Homeಕರ್ನಾಟಕಎಕ್ಸಿಟ್ ಪೋಲ್ ಕುರಿತು ವಿವಿಧ ರಾಜಕೀಯ ಮುಖಂಡರು ಎನಂತಾರೆ?

ಎಕ್ಸಿಟ್ ಪೋಲ್ ಕುರಿತು ವಿವಿಧ ರಾಜಕೀಯ ಮುಖಂಡರು ಎನಂತಾರೆ?

ಎಕ್ಸಿಟ್ ಪೋಲ್ ಒಪ್ಪದ ವಿಪಕ್ಷಗಳು, ಬಿಜೆಪಿ ಎನ್.ಡಿ.ಎ ಯಲ್ಲಿ ಉಲ್ಲಾಸ

- Advertisement -
- Advertisement -

ನಿನ್ನೆ ಸಂಜೆ ಬಿಡುಗಡೆಯಾಗಿರುವ ಎಲ್ಲಾ ಮತಗಟ್ಟೆ ಸಮೀಕ್ಷೆಗಳು ಎನ್.ಡಿ.ಎ ಮತ್ತೆ ಬಹುಮತದ ಮೂಲಕ ಅಧಿಕಾರಕ್ಕೆ ಮರಳುತ್ತದೆ ಎಂದು ಹೇಳಿವೆ. ಇದಕ್ಕೆ ವಿವಿಧ ರಾಜಕೀಯ ಮುಖಂಡರು ಏನು ಹೇಳಿದ್ದಾರೆ ಎಂಬುದನ್ನು ಇಲ್ಲಿ ನೀಡಿದ್ದೇವೆ.

ಜನರ ನಾಡಿ ಮಿಡಿತವನ್ನು ಅರಿಯುವಲ್ಲಿ ಎಕ್ಸಿಟ್ ಪೋಲ್ಗಳು ವಿಫಲವಾಗಿವೆ. ಗ್ರೌಂಡ್ ರಿಯಾಲಿಟಿಯಿಂದ ದೂರವಾದ ತಪ್ಪು ಸಮೀಕ್ಷೆಯೆಂಬುದನ್ನು ಹಲವು ಸಂಗತಿಗಳು ತೋರಿಸುತ್ತಿವೆ. ನಿಸ್ಸಂದೇಹವಾಗಿ ಆಂದ್ರದಲ್ಲಿ ಟಿಡಿಪಿ ಈ ಬಾರಿ ಸರ್ಕಾರ ರಚಿಸಲಿದೆ. ಹಾಗೆಯೇ ನಮಗೆ ಕೇಂದ್ರದಲ್ಲಿ ಬಿಜೆಪಿಯೇತರ ಪಕ್ಷಗಳು ಸೇರಿ, ಬಿಜೆಪಿಯೇತರ ಸರ್ಕಾರ ರಚಿಸುವ ವಿಶ್ವಾಸವಿದೆ. – ಚಂದ್ರಬಾಬು ನಾಯ್ಡು, ಆಂಧ್ರ ಮುಖ್ಯ ಮಂತ್ರಿ ಮತ್ತು ಟಿಡಿಪಿ ಮುಖ್ಯಸ್ಥ.

ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ತಪ್ಪೆಂದು ನಾನು ನಂಬುತ್ತೇನೆ. ಕಳೆದ ವಾರ ಆಸ್ಟ್ರೇಲಿಯಾದಲ್ಲಿ 56 ವಿಭಿನ್ನ ರೀತಿಯ ಎಕ್ಸಿಟ್ ಪೋಲ್ಗಳು ತಪ್ಪಾಗಿವೆ. ಭಾರತದ ಮತದಾರರು ಈ ಸರ್ಕಾರದ ಭಯದಿಂದಾಗಿ ಚುನಾವಣೋತ್ತರ ಸಮೀಕ್ಷೆಗಳಿಗೆ ಸತ್ಯ ಹೇಳಿಲ್ಲದಿರಬಹುದು. ಮೇ 23ರ ಫಲಿತಾಂಶದವರೆಗೂ ಕಾಯೋಣ. – ಶಶಿ ತರೂರ್, ಕಾಂಗ್ರೆಸ್ ಮುಖಂಡ

