Homeಕರ್ನಾಟಕಎಕ್ಸಿಟ್ ಪೋಲ್ ಕುರಿತು ವಿವಿಧ ರಾಜಕೀಯ ಮುಖಂಡರು ಎನಂತಾರೆ?

ಎಕ್ಸಿಟ್ ಪೋಲ್ ಕುರಿತು ವಿವಿಧ ರಾಜಕೀಯ ಮುಖಂಡರು ಎನಂತಾರೆ?

ಎಕ್ಸಿಟ್ ಪೋಲ್ ಒಪ್ಪದ ವಿಪಕ್ಷಗಳು, ಬಿಜೆಪಿ ಎನ್.ಡಿ.ಎ ಯಲ್ಲಿ ಉಲ್ಲಾಸ

- Advertisement -
- Advertisement -

ನಿನ್ನೆ ಸಂಜೆ ಬಿಡುಗಡೆಯಾಗಿರುವ ಎಲ್ಲಾ ಮತಗಟ್ಟೆ ಸಮೀಕ್ಷೆಗಳು ಎನ್.ಡಿ.ಎ ಮತ್ತೆ ಬಹುಮತದ ಮೂಲಕ ಅಧಿಕಾರಕ್ಕೆ ಮರಳುತ್ತದೆ ಎಂದು ಹೇಳಿವೆ. ಇದಕ್ಕೆ ವಿವಿಧ ರಾಜಕೀಯ ಮುಖಂಡರು ಏನು ಹೇಳಿದ್ದಾರೆ ಎಂಬುದನ್ನು ಇಲ್ಲಿ ನೀಡಿದ್ದೇವೆ.

ಜನರ ನಾಡಿ ಮಿಡಿತವನ್ನು ಅರಿಯುವಲ್ಲಿ ಎಕ್ಸಿಟ್ ಪೋಲ್ಗಳು ವಿಫಲವಾಗಿವೆ. ಗ್ರೌಂಡ್ ರಿಯಾಲಿಟಿಯಿಂದ ದೂರವಾದ ತಪ್ಪು ಸಮೀಕ್ಷೆಯೆಂಬುದನ್ನು ಹಲವು ಸಂಗತಿಗಳು ತೋರಿಸುತ್ತಿವೆ. ನಿಸ್ಸಂದೇಹವಾಗಿ ಆಂದ್ರದಲ್ಲಿ ಟಿಡಿಪಿ ಈ ಬಾರಿ ಸರ್ಕಾರ ರಚಿಸಲಿದೆ. ಹಾಗೆಯೇ ನಮಗೆ ಕೇಂದ್ರದಲ್ಲಿ ಬಿಜೆಪಿಯೇತರ ಪಕ್ಷಗಳು ಸೇರಿ, ಬಿಜೆಪಿಯೇತರ ಸರ್ಕಾರ ರಚಿಸುವ ವಿಶ್ವಾಸವಿದೆ. – ಚಂದ್ರಬಾಬು ನಾಯ್ಡು, ಆಂಧ್ರ ಮುಖ್ಯ ಮಂತ್ರಿ ಮತ್ತು ಟಿಡಿಪಿ ಮುಖ್ಯಸ್ಥ.

ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ತಪ್ಪೆಂದು ನಾನು ನಂಬುತ್ತೇನೆ. ಕಳೆದ ವಾರ ಆಸ್ಟ್ರೇಲಿಯಾದಲ್ಲಿ 56 ವಿಭಿನ್ನ ರೀತಿಯ ಎಕ್ಸಿಟ್ ಪೋಲ್ಗಳು ತಪ್ಪಾಗಿವೆ. ಭಾರತದ ಮತದಾರರು ಈ ಸರ್ಕಾರದ ಭಯದಿಂದಾಗಿ ಚುನಾವಣೋತ್ತರ ಸಮೀಕ್ಷೆಗಳಿಗೆ ಸತ್ಯ ಹೇಳಿಲ್ಲದಿರಬಹುದು. ಮೇ 23ರ ಫಲಿತಾಂಶದವರೆಗೂ ಕಾಯೋಣ. – ಶಶಿ ತರೂರ್, ಕಾಂಗ್ರೆಸ್ ಮುಖಂಡ

