Homeಮುಖಪುಟಅಫ್ಘಾನ್‌‌ನಲ್ಲಿ ಹತರಾದ ಖ್ಯಾತ ಫೋಟೊ ಜರ್ನಲಿಸ್ಟ್‌‌ ದಾನಿಶ್ ಕ್ಲಿಕ್ಕಿಸಿದ ಕೆಲವು ಫೋಟೊಗಳು!

ಅಫ್ಘಾನ್‌‌ನಲ್ಲಿ ಹತರಾದ ಖ್ಯಾತ ಫೋಟೊ ಜರ್ನಲಿಸ್ಟ್‌‌ ದಾನಿಶ್ ಕ್ಲಿಕ್ಕಿಸಿದ ಕೆಲವು ಫೋಟೊಗಳು!

- Advertisement -
- Advertisement -

ರಾಯ್ಟರ್ಸ್‌ನ ಮುಖ್ಯ ಫೋಟೋಗ್ರಾಫರ್‌ ಆಗಿದ್ದ ದಾನಿಶ್ ಸಿದ್ದೀಕಿ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ‌ ಜಿಲ್ಲೆಯಲ್ಲಿ ನಡೆದ ಘರ್ಷಣೆಯಲ್ಲಿ ಹತರಾಗಿದ್ದಾರೆ. ವಿಶ್ವ ಪ್ರಸಿದ್ದ ಫೋಟೊ ಜರ್ನಲಿಸ್ಟ್‌ ಆಗಿದ್ದ ಅವರು 2018 ರಲ್ಲಿ ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟನ್ನು ದಾಖಲಿಸಿದ್ದ ಫೀಚರ್‌ ಫೋಟೊಗ್ರಾಫ್‌ಗಾಗಿ ಪ್ರತಿಷ್ಠಿತ ಪುಲಿಟ್ಜೆರ್ ಪ್ರಶಸ್ತಿಯನ್ನು ಪಡೆದಿದ್ದರು.

ದಾನಿಶ್ ಅವರು, ಅಫ್ಘಾನಿಸ್ತಾನ ಮತ್ತು ಇರಾಕ್ ಯುದ್ಧಗಳು, ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟು, ಹಾಂಗ್ ಕಾಂಗ್ ಪ್ರತಿಭಟನೆಗಳು, ನೇಪಾಳ ಭೂಕಂಪಗಳು, ಉತ್ತರ ಕೊರಿಯಾದಲ್ಲಿ ನಡೆದ ಕ್ರೀಡಾಕೂಟಗಳ ವರದಿಗಳ ಸಹಿತ ಏಷ್ಯಾ, ಮಧ್ಯಪ್ರಾಚ್ಯ ಮತ್ತು ಯುರೋಪಿನ ವರದಿಗಳನ್ನು ಮಾಡಿದ್ದರು.

ಕಳೆದ ವರ್ಷ ದೇಶದಲ್ಲಿ ಕೊರೊನಾ ಪತ್ತೆಯಾದಾಗ, ಯಾವುದೆ ಪೂರ್ವ ತಯಾರಿ ಇಲ್ಲದೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿದ್ದ ಅವೈಜ್ಞಾನಿಕ ಲಾಕ್‌ಡೌನ್‌ನಲ್ಲಿ ವಲಸೆ ಕಾರ್ಮಿಕರು ಪಟ್ಟ ಬವಣೆಗೆಗಳು, ಕೊರೊನಾ ಎರಡನೆ ಅಲೆಯ ಸಮಯದಲ್ಲಿ ದೇಶದ ಸ್ಮಶಾನದಲ್ಲಿನ ಚಿತ್ರಣಗಳನ್ನು ಅವರು ಸಮರ್ಪಕವಾಗಿ ಸೆರೆ ಹಿಡಿದು ಜನರ ಮುಂದೆ ಇಟ್ಟಿದ್ದರು. ಅಷ್ಟೇ ಅಲ್ಲದೆ CAA-NRC-NPR ವಿರೋಧಿ ಹೋರಾಟದ ಸಮಯದಲ್ಲಿ ನಡೆದ ಘಟನೆಗಳು ಹಾಗೂ ದೆಹಲಿ ಗಲಭೆಯ ಕ್ರೂರ ಚಿತ್ರಗಳನ್ನು ಅವರು ಸೆರೆ ಹಿಡಿದಿದ್ದರು.

