Homeಕರ್ನಾಟಕಎಕ್ಸಿಟ್ ಪೋಲ್ ಕುರಿತು ವಿವಿಧ ರಾಜಕೀಯ ಮುಖಂಡರು ಎನಂತಾರೆ?

ಎಕ್ಸಿಟ್ ಪೋಲ್ ಕುರಿತು ವಿವಿಧ ರಾಜಕೀಯ ಮುಖಂಡರು ಎನಂತಾರೆ?

ಎಕ್ಸಿಟ್ ಪೋಲ್ ಒಪ್ಪದ ವಿಪಕ್ಷಗಳು, ಬಿಜೆಪಿ ಎನ್.ಡಿ.ಎ ಯಲ್ಲಿ ಉಲ್ಲಾಸ

- Advertisement -
- Advertisement -

ನಿನ್ನೆ ಸಂಜೆ ಬಿಡುಗಡೆಯಾಗಿರುವ ಎಲ್ಲಾ ಮತಗಟ್ಟೆ ಸಮೀಕ್ಷೆಗಳು ಎನ್.ಡಿ.ಎ ಮತ್ತೆ ಬಹುಮತದ ಮೂಲಕ ಅಧಿಕಾರಕ್ಕೆ ಮರಳುತ್ತದೆ ಎಂದು ಹೇಳಿವೆ. ಇದಕ್ಕೆ ವಿವಿಧ ರಾಜಕೀಯ ಮುಖಂಡರು ಏನು ಹೇಳಿದ್ದಾರೆ ಎಂಬುದನ್ನು ಇಲ್ಲಿ ನೀಡಿದ್ದೇವೆ.

ಜನರ ನಾಡಿ ಮಿಡಿತವನ್ನು ಅರಿಯುವಲ್ಲಿ ಎಕ್ಸಿಟ್ ಪೋಲ್ಗಳು ವಿಫಲವಾಗಿವೆ. ಗ್ರೌಂಡ್ ರಿಯಾಲಿಟಿಯಿಂದ ದೂರವಾದ ತಪ್ಪು ಸಮೀಕ್ಷೆಯೆಂಬುದನ್ನು ಹಲವು ಸಂಗತಿಗಳು ತೋರಿಸುತ್ತಿವೆ. ನಿಸ್ಸಂದೇಹವಾಗಿ ಆಂದ್ರದಲ್ಲಿ ಟಿಡಿಪಿ ಈ ಬಾರಿ ಸರ್ಕಾರ ರಚಿಸಲಿದೆ. ಹಾಗೆಯೇ ನಮಗೆ ಕೇಂದ್ರದಲ್ಲಿ ಬಿಜೆಪಿಯೇತರ ಪಕ್ಷಗಳು ಸೇರಿ, ಬಿಜೆಪಿಯೇತರ ಸರ್ಕಾರ ರಚಿಸುವ ವಿಶ್ವಾಸವಿದೆ. – ಚಂದ್ರಬಾಬು ನಾಯ್ಡು, ಆಂಧ್ರ ಮುಖ್ಯ ಮಂತ್ರಿ ಮತ್ತು ಟಿಡಿಪಿ ಮುಖ್ಯಸ್ಥ.

ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ತಪ್ಪೆಂದು ನಾನು ನಂಬುತ್ತೇನೆ. ಕಳೆದ ವಾರ ಆಸ್ಟ್ರೇಲಿಯಾದಲ್ಲಿ 56 ವಿಭಿನ್ನ ರೀತಿಯ ಎಕ್ಸಿಟ್ ಪೋಲ್ಗಳು ತಪ್ಪಾಗಿವೆ. ಭಾರತದ ಮತದಾರರು ಈ ಸರ್ಕಾರದ ಭಯದಿಂದಾಗಿ ಚುನಾವಣೋತ್ತರ ಸಮೀಕ್ಷೆಗಳಿಗೆ ಸತ್ಯ ಹೇಳಿಲ್ಲದಿರಬಹುದು. ಮೇ 23ರ ಫಲಿತಾಂಶದವರೆಗೂ ಕಾಯೋಣ. – ಶಶಿ ತರೂರ್, ಕಾಂಗ್ರೆಸ್ ಮುಖಂಡ

