂದ ಓದುತ್ತಿದ್ದಾರೆ.

ನಂತರ ಸಿಬ್ಬಂದಿ ಬಂದು ಕುಳಿತುಕೊಳ್ಳಲು ಹೇಳಿದ್ದಾರೆ. ಅಲ್ಲಿಗೆ ಶಾಂತಿಯುತ ಪ್ರತಿಭಟನೆ ಮುಗಿದಿದೆ. ಯಾವುದೇ ವಾದ ವಿವಾದಗಳು ದಾಖಲಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...