Homeಮುಖಪುಟಕೆಲವರು ನನಗೆ ಪ್ರಜಾಪ್ರಭುತ್ವದ ಪಾಠ ಕಲಿಸಲು ಬಯಸುತ್ತಿದ್ದಾರೆ: ತಿರುಗೇಟು ನೀಡಿದ ಪ್ರಧಾನಿ

ಕೆಲವರು ನನಗೆ ಪ್ರಜಾಪ್ರಭುತ್ವದ ಪಾಠ ಕಲಿಸಲು ಬಯಸುತ್ತಿದ್ದಾರೆ: ತಿರುಗೇಟು ನೀಡಿದ ಪ್ರಧಾನಿ

"ಭಾರತದಲ್ಲಿ ಪ್ರಜಾಪ್ರಭುತ್ವವಿಲ್ಲ. ಪ್ರಧಾನಿ ಮೋದಿ ವಿರುದ್ಧ ದನಿಯೆತ್ತಲು ಪ್ರಯತ್ನಿಸುವ ರೈತರು, ಕಾರ್ಮಿಕರು ಅಥವಾ RSS ಮುಖಂಡ ಮೋಹನ್ ಭಾಗವತ್ ಆವರೇ ಆಗಿದ್ದರೂ ಅವರನ್ನೂ ಸಹ ಭಯೋತ್ಪಾದಕರು ಎಂದು ಕರೆಯಲಾಗುತ್ತದೆ"

- Advertisement -
- Advertisement -

‘ದೆಹಲಿಯಲ್ಲಿ ಕೆಲವರು ನನಗೆ ಪ್ರಜಾಫ್ರಭುತ್ವದ ಪಾಠವನ್ನು ಕಲಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

“ಭಾರತದಲ್ಲಿ ಪ್ರಜಾಪ್ರಭುತ್ವವಿಲ್ಲ. ಇದ್ದರೆ ಅದು ನಿಮ್ಮ ಕಲ್ಪನೆಯಲ್ಲಿ ಮಾತ್ರ. ಪ್ರಧಾನಿ ಮೋದಿ ಕ್ರೋನಿ ಕ್ಯಾಪಿಟಲಿಸ್ಟ್‌ಗಳಿಗಾಗಿ ಹಣ ಸಂಪಾದಿಸುತ್ತಿದ್ದಾರೆ. ಅವರ ವಿರುದ್ಧ ದನಿಯೆತ್ತಲು ಪ್ರಯತ್ನಿಸುವ ರೈತರು, ಕಾರ್ಮಿಕರು ಅಥವಾ RSS ಮುಖಂಡ ಮೋಹನ್ ಭಾಗವತ್ ಆವರೇ ಆಗಿದ್ದರೂ ಸಹ ಅವರನ್ನೂ ಭಯೋತ್ಪಾದಕರು ಎಂದು ಕರೆಯಲಾಗುತ್ತದೆ” ಎಂದು ರಾಹುಲ್ ಗಾಂಧಿ ಇತ್ತೀಚೆಗೆ ಪ್ರಧಾನಿಯ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: ಪ್ರಧಾನಿ ವಿರುದ್ಧ ದನಿಯೆತ್ತಿದರೆ ಮೋಹನ್ ಭಾಗವತ್ ಕೂಡಾ ಭಯೋತ್ಪಾದಕರೇ! – ರಾಹುಲ್ ಗಾಂಧಿ