ಎಕ್ಸಿಟ್ ಪೋಲ್ ಗಾಸಿಪ್ ನಲ್ಲಿ ನನಗೆ ನಂಬಿಕೆಯಿಲ್ಲ. ಸಾವಿರಾರು ಇವಿಎಂಗಳನ್ನು ತಿರುಚುವ ಅಥವಾ ಸ್ಥಳಾಂತರಿಸುವ ಹುನ್ನಾರ ನಡೆದಿದೆ. ಎಲ್ಲಾ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ, ಗಟ್ಟಿಯಾಗಿ ಮತ್ತು ಧೃಢವಾಗಿ ಈ ಕದನದಲ್ಲಿ ಹೋರಾಡಬೇಕೆಂದು ಮನವಿ ಮಾಡುತ್ತೇನೆ – ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್
ಅರವಿಂದ್ ಕೇಜ್ರಿವಾಲ್ರವರು ಮಮತಾ ಬ್ಯಾನರ್ಜಿಯವರ ಟ್ವೀಟ್ ಅನ್ನು ರೀಟ್ವೀಟ್ ಮಾಡಿದ್ದಾರೆ.

ಪ್ರತಿಯೊಂದು ಎಕ್ಸಿಟ್ ಪೋಲ್ ಕೂಡ ತಪ್ಪಾಗಿರುವುದಿಲ್ಲ. ಇದು ಟಿವಿಯನ್ನು ಬಂದ್ ಮಾಡುವ, ಸಾಮಾಜಿಕ ಜಾಲತಾಣಗಳಿಂದ ಲಾಗೌಟ್ ಮಾಡಿಕೊಂಡು ಮೇ 23ಕ್ಕೆ ಭೂಮಿ ತನ್ನ ಅಕ್ಷದ ಮೇಲೆ ತಿರುಗುತ್ತಾ ಎಂದು ಕಾಯುವುದು ಒಳ್ಳೆಯದು. – ಒಮರ್ ಅಬ್ದುಲ್ಲ, ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ.

ನಾನು ಈ ಮೊದಲೇ 22 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದಾಗ ಯಾರು ನಂಬಿರಲಿಲ್ಲ. ಈಗ ನೋಡಿ ಮತಗಟ್ಟೆ ಸಮೀಕ್ಷೆಗಳು ಅದನ್ನೇ ಹೇಳಿವೆ. ಈಗಾದರೂ ಎಲ್ಲರಿಗೂ ಮನವರಿಕೆ ಆಗಿರಬಹುದು. – ಯಡಿಯೂರಪ್ಪ, ಬಿಜೆಪಿ ರಾಜ್ಯಧ್ಯಕ್ಷರು, ಕರ್ನಾಟಕ.

ಮತಗಟ್ಟೆ ಸಮೀಕ್ಷೆಗಳು ಸಂಪೂರ್ಣ ಸುಳ್ಳು, ಹಾಗೊಂದು ವೇಳೆ ಬಿಜೆಪಿ ಗೆದ್ದಿದ್ದೆ ಆದರೆ ಅದು ಇವಿಎಂ ಮೇಲೆ ಅನುಮಾನ ಹುಟ್ಟಿಸುವಂತೆ ಮಾಡುತ್ತದೆ.
– ಜಿ ಪರಮೇಶ್ವರ್, ಉಪಮುಖ್ಯಮಂತ್ರಿ, ಹಾಗೂ ಕಾಂಗ್ರೆಸ್ ಮುಖಂಡರು, ಕರ್ನಾಟಕ

ಎಕ್ಸಿಟ್ ಪೋಲ್ ನೋಡಿದರೆ ಕ್ಷಣಿಕ ಸುಖ ಅನ್ನಿಸುತ್ತದೆ. ಶಾಶ್ವತ ಸಂತೋಷಕ್ಕೆ ಮುನ್ನ ಬಂದು, ನಂತರ ಮಾಯವಾಗುತ್ತದೆ. ನಮಗೆ ಶಾಶ್ವತ ಸುಖ ಮುಖ್ಯ – ಎಚ್.ವಿಶ್ವನಾಥ್, ಜೆಡಿಎಸ್ ರಾಜ್ಯಧ್ಯಕ್ಷರು, ಕರ್ನಾಟಕ.

ಇದನ್ನು ಓದಿ: ವಿವಿಧ ಸಮೀಕ್ಷಾ ಸಂಸ್ಥೆಗಳ ಮತಗಟ್ಟೆ ಸಮೀಕ್ಷೆಗಳು ಎನ್ ಡಿ ಎ ಗೆ ಸ್ಪಷ್ಟ ಬಹುಮತ ಎಂದು ಹೇಳುತ್ತಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...