Homeಮುಖಪುಟಕೆಲವು ಫೋಟೊಗಳನ್ನು ಕಾಪಿ ಮಾಡೋದು ಕಷ್ಟ: ಮೋದಿ ಫೋಟೊಗೆ ಕಾಂಗ್ರೆಸ್ ವ್ಯಂಗ್ಯ

ಕೆಲವು ಫೋಟೊಗಳನ್ನು ಕಾಪಿ ಮಾಡೋದು ಕಷ್ಟ: ಮೋದಿ ಫೋಟೊಗೆ ಕಾಂಗ್ರೆಸ್ ವ್ಯಂಗ್ಯ

- Advertisement -
- Advertisement -

ನರೇಂದ್ರ ಮೋದಿಯವರು ಏರ್ ಇಂಡಿಯಾ ವಿಮಾನದಲ್ಲಿ ಕುಳಿತು ಅಮೆರಿಕಗೆ ತೆರಳುತ್ತಿರುವ ಫೋಟೊವೊಂದನ್ನು ಪೋಸ್ಟ್ ಮಾಡಿದ ನಂತರ ಅದಕ್ಕೆ ವಿರೋಧ ಪಕ್ಷ ಕಾಂಗ್ರೆಸ್ ವ್ಯಂಗ್ಯವಾಡಿದೆ. “ಕೆಲವು ಫೋಟೊಗಳನ್ನು ಕಾಪಿ ಮಾಡೋದು ಕಷ್ಟ” ಎಂಬ ಶೀರ್ಷಿಕೆಯಡಿ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ರವರು ವಿಮಾನದೊಳಗೆ ಪತ್ರಿಕಾಗೋಷ್ಠಿ ನಡೆಸುತ್ತಿರುವ ಹಲವು ಫೋಟೊಗಳನ್ನು ಅದು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದೆ.

ಪ್ರಧಾನಿ ಮೋದಿಯವರ ಮೂರು ದಿನಗಳ ಅಮೆರಿಕ ಪ್ರವಾಸ ಆರಂಭವಾಗಿದ್ದು ಅವರು ವಾಷಿಂಗ್ಟನ್ ಭೇಟಿ, ಕ್ವಾಡ್ ಸಭೆ ಹಾಗೂ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕುರಿತು ವಿಮಾನದಲ್ಲಿ ಹೊರಟಿರುವ ಫೋಟೊ ಹಂಚಿಕೊಂಡಿರುವ ಮೋದಿ “ಸುದೀರ್ಘ ವಿಮಾನ ಪ್ರಯಾಣ ಎಂದರೆ ಕೆಲವು ಪೇಪರ್ ಮತ್ತು ಫೈಲ್‌ಗಳನ್ನು ಕೆಲಸ ಮುಗಿಸುವ ಅವಕಾಶವೂ ಹೌದು” ಎಂದು ಬರೆದುಕೊಂಡಿದ್ದರು.

ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವಿಧದ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದವು. ಬಿಜೆಪಿ ಮುಖಂಡರು ಈ ಫೋಟೊವನ್ನು ಷೇರ್ ಮಾಡಿ “ಕರ್ಮಯೋಗಿ ಮೋದಿಯವರೂ ಎಂದಿಗೂ ನಿದ್ರಿಸುವುದಿಲ್ಲ”, “ಶ್ರಮಜೀವಿ ಮೋದಿ” ಎಂದೆಲ್ಲಾ ಶೀರ್ಷಿಕೆಗಳನ್ನು ನೀಡಿದ್ದರು.