ಇದನ್ನೂ ಓದಿ: ರಾಯ್ಟರ್ಸ್‌‌ನ ಖ್ಯಾತ ಫೋಟೋಗ್ರಾಫರ್‌ ದಾನಿಶ್ ಸಿದ್ದೀಕಿ ಅಫ್ಘಾನ್‌ ಘರ್ಷಣೆಯಲ್ಲಿ ಮೃತ

ಅವರ ಫೋಟೋಗಳು ಹಲವಾರು ನಿಯತಕಾಲಿಕೆಗಳು, ಪತ್ರಿಕೆಗಳು, ಸ್ಲೈಡ್‌ಶೋಗಳು ಮತ್ತು ಗ್ಯಾಲರಿಗಳಲ್ಲಿ ವ್ಯಾಪಕವಾಗಿ ಪ್ರಕಟಗೊಂಡಿವೆ. ನಾನುಗೌರಿ.ಕಾಂ ಓದುಗರಿಗಾಗಿ ಅವರು ಸೆರೆ ಹಿಡಿದ ಕೆಲವು ಪ್ರಸಿದ್ದ ಚಿತ್ರಗಳನ್ನು ಇಲ್ಲಿ ನೀಡುತ್ತಿದ್ದೇವೆ.

ಮೋದಿ ಸರ್ಕಾರದ ಅವೈಜ್ಞಾನಿಕ, ಅಸಮರ್ಪಕ ಲಾಕ್‌ಡೌನ್‌ನಿಂದಾಗಿ ಸುಮಾರು 500 ಕಿಲೋಮಿಟರ್‌ ನಡೆದ ಕಾರ್ಮಿಕರ ಮಹಾವಲಸೆ. (Mar 26, 2020 REUTERS / Danish Siddiqui)

 

ನವದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಹೊರಗೆ ಹೊಸ ಪೌರತ್ವ ಕಾನೂನಿನ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಬಂದೂಕು ಹಿಡಿದು ಬೆದರಿಸುತ್ತಿರುವುದು. (ಜನವರಿ 30, 2020 REUTERS / Danish Siddiqui)
ದೆಹಲಿ ಗಲಭೆಯಲ್ಲಿ ವ್ಯಕ್ತಿಯೊಬ್ಬನನ್ನು ಥಳಿಸುತ್ತಿರುವ ದುಷ್ಕರ್ಮಿಗಳು (ಫೆಬ್ರವರಿ 2021 / Danish Siddiqui)
ಕೊರೊನಾದಿಂದ ಸಾವನ್ನಪ್ಪಿದವರ ಸಾಮೂಹಿಕ ಶವಸಂಸ್ಕಾರ, ನವದೆಹಲಿಯ ಶ್ಮಶಾನ (2021 ರ ಏಪ್ರಿಲ್ 22 ಡ್ರೋನ್‌ನೊಂದಿಗೆ ತೆಗೆದ ಚಿತ್ರ. REUTERS / Danish Siddiqui)
ಕೊರೊನಾದಿಂದ ಸಾವನ್ನಪ್ಪಿದವರ ಸಾಮೂಹಿಕ ಶವಸಂಸ್ಕಾರ, ನವದೆಹಲಿಯ ಶ್ಮಶಾನ (2021 ರ ಏಪ್ರಿಲ್ 22 ಡ್ರೋನ್‌ನೊಂದಿಗೆ ತೆಗೆದ ಚಿತ್ರ. REUTERS / Danish Siddiqui)

 

ಕೊರೊನಾದಿಂದಾಗಿ ಮೃತಪಟ್ಟ ಸಂಬಂಧಿಕರಿಗಾಗಿ ರೋಧಿಸುತ್ತಿರುವುದು

ಇದನ್ನೂ ಓದಿ: ಮುಂದಿನ 6 ತಿಂಗಳಲ್ಲಿ ಮಾಧ್ಯಮದ ಮೇಲೆ ನಿಯಂತ್ರಣ: ಅಣ್ಣಾಮಲೈ ವಿವಾದಿತ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...