Homeಕರ್ನಾಟಕಎಕ್ಸಿಟ್ ಪೋಲ್ ಕುರಿತು ವಿವಿಧ ರಾಜಕೀಯ ಮುಖಂಡರು ಎನಂತಾರೆ?

ಎಕ್ಸಿಟ್ ಪೋಲ್ ಕುರಿತು ವಿವಿಧ ರಾಜಕೀಯ ಮುಖಂಡರು ಎನಂತಾರೆ?

ಎಕ್ಸಿಟ್ ಪೋಲ್ ಒಪ್ಪದ ವಿಪಕ್ಷಗಳು, ಬಿಜೆಪಿ ಎನ್.ಡಿ.ಎ ಯಲ್ಲಿ ಉಲ್ಲಾಸ

- Advertisement -
- Advertisement -

ನಿನ್ನೆ ಸಂಜೆ ಬಿಡುಗಡೆಯಾಗಿರುವ ಎಲ್ಲಾ ಮತಗಟ್ಟೆ ಸಮೀಕ್ಷೆಗಳು ಎನ್.ಡಿ.ಎ ಮತ್ತೆ ಬಹುಮತದ ಮೂಲಕ ಅಧಿಕಾರಕ್ಕೆ ಮರಳುತ್ತದೆ ಎಂದು ಹೇಳಿವೆ. ಇದಕ್ಕೆ ವಿವಿಧ ರಾಜಕೀಯ ಮುಖಂಡರು ಏನು ಹೇಳಿದ್ದಾರೆ ಎಂಬುದನ್ನು ಇಲ್ಲಿ ನೀಡಿದ್ದೇವೆ.

ಜನರ ನಾಡಿ ಮಿಡಿತವನ್ನು ಅರಿಯುವಲ್ಲಿ ಎಕ್ಸಿಟ್ ಪೋಲ್ಗಳು ವಿಫಲವಾಗಿವೆ. ಗ್ರೌಂಡ್ ರಿಯಾಲಿಟಿಯಿಂದ ದೂರವಾದ ತಪ್ಪು ಸಮೀಕ್ಷೆಯೆಂಬುದನ್ನು ಹಲವು ಸಂಗತಿಗಳು ತೋರಿಸುತ್ತಿವೆ. ನಿಸ್ಸಂದೇಹವಾಗಿ ಆಂದ್ರದಲ್ಲಿ ಟಿಡಿಪಿ ಈ ಬಾರಿ ಸರ್ಕಾರ ರಚಿಸಲಿದೆ. ಹಾಗೆಯೇ ನಮಗೆ ಕೇಂದ್ರದಲ್ಲಿ ಬಿಜೆಪಿಯೇತರ ಪಕ್ಷಗಳು ಸೇರಿ, ಬಿಜೆಪಿಯೇತರ ಸರ್ಕಾರ ರಚಿಸುವ ವಿಶ್ವಾಸವಿದೆ. – ಚಂದ್ರಬಾಬು ನಾಯ್ಡು, ಆಂಧ್ರ ಮುಖ್ಯ ಮಂತ್ರಿ ಮತ್ತು ಟಿಡಿಪಿ ಮುಖ್ಯಸ್ಥ.

ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ತಪ್ಪೆಂದು ನಾನು ನಂಬುತ್ತೇನೆ. ಕಳೆದ ವಾರ ಆಸ್ಟ್ರೇಲಿಯಾದಲ್ಲಿ 56 ವಿಭಿನ್ನ ರೀತಿಯ ಎಕ್ಸಿಟ್ ಪೋಲ್ಗಳು ತಪ್ಪಾಗಿವೆ. ಭಾರತದ ಮತದಾರರು ಈ ಸರ್ಕಾರದ ಭಯದಿಂದಾಗಿ ಚುನಾವಣೋತ್ತರ ಸಮೀಕ್ಷೆಗಳಿಗೆ ಸತ್ಯ ಹೇಳಿಲ್ಲದಿರಬಹುದು. ಮೇ 23ರ ಫಲಿತಾಂಶದವರೆಗೂ ಕಾಯೋಣ. – ಶಶಿ ತರೂರ್, ಕಾಂಗ್ರೆಸ್ ಮುಖಂಡ

