Homeಮುಖಪುಟಕೆಲವರು ನನಗೆ ಪ್ರಜಾಪ್ರಭುತ್ವದ ಪಾಠ ಕಲಿಸಲು ಬಯಸುತ್ತಿದ್ದಾರೆ: ತಿರುಗೇಟು ನೀಡಿದ ಪ್ರಧಾನಿ

ಕೆಲವರು ನನಗೆ ಪ್ರಜಾಪ್ರಭುತ್ವದ ಪಾಠ ಕಲಿಸಲು ಬಯಸುತ್ತಿದ್ದಾರೆ: ತಿರುಗೇಟು ನೀಡಿದ ಪ್ರಧಾನಿ

"ಭಾರತದಲ್ಲಿ ಪ್ರಜಾಪ್ರಭುತ್ವವಿಲ್ಲ. ಪ್ರಧಾನಿ ಮೋದಿ ವಿರುದ್ಧ ದನಿಯೆತ್ತಲು ಪ್ರಯತ್ನಿಸುವ ರೈತರು, ಕಾರ್ಮಿಕರು ಅಥವಾ RSS ಮುಖಂಡ ಮೋಹನ್ ಭಾಗವತ್ ಆವರೇ ಆಗಿದ್ದರೂ ಅವರನ್ನೂ ಸಹ ಭಯೋತ್ಪಾದಕರು ಎಂದು ಕರೆಯಲಾಗುತ್ತದೆ"

- Advertisement -
- Advertisement -

‘ದೆಹಲಿಯಲ್ಲಿ ಕೆಲವರು ನನಗೆ ಪ್ರಜಾಫ್ರಭುತ್ವದ ಪಾಠವನ್ನು ಕಲಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

“ಭಾರತದಲ್ಲಿ ಪ್ರಜಾಪ್ರಭುತ್ವವಿಲ್ಲ. ಇದ್ದರೆ ಅದು ನಿಮ್ಮ ಕಲ್ಪನೆಯಲ್ಲಿ ಮಾತ್ರ. ಪ್ರಧಾನಿ ಮೋದಿ ಕ್ರೋನಿ ಕ್ಯಾಪಿಟಲಿಸ್ಟ್‌ಗಳಿಗಾಗಿ ಹಣ ಸಂಪಾದಿಸುತ್ತಿದ್ದಾರೆ. ಅವರ ವಿರುದ್ಧ ದನಿಯೆತ್ತಲು ಪ್ರಯತ್ನಿಸುವ ರೈತರು, ಕಾರ್ಮಿಕರು ಅಥವಾ RSS ಮುಖಂಡ ಮೋಹನ್ ಭಾಗವತ್ ಆವರೇ ಆಗಿದ್ದರೂ ಸಹ ಅವರನ್ನೂ ಭಯೋತ್ಪಾದಕರು ಎಂದು ಕರೆಯಲಾಗುತ್ತದೆ” ಎಂದು ರಾಹುಲ್ ಗಾಂಧಿ ಇತ್ತೀಚೆಗೆ ಪ್ರಧಾನಿಯ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: ಪ್ರಧಾನಿ ವಿರುದ್ಧ ದನಿಯೆತ್ತಿದರೆ ಮೋಹನ್ ಭಾಗವತ್ ಕೂಡಾ ಭಯೋತ್ಪಾದಕರೇ! – ರಾಹುಲ್ ಗಾಂಧಿ