ಇಂದು ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಾರಂಭಿಸಿ ಮಾತನಾಡಿದ ಪ್ರಧಾನಿ, “ದೆಹಲಿಯಲ್ಲಿ ಯಾವಾಗಲೂ ನನ್ನನ್ನು ಕೆಣಕುವ ಮತ್ತು ಅವಮಾನಿಸುವ ಜನರಿದ್ದಾರೆ. ಅವರು ನನಗೆ ಪ್ರಜಾಪ್ರಭುತ್ವದ ಪಾಠಗಳನ್ನು ಕಲಿಸಲು ಬಯಸುತ್ತಿದ್ದಾರೆ. ಅವರಿಗೆ ಜಮ್ಮು ಮತ್ತು ಕಾಶ್ಮೀರದ ಡಿಡಿಸಿ (ಜಿಲ್ಲಾ ಅಭಿವೃದ್ಧಿ ಮಂಡಳಿ) ಚುನಾವಣೆಗಳನ್ನು ಪ್ರಜಾಪ್ರಭುತ್ವದ ಉದಾಹರಣೆಯಾಗಿ ತೋರಿಸಲು ಬಯಸುತ್ತೇನೆ” ಎಂದು ಹೇಳಿದರು.

“ಕೆಲವು ರಾಜಕೀಯ ಶಕ್ತಿಗಳು ಪ್ರಜಾಪ್ರಭುತ್ವದ ಬಗ್ಗೆ ಉಪನ್ಯಾಸ ನೀಡುತ್ತಲೇ ಇರುತ್ತವೆ. ಆದರೆ ಇದರಲ್ಲಿ ಅವರ ದ್ವಂದ್ವತೆಯನ್ನು ಕಾಣಬಹುದು. ಪುದುಚೇರಿಯಲ್ಲಿ ಆಡಳಿತ ನಡೆಸುವ ಪಕ್ಷವು, ಸುಪ್ರೀಂ ಕೋರ್ಟ್‌ನ ಆದೇಶದ ಹೊರತಾಗಿಯೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಿಲ್ಲ. ಆದರೆ ಜಮ್ಮು ಮತ್ತು ಕಾಶ್ಮೀರ ಒಕ್ಕೂಟದ ಭಾಗವಾದ ನಂತರ ಒಂದು ವರ್ಷದೊಳಗೆ ಪಂಚಾಯತ್ ಮಟ್ಟದ ಚುನಾವಣೆಗಳನ್ನು ನಡೆಸಿದೆ” ಪ್ರಧಾನಿ ಹೇಳಿದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಈ ರೈತ ದೆಹಲಿಯ ರೈತ ಹೋರಾಟದಲ್ಲಿ ಮೃತಪಟ್ಟಿದ್ದಾರೆಯೇ?

ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಯ ಚುನಾವಣೆಯು “ಪ್ರಜಾಪ್ರಭುತ್ವದ ಬೇರುಗಳನ್ನು ಬಲಪಡಿಸಿದೆ” ಎಂದು ಹೇಳಿದ ಪ್ರಧಾನಿ, ಏಳು ಹಂತದ ಚುನಾವಣೆಯಲ್ಲಿ ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಕ್ಕಾಗಿ ಅಭಿನಂದಿಸಿದರು.

ಕೊರೊನಾ ನಂತರ ಜಮ್ಮು ಮತ್ತು ಕಾಶ್ಮೀರದ 20 ಜಿಲ್ಲೆಗಳಲ್ಲಿ ನಡೆದ ಮೊದಲ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆಯಲ್ಲಿ ಫಾರೂಕ್ ಅಬ್ದುಲ್ಲಾ ನೇತೃತ್ವದ ಗುಪ್ಕರ್ ಮೈತ್ರಿ ಕೂಟವು 13 ಜಿಲ್ಲೆಗಳಲ್ಲಿ ಜಯಗಳಿಸಿತ್ತು. ಜಮ್ಮುವಿನಲ್ಲಿ ಆರು ಜಿಲ್ಲೆಗಳಲ್ಲಿ ಬಿಜೆಪಿ ಜಯಗಳಿಸಿತ್ತು.


ಇದನ್ನೂ ಓದಿ: ಕೊರೆಯುವ ಚಳಿಯಲ್ಲಿ ತಿಂಗಳು ಪೂರೈಸಿದ ರೈತರ ಹೋರಾಟ: ಕರಗದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...