ಎಕ್ಸಿಟ್ ಪೋಲ್ ಗಾಸಿಪ್ ನಲ್ಲಿ ನನಗೆ ನಂಬಿಕೆಯಿಲ್ಲ. ಸಾವಿರಾರು ಇವಿಎಂಗಳನ್ನು ತಿರುಚುವ ಅಥವಾ ಸ್ಥಳಾಂತರಿಸುವ ಹುನ್ನಾರ ನಡೆದಿದೆ. ಎಲ್ಲಾ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ, ಗಟ್ಟಿಯಾಗಿ ಮತ್ತು ಧೃಢವಾಗಿ ಈ ಕದನದಲ್ಲಿ ಹೋರಾಡಬೇಕೆಂದು ಮನವಿ ಮಾಡುತ್ತೇನೆ – ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್
ಅರವಿಂದ್ ಕೇಜ್ರಿವಾಲ್ರವರು ಮಮತಾ ಬ್ಯಾನರ್ಜಿಯವರ ಟ್ವೀಟ್ ಅನ್ನು ರೀಟ್ವೀಟ್ ಮಾಡಿದ್ದಾರೆ.

ಪ್ರತಿಯೊಂದು ಎಕ್ಸಿಟ್ ಪೋಲ್ ಕೂಡ ತಪ್ಪಾಗಿರುವುದಿಲ್ಲ. ಇದು ಟಿವಿಯನ್ನು ಬಂದ್ ಮಾಡುವ, ಸಾಮಾಜಿಕ ಜಾಲತಾಣಗಳಿಂದ ಲಾಗೌಟ್ ಮಾಡಿಕೊಂಡು ಮೇ 23ಕ್ಕೆ ಭೂಮಿ ತನ್ನ ಅಕ್ಷದ ಮೇಲೆ ತಿರುಗುತ್ತಾ ಎಂದು ಕಾಯುವುದು ಒಳ್ಳೆಯದು. – ಒಮರ್ ಅಬ್ದುಲ್ಲ, ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ.

ನಾನು ಈ ಮೊದಲೇ 22 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದಾಗ ಯಾರು ನಂಬಿರಲಿಲ್ಲ. ಈಗ ನೋಡಿ ಮತಗಟ್ಟೆ ಸಮೀಕ್ಷೆಗಳು ಅದನ್ನೇ ಹೇಳಿವೆ. ಈಗಾದರೂ ಎಲ್ಲರಿಗೂ ಮನವರಿಕೆ ಆಗಿರಬಹುದು. – ಯಡಿಯೂರಪ್ಪ, ಬಿಜೆಪಿ ರಾಜ್ಯಧ್ಯಕ್ಷರು, ಕರ್ನಾಟಕ.

ಮತಗಟ್ಟೆ ಸಮೀಕ್ಷೆಗಳು ಸಂಪೂರ್ಣ ಸುಳ್ಳು, ಹಾಗೊಂದು ವೇಳೆ ಬಿಜೆಪಿ ಗೆದ್ದಿದ್ದೆ ಆದರೆ ಅದು ಇವಿಎಂ ಮೇಲೆ ಅನುಮಾನ ಹುಟ್ಟಿಸುವಂತೆ ಮಾಡುತ್ತದೆ.
– ಜಿ ಪರಮೇಶ್ವರ್, ಉಪಮುಖ್ಯಮಂತ್ರಿ, ಹಾಗೂ ಕಾಂಗ್ರೆಸ್ ಮುಖಂಡರು, ಕರ್ನಾಟಕ

ಎಕ್ಸಿಟ್ ಪೋಲ್ ನೋಡಿದರೆ ಕ್ಷಣಿಕ ಸುಖ ಅನ್ನಿಸುತ್ತದೆ. ಶಾಶ್ವತ ಸಂತೋಷಕ್ಕೆ ಮುನ್ನ ಬಂದು, ನಂತರ ಮಾಯವಾಗುತ್ತದೆ. ನಮಗೆ ಶಾಶ್ವತ ಸುಖ ಮುಖ್ಯ – ಎಚ್.ವಿಶ್ವನಾಥ್, ಜೆಡಿಎಸ್ ರಾಜ್ಯಧ್ಯಕ್ಷರು, ಕರ್ನಾಟಕ.