ಇಂದು ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಾರಂಭಿಸಿ ಮಾತನಾಡಿದ ಪ್ರಧಾನಿ, “ದೆಹಲಿಯಲ್ಲಿ ಯಾವಾಗಲೂ ನನ್ನನ್ನು ಕೆಣಕುವ ಮತ್ತು ಅವಮಾನಿಸುವ ಜನರಿದ್ದಾರೆ. ಅವರು ನನಗೆ ಪ್ರಜಾಪ್ರಭುತ್ವದ ಪಾಠಗಳನ್ನು ಕಲಿಸಲು ಬಯಸುತ್ತಿದ್ದಾರೆ. ಅವರಿಗೆ ಜಮ್ಮು ಮತ್ತು ಕಾಶ್ಮೀರದ ಡಿಡಿಸಿ (ಜಿಲ್ಲಾ ಅಭಿವೃದ್ಧಿ ಮಂಡಳಿ) ಚುನಾವಣೆಗಳನ್ನು ಪ್ರಜಾಪ್ರಭುತ್ವದ ಉದಾಹರಣೆಯಾಗಿ ತೋರಿಸಲು ಬಯಸುತ್ತೇನೆ” ಎಂದು ಹೇಳಿದರು.

“ಕೆಲವು ರಾಜಕೀಯ ಶಕ್ತಿಗಳು ಪ್ರಜಾಪ್ರಭುತ್ವದ ಬಗ್ಗೆ ಉಪನ್ಯಾಸ ನೀಡುತ್ತಲೇ ಇರುತ್ತವೆ. ಆದರೆ ಇದರಲ್ಲಿ ಅವರ ದ್ವಂದ್ವತೆಯನ್ನು ಕಾಣಬಹುದು. ಪುದುಚೇರಿಯಲ್ಲಿ ಆಡಳಿತ ನಡೆಸುವ ಪಕ್ಷವು, ಸುಪ್ರೀಂ ಕೋರ್ಟ್‌ನ ಆದೇಶದ ಹೊರತಾಗಿಯೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಿಲ್ಲ. ಆದರೆ ಜಮ್ಮು ಮತ್ತು ಕಾಶ್ಮೀರ ಒಕ್ಕೂಟದ ಭಾಗವಾದ ನಂತರ ಒಂದು ವರ್ಷದೊಳಗೆ ಪಂಚಾಯತ್ ಮಟ್ಟದ ಚುನಾವಣೆಗಳನ್ನು ನಡೆಸಿದೆ” ಪ್ರಧಾನಿ ಹೇಳಿದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಈ ರೈತ ದೆಹಲಿಯ ರೈತ ಹೋರಾಟದಲ್ಲಿ ಮೃತಪಟ್ಟಿದ್ದಾರೆಯೇ?

ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಯ ಚುನಾವಣೆಯು “ಪ್ರಜಾಪ್ರಭುತ್ವದ ಬೇರುಗಳನ್ನು ಬಲಪಡಿಸಿದೆ” ಎಂದು ಹೇಳಿದ ಪ್ರಧಾನಿ, ಏಳು ಹಂತದ ಚುನಾವಣೆಯಲ್ಲಿ ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಕ್ಕಾಗಿ ಅಭಿನಂದಿಸಿದರು.

ಕೊರೊನಾ ನಂತರ ಜಮ್ಮು ಮತ್ತು ಕಾಶ್ಮೀರದ 20 ಜಿಲ್ಲೆಗಳಲ್ಲಿ ನಡೆದ ಮೊದಲ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆಯಲ್ಲಿ ಫಾರೂಕ್ ಅಬ್ದುಲ್ಲಾ ನೇತೃತ್ವದ ಗುಪ್ಕರ್ ಮೈತ್ರಿ ಕೂಟವು 13 ಜಿಲ್ಲೆಗಳಲ್ಲಿ ಜಯಗಳಿಸಿತ್ತು. ಜಮ್ಮುವಿನಲ್ಲಿ ಆರು ಜಿಲ್ಲೆಗಳಲ್ಲಿ ಬಿಜೆಪಿ ಜಯಗಳಿಸಿತ್ತು.


ಇದನ್ನೂ ಓದಿ: ಕೊರೆಯುವ ಚಳಿಯಲ್ಲಿ ತಿಂಗಳು ಪೂರೈಸಿದ ರೈತರ ಹೋರಾಟ: ಕರಗದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...