Homeಮುಖಪುಟಕೆಲವು ಫೋಟೊಗಳನ್ನು ಕಾಪಿ ಮಾಡೋದು ಕಷ್ಟ: ಮೋದಿ ಫೋಟೊಗೆ ಕಾಂಗ್ರೆಸ್ ವ್ಯಂಗ್ಯ

ಕೆಲವು ಫೋಟೊಗಳನ್ನು ಕಾಪಿ ಮಾಡೋದು ಕಷ್ಟ: ಮೋದಿ ಫೋಟೊಗೆ ಕಾಂಗ್ರೆಸ್ ವ್ಯಂಗ್ಯ

- Advertisement -
- Advertisement -

ನರೇಂದ್ರ ಮೋದಿಯವರು ಏರ್ ಇಂಡಿಯಾ ವಿಮಾನದಲ್ಲಿ ಕುಳಿತು ಅಮೆರಿಕಗೆ ತೆರಳುತ್ತಿರುವ ಫೋಟೊವೊಂದನ್ನು ಪೋಸ್ಟ್ ಮಾಡಿದ ನಂತರ ಅದಕ್ಕೆ ವಿರೋಧ ಪಕ್ಷ ಕಾಂಗ್ರೆಸ್ ವ್ಯಂಗ್ಯವಾಡಿದೆ. “ಕೆಲವು ಫೋಟೊಗಳನ್ನು ಕಾಪಿ ಮಾಡೋದು ಕಷ್ಟ” ಎಂಬ ಶೀರ್ಷಿಕೆಯಡಿ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ರವರು ವಿಮಾನದೊಳಗೆ ಪತ್ರಿಕಾಗೋಷ್ಠಿ ನಡೆಸುತ್ತಿರುವ ಹಲವು ಫೋಟೊಗಳನ್ನು ಅದು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದೆ.

ಪ್ರಧಾನಿ ಮೋದಿಯವರ ಮೂರು ದಿನಗಳ ಅಮೆರಿಕ ಪ್ರವಾಸ ಆರಂಭವಾಗಿದ್ದು ಅವರು ವಾಷಿಂಗ್ಟನ್ ಭೇಟಿ, ಕ್ವಾಡ್ ಸಭೆ ಹಾಗೂ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕುರಿತು ವಿಮಾನದಲ್ಲಿ ಹೊರಟಿರುವ ಫೋಟೊ ಹಂಚಿಕೊಂಡಿರುವ ಮೋದಿ “ಸುದೀರ್ಘ ವಿಮಾನ ಪ್ರಯಾಣ ಎಂದರೆ ಕೆಲವು ಪೇಪರ್ ಮತ್ತು ಫೈಲ್‌ಗಳನ್ನು ಕೆಲಸ ಮುಗಿಸುವ ಅವಕಾಶವೂ ಹೌದು” ಎಂದು ಬರೆದುಕೊಂಡಿದ್ದರು.

ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವಿಧದ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದವು. ಬಿಜೆಪಿ ಮುಖಂಡರು ಈ ಫೋಟೊವನ್ನು ಷೇರ್ ಮಾಡಿ “ಕರ್ಮಯೋಗಿ ಮೋದಿಯವರೂ ಎಂದಿಗೂ ನಿದ್ರಿಸುವುದಿಲ್ಲ”, “ಶ್ರಮಜೀವಿ ಮೋದಿ” ಎಂದೆಲ್ಲಾ ಶೀರ್ಷಿಕೆಗಳನ್ನು ನೀಡಿದ್ದರು.

