Homeಕರ್ನಾಟಕಎಕ್ಸಿಟ್ ಪೋಲ್ ಕುರಿತು ವಿವಿಧ ರಾಜಕೀಯ ಮುಖಂಡರು ಎನಂತಾರೆ?

ಎಕ್ಸಿಟ್ ಪೋಲ್ ಕುರಿತು ವಿವಿಧ ರಾಜಕೀಯ ಮುಖಂಡರು ಎನಂತಾರೆ?

ಎಕ್ಸಿಟ್ ಪೋಲ್ ಒಪ್ಪದ ವಿಪಕ್ಷಗಳು, ಬಿಜೆಪಿ ಎನ್.ಡಿ.ಎ ಯಲ್ಲಿ ಉಲ್ಲಾಸ

- Advertisement -
- Advertisement -

ನಿನ್ನೆ ಸಂಜೆ ಬಿಡುಗಡೆಯಾಗಿರುವ ಎಲ್ಲಾ ಮತಗಟ್ಟೆ ಸಮೀಕ್ಷೆಗಳು ಎನ್.ಡಿ.ಎ ಮತ್ತೆ ಬಹುಮತದ ಮೂಲಕ ಅಧಿಕಾರಕ್ಕೆ ಮರಳುತ್ತದೆ ಎಂದು ಹೇಳಿವೆ. ಇದಕ್ಕೆ ವಿವಿಧ ರಾಜಕೀಯ ಮುಖಂಡರು ಏನು ಹೇಳಿದ್ದಾರೆ ಎಂಬುದನ್ನು ಇಲ್ಲಿ ನೀಡಿದ್ದೇವೆ.

ಜನರ ನಾಡಿ ಮಿಡಿತವನ್ನು ಅರಿಯುವಲ್ಲಿ ಎಕ್ಸಿಟ್ ಪೋಲ್ಗಳು ವಿಫಲವಾಗಿವೆ. ಗ್ರೌಂಡ್ ರಿಯಾಲಿಟಿಯಿಂದ ದೂರವಾದ ತಪ್ಪು ಸಮೀಕ್ಷೆಯೆಂಬುದನ್ನು ಹಲವು ಸಂಗತಿಗಳು ತೋರಿಸುತ್ತಿವೆ. ನಿಸ್ಸಂದೇಹವಾಗಿ ಆಂದ್ರದಲ್ಲಿ ಟಿಡಿಪಿ ಈ ಬಾರಿ ಸರ್ಕಾರ ರಚಿಸಲಿದೆ. ಹಾಗೆಯೇ ನಮಗೆ ಕೇಂದ್ರದಲ್ಲಿ ಬಿಜೆಪಿಯೇತರ ಪಕ್ಷಗಳು ಸೇರಿ, ಬಿಜೆಪಿಯೇತರ ಸರ್ಕಾರ ರಚಿಸುವ ವಿಶ್ವಾಸವಿದೆ. – ಚಂದ್ರಬಾಬು ನಾಯ್ಡು, ಆಂಧ್ರ ಮುಖ್ಯ ಮಂತ್ರಿ ಮತ್ತು ಟಿಡಿಪಿ ಮುಖ್ಯಸ್ಥ.

ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ತಪ್ಪೆಂದು ನಾನು ನಂಬುತ್ತೇನೆ. ಕಳೆದ ವಾರ ಆಸ್ಟ್ರೇಲಿಯಾದಲ್ಲಿ 56 ವಿಭಿನ್ನ ರೀತಿಯ ಎಕ್ಸಿಟ್ ಪೋಲ್ಗಳು ತಪ್ಪಾಗಿವೆ. ಭಾರತದ ಮತದಾರರು ಈ ಸರ್ಕಾರದ ಭಯದಿಂದಾಗಿ ಚುನಾವಣೋತ್ತರ ಸಮೀಕ್ಷೆಗಳಿಗೆ ಸತ್ಯ ಹೇಳಿಲ್ಲದಿರಬಹುದು. ಮೇ 23ರ ಫಲಿತಾಂಶದವರೆಗೂ ಕಾಯೋಣ. – ಶಶಿ ತರೂರ್, ಕಾಂಗ್ರೆಸ್ ಮುಖಂಡ