ಇನ್ನು ಕೆಲವು ಸಾಮಾಜಿಕ ಜಾಲತಾಣಿಗರು ಮೋದಿ ಏನನ್ನು ಮರೆತರೂ ಫೋಟೊಶೂಟ್ ಮಾತ್ರ ಮರೆಯುವುದಿಲ್ಲ, ಇದೊಂದು ಅದ್ಬುತ ಫೋಟೊ ಶೂಟ್ ಎಂದು ಕಾಲೆಳೆದಿದ್ದರು. ಮೋದಿಯವರ ಪೇಪರ್ ಎದ್ದು ಕಾಣುವಂತೆ ಅದರ ಕೆಳಗೆ ಸಹ ಲೈಟ್ ಅಳವಡಿಸಲಾಗಿದೆ ಎಂದೆಲ್ಲಾ ಟ್ರೋಲ್ ಮಾಡಿದ್ದರು. ಇನ್ನು ಕೆಲವರು ಝೂಮ್ ಮಾಡಿ ಮೋದಿಯವರ ಕಣ್ಣುಗಳನ್ನು ನೋಡಿ, ಅವರು ಪೇಪರ್‌ಗಳನ್ನು ನೋಡುತ್ತಿಲ್ಲ. ಇದು ಪಕ್ಕಾ ಫೋಟೊ ಶೂಟ್ ಎಂದು ಟೀಕಿಸಿದ್ದಾರೆ.

ಸೆಪ್ಟಂಬರ್ 16 ರಂದು ಇಂಡಿಯನ್ ಹಿಸ್ಟರಿ ಪಿಕ್ಸ್ ಎಂಬ ಟ್ವಿಟರ್ ಖಾತೆಯಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರು ತಮ್ಮ ಪತ್ನಿಯೊಂದಿಗೆ ವಿಮಾನದಲ್ಲಿ ಕುಳಿತು ಪೇಪರ್ ಓದುತ್ತಿರುವ ಹಳೆಯ ಫೋಟೊವೊಂದನ್ನು ಷೇರ್ ಮಾಡಿತ್ತು. ಸೆಪ್ಟಂಬರ್ 17 ರಂದು ಅದೇ ಫೋಟೊವನ್ನು ಹಂಚಿಕೊಂಡಿರುವ ಸಂಜೀವ್‌ ಪಿ ಎಂಬುವವರು “ಶೀಘ್ರದಲ್ಲೇ ಈ ಫೋಟೋದ ಹೊಸ ನೋಟ ಬರಲಿದೆ ಸ್ನೇಹಿತರೆ.. ಐಡಿಯಾ ಕೊಟ್ಟಿದ್ದಕ್ಕಾಗಿ ಧನ್ಯವಾದಗಳು” ಎಂದು ವ್ಯಂಗ್ಯವಾಡಿದ್ದರು. ಅದಾದ ಒಂದೇ ವಾರದಲ್ಲಿ ಮೋದಿಯವರು ಸಹ ಅದೇ ಭಂಗಿಯಲ್ಲಿ ಫೋಟೊ ತೆಗೆಸಿಕೊಂಡಿದ್ದಾರೆ. ಹಾಗಾಗಿ ಹಲವರು ಜನ ನಿಮ್ಮ ಊಹೆ ನಿಜವಾಯಿತು ಎಂದು ಪೋಸ್ಟ್ ಹಾಕಿದ್ದಾರೆ.

ಇದಕ್ಕೆ ಕಾಂಗ್ರೆಸ್ ಇನ್ನೊಂದು ಹೆಜ್ಜೆ ಮುಂದೆ ನಿಂತು ವ್ಯಂಗ್ಯವಾಡಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರವರು ವಿದೇಶಿ ಪ್ರಯಾಣದ ವೇಳೆ ವಿಮಾನದಲ್ಲಿಯೇ ಪತ್ರಿಕಾಗೋಷ್ಠಿ ನಡೆಸುತ್ತಿರುವ ಫೋಟೊಗಳನ್ನು ಹಂಚಿಕೊಂಡು ಇದನ್ನು ಮೋದಿಯವರು ಕಾಪಿ ಮಾಡುವುದು ಕಷ್ಟ ಎಂದು ವ್ಯಂಗ್ಯವಾಡಿದೆ.

ಮೋದಿ ಫೋಟೊಗೆ ಬಿಜೆಪಿ ಮತ್ತು ನೆಟ್ಟಿಗರು ಕೊಟ್ಟ ಪ್ರತಿಕ್ರಿಯೆಯ ಕೆಲವು ಟ್ವೀಟ್‌ಗಳು ಇಲ್ಲಿವೆ.


ಇದನ್ನೂ ಓದಿ; ಭಾರತ್ ಬಂದ್: ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಿಂದ ರೈತರ ಬಂದ್‌ಗೆ ʼನೈತಿಕʼ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...