Homeಕರ್ನಾಟಕಎಕ್ಸಿಟ್ ಪೋಲ್ ಕುರಿತು ವಿವಿಧ ರಾಜಕೀಯ ಮುಖಂಡರು ಎನಂತಾರೆ?

ಎಕ್ಸಿಟ್ ಪೋಲ್ ಕುರಿತು ವಿವಿಧ ರಾಜಕೀಯ ಮುಖಂಡರು ಎನಂತಾರೆ?

ಎಕ್ಸಿಟ್ ಪೋಲ್ ಒಪ್ಪದ ವಿಪಕ್ಷಗಳು, ಬಿಜೆಪಿ ಎನ್.ಡಿ.ಎ ಯಲ್ಲಿ ಉಲ್ಲಾಸ

- Advertisement -
- Advertisement -

ನಿನ್ನೆ ಸಂಜೆ ಬಿಡುಗಡೆಯಾಗಿರುವ ಎಲ್ಲಾ ಮತಗಟ್ಟೆ ಸಮೀಕ್ಷೆಗಳು ಎನ್.ಡಿ.ಎ ಮತ್ತೆ ಬಹುಮತದ ಮೂಲಕ ಅಧಿಕಾರಕ್ಕೆ ಮರಳುತ್ತದೆ ಎಂದು ಹೇಳಿವೆ. ಇದಕ್ಕೆ ವಿವಿಧ ರಾಜಕೀಯ ಮುಖಂಡರು ಏನು ಹೇಳಿದ್ದಾರೆ ಎಂಬುದನ್ನು ಇಲ್ಲಿ ನೀಡಿದ್ದೇವೆ.

ಜನರ ನಾಡಿ ಮಿಡಿತವನ್ನು ಅರಿಯುವಲ್ಲಿ ಎಕ್ಸಿಟ್ ಪೋಲ್ಗಳು ವಿಫಲವಾಗಿವೆ. ಗ್ರೌಂಡ್ ರಿಯಾಲಿಟಿಯಿಂದ ದೂರವಾದ ತಪ್ಪು ಸಮೀಕ್ಷೆಯೆಂಬುದನ್ನು ಹಲವು ಸಂಗತಿಗಳು ತೋರಿಸುತ್ತಿವೆ. ನಿಸ್ಸಂದೇಹವಾಗಿ ಆಂದ್ರದಲ್ಲಿ ಟಿಡಿಪಿ ಈ ಬಾರಿ ಸರ್ಕಾರ ರಚಿಸಲಿದೆ. ಹಾಗೆಯೇ ನಮಗೆ ಕೇಂದ್ರದಲ್ಲಿ ಬಿಜೆಪಿಯೇತರ ಪಕ್ಷಗಳು ಸೇರಿ, ಬಿಜೆಪಿಯೇತರ ಸರ್ಕಾರ ರಚಿಸುವ ವಿಶ್ವಾಸವಿದೆ. – ಚಂದ್ರಬಾಬು ನಾಯ್ಡು, ಆಂಧ್ರ ಮುಖ್ಯ ಮಂತ್ರಿ ಮತ್ತು ಟಿಡಿಪಿ ಮುಖ್ಯಸ್ಥ.

ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ತಪ್ಪೆಂದು ನಾನು ನಂಬುತ್ತೇನೆ. ಕಳೆದ ವಾರ ಆಸ್ಟ್ರೇಲಿಯಾದಲ್ಲಿ 56 ವಿಭಿನ್ನ ರೀತಿಯ ಎಕ್ಸಿಟ್ ಪೋಲ್ಗಳು ತಪ್ಪಾಗಿವೆ. ಭಾರತದ ಮತದಾರರು ಈ ಸರ್ಕಾರದ ಭಯದಿಂದಾಗಿ ಚುನಾವಣೋತ್ತರ ಸಮೀಕ್ಷೆಗಳಿಗೆ ಸತ್ಯ ಹೇಳಿಲ್ಲದಿರಬಹುದು. ಮೇ 23ರ ಫಲಿತಾಂಶದವರೆಗೂ ಕಾಯೋಣ. – ಶಶಿ ತರೂರ್, ಕಾಂಗ್ರೆಸ್ ಮುಖಂಡ