ಎಕ್ಸಿಟ್ ಪೋಲ್ ಗಾಸಿಪ್ ನಲ್ಲಿ ನನಗೆ ನಂಬಿಕೆಯಿಲ್ಲ. ಸಾವಿರಾರು ಇವಿಎಂಗಳನ್ನು ತಿರುಚುವ ಅಥವಾ ಸ್ಥಳಾಂತರಿಸುವ ಹುನ್ನಾರ ನಡೆದಿದೆ. ಎಲ್ಲಾ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ, ಗಟ್ಟಿಯಾಗಿ ಮತ್ತು ಧೃಢವಾಗಿ ಈ ಕದನದಲ್ಲಿ ಹೋರಾಡಬೇಕೆಂದು ಮನವಿ ಮಾಡುತ್ತೇನೆ – ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್
ಅರವಿಂದ್ ಕೇಜ್ರಿವಾಲ್ರವರು ಮಮತಾ ಬ್ಯಾನರ್ಜಿಯವರ ಟ್ವೀಟ್ ಅನ್ನು ರೀಟ್ವೀಟ್ ಮಾಡಿದ್ದಾರೆ.

ಪ್ರತಿಯೊಂದು ಎಕ್ಸಿಟ್ ಪೋಲ್ ಕೂಡ ತಪ್ಪಾಗಿರುವುದಿಲ್ಲ. ಇದು ಟಿವಿಯನ್ನು ಬಂದ್ ಮಾಡುವ, ಸಾಮಾಜಿಕ ಜಾಲತಾಣಗಳಿಂದ ಲಾಗೌಟ್ ಮಾಡಿಕೊಂಡು ಮೇ 23ಕ್ಕೆ ಭೂಮಿ ತನ್ನ ಅಕ್ಷದ ಮೇಲೆ ತಿರುಗುತ್ತಾ ಎಂದು ಕಾಯುವುದು ಒಳ್ಳೆಯದು. – ಒಮರ್ ಅಬ್ದುಲ್ಲ, ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ.

ನಾನು ಈ ಮೊದಲೇ 22 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದಾಗ ಯಾರು ನಂಬಿರಲಿಲ್ಲ. ಈಗ ನೋಡಿ ಮತಗಟ್ಟೆ ಸಮೀಕ್ಷೆಗಳು ಅದನ್ನೇ ಹೇಳಿವೆ. ಈಗಾದರೂ ಎಲ್ಲರಿಗೂ ಮನವರಿಕೆ ಆಗಿರಬಹುದು. – ಯಡಿಯೂರಪ್ಪ, ಬಿಜೆಪಿ ರಾಜ್ಯಧ್ಯಕ್ಷರು, ಕರ್ನಾಟಕ.

ಮತಗಟ್ಟೆ ಸಮೀಕ್ಷೆಗಳು ಸಂಪೂರ್ಣ ಸುಳ್ಳು, ಹಾಗೊಂದು ವೇಳೆ ಬಿಜೆಪಿ ಗೆದ್ದಿದ್ದೆ ಆದರೆ ಅದು ಇವಿಎಂ ಮೇಲೆ ಅನುಮಾನ ಹುಟ್ಟಿಸುವಂತೆ ಮಾಡುತ್ತದೆ.
– ಜಿ ಪರಮೇಶ್ವರ್, ಉಪಮುಖ್ಯಮಂತ್ರಿ, ಹಾಗೂ ಕಾಂಗ್ರೆಸ್ ಮುಖಂಡರು, ಕರ್ನಾಟಕ

ಎಕ್ಸಿಟ್ ಪೋಲ್ ನೋಡಿದರೆ ಕ್ಷಣಿಕ ಸುಖ ಅನ್ನಿಸುತ್ತದೆ. ಶಾಶ್ವತ ಸಂತೋಷಕ್ಕೆ ಮುನ್ನ ಬಂದು, ನಂತರ ಮಾಯವಾಗುತ್ತದೆ. ನಮಗೆ ಶಾಶ್ವತ ಸುಖ ಮುಖ್ಯ – ಎಚ್.ವಿಶ್ವನಾಥ್, ಜೆಡಿಎಸ್ ರಾಜ್ಯಧ್ಯಕ್ಷರು, ಕರ್ನಾಟಕ.

ಇದನ್ನು ಓದಿ: ವಿವಿಧ ಸಮೀಕ್ಷಾ ಸಂಸ್ಥೆಗಳ ಮತಗಟ್ಟೆ ಸಮೀಕ್ಷೆಗಳು ಎನ್ ಡಿ ಎ ಗೆ ಸ್ಪಷ್ಟ ಬಹುಮತ ಎಂದು ಹೇಳುತ್ತಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...