Homeಮುಖಪುಟಸೋನು ಸೂದ್ ಹೆಸರಲ್ಲಿ ದೇಣಿಗೆ ಎತ್ತುತ್ತಿರುವ ದುಷ್ಕರ್ಮಿಗಳು: ದೂರು ನೀಡುವಂತೆ ನಟನ ಮನವಿ

ಸೋನು ಸೂದ್ ಹೆಸರಲ್ಲಿ ದೇಣಿಗೆ ಎತ್ತುತ್ತಿರುವ ದುಷ್ಕರ್ಮಿಗಳು: ದೂರು ನೀಡುವಂತೆ ನಟನ ಮನವಿ

- Advertisement -
- Advertisement -

ಸೋನು ಸೂದ್.. ಈ ಹೆಸರು ಕಳೆದೊಂದು ವರ್ಷದಿಂದ ಭಾರತದಲ್ಲಿ ಲಕ್ಷಾಂತರ ಜನರ ಪಾಲಿಗೆ ದೇವರಿಗೆ ಸಮ. ಕಳೆದ ವರ್ಷ ನರೇಂದ್ರ ಮೋದಿ ಹೇರಿದ ಲಾಕ್‌ಡೌನ್‌ ಸಂದರ್ಭದಲ್ಲಿ ಸಿಕ್ಕಿಕೊಂಡ ಸಾವಿರಾರು ಜನರನ್ನು ಅವರ ಊರುಗಳಿಗೆ ಸುರಕ್ಷಿತವಾಗಿ ತಲುಪಿಸಿದವರು ಸೋನು ಸೂದ್. ಅಲ್ಲಿಂದ ಇಂದಿನವರೆಗೂ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ನೂರಾರು ರೀತಿಯಲ್ಲಿ ಈ ನಟ ಜನರಿಗೆ ಸಹಾಯ ಮಾಡುತ್ತಿದ್ದಾರೆ. ಕೋವಿಡ್ ಎರಡನೇ ಅಲೆ ಸಾವಿರಾರು ಜನರ ಸಾವುನೋವುಗಳಿಗೆ ಕಾರಣವಾಗುತ್ತಿರುವ ಸಂದರ್ಭದಲ್ಲಿ ಔಷಧಿ ಆಕ್ಸಿಜನ್ ಒದಗಿಸಲು ಸೋನು ಸೂದ್ ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಆದರೆ ಇಂತಹ ದುರಂತದ ಸಮಯದಲ್ಲಿಯೂ ಕೆಲವು ದುಷ್ಟರು ಸೋನು ಸೂದ್ ಹೆಸರು ಬಳಸಿಕೊಂಡು ದೇಣಿಗೆ ಎತ್ತಿ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿರುವುದು ಕಂಡು ಬಂದಿದೆ.

ಸೂದ್ ಫೌಂಡೇಶನ್ ಡೋನೆಟ್ ಹೆಸರಿನಲ್ಲಿ ‘ಕೊರೊನಾ ಮಹಾಮಾರಿಯ ವಿರುದ್ಧ ಹೋರಾಡಲು ಒಬ್ಬರು ಮತ್ತೊಬ್ಬರಿಗೆ ಸಹಾಯ ಮಾಡಬೇಕಾದ ಅಗತ್ಯವಿದೆ. ಒಂದು ರೂ ನಿಂದ ಹಿಡಿದು ನಿಮಗೆ ಎಷ್ಟು ಕೊಡಲು ಸಾಧ್ಯ ಅಷ್ಟನ್ನು ದೇಣಿಗೆ ನೀಡಬೇಕೆಂದು ಸೋನು ಸೂದ್ ಫೌಂಡೇಶನ ಟೀಮ್ ನಿಮ್ಮಲ್ಲಿ ಮನವಿ ಮಾಡುತ್ತದೆ’ ಪೋಸ್ಟರ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದಕ್ಕೆ ಸೋನು ಸೂದ್ ಫೋಟೊ ಸಹ ಹಾಕಲಾಗಿದ್ದು ಒಂದು ನಕಲಿ ಫೋನ್ ಪೇ ನಂಬರ್, ಒಂದು ನಕಲಿ ಹೆಲ್ಪ್ ನಂಬರ್ ಅನ್ನು ನೀಡಲಾಗಿದೆ.

ಈ ಕುರಿತು ಸ್ವತಃ ಸೋನು ಸೂದ್ ಫೇಸ್‌ಬುಕ್ ಮತ್ತು ಟ್ವಿಟರ್ ಮೂಲಕ ಇದು ಫೇಕ್ ಎಂದು ಸ್ಪಷ್ಟಪಡಿಸಿದ್ದಾರೆ. “ಈ ರೀತಿಯ ಪೋಸ್ಟರ್ ನಾವು ಮಾಡಿಲ್ಲ ಮತ್ತು ಈ ರೀತಿ ಫೋನ್ ಪೇ ನಂಬರ್ ಮೂಲಕ ನಾವು ದೇಣಿಗೆ ಸಂಗ್ರಹಿಸುತ್ತಿಲ್ಲ. ಈ ಕುರಿತು ಜಾಗರೂಕರಾಗಿರಿ ಮತ್ತು ಯಾರಾದರೂ ನಿಮ್ಮನ್ನು ಈ ಪೋಸ್ಟರ್ ಬಳಸಿ ಹಣ ಕೇಳಿದರೆ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ” ಎಂದು ಅವರು ಮನವಿ ಮಾಡಿದ್ದಾರೆ.

ಸೋನು ಸೂದ್ ತಮ್ಮ ಫೌಂಡೇಶನ್ ಮೂಲಕ ಇಂದಿಗೂ ಕೋವಿಡ್ ಔಷಧಿಗಳು ಮತ್ತು ಆಕ್ಸಿಜನ್ ಕಾನ್ಸಟ್ರೇಟರ್‌ಗಳನ್ನು ಒದಗಿಸುವ ಮೂಲಕ ಸಾವಿರಾರು ಜನರಿಗೆ ಸಹಾಯ ಮಾಡುತ್ತಿದ್ದಾರೆ. ಈ ಮಾನವೀಯ ಕಾರ್ಯಗಳಿಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅವರಿಗೆ ಮೆಚ್ಚಗೆಯ ಮಹಾಪೂರವೇ ಹರಿದುಬರುತ್ತಿದೆ.


ಇದನ್ನೂ ಓದಿ:ಕೋವಿಡ್‌ನಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಸರ್ಕಾರ ಉಚಿತ ಶಿಕ್ಷಣ ನೀಡಬೇಕು: ಸೋನು ಸೂದ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...