ಇದನ್ನು ಓದಿ: ವಿವಿಧ ಸಮೀಕ್ಷಾ ಸಂಸ್ಥೆಗಳ ಮತಗಟ್ಟೆ ಸಮೀಕ್ಷೆಗಳು ಎನ್ ಡಿ ಎ ಗೆ ಸ್ಪಷ್ಟ ಬಹುಮತ ಎಂದು ಹೇಳುತ್ತಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿದ್ದನ್ನು ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

ಆಗಸ್ಟ್‌ 18 2025ರಂದು ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟವು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿಯನ್ನು ದಾಖಲಿಸಿತ್ತು. ರಾಜ್ಯ ಸರ್ಕಾರ...

ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ಪೌರತ್ವ ತ್ಯಜಿಸಿದ್ದಾರೆ: ಎಂಇಎ

ಕಳೆದ ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ತಮ್ಮ ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ. ಜಾಗತಿಕ ಚಲನಶೀಲತೆ ಹೆಚ್ಚಾದಂತೆ ಮತ್ತು ವೈಯಕ್ತಿಕ ಆಯ್ಕೆಗಳು ವಲಸೆ ಪ್ರವೃತ್ತಿಯನ್ನು ರೂಪಿಸುತ್ತಿರುವುದರಿಂದ ವಾರ್ಷಿಕವಾಗಿ ಸಂಖ್ಯೆಗಳು ಗಮನಾರ್ಹವಾಗಿ ಬದಲಾಗಿವೆ...

ನಟ ದಿಲೀಪ್ ಖುಲಾಸೆ: ನ್ಯಾಯಾಲಯದ ಕಲಾಪವನ್ನು ವಿರೂಪಗೊಳಿಸಬೇಡಿ ಎಂದು ಮಾಧ್ಯಮ ಮತ್ತು ವಕೀಲರಿಗೆ ಎಚ್ಚರಿಕೆ ನೀಡಿದ ನ್ಯಾಯಾದೀಶೆ ಹನಿ ವರ್ಗೀಸ್ 

2017 ರಲ್ಲಿ ದಕ್ಷಿಣ ಭಾರತದ ನಟಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿದ ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಧೀಶೆ ಹನಿ ಎಂ ವರ್ಗೀಸ್, ತಮ್ಮ ತೀರ್ಪಿನ...

ರಾಜ್‌ಕೋಟ್‌ ಬಾಲಕಿ ಅತ್ಯಾಚಾರ ಪ್ರಕರಣ; ಆಕ್ರೋಶ ಹೊರಹಾಕಿದ ಶಾಸಕ ಜಿಗ್ನೇಶ್‌ ಮೇವಾನಿ; ಕಠಿಣ ಶಿಕ್ಷೆಗೆ ಆಗ್ರಹ

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಏಳು ವರ್ಷದ ಬಾಲಕಿ ಅತ್ಯಾಚಾರ ಹಾಗೂ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಧಿಸಿದಂತೆ ಆಕ್ರೋಶ ಹೊರಹಾಕಿರುವ ಕಾಂಗ್ರೆಸ್ ಶಾಸಕ ಜಿಗ್ನೇಶ್‌ ಮೇವಾನಿ; ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಕುರಿತು...

ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಪ್ರೋತ್ಸಾಹಧನ ನೀಡಲು BJP ಕಾರ್ಯಕರ್ತರ ಮನವಿ

ಮಂಡ್ಯ:  ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಶಾದಿ ಭಾಗ್ಯ’ದಂತೆ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದ ವತಿಯಿಂದ ರೂ.5ಲಕ್ಷ ಪ್ರೋತ್ಸಾಹಧನ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಅವರ ಮೂಲಕ...

ನಿವೃತ್ತಿ ನಿರ್ಧಾರ ಹಿಂತೆಗೆದುಕೊಂಡ ವಿನೇಶ್ ಫೋಗಟ್; ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ತಯಾರಿ

ಕುಸ್ತಿಪಟು ವಿನೇಶ್ ಫೋಗಟ್ ಸ್ಪರ್ಧಾತ್ಮಕ ಕ್ರೀಡೆಗೆ ಮರಳುವುದಾಗಿ ಘೋಷಿಸುವ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಹಿಂತೆಗೆದುಕೊಂಡಿದ್ದಾರೆ. 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಅನ್ನು ಗುರಿಯಾಗಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಈ ಕುರಿತ ಹೇಳಿಕೆ ಬಿಡುಗಡೆ ಮಾಡಿರುವ...