ಇನ್ನು ಕೆಲವು ಸಾಮಾಜಿಕ ಜಾಲತಾಣಿಗರು ಮೋದಿ ಏನನ್ನು ಮರೆತರೂ ಫೋಟೊಶೂಟ್ ಮಾತ್ರ ಮರೆಯುವುದಿಲ್ಲ, ಇದೊಂದು ಅದ್ಬುತ ಫೋಟೊ ಶೂಟ್ ಎಂದು ಕಾಲೆಳೆದಿದ್ದರು. ಮೋದಿಯವರ ಪೇಪರ್ ಎದ್ದು ಕಾಣುವಂತೆ ಅದರ ಕೆಳಗೆ ಸಹ ಲೈಟ್ ಅಳವಡಿಸಲಾಗಿದೆ ಎಂದೆಲ್ಲಾ ಟ್ರೋಲ್ ಮಾಡಿದ್ದರು. ಇನ್ನು ಕೆಲವರು ಝೂಮ್ ಮಾಡಿ ಮೋದಿಯವರ ಕಣ್ಣುಗಳನ್ನು ನೋಡಿ, ಅವರು ಪೇಪರ್‌ಗಳನ್ನು ನೋಡುತ್ತಿಲ್ಲ. ಇದು ಪಕ್ಕಾ ಫೋಟೊ ಶೂಟ್ ಎಂದು ಟೀಕಿಸಿದ್ದಾರೆ.

ಸೆಪ್ಟಂಬರ್ 16 ರಂದು ಇಂಡಿಯನ್ ಹಿಸ್ಟರಿ ಪಿಕ್ಸ್ ಎಂಬ ಟ್ವಿಟರ್ ಖಾತೆಯಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರು ತಮ್ಮ ಪತ್ನಿಯೊಂದಿಗೆ ವಿಮಾನದಲ್ಲಿ ಕುಳಿತು ಪೇಪರ್ ಓದುತ್ತಿರುವ ಹಳೆಯ ಫೋಟೊವೊಂದನ್ನು ಷೇರ್ ಮಾಡಿತ್ತು. ಸೆಪ್ಟಂಬರ್ 17 ರಂದು ಅದೇ ಫೋಟೊವನ್ನು ಹಂಚಿಕೊಂಡಿರುವ ಸಂಜೀವ್‌ ಪಿ ಎಂಬುವವರು “ಶೀಘ್ರದಲ್ಲೇ ಈ ಫೋಟೋದ ಹೊಸ ನೋಟ ಬರಲಿದೆ ಸ್ನೇಹಿತರೆ.. ಐಡಿಯಾ ಕೊಟ್ಟಿದ್ದಕ್ಕಾಗಿ ಧನ್ಯವಾದಗಳು” ಎಂದು ವ್ಯಂಗ್ಯವಾಡಿದ್ದರು. ಅದಾದ ಒಂದೇ ವಾರದಲ್ಲಿ ಮೋದಿಯವರು ಸಹ ಅದೇ ಭಂಗಿಯಲ್ಲಿ ಫೋಟೊ ತೆಗೆಸಿಕೊಂಡಿದ್ದಾರೆ. ಹಾಗಾಗಿ ಹಲವರು ಜನ ನಿಮ್ಮ ಊಹೆ ನಿಜವಾಯಿತು ಎಂದು ಪೋಸ್ಟ್ ಹಾಕಿದ್ದಾರೆ.

ಇದಕ್ಕೆ ಕಾಂಗ್ರೆಸ್ ಇನ್ನೊಂದು ಹೆಜ್ಜೆ ಮುಂದೆ ನಿಂತು ವ್ಯಂಗ್ಯವಾಡಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರವರು ವಿದೇಶಿ ಪ್ರಯಾಣದ ವೇಳೆ ವಿಮಾನದಲ್ಲಿಯೇ ಪತ್ರಿಕಾಗೋಷ್ಠಿ ನಡೆಸುತ್ತಿರುವ ಫೋಟೊಗಳನ್ನು ಹಂಚಿಕೊಂಡು ಇದನ್ನು ಮೋದಿಯವರು ಕಾಪಿ ಮಾಡುವುದು ಕಷ್ಟ ಎಂದು ವ್ಯಂಗ್ಯವಾಡಿದೆ.

ಮೋದಿ ಫೋಟೊಗೆ ಬಿಜೆಪಿ ಮತ್ತು ನೆಟ್ಟಿಗರು ಕೊಟ್ಟ ಪ್ರತಿಕ್ರಿಯೆಯ ಕೆಲವು ಟ್ವೀಟ್‌ಗಳು ಇಲ್ಲಿವೆ.


ಇದನ್ನೂ ಓದಿ; ಭಾರತ್ ಬಂದ್: ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಿಂದ ರೈತರ ಬಂದ್‌ಗೆ ʼನೈತಿಕʼ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...