ಎಕ್ಸಿಟ್ ಪೋಲ್ ಗಾಸಿಪ್ ನಲ್ಲಿ ನನಗೆ ನಂಬಿಕೆಯಿಲ್ಲ. ಸಾವಿರಾರು ಇವಿಎಂಗಳನ್ನು ತಿರುಚುವ ಅಥವಾ ಸ್ಥಳಾಂತರಿಸುವ ಹುನ್ನಾರ ನಡೆದಿದೆ. ಎಲ್ಲಾ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ, ಗಟ್ಟಿಯಾಗಿ ಮತ್ತು ಧೃಢವಾಗಿ ಈ ಕದನದಲ್ಲಿ ಹೋರಾಡಬೇಕೆಂದು ಮನವಿ ಮಾಡುತ್ತೇನೆ – ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್
ಅರವಿಂದ್ ಕೇಜ್ರಿವಾಲ್ರವರು ಮಮತಾ ಬ್ಯಾನರ್ಜಿಯವರ ಟ್ವೀಟ್ ಅನ್ನು ರೀಟ್ವೀಟ್ ಮಾಡಿದ್ದಾರೆ.

ಪ್ರತಿಯೊಂದು ಎಕ್ಸಿಟ್ ಪೋಲ್ ಕೂಡ ತಪ್ಪಾಗಿರುವುದಿಲ್ಲ. ಇದು ಟಿವಿಯನ್ನು ಬಂದ್ ಮಾಡುವ, ಸಾಮಾಜಿಕ ಜಾಲತಾಣಗಳಿಂದ ಲಾಗೌಟ್ ಮಾಡಿಕೊಂಡು ಮೇ 23ಕ್ಕೆ ಭೂಮಿ ತನ್ನ ಅಕ್ಷದ ಮೇಲೆ ತಿರುಗುತ್ತಾ ಎಂದು ಕಾಯುವುದು ಒಳ್ಳೆಯದು. – ಒಮರ್ ಅಬ್ದುಲ್ಲ, ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ.

ನಾನು ಈ ಮೊದಲೇ 22 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದಾಗ ಯಾರು ನಂಬಿರಲಿಲ್ಲ. ಈಗ ನೋಡಿ ಮತಗಟ್ಟೆ ಸಮೀಕ್ಷೆಗಳು ಅದನ್ನೇ ಹೇಳಿವೆ. ಈಗಾದರೂ ಎಲ್ಲರಿಗೂ ಮನವರಿಕೆ ಆಗಿರಬಹುದು. – ಯಡಿಯೂರಪ್ಪ, ಬಿಜೆಪಿ ರಾಜ್ಯಧ್ಯಕ್ಷರು, ಕರ್ನಾಟಕ.

ಮತಗಟ್ಟೆ ಸಮೀಕ್ಷೆಗಳು ಸಂಪೂರ್ಣ ಸುಳ್ಳು, ಹಾಗೊಂದು ವೇಳೆ ಬಿಜೆಪಿ ಗೆದ್ದಿದ್ದೆ ಆದರೆ ಅದು ಇವಿಎಂ ಮೇಲೆ ಅನುಮಾನ ಹುಟ್ಟಿಸುವಂತೆ ಮಾಡುತ್ತದೆ.
– ಜಿ ಪರಮೇಶ್ವರ್, ಉಪಮುಖ್ಯಮಂತ್ರಿ, ಹಾಗೂ ಕಾಂಗ್ರೆಸ್ ಮುಖಂಡರು, ಕರ್ನಾಟಕ

ಎಕ್ಸಿಟ್ ಪೋಲ್ ನೋಡಿದರೆ ಕ್ಷಣಿಕ ಸುಖ ಅನ್ನಿಸುತ್ತದೆ. ಶಾಶ್ವತ ಸಂತೋಷಕ್ಕೆ ಮುನ್ನ ಬಂದು, ನಂತರ ಮಾಯವಾಗುತ್ತದೆ. ನಮಗೆ ಶಾಶ್ವತ ಸುಖ ಮುಖ್ಯ – ಎಚ್.ವಿಶ್ವನಾಥ್, ಜೆಡಿಎಸ್ ರಾಜ್ಯಧ್ಯಕ್ಷರು, ಕರ್ನಾಟಕ.

ಇದನ್ನು ಓದಿ: ವಿವಿಧ ಸಮೀಕ್ಷಾ ಸಂಸ್ಥೆಗಳ ಮತಗಟ್ಟೆ ಸಮೀಕ್ಷೆಗಳು ಎನ್ ಡಿ ಎ ಗೆ ಸ್ಪಷ್ಟ ಬಹುಮತ ಎಂದು ಹೇಳುತ್ತಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...