ಗುಜರಾತ್‌ನ ವಲ್ಸಾದ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಐವರು ಕಾರ್ಮಿಕರಿಗೆ ಗಾಯ

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಔರಂಗ ನದಿಗೆ ನಿರ್ಮಾಣ ಹಂತದಲ್ಲಿರುವ ಸೇತುವೆಯ ಮೇಲಿನ ಗಿರ್ಡರ್ ಕುಸಿದಿದ್ದು, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ.  ಹಳೆಯ ಸೇತುವೆಗೆ ಸಮಾನಾಂತರವಾಗಿ ಹೊಸ ಸೇತುವೆಯನ್ನು ನಿರ್ಮಿಸಲಾಗುತ್ತಿರುವ ಕೈಲಾಶ್ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ 8...

ಆಮದು ಸುಂಕ ಹೆಚ್ಚಿಸಿದ ಮೆಕ್ಸಿಕೊ: ಭಾರತದ ವಾಹನ-ಉಕ್ಕು ರಫ್ತಿನ ವೆಚ್ಚ ಹೆಚ್ಚಳ ಸಾಧ್ಯತೆ

ಸ್ಥಳೀಯ ಕೈಗಾರಿಕೆಗಳನ್ನು ರಕ್ಷಿಸುವ ಗುರಿಯ ಭಾಗವಾಗಿ, ಭಾರತ, ಚೀನಾ ಮತ್ತು ದಕ್ಷಿಣ ಕೊರಿಯಾ ಸೇರಿದಂತೆ ಏಷ್ಯಾದ ದೇಶಗಳಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲಿನ ಹೆಚ್ಚಿನ ಸುಂಕ ಹೆಚ್ಚಳ ನಿರ್ಧಾರವನ್ನು ಮೆಕ್ಸಿಕೋ ಅನುಮೋದಿಸಿದೆ. ಮೆಕ್ಸಿಕನ್...

Cognizant ಕಂಪನಿಗೆ 99 ಪೈಸೆಗೆ ಒಂದು ಎಕರೆ ಭೂಮಿ: ವಿಶಾಖಪಟ್ಟಣದಲ್ಲಿ ತಾತ್ಕಾಲಿಕ ಕಛೇರಿ ಉದ್ಘಾಟನೆ

ಕಳೆದ ಜೂನ್‌ ನಲ್ಲಿ ಸುದ್ದಿಗೆ ಗ್ರಾಸವಾಗಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ Cognizant ಕಂಪನಿಯು 1582 ಕೋಟಿ ಹೂಡಿಕೆ ಮಾಡಿ 8 ಸಾವಿರ ಉದ್ಯೋಗ ಸೃಷ್ಠಿ ಮಾಡಲಾಗುವುದೆಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸರ್ಕಾರ ಘೋಷಿಸಿತ್ತು....

ಅಲ್ಪಸಂಖ್ಯಾತ ಶಾಲೆಗಳಿಗೆ ಆರ್.ಟಿ.ಇ ಕಾಯ್ದೆಯಿಂದ ವಿನಾಯಿತಿ ತೀರ್ಪಿನ ವಿರುದ್ಧ ಅರ್ಜಿ; ಎನ್.ಜಿ.ಒಗೆ ದಂಡ ವಿಧಿಸಿದ ಸುಪ್ರೀಂ  

ಶಿಕ್ಷಣ ಹಕ್ಕು ಕಾಯ್ದೆಯ (ಆರ್‌ಟಿಇ) ನಿಬಂಧನೆಗಳಿಂದ ಅಲ್ಪಸಂಖ್ಯಾತ ಶಾಲೆಗಳಿಗೆ ವಿನಾಯಿತಿ ನೀಡಿದ್ದ, ತನ್ನ ಹಿಂದಿನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರವಾಗಿ ಖಂಡಿಸಿದೆ.  ಜಸ್ಟೀಸ್ ಬಿ.ವಿ. ನಾಗರತ್ನ ಮತ್ತು...