ಎಕ್ಸಿಟ್ ಪೋಲ್ ಗಾಸಿಪ್ ನಲ್ಲಿ ನನಗೆ ನಂಬಿಕೆಯಿಲ್ಲ. ಸಾವಿರಾರು ಇವಿಎಂಗಳನ್ನು ತಿರುಚುವ ಅಥವಾ ಸ್ಥಳಾಂತರಿಸುವ ಹುನ್ನಾರ ನಡೆದಿದೆ. ಎಲ್ಲಾ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ, ಗಟ್ಟಿಯಾಗಿ ಮತ್ತು ಧೃಢವಾಗಿ ಈ ಕದನದಲ್ಲಿ ಹೋರಾಡಬೇಕೆಂದು ಮನವಿ ಮಾಡುತ್ತೇನೆ – ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್
ಅರವಿಂದ್ ಕೇಜ್ರಿವಾಲ್ರವರು ಮಮತಾ ಬ್ಯಾನರ್ಜಿಯವರ ಟ್ವೀಟ್ ಅನ್ನು ರೀಟ್ವೀಟ್ ಮಾಡಿದ್ದಾರೆ.

ಪ್ರತಿಯೊಂದು ಎಕ್ಸಿಟ್ ಪೋಲ್ ಕೂಡ ತಪ್ಪಾಗಿರುವುದಿಲ್ಲ. ಇದು ಟಿವಿಯನ್ನು ಬಂದ್ ಮಾಡುವ, ಸಾಮಾಜಿಕ ಜಾಲತಾಣಗಳಿಂದ ಲಾಗೌಟ್ ಮಾಡಿಕೊಂಡು ಮೇ 23ಕ್ಕೆ ಭೂಮಿ ತನ್ನ ಅಕ್ಷದ ಮೇಲೆ ತಿರುಗುತ್ತಾ ಎಂದು ಕಾಯುವುದು ಒಳ್ಳೆಯದು. – ಒಮರ್ ಅಬ್ದುಲ್ಲ, ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ.

ನಾನು ಈ ಮೊದಲೇ 22 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದಾಗ ಯಾರು ನಂಬಿರಲಿಲ್ಲ. ಈಗ ನೋಡಿ ಮತಗಟ್ಟೆ ಸಮೀಕ್ಷೆಗಳು ಅದನ್ನೇ ಹೇಳಿವೆ. ಈಗಾದರೂ ಎಲ್ಲರಿಗೂ ಮನವರಿಕೆ ಆಗಿರಬಹುದು. – ಯಡಿಯೂರಪ್ಪ, ಬಿಜೆಪಿ ರಾಜ್ಯಧ್ಯಕ್ಷರು, ಕರ್ನಾಟಕ.

ಮತಗಟ್ಟೆ ಸಮೀಕ್ಷೆಗಳು ಸಂಪೂರ್ಣ ಸುಳ್ಳು, ಹಾಗೊಂದು ವೇಳೆ ಬಿಜೆಪಿ ಗೆದ್ದಿದ್ದೆ ಆದರೆ ಅದು ಇವಿಎಂ ಮೇಲೆ ಅನುಮಾನ ಹುಟ್ಟಿಸುವಂತೆ ಮಾಡುತ್ತದೆ.
– ಜಿ ಪರಮೇಶ್ವರ್, ಉಪಮುಖ್ಯಮಂತ್ರಿ, ಹಾಗೂ ಕಾಂಗ್ರೆಸ್ ಮುಖಂಡರು, ಕರ್ನಾಟಕ

ಎಕ್ಸಿಟ್ ಪೋಲ್ ನೋಡಿದರೆ ಕ್ಷಣಿಕ ಸುಖ ಅನ್ನಿಸುತ್ತದೆ. ಶಾಶ್ವತ ಸಂತೋಷಕ್ಕೆ ಮುನ್ನ ಬಂದು, ನಂತರ ಮಾಯವಾಗುತ್ತದೆ. ನಮಗೆ ಶಾಶ್ವತ ಸುಖ ಮುಖ್ಯ – ಎಚ್.ವಿಶ್ವನಾಥ್, ಜೆಡಿಎಸ್ ರಾಜ್ಯಧ್ಯಕ್ಷರು, ಕರ್ನಾಟಕ.

ಇದನ್ನು ಓದಿ: ವಿವಿಧ ಸಮೀಕ್ಷಾ ಸಂಸ್ಥೆಗಳ ಮತಗಟ್ಟೆ ಸಮೀಕ್ಷೆಗಳು ಎನ್ ಡಿ ಎ ಗೆ ಸ್ಪಷ್ಟ ಬಹುಮತ ಎಂದು ಹೇಳುತ್ತಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...