Homeಮುಖಪುಟಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕೆ ಪಟ್ಟು: 20ನೇ ದಿನಕ್ಕೆ ಕಾಲಿಟ್ಟ ವಾಂಗ್ ಚುಕ್ ಉಪವಾಸ ಸತ್ಯಾಗ್ರಹ

ಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕೆ ಪಟ್ಟು: 20ನೇ ದಿನಕ್ಕೆ ಕಾಲಿಟ್ಟ ವಾಂಗ್ ಚುಕ್ ಉಪವಾಸ ಸತ್ಯಾಗ್ರಹ

- Advertisement -
- Advertisement -

ಲಡಾಖ್‌ಗೆ ರಾಜ್ಯ ಸ್ಥಾನಮಾನವನ್ನು ನೀಡಬೇಕು ಮತ್ತು ಬುಡಕಟ್ಟು ಪ್ರದೇಶಗಳನ್ನು ಸಂವಿಧಾನದ ಆರನೇ ಪರಿಚ್ಛೇದದಡಿ ಸೇರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ  ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್ ಅವರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹವು 20ನೇ ದಿನಕ್ಕೆ ಕಾಲಿಟ್ಟಿದೆ.

ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ಕೇಂದ್ರ ಸರಕಾರವು ಸ್ಪಂದಿಸದಿರುವುದಕ್ಕೆ ನಿರಾಶೆಯನ್ನು ವ್ಯಕ್ತಪಡಿಸಿದ್ದು, ತಾನು ದಣಿದಿರುವಂತೆ ಭಾಸವಾಗುತ್ತಿದೆ ಮತ್ತು ತನ್ನ ಶರೀರವು ನೋವನ್ನು ಅನುಭವಿಸುತ್ತಿದೆ, ಉಪವಾಸ ಸತ್ಯಾಗ್ರಹದ ಸಂದರ್ಭದಲ್ಲಿ ಕೇವಲ ನೀರು ಮತ್ತು ಉಪ್ಪು ಸೇವಿಸುವ ಮೂಲಕ ತಾನು ಬದುಕಿದ್ದೇನೆ ಎಂದು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಿದ್ದಕ್ಕಾಗಿ ಸಾಮಾನ್ಯ ನಾಗರಿಕರ ಕೃತಜ್ಞತೆಗಳು, ತಾನಿನ್ನೂ ನಂಬಿಕೆಯನ್ನು ಕಳೆದುಕೊಂಡಿಲ್ಲ. ಲಡಾಖ್‌ಗೆ ಇಂತಹ ಬೆಂಬಲವನ್ನು ನೀಡುತ್ತಿರುವ, ಸ್ವತಃ ಮಾಧ್ಯಮಗಳಾಗಿ ನಮ್ಮ ಮಾತುಗಳನ್ನು ದೇಶದ ಪ್ರತಿಯೊಬ್ಬ ಪ್ರಜೆಗೂ ತಲುಪಿಸುತ್ತಿರುವ ಎಲ್ಲ ಅಧಿಕಾರರಹಿತ ನಾಗರಿಕರಿಗೆ ಕೃತಜ್ಞತೆಗಳು. ಇದು ನಮ್ಮ ಪ್ರಧಾನಿ ಮತ್ತು ಗೃಹಸಚಿವರು ಹಾಗೂ ಗೌರವಾನ್ವಿತ ರಾಷ್ಟ್ರಪತಿಗಳಿಗೂ ತಲುಪುತ್ತದೆ ಎನ್ನುವ ನಂಬಿಕೆ ನನಗಿದೆ. ಅವರು ಶೀಘ್ರದಲ್ಲಿಯೇ ವಾಸ್ತವವನ್ನು ಅರ್ಥ ಮಾಡಿಕೊಳ್ಳುತ್ತಾರೆ ಮತ್ತು ನ್ಯಾಯವನ್ನು ನೀಡುತ್ತಾರೆ ಎಂಬ ನಂಬಿಕೆಯು ಈಗಲೂ ನನ್ನಲ್ಲಿದೆ ಎಂದು ವಾಂಗ್ಚುಕ್ ಹೇಳಿದ್ದಾರೆ.

ಲಡಾಖ್ ನ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲು 3,000 ಜನರು ತನ್ನೊಂದಿಗೆ ಉಪವಾಸವನ್ನು ಮುಂದುವರಿಸಿದ್ದಾರೆ. ಲೇಹ್ ಮತ್ತು ಕಾರ್ಗಿಲ್ ಜಿಲ್ಲೆಗಳ ಪ್ರತ್ಯೇಕ ಲೋಕಸಭಾ ಸ್ಥಾನಗಳು, ವಿಶೇಷ ಭೂಮಿ ಮತ್ತು ಉದ್ಯೋಗ ಹಕ್ಕುಗಳು ಮತ್ತು ಲೋಕಸೇವಾ ಆಯೋಗದ ಸ್ಥಾಪನೆಯನ್ನೂ ಅವರು ಕೋರಿದ್ದಾರೆ. ಪ್ರಸ್ತುತ ಕೇಂದ್ರಾಡಳಿತ ಪ್ರದೇಶ ಸ್ಥಾನಮಾನದಡಿ ಕೈಗಾರಿಕಾ ಶೋಷಣೆಯಿಂದಾಗಿ ಲಡಾಖ್‌ ಪರಿಸರ ವ್ಯವಸ್ಥೆ ಶಿಥಿಲಗೊಳ್ಳುವ ಬಗ್ಗೆಯೂ ಅವರು ಕಳವಳವನ್ನು ವ್ಯಕ್ತಪಡಿಸಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಇಲ್ಲಿ ವಾಂಗ್ಚುಕ್ ಜೊತೆ ಸೇರಿಕೊಂಡ 5,000 ಜನರು ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ನಡೆಸಿದ್ದರು, ಈ ಪೈಕಿ 300 ಜನರು ಮೂರು ದಿನಗಳಿಂದ ಹತ್ತು ದಿನಗಳವರೆಗೆ ಉಪವಾಸವನ್ನು ಮುಂದುವರಿಸಲು ಸಂಕಲ್ಪ ಮಾಡಿದ್ದಾರೆ. ಜೊತೆಗೆ ದೇಶಾದ್ಯಂತ 40 ನಗರಗಳಲ್ಲಿ ಫ್ರೆಂಡ್ಸ್ ಆಫ್ ಲಡಾಖ್  ಕಾರ್ಯಕ್ರಮಗಳು ನಡೆದಿದೆ.

ವಾಂಗ್ಚುಕ್ ಅವರು 10,000 ಲಡಾಕಿ ಕುರುಬರು ಮತ್ತು ರೈತರ ಜೊತೆ ಗಡಿಯುದ್ದಕ್ಕೂ ಮೆರವಣಿಗೆಯನ್ನು ನಡೆಸುವುದಾಗಿ ಈ ಹಿಂದೆ ಹೇಳಿದ್ದರು, ಮೆರವಣಿಗೆ ಮೂಲಕ ನೆಲದ ವಾಸ್ತವತೆಯನ್ನು ತಿಳಿಸಲು ಬಯಸುವುದಾಗಿ ಹೇಳಿದ್ದರು.

ಇದನ್ನು ಓದಿ: ಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಆಗ್ರಹಿಸಿ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕಾರ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...