Homeಮುಖಪುಟಸೋನು ಸೂದ್ ಹೆಸರಲ್ಲಿ ದೇಣಿಗೆ ಎತ್ತುತ್ತಿರುವ ದುಷ್ಕರ್ಮಿಗಳು: ದೂರು ನೀಡುವಂತೆ ನಟನ ಮನವಿ

ಸೋನು ಸೂದ್ ಹೆಸರಲ್ಲಿ ದೇಣಿಗೆ ಎತ್ತುತ್ತಿರುವ ದುಷ್ಕರ್ಮಿಗಳು: ದೂರು ನೀಡುವಂತೆ ನಟನ ಮನವಿ

- Advertisement -
- Advertisement -

ಸೋನು ಸೂದ್.. ಈ ಹೆಸರು ಕಳೆದೊಂದು ವರ್ಷದಿಂದ ಭಾರತದಲ್ಲಿ ಲಕ್ಷಾಂತರ ಜನರ ಪಾಲಿಗೆ ದೇವರಿಗೆ ಸಮ. ಕಳೆದ ವರ್ಷ ನರೇಂದ್ರ ಮೋದಿ ಹೇರಿದ ಲಾಕ್‌ಡೌನ್‌ ಸಂದರ್ಭದಲ್ಲಿ ಸಿಕ್ಕಿಕೊಂಡ ಸಾವಿರಾರು ಜನರನ್ನು ಅವರ ಊರುಗಳಿಗೆ ಸುರಕ್ಷಿತವಾಗಿ ತಲುಪಿಸಿದವರು ಸೋನು ಸೂದ್. ಅಲ್ಲಿಂದ ಇಂದಿನವರೆಗೂ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ನೂರಾರು ರೀತಿಯಲ್ಲಿ ಈ ನಟ ಜನರಿಗೆ ಸಹಾಯ ಮಾಡುತ್ತಿದ್ದಾರೆ. ಕೋವಿಡ್ ಎರಡನೇ ಅಲೆ ಸಾವಿರಾರು ಜನರ ಸಾವುನೋವುಗಳಿಗೆ ಕಾರಣವಾಗುತ್ತಿರುವ ಸಂದರ್ಭದಲ್ಲಿ ಔಷಧಿ ಆಕ್ಸಿಜನ್ ಒದಗಿಸಲು ಸೋನು ಸೂದ್ ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಆದರೆ ಇಂತಹ ದುರಂತದ ಸಮಯದಲ್ಲಿಯೂ ಕೆಲವು ದುಷ್ಟರು ಸೋನು ಸೂದ್ ಹೆಸರು ಬಳಸಿಕೊಂಡು ದೇಣಿಗೆ ಎತ್ತಿ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿರುವುದು ಕಂಡು ಬಂದಿದೆ.

ಸೂದ್ ಫೌಂಡೇಶನ್ ಡೋನೆಟ್ ಹೆಸರಿನಲ್ಲಿ ‘ಕೊರೊನಾ ಮಹಾಮಾರಿಯ ವಿರುದ್ಧ ಹೋರಾಡಲು ಒಬ್ಬರು ಮತ್ತೊಬ್ಬರಿಗೆ ಸಹಾಯ ಮಾಡಬೇಕಾದ ಅಗತ್ಯವಿದೆ. ಒಂದು ರೂ ನಿಂದ ಹಿಡಿದು ನಿಮಗೆ ಎಷ್ಟು ಕೊಡಲು ಸಾಧ್ಯ ಅಷ್ಟನ್ನು ದೇಣಿಗೆ ನೀಡಬೇಕೆಂದು ಸೋನು ಸೂದ್ ಫೌಂಡೇಶನ ಟೀಮ್ ನಿಮ್ಮಲ್ಲಿ ಮನವಿ ಮಾಡುತ್ತದೆ’ ಪೋಸ್ಟರ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದಕ್ಕೆ ಸೋನು ಸೂದ್ ಫೋಟೊ ಸಹ ಹಾಕಲಾಗಿದ್ದು ಒಂದು ನಕಲಿ ಫೋನ್ ಪೇ ನಂಬರ್, ಒಂದು ನಕಲಿ ಹೆಲ್ಪ್ ನಂಬರ್ ಅನ್ನು ನೀಡಲಾಗಿದೆ.

ಈ ಕುರಿತು ಸ್ವತಃ ಸೋನು ಸೂದ್ ಫೇಸ್‌ಬುಕ್ ಮತ್ತು ಟ್ವಿಟರ್ ಮೂಲಕ ಇದು ಫೇಕ್ ಎಂದು ಸ್ಪಷ್ಟಪಡಿಸಿದ್ದಾರೆ. “ಈ ರೀತಿಯ ಪೋಸ್ಟರ್ ನಾವು ಮಾಡಿಲ್ಲ ಮತ್ತು ಈ ರೀತಿ ಫೋನ್ ಪೇ ನಂಬರ್ ಮೂಲಕ ನಾವು ದೇಣಿಗೆ ಸಂಗ್ರಹಿಸುತ್ತಿಲ್ಲ. ಈ ಕುರಿತು ಜಾಗರೂಕರಾಗಿರಿ ಮತ್ತು ಯಾರಾದರೂ ನಿಮ್ಮನ್ನು ಈ ಪೋಸ್ಟರ್ ಬಳಸಿ ಹಣ ಕೇಳಿದರೆ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ” ಎಂದು ಅವರು ಮನವಿ ಮಾಡಿದ್ದಾರೆ.

ಸೋನು ಸೂದ್ ತಮ್ಮ ಫೌಂಡೇಶನ್ ಮೂಲಕ ಇಂದಿಗೂ ಕೋವಿಡ್ ಔಷಧಿಗಳು ಮತ್ತು ಆಕ್ಸಿಜನ್ ಕಾನ್ಸಟ್ರೇಟರ್‌ಗಳನ್ನು ಒದಗಿಸುವ ಮೂಲಕ ಸಾವಿರಾರು ಜನರಿಗೆ ಸಹಾಯ ಮಾಡುತ್ತಿದ್ದಾರೆ. ಈ ಮಾನವೀಯ ಕಾರ್ಯಗಳಿಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅವರಿಗೆ ಮೆಚ್ಚಗೆಯ ಮಹಾಪೂರವೇ ಹರಿದುಬರುತ್ತಿದೆ.


ಇದನ್ನೂ ಓದಿ:ಕೋವಿಡ್‌ನಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಸರ್ಕಾರ ಉಚಿತ ಶಿಕ್ಷಣ ನೀಡಬೇಕು: ಸೋನು ಸೂದ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...