ಎಕ್ಸಿಟ್ ಪೋಲ್ ಗಾಸಿಪ್ ನಲ್ಲಿ ನನಗೆ ನಂಬಿಕೆಯಿಲ್ಲ. ಸಾವಿರಾರು ಇವಿಎಂಗಳನ್ನು ತಿರುಚುವ ಅಥವಾ ಸ್ಥಳಾಂತರಿಸುವ ಹುನ್ನಾರ ನಡೆದಿದೆ. ಎಲ್ಲಾ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ, ಗಟ್ಟಿಯಾಗಿ ಮತ್ತು ಧೃಢವಾಗಿ ಈ ಕದನದಲ್ಲಿ ಹೋರಾಡಬೇಕೆಂದು ಮನವಿ ಮಾಡುತ್ತೇನೆ – ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್
ಅರವಿಂದ್ ಕೇಜ್ರಿವಾಲ್ರವರು ಮಮತಾ ಬ್ಯಾನರ್ಜಿಯವರ ಟ್ವೀಟ್ ಅನ್ನು ರೀಟ್ವೀಟ್ ಮಾಡಿದ್ದಾರೆ.

ಪ್ರತಿಯೊಂದು ಎಕ್ಸಿಟ್ ಪೋಲ್ ಕೂಡ ತಪ್ಪಾಗಿರುವುದಿಲ್ಲ. ಇದು ಟಿವಿಯನ್ನು ಬಂದ್ ಮಾಡುವ, ಸಾಮಾಜಿಕ ಜಾಲತಾಣಗಳಿಂದ ಲಾಗೌಟ್ ಮಾಡಿಕೊಂಡು ಮೇ 23ಕ್ಕೆ ಭೂಮಿ ತನ್ನ ಅಕ್ಷದ ಮೇಲೆ ತಿರುಗುತ್ತಾ ಎಂದು ಕಾಯುವುದು ಒಳ್ಳೆಯದು. – ಒಮರ್ ಅಬ್ದುಲ್ಲ, ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ.

ನಾನು ಈ ಮೊದಲೇ 22 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದಾಗ ಯಾರು ನಂಬಿರಲಿಲ್ಲ. ಈಗ ನೋಡಿ ಮತಗಟ್ಟೆ ಸಮೀಕ್ಷೆಗಳು ಅದನ್ನೇ ಹೇಳಿವೆ. ಈಗಾದರೂ ಎಲ್ಲರಿಗೂ ಮನವರಿಕೆ ಆಗಿರಬಹುದು. – ಯಡಿಯೂರಪ್ಪ, ಬಿಜೆಪಿ ರಾಜ್ಯಧ್ಯಕ್ಷರು, ಕರ್ನಾಟಕ.

ಮತಗಟ್ಟೆ ಸಮೀಕ್ಷೆಗಳು ಸಂಪೂರ್ಣ ಸುಳ್ಳು, ಹಾಗೊಂದು ವೇಳೆ ಬಿಜೆಪಿ ಗೆದ್ದಿದ್ದೆ ಆದರೆ ಅದು ಇವಿಎಂ ಮೇಲೆ ಅನುಮಾನ ಹುಟ್ಟಿಸುವಂತೆ ಮಾಡುತ್ತದೆ.
– ಜಿ ಪರಮೇಶ್ವರ್, ಉಪಮುಖ್ಯಮಂತ್ರಿ, ಹಾಗೂ ಕಾಂಗ್ರೆಸ್ ಮುಖಂಡರು, ಕರ್ನಾಟಕ

ಎಕ್ಸಿಟ್ ಪೋಲ್ ನೋಡಿದರೆ ಕ್ಷಣಿಕ ಸುಖ ಅನ್ನಿಸುತ್ತದೆ. ಶಾಶ್ವತ ಸಂತೋಷಕ್ಕೆ ಮುನ್ನ ಬಂದು, ನಂತರ ಮಾಯವಾಗುತ್ತದೆ. ನಮಗೆ ಶಾಶ್ವತ ಸುಖ ಮುಖ್ಯ – ಎಚ್.ವಿಶ್ವನಾಥ್, ಜೆಡಿಎಸ್ ರಾಜ್ಯಧ್ಯಕ್ಷರು, ಕರ್ನಾಟಕ.

ಇದನ್ನು ಓದಿ: ವಿವಿಧ ಸಮೀಕ್ಷಾ ಸಂಸ್ಥೆಗಳ ಮತಗಟ್ಟೆ ಸಮೀಕ್ಷೆಗಳು ಎನ್ ಡಿ ಎ ಗೆ ಸ್ಪಷ್ಟ ಬಹುಮತ ಎಂದು ಹೇಳುತ್ತಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...